National - International
ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್ಶೀಟ್ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!
ನವದೆಹಲಿ: ಅಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಭಾರತ–ಅಮೆರಿಕ ನಡುವಿನ ತಾತ್ಕಾಲಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ವೈಟ್ ಹೌಸ್ ಪರಿಷ್ಕೃತ ಫ್ಯಾಕ್ಟ್ ಶೀಟ್ ಬಿಡುಗಡೆಗೊಳಿಸಿದ್ದು, ಇದರಲ್ಲಿ ಕೆಲವು ದ್ವಿದಳ ಧಾನ್ಯಗಳು ಎಂಬ ಉಲ್ಲೇಖವನ್ನು ಕೈಬಿಟ್ಟಿರುವುದು ಕಂಡು ಬಂದಿದೆ.
ಸೋಮವಾರ ಬಿಡುಗಡೆಗೊಂಡ ಮೊದಲ ಫ್ಯಾಕ್ಟ್ಶೀಟ್ನಲ್ಲಿ, ಭಾರತವು ಅಮೆರಿಕದ ಕೈಗಾರಿಕಾ ಉತ್ಪನ್ನಗಳು ಮತ್ತು ಕೆಲವು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿಮೆ ಮಾಡುವುದು ಅಥವಾ ರದ್ದುಪಡಿಸುವುದಾಗಿ ಹೇಳಲಾಗಿತ್ತು.
ಈ ಪಟ್ಟಿಯಲ್ಲಿ ಡ್ರೈಡ್ ಡಿಸ್ಟಿಲರ್ಸ್ ಗ್ರೇನ್ಸ್, ಕೆಂಪು ಜೋಳ, ಡ್ರೈಫ್ರೂಟ್ಸ್, ತಾಜಾ ಹಣ್ಣುಗಳು, ಕೆಲವು ಬೇಳೆಗಳು, ಸೋಯಾಬೀನ್ ಎಣ್ಣೆ, ವೈನ್ ಮತ್ತು ಮದ್ಯಪಾನ ಪದಾರ್ಥಗಳು ಸೇರಿದಂತೆ ಹಲವು ಉತ್ಪನ್ನಗಳು ಸೇರಿದ್ದವು.
ಭಾರತವು ಹೆಚ್ಚಿನ ಅಮೇರಿಕನ್ ಉತ್ಪನ್ನಗಳನ್ನು ಖರೀದಿಸಲು ಮತ್ತು 500 ಶತಕೋಟಿ USD ಗಿಂತ ಹೆಚ್ಚಿನ ಅಮೆರಿಕಾ ಇಂಧನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ, ಕೃಷಿ, ಕಲ್ಲಿದ್ದಲು ಮತ್ತು ಇತರ ಉತ್ಪನ್ನಗಳನ್ನು ಖರೀದಿಸಲು “ಬದ್ಧವಾಗಿದೆ” ಹೇಳಲಾಗಿತ್ತು.
ಆದರೆ, ಮಂಗಳವಾರ ಬಿಡುಗಡೆಗೊಂಡ ಪರಿಷ್ಕೃತ ಫ್ಯಾಕ್ಟ್ಶೀಟ್ನಲ್ಲಿ ಬೇಳೆಗಳು ಎಂಬ ಉಲ್ಲೇಖವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಜೊತೆಗೆ, ಮೊದಲ ಪಟ್ಟಿಯಲ್ಲಿ ಬಳಸಿದ್ದ “India is committed” (ಭಾರತ ಬದ್ಧವಾಗಿದೆ) ಎಂಬ ಪದವನ್ನು “India intends” (ಭಾರತ ಉದ್ದೇಶಿಸಿದೆ) ಎಂದು ಬದಲಾಯಿಸಿದೆ.
ಭಾರತವು ಅಮೇರಿಕಾದ ಹೆಚ್ಚಿನ ಉತ್ಪನ್ನಗಳನ್ನು ಖರೀದಿಸಲು ಮತ್ತು 500 ಬಿಲಿಯನ್ ಯುಎಸ್ ಡಾಲರ್ಗಿಂತ ಹೆಚ್ಚಿನ ಅಮೆರಿಕಾದ ಇಂಧನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ, ಕಲ್ಲಿದ್ದಲು ಮತ್ತು ಇತರ ಉತ್ಪನ್ನಗಳನ್ನು ಖರೀದಿಸಲು ಉದ್ದೇಶಿಸಿದೆ ಎಂದು ಪರಿಷ್ಕೃತ ಫ್ಯಾಕ್ಟ್ ಶೀಟ್ ನಲ್ಲಿ ತಿಳಿಸಲಾಗಿದೆ.
ಸಂಯುಕ್ತ್ ಕಿಸಾನ್ ಮೋರ್ಚಾ (SKM), ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ಸೇರಿದಂತೆ ಹಲವಾರು ರೈತ ಸಂಘಟನೆಗಳು ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದವನ್ನು ಟೀಕಿಸಿ ಫೆಬ್ರವರಿ 12ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಈ ಮಹತ್ವದ ಬೆಳವಣಿಕೆ ಹಾಗೂ ಬದಲಾವಣೆಗಳು ಕಂಡು ಬಂದಿದೆ
National
U-19 World Cup| ವೈಭವ್ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ
ಹರಾರೆ: ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯಂಗ್ ಇಂಡಿಯಾ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್- 19 ವಿಶ್ವಕಪ್ ಫೈನಲ್ನಲ್ಲಿ ಭಾರತ v/s ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್ಗಳಿಂದ ಸೋಲಿಸಿದ್ದು, ಭಾರತ ಸತತ ಆರನೇ ಬಾರಿಗೆ ಅಂಡರ್- 19 ವಿಶ್ವಕಪ್ ಎತ್ತಿಹಿಡಿದಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ಗಳಲ್ಲಿ 9 ವಿಕೆಟ್ಗಳಿಗೆ 411 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವೂ 311 ರನ್ಗಳಿಗೆ ಆಲೌಟ್ ಆಗುವ ಮೂಲಕ 100 ರನ್ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ಗಳ ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್ನಲ್ಲಿ 15 ಸಿಕ್ಸರ್ಗಳು ಮತ್ತು 15 ಬೌಂಡರಿಗಳು ಸೇರಿದ್ದವು.

ವೈಭವ್ನ ಸ್ಫೋಟಕ ಶತಕ
ಈ ವೇಳೆ ವೈಭವ್ 39 ಎಸೆತಗಳಲ್ಲಿ ವೇದಾಂತ್ ತ್ರಿವೇದಿ ಅವರೊಂದಿಗೆ ಮೂರನೇ ವಿಕೆಟ್ಗೆ 89 ರನ್ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ವೈಭವ್ ವಿಕೆಟ್ ಪತನವಾದಾಗ ತಂಡದ ಮೊತ್ತ 251 ರನ್ ಆಗಿತ್ತು. ಇದರ ನಂತರ ಉಳಿದ 7 ಆಟಗಾರರು ಸ್ಕೋರ್ ಬೋರ್ಡ್ಗೆ 160 ರನ್ ಸೇರಿಸಿದರು. ವೇದಾಂತ್ 36 ಎಸೆತಗಳಲ್ಲಿ 32 ರನ್ ಗಳಿಸಿದರೆ, ವಿಹಾನ್ ಮಲ್ಹೋತ್ರಾ 36 ಎಸೆತಗಳಲ್ಲಿ 30 ರನ್ ಬಾರಿಸಿದರು. ಅಭಿಗ್ಯಾನ್ ಕುಂಡು 31 ಎಸೆತಗಳಲ್ಲಿ 40 ರನ್, ಅಂಬ್ರಿಸ್ ಕೇವಲ 18 ರನ್, ಕನಿಷ್ಕ್ ಚೌಹಾಣ್ 20 ಎಸೆತಗಳಲ್ಲಿ ಅಜೇಯ 37 ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಮಿಂಟೊ ಮೂರು ವಿಕೆಟ್ ಪಡೆದರೆ, ಸೆಬಾಸ್ಟಿಯನ್ ಮಾರ್ಗನ್ ಮತ್ತು ಅಲೆಕ್ಸ್ ಗ್ರೀನ್ ತಲಾ ಎರಡು ವಿಕೆಟ್ ಪಡೆದಿದ್ದಾರೆ.
ಏಕಾಂಗಿ ಹೋರಾಟ ಮಾಡಿದ ಫಾಕ್ನರ್ ಆಟ ವ್ಯರ್ಥ
ಭಾರತ ನೀಡಿದ 412 ರನ್ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 40.2 ಓವರ್ಗಳಲ್ಲಿ 311 ರನ್ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಏಕಾಂಗಿ ಹೋರಾಟ ನಡೆಸಿದ ಕ್ಯಾಲೆಬ್ ಫಾಕ್ನರ್ 67 ಎಸೆತಗಳಲ್ಲಿ 115 ರನ್ಗಳ ಇನ್ನಿಂಗ್ಸ್ ಆಡಿದರು. ಆದರೆ ಇನ್ನೊಂದು ತುದಿಯಿಂದ ಅವರಿಗೆ ಉತ್ತಮ ಬೆಂಬಲ ಸಿಗಲಿಲ್ಲ. ಫಾಕ್ನರ್ ಹೊರತುಪಡಿಸಿ ಬೆನ್ ಡಾಕಿನ್ಸ್ 66 ಮತ್ತು ಬೆನ್ ಮೇಯಸ್ 45 ರನ್ಗಳ ಇನ್ನಿಂಗ್ಸ್ ಆಡಿದರು. ನಾಯಕ ಥಾಮಸ್ 31 ರನ್ಗಳನ್ನು ನೀಡಿದರು. ಇಂಗ್ಲೆಂಡ್ ತಂಡ ಉತ್ತಮ ಪಡೆಯಿತ್ತಾದರೂ ಮಧ್ಯಮ ಓವರ್ಗಳಲ್ಲಿ ಎಂಟು ಎಸೆತಗಳಲ್ಲಿ ನಾಲ್ಕು ವಿಕೆಟ್ಗಳನ್ನು ಕಳೆದುಕೊಂಡಿತು. ಇದರಿಂದಾಗಿ ತಂಡಕ್ಕೆ ಬೃಹತ್ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿಲ್ಲ.

ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ಐಸಿಸಿ ಅಂಡರ್-19 ವಿಶ್ವಕಪ್ 2026ರ ಟ್ರೋಫಿಗೆ ‘ಯಂಗ್ ಇಂಡಿಯಾ’ ಮುತ್ತಿಟ್ಟಿದೆ. ಹರಾರೆಯಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಭಾರತ 100 ರನ್ಗಳ ಭರ್ಜರಿ ಜಯಗಳಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
National - International
ನಾಳೆಯಿಂದ T-20 World Cup| 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ: ವೇಳಾಪಟ್ಟಿ ಏನು?
T-20 World Cup 2026: 10ನೇ ಆವೃತ್ತಿಯ ಟಿ-20 ವಿಶ್ವಕಪ್ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದ್ದು, ನಾಳೆಯಿಂದ ಆರಂಭವಾಗಲಿದೆ. ಈ ಮೆಗಾ ಟೂರ್ನಮೆಂಟ್ನಲ್ಲಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಭಾರತ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
20 ತಂಡಗಳ 4 ಗುಂಪುಗಳು ಯಾವ್ಯಾವು?
ಗುಂಪು -ಎ: ಭಾರತ, ಪಾಕಿಸ್ತಾನ, ಅಮೆರಿಕ, ನೆದರ್ಲ್ಯಾಂಡ್ಸ್, ನಮೀಬಿಯಾ.
ಗುಂಪು- ಬಿ: ಆಸ್ಟ್ರೇಲಿಯಾ, ಶ್ರೀಲಂಕಾ, ಜಿಂಬಾಬ್ವೆ, ಐರ್ಲೆಂಡ್, ಓಮನ್.
ಗುಂಪು- ಸಿ: ವೆಸ್ಟ್ ಇಂಡೀಸ್, ಇಂಗ್ಲೆಂಡ್, ಇಟಲಿ, ನೇಪಾಳ, ಸ್ಕಾಟ್ಲೆಂಡ್.
ಗುಂಪು -ಡಿ: ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಕೆನಡಾ, ಯುಎಇ.

ಆತಿಥ್ಯದ ಸ್ಥಳಗಳು ಯಾವ್ಯಾವು?
ಭಾರತ
- ಈಡನ್ ಗಾರ್ಡನ್ಸ್- ಕೋಲ್ಕತ್ತಾ
- ವಾಂಖೆಡೆ ಸ್ಟೇಡಿಯಂ- ಮುಂಬೈ
- ಎಂಎ ಚಿದಂಬರಂ ಸ್ಟೇಡಿಯಂ- ಚೆನ್ನೈ
- ನರೇಂದ್ರ ಮೋದಿ ಕ್ರೀಡಾಂಗಣ- ಅಹಮದಾಬಾದ್
- ಅರುಣ್ ಜೇಟ್ಲಿ ಕ್ರೀಡಾಂಗಣ- ದೆಹಲಿ
ಶ್ರೀಲಂಕಾ
- ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್- ಕೊಲಂಬೊ
- ಆರ್.ಪ್ರೇಮದಾಸ ಕ್ರೀಡಾಂಗಣ- ಕೊಲಂಬೊ
- ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ- ಪಲ್ಲೆಕೆಲೆ
ಟಿ-20 ವಿಶ್ವಕಪ್ ಪಂದ್ಯದ ವೇಳಾಪಟ್ಟಿ ಏನು?
1.ಫೆ. 7 (ಶನಿವಾರ)
- ಪಾಕಿಸ್ತಾನ v/s ನೆದರ್ಲ್ಯಾಂಡ್ಸ್ — ಕೊಲಂಬೊ — ಬೆಳಿಗ್ಗೆ 11:00
- ವೆಸ್ಟ್ ಇಂಡೀಸ್ v/s ಸ್ಕಾಟ್ಲೆಂಡ್ – ಕೋಲ್ಕತ್ತಾ – ಮಧ್ಯಾಹ್ನ 3:00
- ಭಾರತ v/s ಅಮೆರಿಕ – ಮುಂಬೈ – ಸಂಜೆ 7:00
2.ಫೆ.8 (ಭಾನುವಾರ)
- ನ್ಯೂಜಿಲೆಂಡ್ v/s ಅಫ್ಘಾನಿಸ್ತಾನ – ಚೆನ್ನೈ – ಬೆಳಿಗ್ಗೆ 11:00
- ಇಂಗ್ಲೆಂಡ್ v/s ನೇಪಾಳ – ಮುಂಬೈ – ಮಧ್ಯಾಹ್ನ 3:00
- ಶ್ರೀಲಂಕಾ v/s ಐರ್ಲೆಂಡ್ – ಕೊಲಂಬೊ- ಸಂಜೆ 7:00
3.ಫೆ. 9 (ಸೋಮವಾರ)
- ಸ್ಕಾಟ್ಲೆಂಡ್ v/s ಇಟಲಿ — ಕೋಲ್ಕತ್ತಾ — ಬೆಳಿಗ್ಗೆ 11:00
- ಜಿಂಬಾಬ್ವೆ v/s ಓಮನ್ – ಕೊಲಂಬೊ – ಮಧ್ಯಾಹ್ನ 3:00
- ದಕ್ಷಿಣ ಆಫ್ರಿಕಾ v/s ಕೆನಡಾ – ಅಹಮದಾಬಾದ್ – ಸಂಜೆ 7:00
4. ಫೆ.10 (ಮಂಗಳವಾರ)
- ನೆದರ್ಲ್ಯಾಂಡ್ಸ್ v/s ನಮೀಬಿಯಾ — ದೆಹಲಿ — ಬೆಳಿಗ್ಗೆ 11:00
- ನ್ಯೂಜಿಲೆಂಡ್ v/s ಯುಎಇ – ಚೆನ್ನೈ – ಮಧ್ಯಾಹ್ನ 3:00
- ಪಾಕಿಸ್ತಾನ v/s ಅಮೆರಿಕ — ಕೊಲಂಬೊ— ಸಂಜೆ 7:00
5. ಫೆ. 11 (ಬುಧವಾರ)
- ದಕ್ಷಿಣ ಆಫ್ರಿಕಾ v/s ಅಫ್ಘಾನಿಸ್ತಾನ – ಅಹಮದಾಬಾದ್ – ಬೆಳಿಗ್ಗೆ 11:00
- ಆಸ್ಟ್ರೇಲಿಯಾ v/s ಐರ್ಲೆಂಡ್ – ಕೊಲಂಬೊ – ಮಧ್ಯಾಹ್ನ 3:00
- ಇಂಗ್ಲೆಂಡ್ v/s ವೆಸ್ಟ್ ಇಂಡೀಸ್ – ಮುಂಬೈ – ಸಂಜೆ 7:00 ಗಂಟೆಗೆ
6.ಫೆ.12 (ಗುರುವಾರ)
- ಶ್ರೀಲಂಕಾ v/s ಓಮನ್ — ಕ್ಯಾಂಡಿ — ಬೆಳಿಗ್ಗೆ 11:00
- ನೇಪಾಳ v/s ಇಟಲಿ — ಮುಂಬೈ — ಮಧ್ಯಾಹ್ನ 3:00
- ಭಾರತ v/s ನಮೀಬಿಯಾ — ದೆಹಲಿ — ಸಂಜೆ 7:00
7. ಫೆ. 13 (ಶುಕ್ರವಾರ)
- ಆಸ್ಟ್ರೇಲಿಯಾ v/s ಜಿಂಬಾಬ್ವೆ — ಕೊಲಂಬೊ— ಬೆಳಿಗ್ಗೆ 11:00
- ಕೆನಡಾ v/s ಯುಎಇ — ದೆಹಲಿ — ಮಧ್ಯಾಹ್ನ 3:00
- ಅಮೆರಿಕ v/s ನೆದರ್ಲ್ಯಾಂಡ್ಸ್ — ಚೆನ್ನೈ — ಸಂಜೆ 7:00
8. ಫೆ. 14 (ಶನಿವಾರ)
- ಐರ್ಲೆಂಡ್ v/s ಓಮನ್ — ಕೊಲಂಬೊ — ಬೆಳಿಗ್ಗೆ 11:00
- ಇಂಗ್ಲೆಂಡ್ v/s ಸ್ಕಾಟ್ಲೆಂಡ್ – ಕೋಲ್ಕತ್ತಾ – ಮಧ್ಯಾಹ್ನ 3:00
- ನ್ಯೂಜಿಲೆಂಡ್ v/s ದಕ್ಷಿಣ ಆಫ್ರಿಕಾ – ಅಹಮದಾಬಾದ್ – ಸಂಜೆ 7:00
9. ಫೆ. 15 (ಭಾನುವಾರ)
- ವೆಸ್ಟ್ ಇಂಡೀಸ್ v/s ನೇಪಾಳ – ಮುಂಬೈ – ಬೆಳಿಗ್ಗೆ 11:00
- ಅಮೆರಿಕ v/s ನಮೀಬಿಯಾ — ಚೆನ್ನೈ — 3:00
- ಭಾರತ /vs ಪಾಕಿಸ್ತಾನ – ಕೊಲಂಬೊ- ಸಂಜೆ 7:00
10. ಫೆ.16 (ಸೋಮವಾರ)
- ಅಫ್ಘಾನಿಸ್ತಾನ v/s ಯುಎಇ — ದೆಹಲಿ — ಬೆಳಿಗ್ಗೆ 11:00
- ಇಂಗ್ಲೆಂಡ್ v/s ಇಟಲಿ – ಕೋಲ್ಕತ್ತಾ – ಮಧ್ಯಾಹ್ನ 3:00
- ಆಸ್ಟ್ರೇಲಿಯಾ v/s ಶ್ರೀಲಂಕಾ – ಕ್ಯಾಂಡಿ – ಸಂಜೆ 7:00
11.ಫೆ. 17 (ಮಂಗಳವಾರ)
- ನ್ಯೂಜಿಲೆಂಡ್ v/s ಕೆನಡಾ – ಚೆನ್ನೈ – ಬೆಳಿಗ್ಗೆ 11:00
- ಐರ್ಲೆಂಡ್ v/s ಜಿಂಬಾಬ್ವೆ – ಕ್ಯಾಂಡಿ – ಮಧ್ಯಾಹ್ನ 3:00
- ಸ್ಕಾಟ್ಲೆಂಡ್ v/s ನೇಪಾಳ – ಮುಂಬೈ – ಸಂಜೆ 7:00 ಗಂಟೆಗೆ.
12.ಫೆ. 18 (ಬುಧವಾರ)
- ದಕ್ಷಿಣ ಆಫ್ರಿಕಾ v/s ಯುಎಇ — ದೆಹಲಿ — ಬೆಳಿಗ್ಗೆ 11:00
- ಪಾಕಿಸ್ತಾನ v/s ನಮೀಬಿಯಾ – ಕೊಲಂಬೊ – ಮಧ್ಯಾಹ್ನ 3:00
- ಭಾರತ v/s ನೆದರ್ಲ್ಯಾಂಡ್ಸ್ – ಅಹಮದಾಬಾದ್ – ಸಂಜೆ 7:00
13. ಫೆ.19 (ಗುರುವಾರ)
- ವೆಸ್ಟ್ ಇಂಡೀಸ್ v/s ಇಟಲಿ — ಕೋಲ್ಕತ್ತಾ — ಬೆಳಿಗ್ಗೆ 11:00
- ಶ್ರೀಲಂಕಾ v/s ಜಿಂಬಾಬ್ವೆ – ಕೊಲಂಬೊ – ಮಧ್ಯಾಹ್ನ 3:00
- ಅಫ್ಘಾನಿಸ್ತಾನ v/s ಕೆನಡಾ — ಚೆನ್ನೈ — ಸಂಜೆ 7:00
14.ಫೆ. 20 (ಶುಕ್ರವಾರ)
ಆಸ್ಟ್ರೇಲಿಯಾ v/s ಓಮನ್ – ಕ್ಯಾಂಡಿ – ಸಂಜೆ 7:00
National - International
ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್ ಸಿದ್ಧತೆ!
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತದ ಮೇಲೆ 50% (25% ಹೆಚ್ಚುವರಿ) ಸುಂಕ ವಿಧಿಸಿದಾಗಿನಿಂದ ರಷ್ಯಾದಿಂದ ತೈಲ ಖರೀದಿಸುವುದು ಗಮನಾರ್ಹವಾಗಿ ಕಡಿಮೆಯಾಗಿದೆ. ಪ್ರಸ್ತುತ 50% ಸುಂಕ ಇದ್ದು, ಇದು ಶಾಶ್ವತವಾಗಿ ಇರೋದಿಲ್ಲ ಎಂದು ಸುಂಕ ಕಡಿತಗೊಳಿಸುವ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಭಾರತವು ರಷ್ಯಾದ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಫಂಡಿಂಗ್ ಮಾಡುತ್ತಿದೆ ಅನ್ನೋದು ಟ್ರಂಪ್ ಬಲವಾದ ಆರೋಪ ಇದೇ ಕಾರಣಕ್ಕೆ ಭಾರತದ ಮೇಲೆ ಸುಂಕ ಏರಿಸಿದ್ದಾರೆ. ಟ್ರಂಪ್ ಅಧಿಕಾರಕ್ಕೆ ಏರಿದ ಆರಂಭದಲ್ಲಿ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡದ ರೂಪದಲ್ಲಿ ಸುಂಕ ಹೇರಿದ್ದಾರೆ. ಈ ನಿರ್ಧಾರದಿಂದ ಭಾರತದ ಕೆಲವು ವಸ್ತುಗಳಿಗೆ ಈಗ 50% ಸುಂಕ ಹೇರಲಾಗಿದೆ.

ಯುಎಸ್, G7 ಮತ್ತು ಯುರೋಪಿಯನ್ ದೇಶಗಳು ರಷ್ಯಾದ ತೈಲಕ್ಕೆ ಬೆಲೆ ಮಿತಿ ವ್ಯವಸ್ಥೆ ಜಾರಿಗೆ ತಂದಿವೆ. ಈ ಮಿತಿ ಜನವರಿ 2026 ರ ವರೆಗೆ ಬ್ಯಾರೆಲ್ಗೆ ಸರಿಸುಮಾರು 47.60 ಡಾಲರ್ (4,360 ರೂ.) ಆಗಿದ್ದು, ಫೆಬ್ರವರಿ 1 ರಿಂದ 44.10 ಡಾಲರ್ (4,039 ರೂ.) ಗೆ ಇಳಿಕೆಯಾಗಲಿದೆ. ಒಂದು ವೇಳೆ ಮಿತಿಗೊಳಿಸಿದ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ರೆ, ವಿಮೆ, ಸಾಗಣೆ ಮತ್ತು ಹಣಕಾಸು ಮುಂತಾದ ಸೇವೆಗಳನ್ನು ಒದಗಿಸಲಾಗುವುದಿಲ್ಲ ಎಂದು ದೇಶಗಳು ಎಚ್ಚರಿಕೆ ನೀಡಿವೆ.
-
Mandya19 hours agoಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು :ಡಾ. ಬಿ.ವಿ. ನಂದೀಶ್
-
Hassan14 hours agoಜನತೆಯ ಪ್ರೀತಿಗೆ ಮನಸೋತ ಡಿಸಿ ಕೆ.ಎಸ್. ಲತಾ ಕುಮಾರಿ
-
Mysore14 hours ago5 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ: ರಸ್ತೆ ಡಾಂಬರೀಕರಣ_ಬಾಗೂರು ಅಣೆಕಟ್ಟು ಅಭಿವೃದ್ಧಿಗೆ ಗುದ್ದಲಿ ಪೂಜೆ
-
Kodagu17 hours agoಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಬಿ.ಬಿ.ಹೇಮಲತಾ
-
National18 hours agoಪಿಎಂ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ: ಪ್ರಹ್ಲಾದ್ ಜೋಶಿ
-
Mysore19 hours agoಕಳ್ಳತನ ಮಾಡಿದ್ದ ಕಾರು ವಶ: ಆರೋಪಿ ಬಂಧನ
-
Kodagu16 hours agoಸಂಜೀವಿನಿ ಕಟ್ಟಡ ನಿರ್ಮಾಣ ಶ್ಲಾಘನೀಯ : ಶಾಸಕ ಡಾ.ಮಂಥರ್ ಗೌಡ
-
Chikmagalur17 hours agoಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ: ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ತಾತ್ಕಾಲಿಕ ನಿರ್ಬಂಧ
