Mysore
ಉತ್ಪನ್ನಗಳಲ್ಲಿ ಗುಣಮಟ್ಟ ಎಂಬುದು ಬಹಳ ಮುಖ್ಯ: ಡಾ. ಪಿ.ಶಿವರಾಜು

ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ. ಪ್ರತಿ ಉತ್ಪನ್ನಗಳು ತನ್ನದೇ ಆದಂತಹ ಗುಣಮಟ್ಟವನ್ನು ಹೊಂದಿರುವುದರಿoದ ಅವುಗಳ ಬಗ್ಗೆ ಹೆಚ್ಚು ಗಮನ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ , ಆಹಾರ ಮತ್ತು ಸಾರ್ವಜನಿಕ ವಿತರಣೆ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ಎಲ್.ಓ ಸಂವೇಧನಶೀಲತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ಕಾರ್ಯಗಾರಾದ ಉದ್ದೇಶ ನಾವು ಉತ್ಪನ್ನಗಳನ್ನು ಖರೀದಿ ಮಾಡಬೇಕಾದರೆ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿದೆ ಅಥವಾ ಕಳಪೆ ಗುಣಮಟ್ಟದಿಂದ ಕೂಡಿದೆಯೇ ಅದನ್ನು ನಾವು ಹೇಗೆ ಪತ್ತೆ ಹಚ್ಚಬಹುದು ಎಂಬುದನ್ನು ತಿಳಿಸುವುದಾಗಿದೆ. ಇದರಿಂದ ಸಾರ್ವಜನಿಕರಿಗೆ ಏನೆಲ್ಲಾ ಲಾಭ ಆಗುತ್ತದೆ ಎಂಬುದರ ಬಗ್ಗೆ ಇರುವುದರಿಂದ ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ಇದೇ ರೀತಿಯಾದಂತಹ ಮಾಹಿತಿಯನ್ನು ತಿಳಿಸಬೇಕು ಎಂದು ತಿಳಿಸಿದರು.
ಉತ್ಪನ್ನಗಳ ಬಗ್ಗೆ ತಿಳಿದುಕೊಳ್ಳಲು ಅಪ್ಲಿಕೇಶನ್ಗಳು ಸಹ ಇರುವುದರಿಂದ ನಿಮ್ಮ ಮೊಬೈಲ್ ಗಳಲ್ಲಿ ಡೌನ್ಲೋಡ್ ಮಾಡಿಕೊಂಡು ಎಫ್.ಎಸ್.ಐ, ಹಾಲ್ ಮಾರ್ಕ್ ನಂತಹ ಯಾವ ಯಾವ ಸ್ಟ್ಯಾಂಡರ್ಡ್ ಮಾರ್ಕ್ ಗಳು ಇರುತ್ತದೆ ಅವುಗಳ ವಿನಾಯಿತಿಯನ್ನು ಪರೀಕ್ಷಿಸಬಹುದು ಎಂದು ತಿಳಿಸಿದರು.
ಸರ್ಕಾರ ಕುಡಿಯುವ ನೀರಿನಿಂದ ಹಿಡಿದು ಚಿನ್ನದ ಹೂಡಿಕೆಯವರೆಗೂ ಪ್ರತಿಯೊಂದು ಮಾನದಂಡಗಳನ್ನು ವಿಧಿಸಿರುವುದರಿಂದ ಯಾವುದೇ ಉತ್ಪನವನ್ನು ಏನಾದರೂ ಮಾಡಬಹುದು ಎಂಬ ವ್ಯವಸ್ಥೆ ಸರ್ಕಾರದಲ್ಲಿ ಇಲ್ಲ ಎಂದರು.
ಕೆಲವರು ನಕಲಿ ಉತ್ಪನ್ನಗಳಿಗೆ ಸರ್ಕಾರದ ಮಾರ್ಕ್ಗಳನ್ನು ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ. ಅಂತಹವುಗಳನ್ನು ಹೇಗೆ ಕಂಡು ಹಿಡಿಯುವುದು ಎಂಬುದು ಸಹ ಈ ಕಾರ್ಯಾಗಾರದಲ್ಲಿ ತಿಳಿಯುತ್ತದೆ. ಈ ಕಾರ್ಯಗಾರವು ಆಸಕ್ತಿದಾಯಕವಾದಂತಹ ವಿಷಯವನ್ನು ತಿಳಿಸುವುದರ ಜೊತೆಗೆ ಜ್ಞಾನವನ್ನು ನೀಡುತ್ತದೆ ಎಂದು ಹೇಳಿದರು.
ಈ ಕಾರ್ಯಗಾರ ಕಾರ್ಯಾಗಾರಕ್ಕೆ ಮಾತ್ರ ಸೀಮಿತವಾಗದೆ ಇದರ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ತಿಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕು, ಜೊತೆಗೆ ಇಂತಹ ವಿಷಯಗಳ ಬಗ್ಗೆ ಜನರಿಗೆ ಅನುಕೂಲವಾಗುವಂತೆ ನಿಮ್ಮ ಇಲಾಖೆಯ ನೋಟಿಸ್ ಬೋರ್ಡ್ಗಳಲ್ಲಿ ಕರಪತ್ರಗಳನ್ನು ಸೂಚನಾ ಫಲಕಗಳಿಗೆ ಹಾಕುವುದರ ಮೂಲಕ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಿ ಎಂದು ಹೇಳಿದರು.
ಭಾರತೀಯ ಮಾನಕ ಬ್ಯೂರೋ ನಿರ್ದೇಶಕರಾದ ನರೇಂದ್ರ ರೆಡ್ಡಿ ಬೀಸು ಅವರು ಮಾತನಾಡಿ ಗ್ರಾಹಕರು ಪ್ರತಿಯೊಂದು ಉತ್ಪನ್ನಗಳನ್ನು ಖರೀದಿಸುವುದರಿಂದ ಉತ್ಪನ್ನಗಳ ಮೇಲೆ ಹೆಚ್ಚು ಗಮನ ವಹಿಸಬೇಕು ಎಂದು ಹೇಳಿದರು.
ಪ್ರತಿಯೊಂದು ಉತ್ಪನ್ನಗಳಿಗೂ ಸರ್ಕಾರದಿಂದ ಅದರದೇ ಆದಂತಹ ಮಾರ್ಕ್ಗಳು ಇರುವುದರಿಂದ ಪ್ರತಿ ಇಲಾಖೆಯು ಅದರ ಬಗ್ಗೆ ಹೆಚ್ಚು ಗಮನವಹಿಸಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.
ಕಾರ್ಯಗಾರದಲ್ಲಿ ಭಾರತೀಯ ಮಾನಕ ಬ್ಯೂರೋ ಸದಸ್ಯರಾದ ಶಿವಕುಮಾರ್. ಎಂ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸಿತರಿದ್ದರು.
Mysore
ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಬ್ಯಾನರ್ ಹರಿದ ಕಿಡಿಗೇಡಿಗಳು

ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಹರಿದ ಕಿಡಿಗೇಡಿಗಳು
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಅನ್ನು ಕತ್ತರಿಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ನಡೆದಿದೆ.
ವಾಜಮಂಗಲದಲ್ಲಿ ಗ್ರಾಮದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ವೇಳೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಕಿಡಿಗೇಡಿಗಳು ಶುಕ್ರವಾರ ರಾತ್ರಿ ವೇಳೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹರಿದು ಅವಮಾನ ಮಾಡಿದ್ದಾರೆ.
ಅಂಬೇಡ್ಕರ್ ಅವರ ನಾಮ ಫಲಕದ ಮೇಲೆ ಚಪಲ್ಲಿ ನೇತು ಹಾಕಿ ಅಪಮಾನ ಮಾಡಿದ್ದಾರೆ.
ಗ್ರಾಮಸ್ಥರು ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮಾಡಿದರು.
ಘಟನೆಯ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮಾತನಾಡಿ, ಈ ಘಟನೆಗೆ ಕಾರಣರಾದವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು.
ಜಿಲ್ಲೆಯ ಬೇರೆ ಯಾವ ಕಡೆಯೂ ಸಹ ಈ ರೀತಿಯ ಘಟನೆ ಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್, ತಹಶೀಲ್ದಾರ್ ಮಹೇಶ್ ಹಾಜರಿದ್ದರು.
Mysore
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.
ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Mysore
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು: ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್ ವತಿಯಿಂದ ಇಲ್ಲಿನ ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ನಿರ್ಮಲ ನೆನಪು ಸಮಾರಂಭದಲ್ಲಿ ಆರ್. ರಘು ಕೌಟಿಲ್ಯ ಅವರ ಭೂಮಿ ಪುತ್ರಿ, ಅಂಕಣಗಳ ಬೆಳಕು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು.
ರಂಗಭೂಮಿ ಕಲಾವಿದೆ ಪದ್ಮಶ್ರೀ ಬಿ.ಜಯಶ್ರೀ ಅವರು ಭೂಮಿಪುತ್ರಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪುರುಷ ಸಮಾಜ ಹೆಣ್ಣನ್ನು ಪ್ರೀತಿಯಿಂದ ನೋಡುವುದಿಲ್ಲ. ನಿರ್ಲಕ್ಷ್ಯ ವಹಿಸುತ್ತಾರೆ. ಈ ಪುಸ್ತಕ ಓದಿದಾಗ ಪುರುಷ ಸಮಾಜಕ್ಕೆ ಹೆಂಡತಿಯನ್ನು ಪ್ರೀತಿಸಬೇಕು ಅನಿಸುತ್ತದೆ ಎಂದರು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ವೃತ್ತಿ ಹಾಗೂ ಸಮಾಜಸೇವೆಯಲ್ಲೂ ರಘು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಣ್ಣ ಸಮುದಾಯದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದಾರೆ ಎಂದರು.
ಇಡೀ ರಾಜ್ಯದಲ್ಲಿ ಒಬಿಸಿ ಸಮುದಾಯದ ಜನಸಂಖ್ಯೆಯೇ ಬಹಳ ದೊಡ್ಡದಿದೆ. ನಮ್ಮ ರಾಜ್ಯದಲ್ಲಿ ಸಣ್ಣ ಪುಟ್ಟ ಸಮುದಾಯಗಳು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರುತ್ತವೆ. ಪ್ರಬಲ ಸಮುದಾಯಗಳಿಗೆ ಹೋಲಿಸಿದರೆ ರಾಜ್ಯಾದ್ಯಂತ ಒಬಿಸಿ ಸಮುದಾಯದ ಸಂಖ್ಯೆಯೇ ದೊಡ್ಡದಿದೆ. ಸಣ್ಣ ಸಣ್ಣ ಸಮುದಾಯಗಳನ್ನು ಒಟ್ಟಾಗಿ ಸೇರಿಸಿದರೆ ಒಬಿಸಿ ಸಮುದಾಯಗಳ ಸಂಖ್ಯೆಯೇ ಹೆಚ್ಚಾಗಿದೆ. ನಾನು ಕೂಡ ಒಬಿಸಿ ಸಮುದಾಯಕ್ಕೆ ಸೇರಿದವನಾಗಿದ್ದೇನೆ. ಸಣ್ಣ ಸಣ್ಣ ಒಬಿಸಿ ಸಮುದಾಯಗಳು ಒಗ್ಗೂಡುವ ಅಗತ್ಯವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
.
ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ, ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮಾತನಾಡಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಗಾಯಕಿ ಸಂಗೀತಾ ಕಟ್ಟಿ, ಕೋಮಲ ಹರ್ಷಕುಮಾರ ಗೌಡ, ಮಡ್ಡೀಕೆರೆ ಗೋಪಾಲ, ಮಾಜಿ ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore19 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu19 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Hassan24 hours ago
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ