Connect with us

Chamarajanagar

ಡಯಾಬಿಟಿಕ್ ಕ್ಲಿನಿಕ್-ಜಿಲ್ಲಾಧಿಕಾರಿಗಳಿಂದ ನೂತನ ಸೇವೆಗೆ ಚಾಲನೆ

Published

on

ಚಾಮರಾಜನಗರ: ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ಬುಧವಾರ ಮಧುಮೇಹಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುವ ರಾಜ್ಯದಲ್ಲೇ ಮೊದಲು ಎನಿಸಿರುವ ಡಯಾಬಿಟಿಕ್ ಕ್ಲಿನಿಕ್‍ಗಳು ಚಾಮರಾಜನಗರ ಜಿಲ್ಲೆಯಲ್ಲಿ ಆರಂಭವಾಗಿದೆ.

ಪ್ರತಿ ಬುಧವಾರ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ಮಧುಮೇಹಿಗಳ ಆರೋಗ್ಯ ಕಾಳಜಿಗಾಗಿ ಡಯಾಬಿಟಿಕ್ ಕ್ಲಿನಿಕ್ ನಿರ್ವಹಣೆಯಾಗಲಿದೆ. ಈ ವಿನೂತನ ಆರೋಗ್ಯ ಸೇವೆಯನ್ನು ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯು ಮೊದಲಿಗೆ ಆರಂಭಿಸುವ ಮೂಲಕ ಗಮನಸೆಳೆದಿದೆ.

ಮಧುಮೇಹಿ ರೋಗಿಗಳಿಗೆ ತಪಾಸಣೆ, ಔಷದೋಪಾಚಾರ, ಡಯಾಬಿಟಿಕ್ ಚಾರ್ಟ್, ಪಥ್ಯ ಆಹಾರದ ವಿವರ ಸೇರಿದಂತೆ ಇತರೆ ಎಲ್ಲ ಸೇವೆ ಸಲಹೆಗಳನ್ನು ಡಯಾಬಿಟಿಕ್ ಕ್ಲಿನಿಕ್ ನಲ್ಲಿ ಒದಗಿಸಲಾಗುತ್ತಿದೆ. ಮಧುಮೇಹ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆಯಿದ್ದಲ್ಲಿ ನಿಯಮಾನುಸಾರ ಮೇಲ್ಮಟ್ಟದ ಆಸ್ಪತ್ರೆಗೆ ಶಿಫಾರಸು ಮಾಡಿ ಮುಂದಿನ ಆರೋಗ್ಯ ಸೇವೆಗೆ ಅನುಸರಣೆ ಮಾಡುವಂತೆಯೂ ಸುತ್ತೋಲೆ ಹೊರಡಿಸಲಾಗಿದೆ. ಡಯಾಬಿಟಿಕ್ ಕ್ಲಿನಿಕ್ ನಿರ್ವಹಣೆ ಹಾಗೂ ಸುಸೂತ್ರವಾಗಿ ನಡೆಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮೇಲ್ವಿಚಾರಣೆ ಕಾರ್ಯವಹಿಸಲು ಸೂಚನೆ ನೀಡಲಾಗಿದೆ.

ಆರೋಗ್ಯ ಸೇವಾ ಕ್ಷೇತ್ರದ ಹೊಸ ವಿಶಿಷ್ಟ ಕಾರ್ಯಕ್ಕೆ ಮುಂದಾಗಿರುವ ನೂತನ ಡಯಾಬಿಟಿಕ್ ಕ್ಲಿನಿಕ್‍ಗೆ ಚಾಮರಾಜನಗರ ತಾಲೂಕಿನ ವೆಂಕಟಯ್ಯನಛತ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಈ ಕಾರ್ಯಕ್ರಮವನ್ನು ಇಡೀ ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆ ಮೊದಲು ಆರಂಭಿಸಿದೆ. ಇದು ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಬಡಜನರಿಗೆ ತುಂಬಾ ಉಪಯುಕ್ತವಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಅವರ ತಂಡ ಜಿಲ್ಲೆಯಲ್ಲಿ ಇಂತಹ ಆರೋಗ್ಯ ಸೇವೆಗಳನ್ನು ಒದಗಿಸಲು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಡಯಾಬಿಟಿಕ್ ಕ್ಲಿನಿಕ್ ಸೌಲಭ್ಯ ಅನುಷ್ಠಾನಕ್ಕೆ ಮುಂದಾಗಿರುವ ಎಲ್ಲರನ್ನು ಅಭಿನಂದಿಸುವುದಾಗಿ ನುಡಿದರು.

ಸಾಮಾನ್ಯವಾಗಿ ಎಲ್ಲಾ ಆರೋಗ್ಯ ಕೇಂದ್ರಗಳು ಬೆಳ್ಳಿಗೆ 9 ಗಂಟೆಗೆ ಪ್ರಾರಂಭವಾಗುತ್ತವೆ. ಮಧುಮೇಹ ಇರುವವರು ತಪಾಸಣೆಗೆ 9 ಗಂಟೆಯವರೆಗೂ ಕಾಯಬೇಕಾಗಿತ್ತು. ಆದರೆ ಮಧುಮೇಹಿಗಳು ಆರೋಗ್ಯ ಪರೀಕ್ಷೆಗಾಗಿ ಕಾಯಲು ಕಷ್ಟವಾಗುತ್ತಿತ್ತು. ಹೀಗಾಗಿ ವಾರದಲ್ಲಿ ಒಂದು ದಿನ ಅಂದರೆ ಪ್ರತಿ ಬುಧವಾರ ಬೆಳ್ಳಿಗೆ 7 ರಿಂದ 11 ರವರೆಗೆ ಮಧುಮೇಹದವರಿಗಾಗಿಯೇ ಪ್ರಯೋಗಾಲಯವನ್ನು ತೆರೆದು ರಕ್ತಪರೀಕ್ಷೆ ಮಾಡುವ ಕಾರ್ಯಕ್ರಮವನ್ನು ಮಾಡಲಾಗುತ್ತದೆ. ರಾಜ್ಯದಲ್ಲಿಯೇ ಪ್ರಥಮವಾಗಿ ನಮ್ಮ ಜಿಲ್ಲೆಯಲ್ಲಿ ಇಂತಹ ಡಯಾಬಿಟಿಕ್ ಕ್ಲಿನಿಕ್ ಸೇವೆ ಒದಗಿಸಲು ಮುಂದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಮಾತನಾಡಿ, ಮಾರ್ಗಸೂಚಿ ಪ್ರಕಾರ ಜಿಲ್ಲೆಯಾದ್ಯಂತ ವೈದ್ಯರು ಆರೋಗ್ಯ ಸಿಬ್ಬಂದಿ ಡಯಾಬಿಟಿಕ್ ಕ್ಲಿನಿಕ್ ಅನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಾವಣ್ಯ ಮಹೇಶ್, ಉಪಾಧ್ಯಕ್ಷ ಕೃಷ್ಣಮೂರ್ತಿ, ಸದಸ್ಯ ಎ.ಎಂ. ಸೋಮಣ್ಣ, ಅಶೋಕ್, ಸ್ವಾಮಿ, ಶೈಲಜ, ಚಾಮುಲ್ ನಿರ್ಧೇಶಕ ಹೆಚ್.ಎಸ್ ಬಸವರಾಜು, ಜಿಲ್ಲಾ ನೋಡಲ್ ಅಧಿಕಾರಿ ಡಾ.ರಾಜೇಶ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಂದರೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ವೆಂಕಟಯ್ಯನಛತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ಗೋವಿಂದರಾಜು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಹೇಶ್, ಇನ್ನಿತರರು  ಉಪಸ್ಥಿತರಿದ್ದರು.

Continue Reading

Chamarajanagar

ಮುತ್ತಿಗೆ ಗ್ರಾಮದಲ್ಲಿ ಹಾವು ಪತ್ತೆ: ಸ್ನೇಕ್ ಚಾಂಪು ತಂಡದಿಂದ ಸುರಕ್ಷಿತವಾಗಿ ಹಿಡಿತ

Published

on

ಚಾಮರಾಜನಗರ: ತಾಲೂಕಿನ ಮುತ್ತಿಗೆ ಗ್ರಾಮದ ಕೆಂಪೇಗೌಡ ಅವರ ಮನೆಯಲ್ಲಿ ಹಾವು ಕಾಣಿಸಿಕೊಂಡ ಘಟನೆ ಇಂದು ಸಂಭವಿಸಿದೆ.

ಮನೆಯೊಳಗೆ ಹಾವು ಇರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ತಕ್ಷಣ ಚಾಮರಾಜನಗರದ ಸ್ನೇಕ್ ಚಾಂಪು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ಚಾಂಪು ತಂಡದವರು ಸ್ಥಳಕ್ಕೆ ಧಾವಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಗೋ ಮಹದೇವಸ್ವಾಮಿ ಮಾತನಾಡಿ, ನಮ್ಮ ಗ್ರಾಮದೊಳಗೆ ಅಥವಾ ಸುತ್ತಮುತ್ತ ಎಲ್ಲಿಯಾದರೂ ಹಾವು ಕಂಡುಬಂದರೆ ಭಯಪಡದೇ ತಕ್ಷಣ ತಿಳಿಸಿ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣ ರಕ್ಷಿಸುವುದು ನಮ್ಮ ಸಮಾಜ ಸೇವೆಯ ಭಾಗ ಎಂದು ತಿಳಿಸಿದರು.

Continue Reading

Chamarajanagar

ಕೌಶಲ್ಯಾಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ

Published

on

ಸಿಇಟಿ ಆನ್‌ಲೈನ್‌ ಉಚಿತ ತರಬೇತಿ, ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ

ಚಾಮರಾಜನಗರ: ಪ್ರಸ್ತುತ ದಿನಮಾನಗಳಲ್ಲಿ ಸಮಾಜದಲ್ಲಿ ಏನಾದರೂ, ಬದಲಾವಣೆ ಕಾಣುವಂತಾಗಿದ್ದರೆ ಅದು ಶಿಕ್ಷಣದಿಂದ ಮಾತ್ರ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಿಇಟಿ ಉಚಿತ ಆನ್‌ಲೈನ್ ತರಬೇತಿ ಹಾಗೂ ಎಂಎಸ್‌ಐಎಲ್ ವತಿಯಿಂದ ಸಿಇಟಿ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಕುಟುಂಬದಲ್ಲಿ ಸಹೋದರರು ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ, ನಾನು ಮಾತ್ರ ಓದಲೇಬೇಕು ಎಂಬ ಹಠತೊಟ್ಟು, ಉನ್ನತ ಶಿಕ್ಷಣ ಪಡೆಯುವ ಮೂಲಕ ಇಂದು ಉನ್ನತಮಟ್ಟದಲ್ಲಿ ನಿಂತಿದ್ದೇನೆ. ಇದಕ್ಕೆಲ್ಲ ಶಿಕ್ಷಣ ಕಾರಣ ಎಂದರು. ಇಂದು ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್ ಪ್ರವೇಶ ಪಡೆಯಬೇಕಾದರೆ ಸಿಇಟಿ. ನೀಟ್, ಜೆಇಇ ತರಬೇತಿ ಪಡೆಯಲೇಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿವಿಧ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು, ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾವಸಾಹತು ಪ್ರದೇ಼ಶ಼ದಲ್ಲಿ ವಿವಿಧ ಪ್ರತಿಷ್ಠಿತ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ತರಬೇತಿಗೆ ತಕ್ಕ ಉದ್ಯೋಗಪಡೆಯಬಹುದಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕ ವ್ಯಾಸಂಗ ಮಾಡುವವರು ಬಡವರ್ಗದ ವಿದ್ಯಾರ್ಥಿಗಳೇ ಆಗಿದ್ದಾರೆ, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು, ತಾವು ಅಂದುಕೊಂಡ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜಯಕುಮಾರ್, ನಾರಾಯಣ, ಕೇಶವನ್, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಸಂಪನ್ಮೂಲವ್ಯಕ್ತಿಗಳಾದ ಮಾದೇಶ್, ದೀಪಕ್, ಮಲ್ಲಿಕಾರ್ಜುನ್, ಚೂಡಾ ಸದಸ್ಯ ರಾಜೇಂದ್ರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Continue Reading

Chamarajanagar

ಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ

Published

on

ಚಾಮರಾಜನಗರ: ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿರುವ ಘಟನೆ ಸಂಭವಿಸಿದೆ.

ಭಾನುವಾರ ತಡ ರಾತ್ರಿಯಲ್ಲಿ ಗ್ರಾಮದ ರಂಗಸ್ವಾಮಿ ಶೆಟ್ಟಿ ಅವರ ಕೊಟ್ಟಿಗೆಗೆ ನುಗ್ಗಿದ ಚಿರತೆ, ಹಸುವಿನ ಹಿಂದಿನ ಭಾಗವನ್ನು ಸಂಪೂರ್ಣವಾಗಿ ತಿಂದು ಬಲಿ ಪಡೆದಿದೆ.

ಬೆಳಗಿನ ಜಾವ ವಿಷಯ ತಿಳಿದು ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ಉಂಟಾಗಿದೆ. ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಚಿರತೆ ಮರುದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Continue Reading

Trending

error: Content is protected !!