Chikmagalur
ಜಿಲ್ಲಾ ಬಿಜೆಪಿ ಸೇವಾ ಪ್ರಾಕ್ಷಿಕ ಅಭಿಯಾನ ಯಶಸ್ವಿ
 
																								
												
												
											ಚಿಕ್ಕಮಗಳೂರು : ಜಿಲ್ಲಾ ಬಿಜೆಪಿಯ ಸೇವಾ ಪ್ರಾಕ್ಷಿಕ ಅಭಿಯಾನ ಮತ್ತು ಕಾರ್ಯಾಗಾರ ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯ ಕಚೇರಿಯಲ್ಲಿ ಗುರುವಾರ ನಡೆಯಿತು.
ಭಾರತ ಮಾತೆ ಫೋಟೋಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಡಾ. ಸಿ.ಟಿ. ರವಿ ಮಾತನಾಡಿ, ಸೇವೆ ಮಾಡುವ ಉದ್ದೇಶವೇ ಸೇವಾ ಪ್ರಾಕ್ಷಿಕ ಅಭಿಯಾನ. ವಿಶ್ವದ ನಾಲ್ಕನೇ ಶಕ್ತಿಯಾಗಿದ್ದೇವೆ. ಪರವಾಲಂಬಿಯಾಗಿಸುವ ಮೂಲಕ ದೇಶಕ್ಕೆ ಪೆಟ್ಟು ಕೊಡುವ ಯತ್ನ ನಡೆಯುತ್ತಿದೆ. ಅದನ್ನು ಜಾಗೃಯಿಂದ ಎದುರಿಸಬೇಕು.
ಸ್ವದೇಶಿ ವಸ್ತುಗಳಿಗೆ ಒತ್ತು, ಸ್ವಚ್ಛತಾ ಆಂದೋಲನದಲ್ಲಿ ಸಮಾಜವನ್ನು ತೊಡಗಿಸಬೇಕು. ನರೇಂದ್ರ ಮೋದಿಯವರ ಸಾಧನೆಗಳನ್ನು ಜನರಿಗೆ ತಿಳಿಸಬೇಕು.

ಕಾಂಗ್ರೆಸ್ ಗ್ಯಾರಂಟಿಗಳು ಜೀವನ ಪಂಕ್ಚರ್ ಮಾಡಿವೇ. ಜೊತೆಗೆ ಬ್ರಹ್ಮಾಂಡ ಸಾಲವನ್ನು ರಾಜ್ಯ ಸರ್ಕಾರ ಮಾಡಿರುವುದನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರದ ತೆರಿಗೆ ಕಡಿತಾದಿಂದಾಗಿರುವ ಲಾಭಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳು ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಕಾರ್ಯಕ್ರಮಗಳು, ನೀತಿಗಳನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸಗಳನ್ನು ಪಕ್ಷದ ಪ್ರತಿಯೊಬ್ಬರೂ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಬೆಳವಾಡಿ, ಪುಣ್ಯಪಾಲ್, ಬಿಜೆಪಿ ರಾಜ್ಯ ಒಬಿಸಿ ಕಾರ್ಯದರ್ಶಿ ಬಿ. ರಾಜಪ್ಪ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟಿಯಾನ್, ಮುಖಂಡ ವೇನಿಲ್ಲಾ ಭಾಸ್ಕರ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಗುಳುವಳ್ಳಿ ದಿನೇಶ್, ರಾಜೇಶ್ವರಿ ಉಪಸ್ಥಿತರಿದ್ದರು.
Chikmagalur
ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇ*ಣು ಬಿಗಿದುಕೊಂಡು ಆತ್ಮಹ*ತ್ಯೆ
 
														ಕೊಪ್ಪ: ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಪದ ಕೋಡ್ತಾಳ್ ನಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸುಶಾಂತ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಕೊಪ್ಪದ ಜಿಜೆಸಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಸುಶಾಂತ್ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನೂ ಈ ಸಂಬಂಧ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Chikmagalur
ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ
 
														ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವುಕೆ ಯೋಜನೆ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ವಿದ್ಯೆಗೂ ವೃತ್ತಿಗೂ ಸಂಬಂಧವಿಲ್ಲ. ಶಿಕ್ಷಣ ಜ್ಞಾನಕಷ್ಟೇ ದಾರಿಯಾಗಿದೆ. ಸಾಮನ್ಯ ರೈತ ಕೃಷಿಯಲ್ಲಿ ತೊಡಗುವುದಕ್ಕೂ, ವಿದ್ಯಾವಂತರಾದವರೂ ತೊಡಗುವುದಕ್ಕೂ ವ್ಯತ್ಯಾಸವಿದೆ.
ಕಿರು ಉದ್ದಿಮೆ ನಡೆಸುವ ರೈತರಿಗೆ, ಹಾಗೂ ಯುವ ಸಮುದಾಯಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಒಟ್ಟು 15 ಲಕ್ಷ ರೂಪಾಯಿ ಸಬ್ಸಡಿಯಲ್ಲಿ 9 ಲಕ್ಷ ಸಬ್ಸಡಿಯನ್ನು ರಾಜ್ಯ ಸರ್ಕಾರ ಭರಿಸಿದರೆ, 6 ಲಕ್ಷ ರೂಪಾಯಿ ಸಬ್ಸಿಡಿಯನ್ನು ಮಾತ್ರ ಕೇಂದ್ರ ಸರ್ಕಾರ ಭರಿಸುತ್ತಿದೆ. ಇದು ದೇಶದಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಮಾತ್ರ 60% ಸಬ್ಸಿಡಿ ನೀಡುತ್ತಿರುವುದು ಎಂದು ಸಚಿವರು ತಿಳಿಸಿದರು.

ರೈತರು ಬೆಳೆದ ಬೆಳೆಯನ್ನು ತಕ್ಷಣಕ್ಕೆ ಮಾರಾಟ ಮಾಡದೇ, ಅದನ್ನು ಸಂಸ್ಕರಣೆ ಮಾಡಿ, ಬ್ರ್ಯಾಂಡ್ ಮಾಡಿ, ವೈವಿಧ್ಯಮಯ ನಾವೀನ್ಯತೆಯ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಗೆ ನೀಡಿದರೆ ಅಧಿಕ ಲಾಭ ಸಂಪಾದಿಸಬಹುದು. ಬ್ಯಾಂಕಿನಿಂದ ಸಿಗುವ ಸಾಲ ಸೌಲಭ್ಯವನ್ನು ಬಳಸಿಕೊಂಡು ಪ್ರತಿಯೊಂದು ಕುಟುಂಬವೂ ಸ್ವಾವಲಂಬಿಯಾಗಿ ಬದುಕಬೇಕು ಎಂದು ತಿಳಿಸಿದರು.
ಇನ್ನೂ ಉದ್ಯಮಕ್ಕೆ ಅರ್ಜಿ ಸಲ್ಲಿಸುವವರಿಗೆ ಬ್ಯಾಂಕ್ ಸಿಬಿಇಲ್ (CBIL) ಹಾಗೂ ಯಾವುದೇ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಒತ್ತಡ ನೀಡದೇ ಸಾಲ ಸೌಲಭ್ಯ ನೀಡಬೇಕು. ಈ ಬಗ್ಗೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಗಮನಹರಿಸುವಂತೆ ಸಚಿವ ಚಲುವರಾಯಸ್ವಾಮಿಯವರು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಚಿಕ್ಕಮಗಳೂರು ಶಾಸಕ ತಮ್ಮಯ್ಯ, ಶೃಂಗೇರಿ ಶಾಸಕ ರಾಜೇಗೌಡ, ಕಡೂರು ಶಾಸಕ ಆನಂದ್, ವಿಧಾನಪರಿಷತ್ ಸದಸ್ಯ ಬೋಜೆಗೌಡ, ಚಿಕ್ಕಮಗಳೂರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.
Chikmagalur
ಮದ್ದೂರು ಗಲಾಟೆ ಪ್ರಕರಣ 21 ಜನರನ್ನ ಅರೆಸ್ಟ್ ಮಾಡಿದ್ದೇವೆ : ಸಚಿವ ಚಲುವರಾಯಸ್ವಾಮಿ
 
														ಚಿಕ್ಕಮಗಳೂರು : ಮಂಡ್ಯದ ಮದ್ದೂರಿನಲ್ಲಿ ನಡೆದ ಗಣಪತಿ ಗಲಾಟೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಂಡ್ಯ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ-ಜೆಡಿಎಸ್ ಮೇಲೆ ಕಿಡಿ ಕಾರಿದ್ದಾರೆ. ಮದ್ದೂರಿನಲ್ಲಿ ಸಾಮೂಹಿಕ ಗಣಪತಿ ಅತಿ ಹೆಚ್ಚು 3-4-5 ಮಾತ್ರ ಇವೆ.

ಆದರೆ ಅದನ್ನು ನೂರಕ್ಕೂ ಹೆಚ್ಚು ಅಂತ ತೋರಿಸುವ ಯತ್ನ ನಡೆಯುತ್ತಿದೆ. ಬೆಂಗಳೂರಿನಿಂದಲೂ ಗಣಪತಿ ಖರೀದಿಸಿ ಸಂಖ್ಯೆಯನ್ನು ಜಾಸ್ತಿ ಮಾಡ್ತಿದ್ದಾರೆ. ಬಿಜೆಪಿ-ಜೆಡಿಎಸ್ ಈ ನಂಬರ್ ಗೇಮ್ಗಾಗಿ ಒತ್ತಡ ಹಾಕ್ತಿದ್ದಾರೆ ಎಂದು ಅವರು ಆರೋಪಿಸಿದರು. ಇದೇ ವೇಳೆ, ಗಲಾಟೆ ಮಾಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗಿದೆ. ಹಿಂದೂಗಳನ್ನು ಬಂಧಿಸಿಲ್ಲ, ಯಾರ ಮೇಲೂ ಎಫ್ಐಆರ್ ಆಗಿಲ್ಲ. ಗಲಾಟೆಯ ಮೂಲ ಸಂಪೂರ್ಣವಾಗಿ ಮುಸ್ಲಿಂ ಸಮುದಾಯದಿಂದಲೇ ಆಗಿದೆ. ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಯ ಬಳಿಕ ಸಭೆ ಮಾಡಿ ರಾಜಕೀಯ ಮಾಡ್ತಿರುವುದು ಬಿಜೆಪಿಯ ನಿಲುವನ್ನು ತೋರಿಸುತ್ತದೆ ಎಂದು ಸಚಿವರು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, ಕಾನೂನು ಸುವ್ಯವಸ್ಥೆ ಹಾಳಾಗಿದೆ ಅಂತ ಕೇಂದ್ರ ಗೃಹಮಂತ್ರಿಗೆ ಪತ್ರ ಬರೆಯುವುದು ನಾಚಿಕೆಗೇಡು. ಅವರ ಆಡಳಿತದಲ್ಲೂ ಇಂಥ ಅನೇಕ ಘಟನೆಗಳು ನಡೆದಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಾತ್ರ ಸಮಸ್ಯೆಗಳು ಉಂಟಾಗುತ್ತವೆ ಅನ್ನೋದು ಸುಳ್ಳು ಎಂದು ವಾಗ್ದಾಳಿ ನಡೆಸಿದರು. ತನಿಖೆ ಪ್ರಗತಿ ಬಗ್ಗೆ ಮಾತನಾಡಿದ ಅವರು ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರು ಮದ್ದೂರಿನವರೇ. ನಿನ್ನೆ ತನಿಖೆ ಶುರುವಾಗಿದೆ.
ನಾಳೆ ಅಥವಾ ನಾಡಿದ್ದು ತನಿಖಾ ವರದಿ ನೋಡುತ್ತೇನೆ. ತನಿಖೆ ಮುಗಿಯುವವರೆಗೂ ಹೆಚ್ಚಿನ ವಿವರ ಹೇಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
- 
																	   Mysore23 hours ago Mysore23 hours agoಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಆರು ಮಂದಿಗೆ ಗಂಭೀರ ಗಾಯ 
- 
																	   Mysore16 hours ago Mysore16 hours agoಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ 
- 
																	   Special3 hours ago Special3 hours agoಬಾಗಲಕೋಟೆಯ ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ 
- 
																	   Hassan18 hours ago Hassan18 hours agoಹಾಸನ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು 
- 
																	   Hassan20 hours ago Hassan20 hours agoದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ : ಶಾಸಕ ಎ.ಮಂಜು ಪರೋಕ್ಷ ವಿರೋಧ 
- 
																	   State17 hours ago State17 hours agoಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧ ನ್ಯಾಯಾಲಯ ಗರಂ| ಪತ್ರಿಕಾ ವರದಿಗಳು ಊಹಾಪೂಹದಿಂದ ಕೂಡಿವೆ: ನಾಡೋಜ ಡಾ.ಮಹೇಶ ಜೋಶಿ ಸ್ಪಷ್ಟನೆ 
- 
																	   Manglore17 hours ago Manglore17 hours agoವಿದ್ಯಾಭಾರತಿ ಪ್ರಾಂತ, ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪ.ಪೂ. ಕಾಲೇಜಿನ ಬಾಲಕರ ತಂಡ ದ್ವಿತೀಯ 
- 
																	   Mandya39 minutes ago Mandya39 minutes agoಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಶ್ರೀರಂಗಪಟ್ಟಣ ರೈತರು ಕೇಂದ್ರ ಸಚಿವ ಹೆಚ್ಡಿಕೆ ಭೇಟಿ 

 
											 
											 
											 
											 
											