Connect with us

Hassan

ಸಾಹಿತಿ ಭಾನುಮುಷ್ತಾಕ್ ರವರಿಗೆ ಬೂಕರ್ ಪ್ರಶಸ್ತಿ : ನಗರದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಸಂಭ್ರಮ

Published

on

ಹಾಸನ: ಎಲ್ಲಾರ ಜನಪರಗಳ ಕಾಳಜಿ ಇರುವ ಒಡನಾಡಿ, ಸಾಹಿತಿ, ವಕೀಲರು, ಶ್ರೀಮತಿ ಭಾನುಮುಷ್ತಾಕ್ ಅವರಿಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನಲೆಯಲ್ಲಿ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಗುರುವಾರದಂದು ಸಾರ್ವಜನಿಕ ಸಂಭ್ರಮ ಹಾಗೂ ಅಭಿನಂದನೆ ಸಲ್ಲಿಸುವುದಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸೇರಿ ಘೋಷಣೆ ಕೂಗಿ ಸಿಹಿ ಹಂಚುವುದರ ಮೂಲಕ ಸಂಭ್ರಮಿಸಿದರು.

ಮೊದಲು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಹೂವಿನ ಮಳೆ ಕರೆದರು. ನಂತರ ಲೇಖಕಿ ಬಾನು ಮುಷ್ತಾಕ್ ಅವರ ೨೦೨೫ನೇ ಸಾಲಿನ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಗೆ ಬೂಕರ್ ಪ್ರಶಸ್ತಿ ಪಡೆದುಕೊಂಡಿದನ್ನು ಘೋಷಣೆ ಕೂಗುವುದರ ಮೂಲಕ ಸಂಭ್ರಮಿಸಿ ಸಿಹಿ ಹಂಚಿದರು.ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದ ಮುಖಂಡ ಧರ್ಮೇಶ್ ಮಾತನಾಡಿ, ಭಾನುಮುಷ್ತಾಕ್ ಅವರ ಆರಂಭ ದಿನಗಳಿಂದಲೂ ಜನಪರ ಚಳುವಳಿಗಳು, ರೈತ ಚಳುವಳಿ, ದಲಿತ ಹಾಗೂ ಕಾರ್ಮಿಕ ಚಳುವಳಿಗಳ ಜೊತೆ ಸಂಬಂಧ ಇಟ್ಟುಕೊಂಡಂತವರು ಎಂದರು. ಸಾಮಾಜಿಕ ಒಡನಾಟವೇ ಅವರ ಸಾಹಿತ್ಯದಲ್ಲಿ ಸಾಮಾಜಿಕ ವಿಚಾರವನ್ನು ಹೆಚ್ಚು ಕೊಡುವುದಕ್ಕೆ ಸಹಕಾರಿ ಆಗಿದೆ. ಅವರಿಗೆ ಈಗ ಅಂತರಾಷ್ಟ್ರೀಯ ಪ್ರಶಸ್ತಿ ಬಂದಿರುವುದು ನಮಗೆಲ್ಲಾ ಒಂದು ರೀತಿಯ ಸಂಭ್ರಮ. ಅವರು ಇಲ್ಲಿಗೆ

ಬಂದ ನಂತರ ಸ್ವಾಗತಿಸಿ ನಾಗರೀಕ ಸನ್ಮಾನ ಮಾಡುವಂತಹ ಕಾರ್ಯಕ್ರಮ ಇರುತ್ತದೆ. ಹಾಸನದ ಹೆಸರನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಖ್ಯಾತಿ ಬಂದಿದೆ. ಈ ಬಗ್ಗೆ ವಿಶ್ವದಲ್ಲಿ ದೊಡ್ಡ ಚರ್ಚೆ ಆಗುತ್ತಿದೆ. ದೀಪಬಸ್ತಿ ಮತ್ತು ಭಾನು ಮುಷ್ತಾಕ್ ಕನ್ನಡಕ್ಕೆ ಸಿಕ್ಕಿರುವ ಮೊದಲನೆ ಬುಕರ್ ಪ್ರಶಸ್ತಿ ಇದಾಗಿದೆ. ಇಂಡಿಯಕ್ಕೆ ಹಲವಾರು ಪ್ರಶಸ್ತಿ ಬಂದಿದೆ. ಜೊತೆಗೆ ಕನ್ನಡಿಗರು ತೆಗೆದುಕೊಂಡಿದ್ದಾರೆ ಈ ಪ್ರಶಸ್ತಿ. ಆದರೇ ಕನ್ನಡಕ್ಕೆ, ಕನ್ನಡ ಭಾಷೆ ಕೃತಿಗೆ ಸಿಕ್ಕಿರುವ ಒಂದು ಪ್ರಶಸ್ತಿ ಇದಾಗಿದೆ ಎಂದು ಶ್ಲಾಘಿಸಿದರು. ಇದೊಂದು ಬಹಳ ದೊಡ್ಡ ಸಾಧನೆ. ಇದನ್ನ ಇಡೀ ದೇಶ ಸಂಭ್ರಮಿಸುತ್ತಿದೆ. ಹಾಸ ಜಿಲ್ಲೆಯಲ್ಲೂ ಸಂಭ್ರಮಿಸುತ್ತಿದ್ಧೇವೆ. ಭಾನುಮುಷ್ತಾಕ್ ನಮ್ಮ ಜೊತೆ ಇದ್ದರೂ ನಮ್ಮ ಒಡನಾಡಿ ಎಂಬುದು ಹೆಮ್ಮೆಯಿದೆ. ಅವರ ಬರುವಿಕೆಯನ್ನು ನಿರೀಕ್ಷೆ ಮಾಡುತ್ತಿದ್ದೇವೆ. ಆ ಸಂಭ್ರಮದ ಕ್ಷಣಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ಹಿರಿಯ ಸಾಹಿತಿ ರೂಪ ಹಾಸನ್ ಮಾತನಾಡಿ, ಇವತ್ತು ನಮ್ಮೆಲ್ಲರಿಗೂ ಹಾಸನದ ಜನರಿಗೆ ತುಂಬ ಸಂತೋಷದ ದಿನವಾಗಿದೆ. ಕಳೆದ ವರ್ಷ ಇದೆ ಸಂದರ್ಭದಲ್ಲಿ ಅತ್ಯಂತ ನೋವು ಸಂಕಟದ ವೇಳೆ ಹಾದು ಹೋಗಿರುವುದು ಎಲ್ಲಾರಿಗೂ ನೆನಪು ಇದೆ. ಅಂದು ಹಾಸನ ಬೇಡವಾದ ಕಾರಣಕ್ಕೆ ಪ್ರಸಿದ್ಧಿ ಪಡೆದಿತ್ತು. ಆದರೇ ಇವತ್ತು ನಿಜವಾಗಿ ಹಾಸನದ ಘನತೆ ಏನು? ಅದರ ಗೌರವ ಏನು? ಅದು ಎಷ್ಟು ಸಾಧನೆಯನ್ನು ಮಾಡಿದೆ ಬಗ್ಗೆ ತಿಳಿಸಿಕೊಡುವಂತಹ ವೇಳೆಗೆ ನಾವು ಭಾನುಮುಷ್ತಾಕ್ ಮತ್ತು ದೀಪ ಬಸ್ತಿ ಅವರು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದುಕೊಂಡು ನಮ್ಮೆಲ್ಲರಿಗೂ, ಕನ್ನಡಿಗರಿಗೂ ಹೆಮ್ಮೆಯನ್ನು ತಂದಿದ್ದಾರೆ ಎಂದರು. ಭಾನುಮುಷ್ತಾಕರು ಇಲ್ಲಿಗೆ ಬಂದ ನಂತರ ವಿಜೃಂಭಣೆಯಿಂದ ಆಚರಿಸುವ ಕೆಲಸ ಮಾಡೋಣ. ಈಗ ನಾವೆ ಫೇಸ್ ಬುಕ್, ಸೋಶಿಯಲ್ ಮಿಡಿಯದಲ್ಲಿ ಹಾಗೂ ವಾಟ್ಸಾಪ್ ನಲ್ಲಿ

ಹಂಚಿಕೊಳ್ಳುತ್ತಿದ್ದೇವು. ಅದರಲ್ಲೂ ಮಹಿಳೆಯರು, ಲೇಖಕಿಯರು ಎನ್ನುವುದು ನನಗೆ ತುಂಭ ಸಂತೋಷ ಕೊಡುವ ವಿಷಯ. ಒಬ್ಬ ಮುಸ್ಲಿಂ ಹೆಣ್ಣು ಮಗಳು ಹೊರಗೆ ಬಂದು ಇಷ್ಟೆಲ್ಲಾ ಸಾಧನೆ ಮಾಡುವುದು, ವಕೀಲೆ ವೃತ್ತಿಯಲ್ಲಿ ತೊಡಗುವಂತದು, ಸಾಮಾಜಿಕ ಹೋರಾಟದಲ್ಲಿ ಇರುವುದು ಎಲ್ಲಾವು ಅಪುರೂಪವಾದಂತಹ ಸಂದರ್ಭದಲ್ಲಿ ಇವತ್ತು ಭಾನುಮುಷ್ತಾಕ್ ಏರಿದಂತಹ ಎತ್ತರ ಎಲ್ಲಾ ಲೇಖಕಿಯರಿಗೂ ಸ್ಪೂರ್ತಿಯನ್ನು ಕೊಡುವ ವಿಷಯ ಎಂದು ಶ್ಲಾಘನೆವ್ಯಕ್ತಪಡಿಸಿದರು. ಪುರುಷ ಪ್ರಧಾನ ಸಮಾಜ ಧಾರ್ಮಿಕ ಮತಾಂದತೆ ಹೊಂದಿರುವ ಸಮಾಜದಲ್ಲಿ ಕೂಡ ಇನ್ನು ಹೆಣ್ಣು ಮಕ್ಕಳನ್ನು ಕೀಳಾಗೆ ನೋಡುತ್ತಿದ್ದು, ಅವರ ಸಾಧನೆಯನ್ನು ಕಡೆಗಣಿಸುವಂತಹ, ನಿರ್ಲಕ್ಷಿಸುವ ಈ ಸಂದರ್ಭದಲ್ಲಿ ಅತ್ಯಂತ ಎತ್ತರಕ್ಕೆ ಏರಿ ಸಾಭಿತುಪಡಿಸಿರುವುದಕ್ಕೆ ನಿಜವಾಗಿ ಭಾನುಮುಷ್ತಾಕ್ ಅವರನ್ನ ಅಭಿನಂಧಿಸಬೇಕು ಎಂದು ಹೇಳಿದರು. ಜೊತೆಗೆ ಅದನ್ನ ಅನುವಾಧಿಸಿದಂತಹ ದೀಪಬಸ್ತಿಯನ್ನು ಕೂಡ ನೆನಪಿಸಿಕೊಳ್ಳಲಾಗುವುದು. ಇನ್ನು ಹೆಚ್ಚಿನ ಸಾಧನೆಯನ್ನು ಇವರು ಮಾಡಲಿ. ಈ ಸಾಧನೆ ಒಬ್ಬರದಲ್ಲ. ಇಡೀ ಹಾಸನ, ಕನ್ನಡಿಗರು ಭಾರತಕ್ಕೆ ಸಂದಂತಹ ಗೌರವಾಗಿದೆ ಎಂದು ತಿಳಿಸಿದರು.

ಇದೆ ವೇಳೆ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದ ಅಂತರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ಪತ್ರಕರ್ತರಾದ ನಾಗರಾಜು ಹೆತ್ತೂರ್, ಮಂಜು ಬನವಾಸೆ, ಚಲಂ. ಎಂ.ಜಿ. ಪೃಥ್ವಿ, ವೈದ್ಯೆ ರಂಗಲಕ್ಷ್ಮಿ, ಸಿ. ಸುವರ್ಣ, ಶಾಡ್ರಕ್, ಕೆ.ಟಿ. ಜಯಶ್ರೀ, ಜಾನಪದ ಕಲಾವಿದ ಗ್ಯಾರಂಟಿ ರಾಮಣ್ಣ, ಆರ್.ಪಿ.ಐ. ಸತೀಶ್, ಕೃಷ್ಣದಾಸ್, ಚಿನ್ನಸ್ವಾಮಿ ಮಹೇಶ್ ಇತರರು ಉಪಸ್ಥಿತರಿದ್ದರು.

Continue Reading

Hassan

ಹಾಸನವನ್ನು ಸ್ವಚ್ಛ ಮತ್ತು ಸುಂದರ ನಗರವಾಗಿಸಲು ಶ್ರಮ : ಶಾಸಕ ಸ್ವರೂಪ್ ಪ್ರಕಾಶ್

Published

on

ಹಾಸನ: ಹಾಸನ ನಗರಸಭೆ ಇದೀಗ ಮಹಾನಗರ ಪಾಲಿಕೆಯಾಗಿ ಉನ್ನತೀಕರಣ ಗೊಂಡಿದ್ದು, ಹೆಚ್ಚಿನ ಅನುದಾನ ತಂದು ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹೆಚ್.ಪಿ. ಸ್ವರೂಪ್ ಭರವಸೆ ನೀಡಿದರು.

ನಗರದ 80 ಅಡಿ ರಸ್ತೆ ಬಳಿ ಇರುವ ವಿಶ್ವನಾಥ ನಗರದಲ್ಲಿ 50 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ಚರಂಡಿ ಮತ್ತು ಕವರಿಂಗ್ ಸ್ಲ್ಯಾಬ್ ಅಳವಡಿಸುವ ಕಾಮಗಾರಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು, ಹಾಸನದ ಅಭಿವೃದ್ಧಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಸಚಿವರಾಗಿದ್ದಾಗ ಸಾಕಷ್ಟು ಅನುದಾನ ನೀಡಿ ಅಭಿವೃದ್ದಿಗೆ ಸಹಕಾರ ನೀಡಿದ್ದಾರೆ. ಅಲ್ಲದೆ ಇದೀಗ ಮಹಾನಗರ ಪಾಲಿಕೆ ಆಗಿರುವ ಹಿನ್ನೆಯಲ್ಲಿ ರಾಜ್ಯ ಸರಕಾರದಿಂದ ಮೂರು ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರ ಸಹಕಾರದಲ್ಲಿ ಕೇಂದ್ರದಿಂದಲೂ ಸುಮಾರು ೩೦ ಕೋಟಿ ಅನುದಾನ ಸಿಗುವ ಭರವಸೆ ಇದೆ ಎಂದರು. ಈಗಾಗಲೇ ಮಹಾನಗರ ಪಾಲಿಕೆಗೆ ಸೇರಿರುವ ಹೆಚ್ಚುವರಿ ೩೫ ಹಳ್ಳಿಗಳಿಲ್ಲಿ ಅನೇಕ ಸಮಸ್ಯೆಗಳಿದ್ದು ತನ್ನ ಗಮನಕ್ಕೆ ಬಂದಿದೆ. ಅವುಗಳ ಬಗ್ಗೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ ಸುಮಾರು ೧೦೦-೧೫೦ ಕೋಟಿ ವೆಚ್ಚದಲ್ಲಿ ಮಹಾನಗರ ಪಾಲಿಕೆಗೆ ಒಳಗೊಂಡ ಗ್ರಾಮಗಳನ್ನು ಅಭಿವೃದ್ದಿ ಪಡಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್ ಎಂ. ಚಂದ್ರಗೌಡ ಮಾತನಾಡಿ, ಹಾಸನ ನಗರ ವಾಸಿಗಳ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನೂ ಬಗೆಹರಿಸಲು ನಾವು ಬದ್ಧರಾಗಿದ್ದೇವೆ. ಶಾಸಕರ ಸಹಕಾರದಿಂದ ಹಾಸನಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ದಿ ಕೆಲಸಗಳನ್ನು ಮಾಡಲಾಗುವುದು ಎಂದರು.

ವಾರ್ಡ್ ಸದಸ್ಯ ಕ್ರಾಂತಿ ಪ್ರಸಾದ್ ತ್ಯಾಗಿ ಮಾತನಾಡಿ, ವಾರ್ಡ್ ನಂ.೩೦ಕ್ಕೆ ಸುಮಾರು ೧೦ ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಹೆಚ್.ಡಿ. ರೇವಣ್ಣ ಅವರು ಉಸ್ತುವಾರಿ ಸಚಿವರಾಗಿದ್ದಾಗ ೮೦ ಅಡಿ ರಸ್ತೆ ನಿರ್ಮಿಸಿ ಈ ಭಾಗದ ಜನರಿಗೆ ಭಾರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅಲ್ಲದೆ ಸ್ವರೂಪ್ ಪ್ರಕಾಶ್ ಅವರು ಶಾಸಕರಾದ ಬಳಿಕ ನಮ್ಮ ಬಡಾವಣೆಗೆ ಸಾಕಷ್ಟು ಅನುದಾನ ನೀಡಿ ಅಭಿವೃದ್ದಿ ಪಡಿಸುವ ಕೆಲಸ ಮಾಡಿದ್ದಾರೆ ಎಂದರು. ಈ ಭಾಗಕ್ಕೆ ಮುಖ್ಯವಾಗಿ ಕುಡಿಯುವ ನೀರು ಹಾಗೂ ಒಳ ಚರಂಡಿ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ, ಅಬಿವೃದ್ಧಿ ಪಥದತ್ತ ಸಾಗುತ್ತಿರುವ ಬಡಾವಣೆಗೆ ಹೆಚ್ಚಿನ ಅನುದಾನ ನೀಡಿ ಇನ್ನಷ್ಟು ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಶಾಸಕರು ಹಾಗೂ ಹಾಸನ ಮಹಾನಗರ ಪಾಲಿಕೆಯ ಮೇಯರ್ ಕೆಲಸ ಮಾಡಬೇಕಿದೆ ಎಂದು ಮನವಿ ಮಾಡಿದರು.

ಭೂಮಿ ಪೂಜೆಯಲ್ಲಿ ಹಾಸನ ಮಹಾನಗರ ಪಾಲಿಕೆಯ ಉಪ ಮೇಯರ್ ಹೇಮಲತಾ, ಎಇಇ ಚೆನ್ನೇಗೌಡ, ಎ.ಇ ಆನಂದ್, ನಗರಸಭೆ ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಹಾಜರಿದ್ದರು.

 

Continue Reading

Hassan

ನನ್ನ ಪತ್ನಿ ಕೈಗೆ ವಿಷಪೂರಿತ ಪೌಡರ್ ಹಾಕಿ ಸಾಯಿಸುವ ಯತ್ನ ತನಿಖೆ ನಡೆಸಿ ನ್ಯಾಯಕೊಡಿಸಿ: ಪತಿ ಎ.ಎಸ್. ಮಹೇಂದರ್ ಒತ್ತಾಯ

Published

on

ಹಾಸನ: ಕಳೆದ ತಿಂಗಳು ನನ್ನ ಪತ್ನಿ ಜಯಕಿರಣ್ ಕೈಗೆ ವಿಷಪೂರಿತ ಕೆಮಿಕಲ್ ಪೌಡರ್ ಹಾಕಿ ಸಾಯಿಸುವ ಯತ್ನ ಮಾಡಲಾಗಿದ್ದು, ತನಿಖೆ ನಡೆಸಿ ಕಾನೂನು ಕ್ರಮ ಕೈಗೊಂಡು ನ್ಯಾಯಕೊಡಿಸಬೇಕೆಂದು ಈಕೆಯ ಪತಿ ಎ.ಎಸ್. ಮಹೇಂದರ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ನಾನು ಮತ್ತು ನನ್ನ ಪತ್ನಿ ಜಯಕಿರಣ್ ಇಬ್ಬರೂ ಕೂಡ ವಿಶೇಷ ಚೇತನರಾಗಿದ್ದು, ನನಗೆ ಪೂರ್ತಿ ಕಣ್ಣು ಕಾಣಿಸುವುದಿಲ್ಲ. ನನ್ನ ಪತ್ನಿಗೆ ಆಗಿರುವ ಅನ್ಯಾಯದ ವಿರುದ್ಧ 2019ನೇ ಇಸವಿಯಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ದೀಲಿಪ್ ಎಂಬುವರು ನನ್ನ ಪತ್ನಿಯ ವಿರುದ್ಧ ಎತ್ತಿಕಟ್ಟಿ ಗಲಾಟೆ ಮಾಡಿಸಲು ಎರಡು ಸುಳ್ಳು ಕೇಸು ಹಾಕಿಸಲಾಗಿದ್ದು, ಈಗಾಗಲೇ ನ್ಯಾಯಾಲಯದಲ್ಲಿ ಸ್ಟಾಪ್ ಗೊಂಡಿದೆ.

ಸುಮಾರು 11 ಪ್ರಕರಣಗಳಿಗೆ ಕೋರ್ಟ್ ಮೆಟ್ಟಿಲನನ್ನು ಹತ್ತಿಸಿದ್ದಾರೆ ಎಂದು ದೂರಿದರು. ಇದಕ್ಕೆಲ್ಲಾ ಕಳೆದ 26 ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಸಂಬಂಧಪಟ್ಟ ಅಧಿಕಾರಿಗಳೆ ಒಟ್ಟಾಗಿ ಸೇರಿಕೊಂಡು ಕಛೇರಿ ಒಳಗೊಂಡಂತೆ ಇಲಾಖೆಯ ಪ್ರತಿ ಯೋಜನೆಗಳ ಸಿಬ್ಬಂಧಿಗಳ ಆರ್ಥಿಕತೆ ಇತರೆ ಮೇಲೆ ನಿಯಂತ್ರಣ ಹೊಂದಿರುತ್ತಾರೆ ಎಂದು ದೂರಿದರು. ಅಧಿಕಾರಿಗಳ ವಿರುದ್ಧ ಸೂಕ್ತ ದಾಖಲೆ ಸಲ್ಲಿಸಿ ನ್ಯಾಯದ ಪರ ಹೋರಾಟ ಮಾಡುತ್ತಿರುವುದರಿಂದ ನನ್ನ ಮೇಲೆ ಹಾಗೂ ನನ್ನ ಪತ್ನಿ ಮೇಲೆ ಹಲವಾರು ಸಂಚುಗಳನ್ನು ರೂಪಿಸಿದ್ದಾರೆ.

ಗಲಾಟೆ ಮಾಡಿಸಿ ಎರಡು ಸುಳ್ಳು ಕೇಸು ಹಾಕಿಸಿದ್ದಾರೆ ಎಂದರು. ಕಳೆದ ತಿಂಗಳು 31 ರ ಬೆಳಿಗ್ಗೆ ನಾನು ಮತ್ತು ನನ್ನ ಪತ್ನಿ ಜೊತೆ ಮೆಟ್ಟಿಲು ಹತ್ತುವಾಗ ಕೈಗೆ ಏನು ಬಿಸಿಯಾಗಿ ಸಲ್ಪ ಸಮಯದಲ್ಲಿಯೇ ಪತ್ನಿಯ ಕೈ ಉರಿಯಲು ಆರಂಭಿಸಿದೆ. ಚರ್ಮ ಕಿತ್ತುಕೊಂಡು ಹೋಯಿತು. ಉರಿ ಹೆಚ್ಚಾದಗ ಕ್ಲಿನಿಕ್ ಗೆ ಕರೆದುಕೊಂಡು ಹೋಗಲಾಯಿತು. ಇದಾದ ನಂತರ ಆಯುರ್ವೇದ್ ವೈದ್ಯರ ಬಳಿ ಹೋದಾಗ ಆಯಿಟ್ ಮೆಂಟ್ ಹಾಗೂ ಮಾತ್ರೆ ನೀಡಿ ಕಳುಹಿಸಿದರು. ಈ ಘಟನೆ ಬಗ್ಗೆ ದೂರು ನೀಡಲಾಗಿದ್ದು, ಈ ರೀತಿ ನಮ್ಮ ಮೇಲೆ ಅಟೇಕ್ ಮಾಡುವ ಬದಲು ಕೋರ್ಟಿನಲ್ಲಿ ಹೋರಾಟ ನಡೆಸಿ. ವರತು ಈರೀತಿ ಹೋರಾಟ ಮಾಡಬೇಡಿ. ಕೂಡಲೇ ಎಫ್.ಐ.ಆರ್. ಮಾಡಿ ತನಿಖೆ ಕೈಗೊಂಡು ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದರು.

ಕೆ.ಆರ್.ಎಸ್. ಪಕ್ಷದ ಮುಖಂಡ ವಿ. ರಮೇಶ್ ಮಾತನಾಡಿ, ಕಳೆದ ಎರಡು ತಿಂಗಳ ಹಿಂದೆ ಲೈವ್ ಮಾಡಲಾಗಿದ್ದು, ಯಡಿಯೂರು ರಸ್ತೆಯಲ್ಲಿ ಹೋದ ವೇಳೆ ಅಂಗನವಾಡಿ ವಿತರಣೆಯ ಫುಡ್ ಪ್ಯಾಕೆಟ್ ಗಳೆಲ್ಲಾವನ್ನು ರಸ್ತೆ ಮೇಲೆ ಬಿಸಾಡಿದ್ದರು. ಈ ವಿಚಾರವಾಗಿ ದೂರನ್ನು ನೀಡಲಾಗಿತ್ತು. ಅಧಿಕಾರಿಗಳು ತನಿಖೆ ಮಾಡಿದ್ದು, ಕಂಪನಿಯಿಂದ ಈತರ ಫುಡ್ ಬಂದಿದೆ. ಫುಡ್ ನಮ್ಮದೆಯಲ್ಲ ಎಂದು ಹೇಳಿದ್ದಾರೆ. ಎ.ಎಸ್. ಮಹೇಂದರ್ ಪತ್ನಿ ಮೇಲೆ ಕೆಮಿಕಲ್ ಅಟೆಕ್ ಮಾಡಲಾಗಿದೆ ಎಂದು ನಮ್ಮ ಬಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರನ್ನೆ ತೆಗೆದುಕೊಳ್ಳುತ್ತಿಲ್ಲ. ಇವರಿಬ್ಬರಿಗೂ ಕಣ್ಣು ಕಾಣಿಸುವುದಿಲ್ಲ. ಈ ವೇಳೆ ಮೂರು ಬಾರಿ ಸಾಯಿಸಲು ಮುಂದಾಗಿದ್ದಾರೆ. ಕೇಸು ದಾಖಲಿಸುವಲ್ಲಿ ಪೊಲೀಸರು ಹಿಂದೆಟು ಹಾಕಿ ರಾತ್ರಿ ದಾಖಲಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಆರ್.ಎಸ್. ಪಕ್ಷದ ಮುಖಂಡ ವಿ. ರಮೇಶ್ ಬೂವನಹಳ್ಳಿ, ಪ್ರಧಾನ ಕಾರ್ಯದರ್ಶಿ ಮಧು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್, ನಿರಂಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Hassan

ಎನ್.ಟಿ.ಸಿ ಕಾರ್ಮಿಕರ ಹೋರಾಟ ಸ್ಥಳಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ : ಕಾರ್ಮಿಕರ ಪರ ನಿಂತ ಶಾಸಕರು

Published

on

ಹಾಸನ: ಬಾಕಿ ಉಳಿಸಿಕೊಂಡಿರುವ ವೇತನ ನೀಡುವಂತೆ ನಗರದ ಕೈಗಾರಿಕಾ ಪ್ರದೇಶದಲ್ಲಿನ ನ್ಯೂ ಮಿನರ್ವ ಮಿಲ್ ಎದುರು ಕಾರ್ಮಿಕರ ಪ್ರತಿಭಟನಾ ಸ್ಥಳಕ್ಕೆ ಇಂದು ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.

ಕಳೆದ ಏಳು ತಿಂಗಳಿನಿಂದ ಕಾರ್ಮಿಕರಿಗೆ ವೇತನ ನೀಡಿಲ್ಲ ವೇತನ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಹೋರಾಟ ನಡೆಯುತ್ತಿದ್ದು ಇಂದು ಸ್ಥಳಕ್ಕೆ ಬಂದ ವ್ಯವಸ್ಥಾಪಕರನ್ನು ಕಾರ್ಮಿಕರು ತೀರ್ವ ತರಾಟೆಗೆ ತೆಗೆದುಕೊಂಡರು.

ಪ್ರಮುಖವಾಗಿ ಈಗಾಗಲೇ ಬಾಕಿ ಉಳಿಸಿಕೊಂಡಿರುವ ವೇತನವನ್ನು ಅತೀ ಶೀಘ್ರವಾಗಿ ನೀಡಬೇಕು, ಜೊತೆಗೆ ನಿಂತು ಹೋಗಿರುವ ಕಂಪೆನಿಯಲ್ಲಿನ ಸಾಮಗ್ರಿಗಳನ್ನು ರಕ್ಷಿಸುವ ಸಲುವಾಗಿ ಕಾರ್ಮಿಕರನ್ನು ಕವಾಲುಗಾರರನ್ನಾಗಿ ನೇಮಕ ಮಾಡಿಕೊಂಡಿದ್ದು ಅವರಿಗೂ ವೇತನ ನೀಡುತ್ತಾರೆ ಎಂಬ ನಂಬಿಕೆ ಇಲ್ಲ ಹಾಗಾಗಿ ಎಲ್ಲಾರಿಗೂ ವೇತನ ನೀಡಲು ಗಡುವು ನೀಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ಕಾರ್ಮಿಕರ ನೀತಿ ನಿಯಮಗಳನ್ನು ಆಡಳಿತಮಂಡಳಿ ಗಾಳಿಗೆ ತೂರಿದೆ, ವ್ಯವಸ್ಥಾಪಕರು ಕಾರ್ಮಿಕರನ್ನು ಒಳಗೆ ಬಿಡದೆ ಹೋರಾಟ ಹತ್ತಿಕ್ಕಲು ಹುನ್ನಾರ ಮಾಡುತ್ತಿದ್ದಾರೆ ಅಲ್ಲದೆ ವೇತನದ ಬಗ್ಗೆ ವ್ಯವಸ್ಥಾಪಕರಲ್ಲಿ ಕೇಳಿದರೆ ಮೇಲಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಹುಸಿ ಭರವಸೆ ನೀಡುತ್ತಾ ಬಂದಿದ್ದಾರೆ ಆದುದರಿಂದ ವೇತನ ನೀಡುವವರೆಗೂ ನಮ್ಮ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.

ಬಳಿಕ ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಕಾರ್ಮಿಕರ ಹಿತದೃಷ್ಟಿಯಿಂದ ಆಡಳಿತ ಮಂಡಳಿ ಕೆಲಸ ಮಾಡಬೇಕು. ಈಗಾಗಲೇ ಕೈಗಾರಿಕಾ ಪ್ರದೇಶಕ್ಕಾಗಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಕಳೆದುಕೊಂಡಿರುವ ರೈತ ಕುಟುಂಬಗಳು ಇಂದು ಬೀದಿ ಪಾಲಾಗಿವೆ, ಅವರಿಗೆ ಉದ್ಯೋಗ ನೀಡಿ ಅವರಿಗೆ ಸಹಕಾರ ನೀಡಬೇಕಿರುವುದು ಕಾರ್ಖಾನೆಗಳ ಜವಾಬ್ದಾರಿ ಆದುದರಿಂದ ಸಂಸ್ಥೆ ಕೂಡಲೇ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಕೆಲಸ ಮಾಡಬೇಕಿದೆ ಎಂದರು.

ತಾನು ಕೂಡ ಶಾಸಕನಾಗಿ ಸಂಭಂದಿಸಿದ ಇಲಾಖಾ ಸಚಿವರ ಬಳಿ ನಿಯೋಗ ತೆರಳಿ ಇಲ್ಲಿನ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ಶೀಘ್ರವಾಗಿ ಬಗೆಹರಿಸುವ ಕೆಲಸ ಮಾಡಲಾಗುವುದು, ಸರ್ಕಾರದ ಅಂಗ ಸಂಸ್ಥೆಯಾಗಿರುವ ಎನ್.ಟಿ.ಸಿ ಕಾರ್ಖಾನೆಯಿಂದ ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು

Continue Reading

Trending

error: Content is protected !!