Sports
ಫ್ಯಾನ್ಸ್ಗೆ ಗುಡ್ನ್ಯೂಸ್ ಕೊಟ್ಟ ಡಿಕೆಶಿ : ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಡಿಸಿಎಂ ಘೋಷಣೆ
ಬೆಂಗಳೂರು : ಫ್ಯಾನ್ಸ್ಗೆ ಗುಡ್ನ್ಯೂಸ್ ಒಂದನ್ನು ಡಿಕೆಶಿ ನೀಡಿದ್ದಾರೆ. ಹೌದು, ಬೆಂಗಳೂರಿನಲ್ಲೇ ಐಪಿಎಲ್ ಫಿಕ್ಸ್ ಎಂದು ಸ್ವತಃ ಡಿಸಿಎಂ ಘೋಷಣೆ ಮಾಡಿದ್ದಾರೆ.
ಹೌದು, 19ನೇ ಆವೃತ್ತಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. 2026ರ ಐಪಿಎಲ್ಗೆ ಆರ್ಸಿಬಿ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಕೆಎಸ್ಸಿಎ ಚುನಾವಣೆಯ ಮತದಾನದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಾನು ಕ್ರಿಕೆಟ್ ಲವರ್, ಆರ್ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೂ ನಮ್ಮಿಂದ ಐಪಿಎಲ್ ಕೈ ತಪ್ಪೋದಿಲ್ಲ. ಬೆಂಗಳೂರಿನಲ್ಲೇ ನಡೆಯುತ್ತೆ, ನಾನ್ ಎಲ್ಲಾ ಮಾತನಾಡ್ತೀನಿ ಅಂತ ತಿಳಿಸಿದ್ದಾರೆ.
Sports
IND vs SA ODI: 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ
ಆಂಧ್ರ ಪ್ರದೇಶ: ವಿಶಾಖಪಟ್ಟಣಂನಲ್ಲಿ ಇಂದು ನಡೆದ ಟೀಂ ಇಂಡಿಯಾ ಮತ್ತು ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 9 ವಿಕೆಟ್ಗಳಿಂದ ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಭರ್ಜರಿ ಗೆಲುವು ಸಾಧಿಸಿದೆ.
ಕನ್ನಡಿಗ ಕೆ.ಎಲ್. ರಾಹುಲ್ ನೇತೃತ್ವದಲ್ಲಿ ಇಂದು ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಪ್ರಿಕಾ ತಂಡ ಪೂರ್ಣ 50 ಓವರ್ಗಳನ್ನು ಆಡದೆ 47.5 ಓವರ್ಗಳಲ್ಲಿ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 270 ರನ್ ಕಲೆಹಾಕಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 1 ವಿಕೆಟ್ ಕಳೆದುಕೊಂಡು 39.5 ಓವರ್ಗಳಲ್ಲಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿಗೆ ಸೇಡು ತೀರಿಸಿಕೊಂಡಿದೆ.
Sports
IPL 2026; RCB ಖರೀದಿಗೆ ಪೈಪೋಟಿ; ರೇಸ್ನಲ್ಲಿ ಎಸ್ಐಐ, ಹೊಂಬಾಳೆ ಫಿಲ್ಮ್ಸ್ ಜೊತೆ ಇಂಗ್ಲೆಂಡ್ನ ಹಂಡ್ರೆಡ್ ಫ್ರಾಂಚೈಸಿ!
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.
ಐಪಿಎಲ್ 2026 ಕ್ಕೂ ಮುನ್ನ ಐಪಿಎಲ್ ಫ್ರಾಂಚೈಸಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಖರೀದಿಸಲು ಆಧಾರ್ ಪೂನಾವಾಲಾ ಮತ್ತು ಹೊಂಬಾಳೆ ಫಿಲ್ಮ್ಸ್ ಬಳಿಕ ಮತ್ತೊಂದು ಸಂಸ್ಥೆ ಆಸಕ್ತಿ ತೋರಿಸಿದೆ. ಸದ್ಯ ಡಯಾಜಿಯೊ (Diageo) ಒಡೆತನದ ಈ ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದ್ದು, ಈ ಪ್ರಕ್ರಿಯೆಯು 2026ರ ಮಾರ್ಚ್ 31 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈಗ, ದಿ ಹಂಡ್ರೆಡ್ ಫ್ರಾಂಚೈಸಿಯಾದ ವೆಲ್ಶ್ ಫೈರ್ ಆರ್ಸಿಬಿಯನ್ನು ಸ್ವಾಧೀನಪಡಿಸಿಕೊಳ್ಳಲು ಆಸಕ್ತಿ ತೋರಿಸಿದೆ ಎಂದು ಬೆಳಕಿಗೆ ಬಂದಿದೆ.
ದಿ ಟೆಲಿಗ್ರಾಫ್ ಯುಕೆ ಪ್ರಕಾರ, ಗ್ಲಾಮೋರ್ಗನ್ ಕ್ರಿಕೆಟ್ ಕ್ಲಬ್ ಮತ್ತು ಅಮೆರಿಕನ್ ಟೆಕ್ ಬಿಲಿಯನೇರ್ ಸಂಜಯ್ ಗೋವಿಲ್ ಒಡೆತನದ ಕ್ರಿಕೆಟ್ ತಂಡವಾದ ವೆಲ್ಷ್ ಫೈರ್, ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ನಲ್ಲಿ ಮುಂಬರುವ ತಂಡಗಳ ಮಾರಾಟದ ಮೇಲೆ ತೀವ್ರ ನಿಗಾ ಇಟ್ಟಿದ್ದು, ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸಲು ಸಹ ಸಹ ಆಸಕ್ತಿ ಹೊಂದಿದೆ. ಐಪಿಎಲ್ ತಂಡವನ್ನು ಖರೀದಿಸಲು ತಮ್ಮ ಬಳಿ ಸಾಕಷ್ಟು ಹಣವನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಹಿಂದೆ, ಆರ್ಸಿಬಿಯನ್ನು $2 ಬಿಲಿಯನ್ಗೆ ಮಾರಾಟ ಮಾಡಬಹುದು ಎಂದು ವರದಿಗಳು ತಿಳಿಸಿವೆ.
‘ಫೈರ್ ಮತ್ತು ಫ್ರೀಡಂ ನಿರ್ದಿಷ್ಟ ಪ್ರಕರಣಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದಾಗ್ಯೂ, ನಾವು ಜಾಗತಿಕ ಕ್ರಿಕೆಟ್ ಫ್ರಾಂಚೈಸಿಗಳನ್ನು ಖರೀದಿಸುವ, ನಿರ್ವಹಿಸುವ ಮತ್ತು ಅಭಿವೃದ್ಧಿಪಡಿಸುವ ವ್ಯವಹಾರದಲ್ಲಿದ್ದೇವೆ. ಜಾಗತಿಕ ಕ್ರಿಕೆಟ್ ಸ್ವತ್ತುಗಳಲ್ಲಿ ಏಕೀಕರಣದ ಕಡೆಗೆ ಪ್ರಸ್ತುತ ರಚನಾತ್ಮಕ ಪ್ರವೃತ್ತಿಗಳನ್ನು ನಾವು ಗಮನಿಸುತ್ತೇವೆ ಮತ್ತು ನಮ್ಮ ಷೇರುದಾರರಿಗೆ ಮೌಲ್ಯವನ್ನು ಸೃಷ್ಟಿಸುವಾಗ ಆ ಪ್ರಕ್ರಿಯೆಯಲ್ಲಿ ಸಂಪೂರ್ಣವಾಗಿ ಭಾಗವಹಿಸಲು ಉದ್ದೇಶಿಸಿದ್ದೇವೆ’ ಎಂದು ಗ್ಲಾಮೋರ್ಗನ್ ಅಧ್ಯಕ್ಷ ಮಾರ್ಕ್ ರೈಡರ್ಚ್-ರಾಬರ್ಟ್ಸ್ ಪ್ರಕಟಣೆಗೆ ತಿಳಿಸಿದ್ದಾರೆ.
ಈ ಹಿಂದೆ, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಧಾರ್ ಪೂನವಾಲಾ ಮತ್ತು ಬ್ರೋಕರೇಜ್ ಪ್ಲಾಟ್ಫಾರ್ಮ್ ಜೆರೋಧಾದ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಗುಂಪಿನ (ಎಂಇಎಂಜಿ) ಅಧ್ಯಕ್ಷ ರಂಜನ್ ಪೈ ಅವರು ಆರ್ಸಿಬಿಯನ್ನು ಖರೀದಿಸಲು ಎದುರು ನೋಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜಾಗತಿಕವಾಗಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಯನ್ನು 2 ಬಿಲಿಯನ್ ಡಾಲರ್ (ಸುಮಾರು 17,775 ಕೋಟಿ ರೂ.) ಗೆ ಮಾರಾಟ ಮಾಡಲು ಡಿಯಾಜಿಯೊ ಯೋಜಿಸುತ್ತಿದೆ ಎಂದು ವರದಿಯಾಗಿದೆ.
Sports
IND v/s SA ODI : 4 ವಿಕೆಟ್ಗಳ ರೋಚಕ ಜಯಗಳಿಸಿದ ಸೌತ್ ಆಫ್ರಿಕಾ
ರಾಯ್ಪುರ: ಕಳಪೆ ಫೀಲ್ಡಿಂಗ್, ಬೌಲಿಂಗ್ಗೆ ಭಾರತ ಬೆಲೆತೆತ್ತಿದೆ. ಏಡನ್ ಮಾರ್ಕ್ರಂ ಅಮೋಘ ಶತಕದ ಬ್ಯಾಟಿಂಗ್ ನೆರವಿನಿಂದ ದಕ್ಷಿಣ ಆಫ್ರಿಕಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1 ರಲ್ಲಿ ಸಮಬಲ ಸಾಧಿಸಿದೆ.
ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 5 ವಿಕೆಟ್ ನಷ್ಟಕ್ಕೆ 358 ರನ್ ಗಳಿಸಿತ್ತು. ಗೆಲುವಿಗೆ 359 ರನ್ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾ 49.2 ಓವರ್ಗಳಲ್ಲೇ 6 ವಿಕೆಟ್ ನಷ್ಟಕ್ಕೆ 362 ರನ್ ಸಿಡಿಸಿ ಗೆಲುವು ಸಾಧಿಸಿದೆ.
ಚೇಸಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಪಡೆದು ಆಘಾತ ನೀಡಿತ್ತು. ಆದ್ರೆ 2ನೇ ವಿಕೆಟ್ಗೆ ನಾಯಕ ಟೆಂಬಾ ಬವುಮಾ-ಮಾರ್ಕ್ರಂ 101 ರನ್ಗಳ (96 ಎಸೆತ) ಜೊತೆಯಾಟ, 3ನೇ ವಿಕೆಟಿಗೆ ಮಾರ್ಕ್ರಂ-ಬ್ರೀಟ್ಜ್ಕೆ 70 ರನ್ಗಳ ಜೊತೆಯಾಟ, 4ನೇ ವಿಕೆಟಿಗೆ ಬ್ರೀಟ್ಜ್ಕೆ-ಡೇವಾಲ್ಡ್ ಬ್ರೇವಿಸ್ 92 ರನ್ಗಳ ಬೃಹತ್ ಜೊತೆಯಾಟ ತಂಡಕ್ಕೆ ಚೇತರಿಕೆ ನೀಡಿತು. ಅಲ್ಲದೇ ರನೌಟ್, ಕ್ಯಾಚ್ ಕೈಚೆಲ್ಲಿದ ಜೊತೆಗೆ ಅನಗತ್ಯ ರನ್ ಬಿಟ್ಟುಕೊಟ್ಟ ಪರಿಣಾಮ ಗೆಲುವು ದಕ್ಷಿಣ ಆಫ್ರಿಕಾದ ಪಾಲಾಯಿತು.

ದಕ್ಷಿಣ ಆಫ್ರಿಕಾ ಪರ ಏಡನ್ ಮಾರ್ಕ್ರಂ 110 ರನ್ (98 ಎಸೆತ, 4 ಸಿಕ್ಸ್, 10 ಬೌಂಡರಿ), ಮ್ಯಾಥ್ಯೂ ಬ್ರೀಟ್ಜ್ಕೆ 68 ರನ್ (64 ಎಸೆತ, 5 ಬೌಂಡರಿ), ಡೇವಾಲ್ಡ್ ಬ್ರೇವಿಸ್ 54 ರನ್ (34 ಎಸೆತ, 5 ಸಿಕ್ಸ್), ಟೋನಿ ಡಿ ಜೋರ್ಜಿ 17 ರನ್, ಕ್ವಿಂಟನ್ ಡಿಕಾಕ್ 8 ರನ್, ಮಾರ್ಕೋ ಜಾನ್ಸೆನ್ 2 ರನ್ ಗಳಿಸಿದ್ರೆ ಕಾರ್ಬಿನ್ ಬಾಷ್ 15 ಎಸೆತಗಳಲ್ಲಿ ಸ್ಫೋಟಕ 29 ರನ್, ಕೇಶವ್ ಮಹಾರಾಜ್ 10 ರನ್ ಗಳಿಸಿ ಅಜೇಯರಾಗುಳಿದರು. ಅಲ್ಲದೇ ವೈಡ್, ನೋಬಾಲ್, ಲೆಗ್ಬೈಸ್ನಿಂದ 18 ರನ್ ಹೆಚ್ಚುವರಿಯಾಗಿ ತಂಡಕ್ಕೆ ಸೇರ್ಪಡೆಯಾಯಿತು.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ವಿಕೆಟ್ ನಷ್ಟಕ್ಕೆ 358 ರನ್ ಸಿಡಿಸಿತ್ತು. ಹಿಟ್ ಮ್ಯಾನ್ ರೋಹಿತ್ ವಿಕೆಟ್ ಬೇಗನೇ ಸಿಕ್ಕಿತೆಂದು ನಿಟ್ಟುಸಿರು ಬಿಟ್ಟಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಅನಿರೀಕ್ಷಿತ ಆಘಾತ ನೀಡಿದರು. ಋತುರಾಜ್ ಅವರು ತಮ್ಮ ಏಕದಿನ ಅಂತಾರಾಷ್ಟ್ರೀಯ ವೃತ್ತಿ ಜೀವನದ ಪ್ರಥಮ ಶತಕ ಗಳಿಸಿದ್ರೆ, ವಿರಾಟ್ ಕೊಹ್ಲಿ ಅವರು ಈ ಸರಣಿಯಲ್ಲಿ ಸತತ 2 ಶತಕ ಮತ್ತು ಏಕದಿನ ಕ್ರಿಕಟ್ ನ 53ನೇ ಶತಕ ಗಳಿಸಿದರು. ಕೊನೆಯಲ್ಲಿ ಕೆ.ಎಲ್ ರಾಹುಲ್ ಅವರ ಸ್ಫೋಟಕ ಅರ್ಧಶತಕದ ಪರಿಣಾಮ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 358 ರನ್ ಗಳನ್ನು ಕಲೆ ಹಾಕಿತು.
ಋತುರಾಜ್ -ವಿರಾಟ್ ಕೊಹ್ಲಿ ಶತಕಗಳ ಅಬ್ಬರ
ಇವರಿಬ್ಬರು 3ನೇ ವಿಕೆಟ್ ಗೆ ಅಮೂಲ್ಯ 195 ರನ್ ಗಳ ಜೊತೆಯಾಟವಾಡಿದರು. ಇದು ಭಾರತ ತಂಡದ ಇನ್ನಿಂಗ್ಸ್ ಗೆ ಭದ್ರ ಬುನಾದಿ ಹಾಕಿತು. ಕ್ರೀಸ್ಗೆ ಬಂದೊಡನೆ ಮೊದಲನೇ ಎಸೆತವನ್ನೇ ಬೌಂಡರಿಗಟ್ಟಿದ ಋತುರಾಜ್ ಅವರು ಕೇವಲ 77 ಎಸೆತಗಳಲ್ಲೇ ಶತಕ ಪೂರೈಸಿದರು. ಅದರಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದವು. ಅಂತಿಮವಾಗಿ ಅವರು 83 ಎಸೆತಗಳಿಂದ 105 ರನ್ ಗಳಿಸಿ ಔಟಾದರು. ಋತುರಾಜ್ ಗಾಯಕ್ವಾಡ್ ಔಟಾದ ಬಳಿಕ ವಿರಾಟ್ ಕೊಹ್ಲಿ ಅವರು ತಮ್ಮ ಬ್ಯಾಟಿಂಗ್ ಮುಂದುವರಿಸಿ 39ನೇ ಓವರ್ ನಲ್ಲಿ 90 ಎಸೆತಗಳಿಗೆ ಶತಕ ಪೂರೈಸಿದರು.
-
Mandya23 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Hassan23 hours agoಪಂಚ ಗ್ಯಾರಂಟಿಗಳನ್ನು ವಿರೋಧಿಸುತ್ತಿರುವವರಿಗೆ ಜನರೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ
-
Mysore22 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan24 hours agoಮಾತು ನಿಧಾನವಾಗಿರಬೇಕು, ಕಾಯಕ ಪ್ರಧಾನ ವಾಗಿರಬೇಕು,
-
Mysore21 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Chamarajanagar21 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu23 hours agoಕ್ರಿಸ್ಮಸ್ ಗಾನ ತರಂಗ ಜಿಲ್ಲಾ ಮಟ್ಟದ ಗಾಯನ ಹಾಗೂ ಚಿತ್ರಕಲೆ ಸ್ಪರ್ಧೆ
-
Hassan22 hours agoನಾವು ತೆರೆದ ಪುಸ್ತಕ ಎಲ್ಲವನ್ನೂ ಎದುರಿಸೋದಕ್ಕೆ ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ
