Connect with us

Mandya

ದ್ವಿತೀಯ ಪಿಯುಸಿ ಪರೀಕ್ಷೆ- 03 ಕ್ಕೆ ಜಿಲ್ಲೆಯಲ್ಲಿ 1717 ವಿದ್ಯಾರ್ಥಿಗಳು ನೋಂದಣಿ:ಡಾ ರೋಹಿಣಿ

Published

on

ಮಂಡ್ಯ: ಜಿಲ್ಲೆಯಲ್ಲಿ ಜೂನ್ 24 ರಿಂದ ಜುಲೈ 5 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು ಒಟ್ಟು 1,717 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಡಾ.ರೋಹಿಣಿ ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 3ನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದರ ಸಂಬಂಧ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು ಒಟ್ಟು 1,717 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿಯಾಗಿದ್ದಾರೆ. ಪರೀಕ್ಷಾ ಸಮಯವು ಬೆಳಿಗ್ಗೆ 10.15 ರಿಂದ 1.30 ರವರೆಗೆ ನಡೆಯಲಿದೆ ಮತ್ತು ಎನ್ ಎಸ್ ಕ್ಯೂ ಎಫ್ ವಿಷಯಾಧಾರಿತ ಪರೀಕ್ಷೆಗಳು 2.15 ರಿಂದ 4.30 ರವರೆಗೆ ನಡೆಯುತ್ತದೆ ಎಂದು ಹೇಳಿದರು.

ಪರೀಕ್ಷೆಯು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.

ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯವನ್ನು ಒದಗಿಸುವುದು ಎಂದರು.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು Online ನಲ್ಲಿ upload (PU exam login portal) ಮಾಡುವುದರಿಂದ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ ಚೆಲುವಯ್ಯ ಸೇರಿದಂತೆ ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ ರೂಪ*

Published

on

*ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆ : ನ್ಯಾ.ಎಂ.ಡಿ
ರೂಪ*

ಶ್ರೀರಂಗಪಟ್ಟಣ : ಹೊಸ ಮತದಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟಿçÃಯ ಮತದಾರರ ದಿನಾಚರಣೆಯನ್ನ ಆಚರಿಸಲಾಗುತ್ತಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಂ.ಡಿ ರೂಪ ಹೇಳಿದರು.

ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ, ತಾಲೂಕು ಆಡಳಿತ ಹಾಗೂ ಕಾನೂನು ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸಲು ೨೦೧೧ ರಿಂದ ಪ್ರತಿ ವರ್ಷ ಜ. ೨೫ ರಂದು ದೇಶಾದ್ಯಂತ ರಾಷ್ಟೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಹೊಸ ಮತದಾರರನ್ನು ಸೆಳೆಯುವ, ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್. ಮಹದೇವಪ್ಪ ಮಾತನಾಡಿ, ಭಾರತದ ಚುನಾವಣಾ ಆಯೋಗದ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಭಾರತದಲ್ಲಿ ಶಾಸಕಾಂಗದ ಎಲ್ಲಾ ಹಂತಗಳಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. “ದೇಶದ ಮತದಾರರಿಗೆ ಮೀಸಲಾಗಿರುವ ಈ ದಿನವನ್ನು ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ತಿಳುವಳಿಕೆ ನೀಡಲು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನ್ಯಾಯಾಧೀಶರಾದ ಹರೀಶ್‌ಕುಮಾರ್, ಹನುಮಂತ ರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೆರಿ, ಬಿಇಒ ಮಹೇಶ್, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ನೌಕರರು, ಕಾಲೇಜು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ

Published

on

ಮಂಡ್ಯ : ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು

Continue Reading

Mandya

ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ

Published

on

ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.

ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.

ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.

Continue Reading

Trending

error: Content is protected !!