Connect with us

State

ಈ ದಿನದಿಂದ ‘ಗ್ಯಾರಂಟಿ’ ಯೋಜನೆಗಳು ರದ್ದು – ಡಿ ಕೆ ಶಿವಕುಮಾರ್ ಕೊಟ್ರು ಶಾಕಿಂಗ್ ಸ್ಟೇಟ್ಮೆಂಟ್ !

Published

on

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನರಿಗೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಪಂಚ ಗ್ಯಾರಂಟಿಗಳನ್ನು ಘೋಷಿಸಿ ಅದರಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಈ ಎಲ್ಲಾ ಯೋಜನೆಗಳು ಸುಮಾರು 10 ವರ್ಷಗಳ ಕಾಲ ಅಸ್ತಿತ್ವದಲ್ಲಿ ಇರುತ್ತದೆ, ಜನರಿಗೆ ಯಾವುದೇ ಚಿಂತೆ ಬೇಡ ಎಂದು ಕೂಡ ಸರ್ಕಾರ ಹೇಳಿದೆ. ಆದರೆ ಇದೀಗ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಗ್ಯಾರಂಟಿ ಯೋಜನೆಗಳು ರದ್ದಾಗುವ ಮಾತನ್ನಾಡಿದ್ದಾರೆ.

ಹೌದು, ಕಾಂಗ್ರೆಸ್ನ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳು(DCM) ಆದ ಡಿಕೆ ಶಿವಕುಮಾರ್ ಅವರು ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಾಗ ಬಿಜೆಪಿಯವರು ವಿರೋಧಿಸಿದರು. ಆದರೆ ಇಂದು ಎಲ್ಲ ಬಿಜೆಪಿ(BJP) ಕಾರ್ಯಕರ್ತರು ಕೂಡ ಈ ಗ್ಯಾರಂಟಿಗಳ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಅವರೆಲ್ಲರೂ ರಾಜ್ಯದ ಜನರೆಂದು ನಾವು ನೋಡುತ್ತೇವೆ. ಈ ಯೋಜನೆಗಳು ಇನ್ನು ಮುಂದೆಯೂ ನಿಮಗೆ ಸಿಗಬೇಕೆಂದರೆ ನೀವು ಕಾಂಗ್ರೆಸ್ ಗೆ ವೋಟ್ ಹಾಕಬೇಕು. ಲೋಕಸಭೆಯಲ್ಲಿ ಬಿಜೆಪಿ ಅಥವಾ ಜೆಡಿಎಸ್ ಗೆ ವೋಟ್ ಹಾಕಿ ಅವರನ್ನು ಗೆಲ್ಲಿಸಿದರೆ ನಾವು ಜಾರಿಗೆ ತಂದಿರುವ ಎಲ್ಲಾ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ. ಅವರು ಗೆದ್ದ ದಿನದಿಂದಲೇ ಇವು ರದ್ದಾಗುತ್ತವೆ. ಹೀಗಾಗಿ ನೀವು ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡಿ’ ಎಂದು ಹೇಳಿದರು.

ಅಲ್ಲದೆ ಗ್ಯಾರಂಟಿ ಲಾಭ ಪಡೆಯುವ ಎಲ್ಲಾ ಜನರಿಗೂ ಹೇಳಿ ಮನವರಿಕೆ ಮಾಡಬೇಕು. ಬಿಜೆಪಿ ಕಾರ್ಯಕರ್ತರು ಹಾಗೂ ಜೆಡಿಎಸ್ ಕಾರ್ಯಕರ್ತರಿಗೂ ತಿಳಿಸಿ, ಅವರ ಪರ ಒಲವಿರುವವರಿಗೂ ತಿಳಿಸಿ ಈ ಗ್ಯಾರಂಟಿ ಲಾಭ ಬೇಕೆಂದರೆ ನೀವು ಕಾಂಗ್ರೆಸ್ ಗೆ ವೋಟು ಮಾಡಲು ಎಂದು ಹೇಳಿದರು.

ಜೊತೆಗೆ ನಮ್ಮ ಸರ್ಕಾರ ಇರುವವರೆಗೂ ಅಥವಾ ನಮ್ಮ ಆಡಳಿತ ನಾವು ಎಲ್ಲಿವರೆಗೂ ಆಡಳಿತ ನಡೆಸುತ್ತೇವೆ ಅಲ್ಲಿಯವರೆಗೂ ನಾವು ಜಾರಿಗೆ ತಂದಿರುವಂತಹ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಾಗಲಿ, ಕಡಿಮೆ ಮಾಡುವುದಾಗಲಿ, ಅದನ್ನು ಹಿಂಪಡೆಯುವುದಾಗಲಿ ಮಾಡುವುದಿಲ್ಲ. ನಮ್ಮ ಸರ್ಕಾರ ಇರುವವರೆಗೂ ನಾವು ಎಲ್ಲಿವರೆಗೂ ಭರವಸೆ ಕೊಟ್ಟಿದ್ದೇವೆ ಅಲ್ಲಿಯವರೆಗೂ ಎಲ್ಲಾ ಗ್ಯಾರೆಂಟಿಗಳು ಅಸ್ತಿತ್ವದಲ್ಲಿ ಇರುತ್ತವೆ. ನಿಮಗೆ ಇದರ ಲಾಭ ಸಿಗುತ್ತದೆ ಎಂದು ಹೇಳಿದರು.

Hassan

ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

Published

on

ಬೆಂಗಳೂರು/ಹಾಸನ: ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆಯಡಿ ಕೈಗೆತ್ತಿಕೊಳ್ಳಲಾಗಲಿದ್ದು, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

 

ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆಯ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿತ್ತು. ಹೀಗಾಗಿ ಹೊಸ ಪಂಪುಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆಯ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ.  ವೆಚ್ಚದ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದಂತಾಗಿದೆ.

ಹಾಸನ ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮಾಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆ
ಸಲ್ಲಿಸಿದ್ದಾರೆ.

Continue Reading

Special

ನಮ್ಮ ಮೆಟ್ರೋ ದರ ಏರಿಕೆ: ಕೇಂದ್ರ ಸಚಿವ ಎಂ.ಎಲ್​​. ಖಟ್ಟರ್ ಭೇಟಿ ಮಾಡಿದ ತೇಜಸ್ವಿ ಸೂರ್ಯ

Published

on

ಬೆಂಗಳೂರು: ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ ಇದೀಗ ಮತ್ತೆ ದರ ಏರಿಕೆಗೆ ಮುಂದಾಗಿದೆ. ಶೇ.5ರಷ್ಟು ಮೆಟ್ರೋ ಟಿಕೆಟ್ ಪ್ರಯಾಣ ದರ ದುಬಾರಿಯಾಗಿದ್ದು, ಫೆ. 9ರಿಂದ ಪರಿಷ್ಕೃತ ದರ ಜಾರಿಯಾಗಲಿದೆ.

ಈಗಾಗಲೇ ಮೆಟ್ರೋ ಪ್ರಯಾಣಿಕರು ಬಿಎಂಆರ್​ಸಿಎಲ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಎಂ.ಎಲ್​​. ಖಟ್ಟರ್​​ ಅವರನ್ನು ಭೇಟಿ ಮಾಡಿ ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಫೆ. 9ರಿಂದ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಯಾಗುತ್ತಿದೆ. ಆ ಮೂಲಕ ಸಾರ್ವಜನಿಕ ವ್ಯಾಪಕ ವಿರೋಧವನ್ನು ಕಡೆಗಣಿಸಿ, ಪ್ರಯಾಣಿಕರ ಮೇಲೆ ಅನಗತ್ಯ ಆರ್ಥಿಕ ಹೊರೆ ಹೇರುವುದಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಷಯವನ್ನು ಕೇಂದ್ರ ವಸತಿ ಹಾಗೂ ನಗರ ವ್ಯವಹಾರ ಸಚಿವ ಎಂ.ಎಲ್.​​ ಖಟ್ಟರ್​​ ಅವರನ್ನು ಇಂದು ಭೇಟಿ ಮಾಡಿ ವಿವರವಾಗಿ ಮಾಹಿತಿ ನೀಡಿದ್ದು, ದರ ನಿಗದಿ ಸಮಿತಿಯನ್ನು ಪುನರ್ ರಚಿಸುವಂತೆ ಮನವಿ ಮಾಡಿದ್ದಾರೆ.

 

ದರ ನಿಗದಿ ಸಮಿತಿಗೆ ಸಲ್ಲಿಸಲಾದ ಲೆಕ್ಕಾಚಾರಗಳಲ್ಲಿ ಅನೇಕ ವೈಪರೀತ್ಯಗಳು ಇರುವುದನ್ನು ಗಮನಕ್ಕೆ ತರಲಾಗಿದ್ದು, ಅದರಲ್ಲೂ ಪ್ರಸ್ತುತ ವರ್ಷದಲ್ಲಿನ ದೋಷಗಳು ಸೇರಿವೆ. ಇದರಿಂದ ಪ್ರಯಾಣಿಕರಿಗೆ ಅಧಿಕ ದರ ವಿಧಿಸಲಾಗಿದ್ದು, ಗರಿಷ್ಠ ಟಿಕೆಟ್ ದರವನ್ನು 95 ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದಿದ್ದಾರೆ.

ಈ ದೋಷಪೂರ್ಣ ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರ ಮುಂದುವರಿಸಲು ಅವಕಾಶ ನೀಡಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ದರ ಪರಿಷ್ಕರಿಸಲು ಹೊಸ ದರ ನಿಗದಿ ಸಮಿತಿಯನ್ನು ರಚಿಸುವಂತೆ ಮನವಿ ಮಾಡಿದ್ದಾರೆ. ಇನ್ನು ಈ ಕುರಿತಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದೆಂದು ಸಚಿವ ಎಂ.ಎಲ್​​ ಖಟ್ಟರ್ ಅವರು ಭರವಸೆ ನೀಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Continue Reading

Special

ಕೊನೆಗೂ ಬಂತು ಯುಪಿಎಸ್‌ಸಿ ನೇಮಕಾತಿ: 933 ಹುದ್ದೆಗಳಿಗೆ ಇಂದಿನಿಂದಲೇ ಅರ್ಜಿ ಸಲ್ಲಿಸುವಿಕೆ ಆರಂಭ!

Published

on

ದೇಶದ ಅತ್ಯುನ್ನತ ಆಡಳಿತಾತ್ಮಕ ಸೇವೆಗಳಾದ ಭಾರತೀಯ ಆಡಳಿತ ಸೇವೆ (IAS), ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ವಿದೇಶಾಂಗ ಸೇವೆ (IFS), ಭಾರತೀಯ ಆದಾಯ ಸೇವೆ (IRS) ಸೇರಿದಂತೆ ವಿವಿಧ Civil Services ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಲೋಕಸೇವಾ ಆಯೋಗ (UPSC) ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 933 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Any Degree) ಪಡೆದ ಅಭ್ಯರ್ಥಿಗಳು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
24-02-2026 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಪುರುಷ ಅಭ್ಯರ್ಥಿಗಳಿಗೆ ಮಾತ್ರ 100 ರೂಪಾಯಿಯ ಶುಲ್ಕವಿರುತ್ತದೆ.

ಅಧಿಕೃತ ಅರ್ಜಿ ವೆಬ್‌ಸೈಟ್: https://upsconline.nic.in/

ಈ ವರ್ಷದ ಅರ್ಜಿ ಪ್ರಕ್ರಿಯೆಯಲ್ಲಿ ಬದಲಾವಣೆಗಳು:

* ಅರ್ಜಿ ಸಲ್ಲಿಸುವ ಮೊದಲು ನೊಂದಣಿ ಮಾಡಿ ನೋಂದಣಿ ಸಂಖ್ಯೆ ಪಡೆಯುವುದು ಅಗತ್ಯ, ಈ ಸಂಖ್ಯೆ ಎಲ್ಲಾ ಯುಪಿಎಸ್ಸಿ ಪರೀಕ್ಷೆಗಳಿಗೆ ಒಂದೇ ಆಗಿರುತ್ತದೆ.

* ಅರ್ಜಿ ಸಲ್ಲಿಸಿದ ನಂತರ ಪ್ರತಿ ವರ್ಷವೂ ತಿದ್ದುಪಡಿಗೆ ಅವಕಾಶ ಕೊಟ್ಟಂತೆ, ಈ ವರ್ಷ ತಿದ್ದುಪಡಿ ಮಾಡಲು ಅವಕಾಶವಿಲ್ಲ.

* ಪ್ರೀಲಿಮ್ಸ್ ಪರೀಕ್ಷೆ ಮೊದಲೇ ನಿಗದಿಯಾದ ದಿನವಾದ ಮೇ. 24 ರಂದೇ ನಡೆಯುತ್ತದೆ.

ವಯೋಮಿತಿ, ವರ್ಗಾವಾರು ಮೀಸಲಾತಿ, ಪರೀಕ್ಷಾ ಮಾದರಿ, Prelims ಮತ್ತು Mains ಪಠ್ಯಕ್ರಮ, ಅರ್ಜಿ ಶುಲ್ಕ ಹಾಗೂ ಇತರೆ ಸಂಪೂರ್ಣ ಮಾಹಿತಿಗಾಗಿ UPSC ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ನಲ್ಲಿ ಪಡೆಯಬಹುದು.

ರಾಷ್ಟ್ರ ಸೇವೆ ಮಾಡಬೇಕೆಂಬ ಕನಸು ಹೊಂದಿರುವ ಯುವ ಅಭ್ಯರ್ಥಿಗಳಿಗೆ ಇದು ಒಂದು ಮಹತ್ವದ ಅವಕಾಶವಾಗಿದ್ದು, ಯುವಕರು ಈ ಮೂಲಕ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆಯುವತ್ತ ಹೆಜ್ಜೆ ಇಡಬೇಕು.

Continue Reading

Trending

error: Content is protected !!