Connect with us

Hassan

ಜಿಲ್ಲೆಯ ವಕ್ಸ್ ಬೋರ್ಡ್ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ: ಬಿ.ಹೆಚ್. ಸುಲೈಮಾನ್ ಆಗ್ರಹ

Published

on

ಹಾಸನ: ಬೋರ್ಡ್ ಅಧಿಕಾರಿಯಾದ ಜರೀನಾ ಬೇಗಂರವರ ಬಗ್ಗೆ ಅನುಮಾನ ಇರುವುದರಿಂದ ಜಿಲ್ಲೆಯ ವಕ್ಸ್ ಬೋರ್ಡ್‌ನಲ್ಲಿ ಇಲ್ಲಿವರೆಗೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಬಿ.ಹೆಚ್. ಸುಲೈಮಾನ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಹಾಸನ ಜಿಲ್ಲೆಯ ವಕ್ಸ್ ಬೋರ್ಡ್‌ನಲ್ಲಿ ೨೧ ಜನರ ಸಲಹೆ ಸಮಿತಿ ಇದ್ದರೂ ಸಹ ಲೆಕ್ಕಕ್ಕೆ ಉಂಟು ಆಟಕ್ಕೆ ಇಲ್ಲ ಎನ್ನುವಂತೆ ವಕ್ಸ್ ಬೋರ್ಡಿನ ಅಧ್ಯಕ್ಷರೂ ಮತ್ತು ಜಿಲ್ಲಾ ವಕ್ಸ್ ಬೋರ್ಡ್ ಅಧಿಕಾರಿಯಾದ ಶ್ರೀಮತಿ ಜರೀನಾ ಬೇಗಂರವರು ಸೇರಿಕೊಂಡು ಜಿಲ್ಲಾ ವ ಬೋರ್ಡಿನಲ್ಲಿ ನಡೆಯುತ್ತಿರುವಂತಹ ಯಾವುದೇ ವಿಚಾರಗಳನ್ನು ಸಲಹ ಸಮಿತಿಗಳಿಗೆ ತಿಳಿಸದೇ ತಮಗೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದು, ಇದರಿಂದ ಸಲಹಾ ಸಮಿತಿಯ ನಿರ್ದೇಶಕರುಗಳಿಗೆ ಉಪಾಧ್ಯಕ್ಷರುಗಳಿಗೆ ಬಹಳಷ್ಟು ಅವಮಾನವನ್ನು ಮಾಡಿರುತ್ತಾರೆ ಎಂದು ದೂರಿದರು.

ಸಲಹಾ ಸಮಿತಿಯ ೨೧ ಜನರ ಆಯ್ಕೆಯಾಗಿ ೨೬ ತಿಂಗಳು ಕಳೆದರೂ ಇದುವರೆಗೆ ೦೪ ಸಭೆಗಳನ್ನು ಮಾಡಿರುತ್ತಾರೆ. ಹಾಗೂ ಯಾವುದೇ ಸಭಾ ವಿಷಯಗಳನ್ನು ಸಭೆಯಲ್ಲಿ ಚರ್ಚಿಸದೆ ತಮಗೆ ಇಷ್ಟ ಬಂದಂತೆ ತೀರ್ಮಾನವನ್ನು ತೆಗೆದುಕೊಂಡಿರುತ್ತಾರೆ. ತಿಂಗಳಿಗೆ ಒಮ್ಮೆ ಸಲಹಾ ಸಮಿತಿಯ ಸಭೆಯನ್ನು ಕರೆಯುವ ಪದ್ಧತಿ ಇದ್ದು, ಅದನ್ನು ಉಲ್ಲಂಘಿಸಿದ್ದಾರೆ. ದಿನಾಂಕ: ೨೫/೧೦/೨೦೨೪ರಂದು ರಾಜ್ಯದಿಂದ ೦೮ ಡೆತ್ ಫ್ರೀಜರ್‌ಗಳನ್ನು ತಾಲ್ಲೂಕುವಾರು ವಿತರಿಸಲು ರಾಜ್ಯ ವಕ್ಸ್ ಬೋರ್ಡ್‌ನಿಂದ ಹಾಸನ ಜಿಲ್ಲಾ ವಕ್ಸ್ ಬೋರ್ಡ್‌ಗೆ ಬಂದಿರುತ್ತದೆ ಎಂದರು.

ಆದರೆ ಈ ಡೆತ್ ಫ್ರೀಜರ್‌ಗಳು ಹಾಸನ ಜಿಲ್ಲೆಗೆ ಬಂದಿರುವುದಾಗಲೀ ಅಥವಾ ಇವುಗಳನ್ನು ಯಾವ ತಾಲ್ಲೂಕುಗಳಿಗೆ ಹಂಚಬೇಕೆಂದು ಸಲಹಾ ಸಮಿತಿಗೆ ತಿಳಿಸದೆ ತಮಗೆ ಮನಬಂದಂತೆ ಅಧ್ಯಕ್ಷರು ಹಾಗೂ ಜಿಲ್ಲಾ ವಕ್ಸ್ ಬೋರ್ಡ್ ಅಧಿಕಾರಿಯಾದ ಶ್ರೀಮತಿ ಜರೀನಾ ಬೇಗಂರವರು ತಾಲ್ಲೂಕಿನ ಹಳ್ಳಿಗಳಿಗೆ ಡೆತ್ ಫ್ರೀಜರ್‌ಗಳನ್ನು ಹಂಚಿಕೆ ಮಾಡಿರುತ್ತಾರೆ. ಇದರಲ್ಲಿ ಬಹಳಷ್ಟು ಭ್ರಷ್ಟಾಚಾರಗಳು ನಡೆದಿರುವ ಬಗ್ಗೆ ಅನುಮಾನ ಇದ್ದು ತಾಲ್ಲೂಕಿನ ಹೆಡ್ ಮಸೀದಿಗಳಿಗೆ ಹಂಚಬೇಕಾದ ಡೆತ್ ಫ್ರೀಜರ್‌ಗಳನ್ನು ಸಲಹ ಸಮಿತಿಗೆ ಗೊತ್ತಿಲ್ಲದೆ ಹಂಚಿರುವುದು ಭ್ರಷ್ಟಚಾರಕ್ಕೆ ಅನುವು ಮಾಡಿಕೊಟ್ಟಂತೆ ಆಗಿದೆ. ೨೬ ತಿಂಗಳು ಕಳೆದರೂ ಜಿಲ್ಲಾ ವಕ್ ಬೋರ್ಡ್‌ನಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿರುವುದಿಲ್ಲ.

ತಾಲ್ಲೂಕುವಾರು ಮಸೀದಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು ಆಯ್ಕೆ ಆಗಿರುವುದಿಲ್ಲ. ಸುಮಾರು ೧ಳಿ ವರ್ಷದಿಂದ ಅರ್ಜಿಯನ್ನು ಸಲ್ಲಿಸಿದ ಮಸೀದಿ ಅಧ್ಯಕ್ಷರುಗಳಿಗೆ ಅರ್ಜಿಯನ್ನು ವಿಲೇವಾರಿ ಮಾಡಿರುವುದಿಲ್ಲ ಹಾಗೂ ವಕ್ ಬೋರ್ಡಿನಿಂದ ಮಸೀದಿಗಳಿಗೆ ಯಾವುದೇ ಮಾಹಿತಿಯನ್ನು ಕೊಟ್ಟಿರುವುದಿಲ್ಲ. ಅಧಿಕಾರಿಯವರು ಸಬೂಬು ಹೇಳಿಕೊಂಡು ಮುಂದೂಡುತ್ತಿದ್ದಾರೆ. ಜಿಲ್ಲಾ ವಕ್ಸ್ ಬೋರ್ಡ್ ಅಧಿಕಾರಿ ಶ್ರೀಮತಿ ಜರೀನಾ ಬೇಗಂರವರು ಬಿ.ಪಿ.ಎಲ್ ಕಾರ್ಡ್ ಹೊಂದಿದ್ದು, ಜಿಲ್ಲಾ ವಕ್ಸ್ ಬೋರ್ಡ್‌ನಲ್ಲಿ ಸುಮಾರು ೩೦ ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಇವರು ೨೦೧೨ ರಿಂದ ೨೦೨೪ರವರೆಗೆ ಪಡಿತರ ಪದಾರ್ಥಗಳನ್ನು ಪಡೆದು ರೂ. ೧,೩೫,೬೩೮ ರೂ.ಗಳ ದಂಡವನ್ನು ಸರ್ಕಾರಕ್ಕೆ ಪಾವತಿಸಿರುತ್ತಾರೆ. ಅಲ್ಲದೆ ಇವರು ೩೦ ವರ್ಷಗಳಿಂದ ಜಿಲ್ಲಾ ವಕ್ಸ್ ಬೋರ್ಡ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಇಲ್ಲಿಯವರೆಗೆ ಏನೆಲ್ಲಾ ಭ್ರಷ್ಟಾಚಾರ ಮಾಡಿರುವ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ತಮ್ಮಲ್ಲಿ ಈ ಮೂಲಕ ಕೋರಿಕೊಳ್ಳುತ್ತೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸುಭೇರ್ ಅಹಮದ್, ಅನ್ಸರ್ ಪಾಷಾ, ಸಬ್ಬಿ, ಅಬ್ದೂಲ್ ರಫೀಕ್ ಇತರರು ಪಾಲ್ಗೊಂಡಿದ್ದರು.

Continue Reading

Hassan

ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ತಾಲ್ಲೂಕಿನ ದೊಡ್ಡಕಣಗಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಎಲ್ಲಾ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕುಮಾರ್‌ ಅವರು ಅವಿರೋಧ ಆಯ್ಕೆ ಘೋಷಿಸಿದರು.

ಸಾಮಾನ್ಯ ಕ್ಷೇತ್ರದಿಂದ ಕೆ.ಕೆ. ಜಯರಾಮ, ಹೆಚ್‌.ಎಂ. ನಾರಾಯಣ, ಕೆ.ಟಿ. ಬೋರೇಗೌಡ, ಸುಬ್ಬೇಗೌಡ, ವೆಂಕಟೇಗೌಡ, ಮಹಿಳಾ ಕ್ಷೇತ್ರದಿಂದ ಶಕುಂತಲ, ಪ್ರತಿಮ, ನಂಜಶೆಟ್ಟಿ (ಹಿಂದುಳಿದ ವರ್ಗ ಎ), ಕೆ. ಜಗದೀಶ್‌ (ಹಿಂದುಳಿದ ವರ್ಗ ಬಿ), ರಂಗಸ್ವಾಮಿ (ಪ.ಜಾ.) ಹಾಗು ಪರಿಶಿಷ್ಟ ಪಂಗಡದ ಒಂದು ಸ್ಥಾನಕ್ಕೆ ಯಾರೂ ಅರ್ಜಿ ಸಲ್ಲಿಸದ ಹಿನ್ನಲೆಯಲ್ಲಿ ಸ್ಥಾನ ಖಾಲಿಯಿದೆ. ಸಾಲಗಾರರಲ್ಲದ ಕ್ಷೇತ್ರದಿಂದ ಕೆ.ಸಿ. ಸಂತೋಷ್‌ ಅವರು ಆಯ್ಕೆಯಾದರು. 2030ರ ಫೆ. 9ರ ವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ.

ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾರ್‌, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್‌, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಕುಮಾರಸ್ವಾಮಿ, ನಂಜೇಶ್‌ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಹಾಜರಿದ್ದರು.

Continue Reading

Hassan

ಫೆ.11 ರಿಂದ 13 ವರೆಗೆ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ

Published

on

ಬೇಲೂರು: ಬೇಲೂರಿನ ಚನ್ನಾಪುರ ರಸ್ತೆಯಲ್ಲಿರುವ ಕೋವಿಪೇಟೆಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ 18ನೇ ವರ್ಷದ ಜಾತ್ರಾ ಮಹೋತ್ಸವ ಫೆ. 11 ರಿಂದ ಫೆ.13ರ ವರೆಗೂ ನಡೆಯಲಿದೆ, ಪ್ರತಿಯೊಬ್ಬ ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇಗುಲದ ಪ್ರಧಾನ ಅರ್ಚಕ ರವಿಸ್ವಾಮಿ ತಿಳಿಸಿದ್ದಾರೆ.

ಜಾತ್ರಾ ಮಹೋತ್ಸವ ನಿಮಿತ್ತ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಫೆ.11 ಮಂಗಳವಾರ ಸಂಜೆ 6.00 ಗಂಟೆಗೆ ಗಂಗಪೂಜೆ ಮತ್ತು ಕಳಸ ಸ್ಥಾಪನೆ, ಪಂಚಾಮೃತ, ಅಭಿಷೇಕ, ಗಣ ಹೋಮ, ನವಗ್ರಹ ಹೋಮ ಚಂಡಿ ಹೋಮ, ದುರ್ಗಾ ಹೋಮ, ಜಯಾವಿ ಹೋಮಗಳು ನಡೆಯುತ್ತದೆ.

ಫೆ.12 ರ ಬುಧವಾರ ಬೆಳಗ್ಗೆ 8.00 ಗಂಟೆಗೆ 12.30 ವರೆಗೂ ಬೇಲೂರಿನ ವಿಷ್ಣು ಸಮುದ್ರದಲ್ಲಿ (ಅಷ್ಟಮ್ಮನಕೆರೆ) “ಗಂಗಾ ಪೂಜೆ’ ನಂತರ ನಗರದ ಪ್ರಮುಖ ಬೀದಿಗಳಲ್ಲಿ ವೀರಗಾಸೆ ಕುಣಿತ, ಡೊಳ್ಳು ಕುಣಿತ, ನಂದಿ ಧ್ವಜ ಮತ್ತು ಚೌಡಿಕೆ ಪದಗಳೊಂದಿಗೆ ಹಲವು ವಾದ್ಯ ಗೋಷ್ಠಿಯೊಂದಿಗೆ 101 ಕುಂಭಾಷೇಕಗಳೊಂದಿಗೆ ಪ್ರಷಾಲಂಕಾರಗೊಂಡ ಶ್ರೀ ರೇಣುಕಾ ಅಮ್ಮನವರ ಪಲ್ಲಕ್ಕಿ ಮೆರವಣಿಗೆ ಮತ್ತು ಬೆಳಗ್ಗೆ 11.30 ಕ್ಕೆ “ಶ್ರೀ ರೇಣುಕಾ ಯಲ್ಲಮ್ಮನವರ ಕೆಂಡೋತ್ಸವ” ನಡೆಯುತ್ತದೆ. ನಂತರ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ಇರುತ್ತದೆ. “ಮದ್ಯಾಹ್ನ 1-00 ಗಂಟೆಗೆ ಅನ್ನ ಸಂತರ್ಪಣೆ” ನಡೆಯುತ್ತದೆ.

ಫೆ.13 ರ ಬೆಳಿಗ್ಗೆ 8.00 ರಿಂದ ಶ್ರೀ ಹುಚ್ಚಂಗಿ ಅಮ್ಮನವರ ಜಾತ್ರಾ ಮಹೋತ್ಸವ ಉತ್ಸವ” ಬೆಳಗ್ಗೆ 10.30 ರಿಂದ ಸಂಜೆ 6.00 ರವರೆಗೆ ದೇವಿಗೆ ಹರಕೆ ಸೇವೆ ಇರುತ್ತದೆ.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಿ ತನು, ಮನ, ಧನ ಸಹಾಯದೊಂದಿಗೆ ಸಹಕರಿಸಿ ಶ್ರೀ ದೇವಿಯವರ ಕೃಪೆಗೆ ಪಾತ್ರರಾಗಬೇಕಾಗಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Continue Reading

Hassan

ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ ಕಂಪನಿಗೆ ಒಂದು ಲಕ್ಷ ರೂ. ದಂಡ

Published

on

ಚಾಮರಾಜನಗರ, ಫೆ.06:- ಕಳಪೆ ಗುಣಮಟ್ಟದ ಉಪ್ಪು ತಯಾರಿಸಿದ್ದ ತಮಿಳುನಾಡಿನ ಕಂಪನಿಯೊಂದಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ನ್ಯಾಯನಿರ್ಣಾಯಕ ಅಧಿಕಾರಿ ಗೀತ ಹುಡೇದ ಅವರು 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಹನೂರು ಪಟ್ಟಣದ ಬಂಡಳ್ಳಿ ರಸ್ತೆಯಲ್ಲಿರುವ ಶ್ರೀ ಮಹದೇಶ್ವರ ಸ್ಟೋರ್ ಗೆ ಕಳೆದ 2024ರ ಜುಲೈ 29ರಂದು ಕೊಳ್ಳೇಗಾಲ ತಾಲ್ಲೂಕಿನ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅಂಗಡಿಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ವಿ.ಕೆ.ಎಸ್.ಟ್ರೂ ಸಾಲ್ಟ್ (VKS TRUE SALT) ಎಂಬ ಹೆಸರಿನ ಉಪ್ಪಿನ ಆಹಾರ ಮಾದರಿಯನ್ನು ಸಂಗ್ರಹಿಸಿ ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು.

ಸದರಿ ಉಪ್ಪಿನ ಮಾದರಿಯು ವಿಶ್ಲೇಷಣಾ ವರದಿಯಿಂದ ಕಳಪೆ ಗುಣಮಟ್ಟ (ಸಬ್ ಸ್ಟ್ಯಾಂಡರ್ಡ್) ಎಂದು ದೃಡಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಯಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ಮೊಕದ್ದಮೆ ಹೂಡಲಾಗಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯನಿರ್ಣಾಯಕ ಅಧಿಕಾರಿಗಳಾದ ಗೀತಾ ಹುಡೇದ ಅವರು ಪ್ರಕರಣದ ವಿಚಾರಣೆ ನಡೆಸಿ ತಯಾರಕರಾದ ತಮಿಳುನಾಡಿನ ತೂತುಕುಡಿಯ ವಿ.ಕೆ.ಎಸ್. ಪುಡ್ ಪ್ರಾಡಕ್ಟ್ಸ್ ಕಂಪನಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ ನಿಬಂಧನೆ 2011ರ ರಿತ್ಯಾ ಸೆಕ್ಷನ್ 51 ರಡಿಯಲ್ಲಿ ಒಂದು ಲಕ್ಷ ರೂ. ದಂಡ ವಿಧಿಸಿ ಫೆಬ್ರವರಿ 3 ರಂದು ಆದೇಶಿಸಿದ್ದಾರೆ.

Continue Reading

Trending

error: Content is protected !!