Connect with us

State

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಬೆಂಗಳೂರು, ಜೂನ್ 2:

“ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು;

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು.

ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು.

ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳ ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ.

ಕಾಂಗ್ರೆಸ್ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ
ರಾಜಕೀಯ ಮಾಡುತ್ತಾರೆ. ದೇಶದ ವಿಚಾರ ಹೇಳುವುದಿಲ್ಲ, ಕರ್ನಾಟಕದಲ್ಲಿ ಎರಡಂಕಿ ದಾಟುತ್ತೇವೆ ಎನ್ನುವ ಆತ್ಮ ವಿಶ್ವಾಸವಿದೆ”.

Continue Reading
Click to comment

Leave a Reply

Your email address will not be published. Required fields are marked *

State

ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?

Published

on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್‌ ಕೊಟ್ಟರು.

ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Continue Reading

State

ಮೆಟ್ರೋ ದರ ಏರಿಕೆ: ಹೈಕ್‌ ಸಿದ್ದರಾಮಯ್ಯ ಎಂದು ಜರಿದ ಬಿಜೆಪಿ

Published

on

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಬಿಎಂಆರ್‌ಸಿಎಲ್‌ ಅಣಿಯಾಗಿರುವಾಗಲೇ ರಾಜ್ಯ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಬಿಜೆಪಿ ಇನ್ನುಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕ್‌ ಸಿದ್ದರಾಮಯ್ಯ ಎಂದು ಕರೆಯಬೇಕು ಜರಿದಿದೆ.

ರಾಜ್ಯದಲ್ಲಿ ಸಾರಿಗೆ ನಿಗಮಗಳಿಗೆ ಐಸಾ ಐಸಾ ಯೋಜನೆ ಕೊಟ್ಟು ಬಸ್‌ಗಳನ್ನು ತಳ್ಳುವಂತೆ ಮಾಡಿರುವ ಭ್ರಷ್ಟ ಸಿದ್ದರಾಮಯ್ಯ ಅವರು ಇದೀಗ ಎಲ್ಲಾ ಹೈಕ್‌ ಹೈಕ್‌ ಎನ್ನುತ್ತಾ 48% ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡುವ ಮೂಲಕ ಹೈಕ್‌ ರಾಮಯ್ಯ ಎನಿಸಿಕೊಂಡಿದ್ದಾರೆ.

ಬಸ್‌ ಪ್ರಯಾಣವೂ ದುಬಾರಿ ಮೆಟ್ರೋ ಬಲು ದುಬಾರಿ ಆಗಿದೆ. ಜನರಿಗೆ ಅಕ್ಕಿಯನ್ನೂ ಕೊಡುತ್ತಿಲ್ಲ, ಗೃಹ ಲಕ್ಷ್ಮಿ ಹಣವನ್ನು ನೀಡುತ್ತಿಲ್ಲ. ದುಡಿದು ತಿನ್ನೋಣ ಎಂದರೆ ಎಲ್ಲಾ ದರವನ್ನು ಏರಿಕೆ ಮಾಡಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದೆ ರಾಜ್ಯ ಕಾಂಗ್ರೆಸ್‌ ಸರಕಾರ ಎಂದು ಬಿಜೆಪಿ ಕಿಡಿಕಾರಿದೆ.

https://x.com/BJP4Karnataka/status/1880571971219644629

Continue Reading

State

ಪರಿಶಿಷ್ಟರ ಹಣವು ಸಾಮಾಜಿಕ ಹೂಡಿಕೆಯಾಗಬೇಕೇ ಹೊರತು, ಸಾಮಾಜಿಕ ಖರ್ಚಾಗಬಾರದು: ಡಾ. ಎಚ್‌.ಸಿ.ಮಹದೇವಪ್ಪ

Published

on

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 334 ರಲ್ಲಿ SCSP ನೋಡಲ್ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದೆರು.

ಈ ಸಂದರ್ಭದಲ್ಲಿ ಅವರು ಮಾತನಾಡಿ, ನಿಗದಿತ ಅವಧಿಯ ಒಳಗಾಗಿ SCSP ಅನುದಾನವನ್ನು ಬಳಸಿಕೊಂಡು ಪರಿಶಿಷ್ಟರ ಅಭಿವೃದ್ಧಿಗೆ flag ship ಯೋಜನೆಗಳನ್ನು ರೂಪಿಸಬೇಕೆಂದು ಸೂಚಿಸಿದರು.

ಸಹಕಾರಿ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟರ ನೊಂದಾವಣೆ ಮಾಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯಿಂದ SCSP ಹಣವನ್ನು ಪಡೆಯುವ ಇಲಾಖೆಗಳು ಸುಮ್ಮನೇ ಹಣ ಖರ್ಚು ಮಾಡದೇ ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ಮಾಡುವ ಮೂಲಕ ಪರಿಶಿಷ್ಟ ಸಮುದಾಯದ ಹಣ ಸದ್ಬಳಕೆಯತ್ತ ಗಮನ ಹರಿಸಬೇಕೆಂದು ತಿಳಿಸಿದರು.

ಅಧಿಕಾರಿಗಳು ಮೌಲ್ಯಮಾಪನದ ಕಡೆ ಹೆಚ್ಚು ಗಮನ ಹರಿಸಿ, ವಸತಿ ಇಲ್ಲದ ಜನರು ಎಷ್ಟು ಮಂದಿ ಇದ್ದಾರೆ, ಕೃಷಿಯಲ್ಲಿ ತೊಂದರೆ ಅನುಭವಿಸುತ್ತಿರುವ ಪರಿಶಿಷ್ಟ ಸಮುದಾಯದವರು ಎಷ್ಟು ಮಂದಿ ಇದ್ದಾರೆ ಮತ್ತು ಯಾರಿಗೆಲ್ಲಾ ನಾವು ಉದ್ಯಮಗಳನ್ನು ಮಾಡಲು, ಕೌಶಲ್ಯಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂಬುದರ ಕುರಿತು ಅಧಿಕಾರಿ ಮಿತ್ರರು ನೇರವಾಗಿ ಜನರ ಬಳಿ ಹೋಗಿ ವಾಸ್ತವಗಳನ್ನು ಅರಿಬೇಕೆಂದು ತಿಳಿಸಿದರು.

ಇನ್ನು ಪರಿಶಿಷ್ಟ ಸಮುದಾಯದವರಿಗೆ ಮನೆ ಕಟ್ಟಲು 5 ಲಕ್ಷ ರೂಪಾಯಿಯ unit fund ಅನ್ನು ನಿಗದಿಗೊಳಿಸುವ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸುವುದಾಗಿ ಹೇಳಿದರು.

ಉನ್ನತ ಶಿಕ್ಷಣ ಮಾಡುತ್ತಿರುವ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಅವರಿಗೆ ಬರಬೇಕಾದ ವಿದ್ಯಾರ್ಥಿ ವೇತನವನ್ನು ನಿಗದಿತ ಸಮಯಕ್ಕೆ ಕಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವ ಸಂದರ್ಭದಲ್ಲಿ ಕೆಲವೊಂದು ಗೊಂದಲ ಉಂಟಾಗಿದ್ದು, ಈ ಗೊಂದಲವನ್ನು ಶೀಘ್ರದಲ್ಲಿ ಪರಿಹಾರ ಮಾಡುವುದಾಗಿ ಅಧಿಕಾರಿಗಳು ತಿಳಿಸಿದರು.

ಇನ್ನು ಸರ್ಕಾರದ ಎಲ್ಲಾ ಇಲಾಖೆಗಳೂ ಕೂಡಾ ಪರಿಶಿಷ್ಟರ ಹಣವನ್ನು ಸಾಮಾಜಿಕ ಖರ್ಚು ( Social Expenditure) ಎಂದು ಭಾವಿಸದೇ ಅದನ್ನು ಸಾಮಾಜಿಕ ಹೂಡಿಕೆ ( Social Investment ) ಆಗಿ ವಿನಿಯೋಗಿಸಿದರೆ ಮಾತ್ರ ಪರಿಶಿಷ್ಟರ ಏಳಿಗೆ ಸಾಧ್ಯ ಎಂಬುದಾಗಿ ತಿಳಿದರು.

ನಿಗದಿತ ಅವಧಿಯಲ್ಲಿ ಹಣ ಖರ್ಚು ಮಾಡದೇ SCSP/TSP ಕಾಯ್ದೆಯ ಆಶಯಗಳನ್ನು ಮರೆತು, ನಿಯಮಬಾಹಿರವಾಗಿ ವರ್ತಿಸಿದರೆ ಮತ್ತು ಅನುದಾವನ್ನು ಬಳಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಮಾಜ ಕಲ್ಯಾಣ ಇಲಾಖೆಯು ಸಿಂಗಲ್ ವಿಂಡೋ ಏಜೆನ್ಸಿ ಮೂಲಕ ಖರ್ಚಾಗದ ಹಣವನ್ನು ಹಿಂಪಡೆದು, ಪರಿಶಿಷ್ಟ ಸಮುದಾಯಗಳಿಗೆ ಪೂರಕ ಯೋಜನೆಗಳನ್ನು ನೀಡಲಿದೆ ಎಂಬ ಸಂಗತಿಯನ್ನು ಪ್ರಮುಖವಾಗಿ ತಿಳಿಸಿದರು.

Continue Reading

Trending

error: Content is protected !!