Connect with us

Mysore

ಕುವೆಂಪು ಅವರ ಮನುಜ ಮತ, ವಿಶ್ವಪಥದೆಡಗೆ ಯುವಸಮೂಹ ಸಾಗಲಿ: ಡಾ.ಹೆಚ್.ಸಿ.ಮಹದೇವಪ್ಪ

Published

on

ತಿ.ನರಸೀಪುರ:- ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಯಾಚೇನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ರಾಷ್ಟ್ರಕವಿ ಕುವೆಂಪು ರವರ ಚಿತಾಭಸ್ಮ ಸ್ಮಾರಕ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು‌.

ಬುದ್ಧ, ಬಸವ, ಅಂಬೇಡ್ಕರ್ ಸಾಲಿನಲ್ಲಿ ಮೇರು ವ್ಯಕ್ತಿತ್ವವುಳ್ಳ ಕುವೆಂಪು ಅವರನ್ನು ನೋಡಬೇಕಿದ್ದು ಕುವೆಂಪು ಅವರ ಚಿಂತನೆ ಎಲ್ಲರಿಗೂ ಅಗತ್ಯವಿದೆ ಎಂದು ಹೇಳಿದರು.

ವೈಚಾರಿಕತೆ, ವೈಜ್ಞಾನಿಕತೆ ನೆಲೆಗಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ರಾಷ್ಟ್ರಕವಿ ಕುವೆಂಪು ಅವರ ಚಿತಾಭಸ್ಮ ಸ್ಮಾರಕ ಭವನದಲ್ಲಿ ಉತ್ಕೃಷ್ಟ ಚಿಂತನೆಗಳು ಹಾಗೂ ಕಾರ್ಯಕ್ರಮಗಳು ಜರುಗಲಿ ಈ ಭಾಗದಿಂದ ರಾಜ್ಯದ ಉದ್ದಗಲಕ್ಕೂ ಪಸರಿಸಲಿ ಎಂದು ನುಡಿದರು.

ಭೌದ್ಧಿಕವಾಗಿ ನಾವು ಎಚ್ಚರವಾಗದಿದ್ದರೆ ಶ್ರೇಣಿಕೃತ ವ್ವಸಸ್ಥೆಯಲ್ಲಿ ಪಾತಾಳಕ್ಕೆ ತಳ್ಳಲಿದ್ದಾರೆ. ಕುವೆಂಪು ಅವರ ವಿಚಾರಧಾರೆ ಜೀವಂತ ಉಳಿಸಿ ಶೂದ್ರ ಸಮಾಜವನ್ನು ಕತ್ತಲಿನಿಂದ ಬೆಳಕಿಗೆ ಕರೆತಂದು ವಿಶ್ವಮಾನವರನ್ನು ಸೃಷ್ಟಿ ಮಾಡುವ ಮೂಲಕ ಮನುಷ್ಶ ಸಮಾಜ ಉಳಿಸಲು ಈ ಕ್ಷೇತ್ರ ಪ್ರೇರಣೆಯಾಗಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವತಿಯಿಂದ ರೈತರಿಗೆ ರೀಯಾಯಿತಿ ದರದಲ್ಲಿ ಬಿತ್ತನೆ ಭತ್ತವನ್ನು ಸಾಂಕೇತಿಕವಾಗಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನಿಲ್ ಬೋಸ್, ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್, ಯಾಚೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ಶೇಖರ್, ಸರೋಜಮ್ಮ, ಮಾಜಿ ಶಾಸಕಿ ಸುನಿತಾ ವೀರಪ್ಪಗೌಡ, ಮೈಮುಲ್ ನಿರ್ದೇಶಕ ಚಲುವರಾಜು, ರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾಗಾಂದನಾಥಸ್ವಾಮೀಜಿ, ನಿವೇಶನ ದಾನ ಮಾಡಿದ ವೈ.ಎನ್.ಶಂಕರೇಗೌಡ, ಹಿರಿಯ ಮುಖಂಡರಾದ ವಜ್ರೇಗೌಡ, ಮುಖಂಡರಾದ ಮುನವರ್ ಪಾಷ, ವೀಣಾ ಶಿವಕುಮಾರ್, ಚನ್ನಕೇಶವ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Continue Reading

Mysore

ಎಚ್‌.ಎನ್‌. ವಿಜಯ್ ರವರ 51 ನೇ ವರ್ಷದ ಹುಟ್ಟುಹಬ್ಬ ಸಂತಸ ತಂದಿದೆ: ಲಕ್ಕಿಕುಪ್ಪೆ ಸುಬ್ಬೇಗೌಡ

Published

on

ವರದಿ: ಎಸ್. ಬಿ.ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ: ಹರದನಹಳ್ಳಿ  ಎನ್. ವಿಜಯ್ ರವರ 51 ನೇ ವರ್ಷದ ಹುಟ್ಟು ಹಬ್ಬ, ಈ ಭಾಗದ ಜನತೆಗೆ ಸಂತಸ ತಂದಿದೆ ಎಂದು ಲಕ್ಕಿಕುಪ್ಪೆ ಸುಬ್ಬೇಗೌಡ ತಿಳಿಸಿದ್ದಾರೆ.

ಮೈಸೂರು ಮುಡಾ ಮಾಜಿ ಅಧ್ಯಕ್ಷ ಎಚ್‌.ಎನ್‌. ವಿಜಯ್ ಅವರು ಹಾಂಗ್ ಕಾಂಗ್ ನಲ್ಲಿ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಕೃಷಿಕ ಪ್ರಶಸ್ತಿಗೆ ಭಾಜನ ರಾಗಿರುವುದು ಹೆಮ್ಮೆಯ ವಿಷಯವಾಗಿದೆ. 500 ಕ್ಕೂ ಅಧಿಕ ನಿರುದ್ಯೋಗ ಯುವಕ, ಯುವತಿಯರಿಗೆ ಕೆಲಸ ನೀಡಿ, ಅವರ ಕುಟುಂಬ ನಿರ್ವಹಣೆಗೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು.

ಬಡ ಜನತೆಗೆ ಹಣ ಸಹಾಯ ಮಾಡಿ ಬಡವರ ಬಂದು ಆಗಿರುವ ಎಚ್.ಎನ್. ವಿಜಯ್ ಅವರು ಹೆಚ್ಚಿನ ರೀತಿಯಲ್ಲಿ ಸಮಾಜ ಸೇವೆ ಮಾಡಿ ಈ ಊರಿನ ಕೀರ್ತಿಯನ್ನು ರಾಜ್ಯವೇ ಮೆಚ್ಚುವಂತೆ ಮಾಡಲಿ ಎಂದರು.

ಜುಲೈ .16 ರಂದು ನಡೆಯಲಿರುವ ಅವರ ಜನ್ಮ ದಿನದ ಪ್ರಯುಕ್ತ ಹರದನಹಳ್ಳಿ ಗ್ರಾಮದಲ್ಲಿ ಸೀಮಂತ ಕಾರ್ಯಕ್ರಮ ಪ್ರತಿಭಾ ಪುರಸ್ಕಾರ ಅನ್ನ ಸಂತರ್ಪಣೆ, ಆರೋಗ್ಯ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿರುವುದು ವಿಶೇಷ ವಾಗಿದೆ ಎಂದು ತಿಳಿಸಿದರು.

Continue Reading

Mysore

ಎಚ್‌.ಎನ್‌.ವಿಜಯ್‌ ಹುಟ್ಟು ಹಬ್ಬ: ಹೊಸದುರ್ಗ ಶ್ರೀ ಭಗೀರಥ ಪೀಠದ ಡಾ. ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಪರಿಶೀಲನೆ

Published

on

ವರದಿ: ಎಸ್. ಬಿ. ಹರೀಶ್ ಸಾಲಿಗ್ರಾಮ

ಸಾಲಿಗ್ರಾಮ: ಮೈಸೂರುನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್ ಅವರ 51ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿದ್ಧತೆಯನ್ನು ಹೊಸದುರ್ಗ ಶ್ರೀ ಭಗೀರಥ ಪೀಠದ ಡಾ.ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ ಅವರು ಶನಿವಾರ ಪರಿಶೀಲಿಸಿದರು.

ವಿಜಯ್ ಅವರ ಹುಟ್ಟೂರು ತಾಲ್ಲೂಕಿನ ಹರದನಹಳ್ಳಿಯಲ್ಲಿ ನಡೆಯುತ್ತಿರುವ ಜನ್ಮದಿನೋತ್ಸವ ಕಾರ್ಯಕ್ರಮದ ಪೆಂಡಾಲ್, ಪಾರ್ಕಿಂಗ್, ಊಟದ ಸ್ಥಳ, ವೇದಿಕೆ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಮಾರಂಭದಲ್ಲಿ ಸುಮಾರು ಇಪ್ಪತ್ತು ಸಾವಿರ ಜನರು ಸೇರುವ ನಿರೀಕ್ಷೆಯಿದ್ದು, ಬರುವಂತಹ ಎಲ್ಲರಿಗೂ ಯಾವುದೇ ರೀತಿಯ ತೊಂದರೆ ಆಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಮೂಡ ಮಾಜಿ ಅಧ್ಯಕ್ಷ ಹೆಚ್.ಎನ್.ವಿಜಯ್, ಮುಖಂಡರಾದ ಮಿರ್ಲೆ ರಾಜೀವ್, ಎಲ್ಐಸಿ ನಿಂಗಪ್ಪ, ವೆಂಕಟೇಶ್, ಕೆ.ಟಿ.ಮೋಹನ್ ಕುಮಾರ್, ಹೆಚ್.ಜೆ.ಗೋಪಾಲ್, ಪೊಲೀಸ್ ಬಸವೇಗೌಡ, ತಿಮ್ಮೇಗೌಡ, ಡಾಲ್ಪಿ, ಎಸ್. ಆರ್.ರವಿಕುಮಾರ, ಲಕ್ಷ್ಮೀಶ ಸೇರಿದಂತೆ ಹಲವರು ಇದ್ದರು.

Continue Reading

Mysore

ಜು.14ಕ್ಕೆ ದೃಷ್ಟಿ ಹೀನರಿಗಾಗಿ ವಿಶೇಷ ಉಪಕರಣ ಅಳವಡಿಸಿರುವ 200 ನೂತನ ಬಸ್‌ ಲೋಕಾರ್ಪಣೆ: ಡಾ.ಪುಷ್ಪಾ ಅಮರನಾಥ್‌

Published

on

ಮೈಸೂರು: ನಮ್ಮ ಸರ್ಕಾರದ ಶಕ್ತಿ ಯೋಜನೆ ಅಡಿಯಲ್ಲಿ ಇದುವರೆಗೂ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಇದೊಂದು ದೊಡ್ಡ ಮೈಲಿಗಲ್ಲಾಗಿದ್ದು, ಈ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ. ಇದರ ಬೆನ್ನಲ್ಲೇ ಜು.14 ರಂದು ದೃಷ್ಟಿ ಹೀನರಿಗಾಗಿ ವಿಶೇಷ ಉಪಕರಣ ಅಳವಡಿಸಿರುವ 200 ನೂತನ ಬಸ್‌ ಅನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಂಭಾಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ನಮ್ಮ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು ಓಡಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರ ಜಿಲ್ಲಾ ತಾಲೂಕು ಮಟ್ಟದಲ್ಲಿ 5 ಶತಕ ಮಹಿಳಾ ಸಂಭ್ರಮ ಆಚರಿಸುತ್ತಿದೆ. ನಮ್ಮದು ಮೊದಲೇ ಬಡವರ ಪರ ಮಹಿಳೆಯರ ಪರವಾದ ಸರ್ಕಾರ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ನಮ್ಮ ಸರ್ಕಾರ ಇಡೀ ದೇಶದಲ್ಲೇ ದೊಡ್ಡ ದಾಖಲೆ ಬರೆದಿದೆ. ನಮ್ಮ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ಸ್ವಾತಂತ್ರ್ಯ ಅನುಭವಿಸುವ ಅವಕಾಶವನ್ನು ನಮ್ಮ ಸರ್ಕಾರ ನೀಡಿದೆ. ಹಾಗಾಗಿ ಇದೇ ಸೋಮವಾರ(ಜು.14) ದಂದು ಈ ಯಶಸ್ಸನ್ನು ಸಿಹಿ ಹಂಚಿ ಮಹಿಳೆಯರೊಂದಿಗೆ ಪ್ರಯಾಣಿಸಿ ಸಂಭ್ರಮಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಮೈಸೂರಲ್ಲಿ ಶಕ್ತಿ ಯೋಜನೆಗೆ 776.8 ಕೋಟಿ ರೂ. ಹಣ ವ್ಯವವಾಗಿದೆ. ರಾಜ್ಯದಲ್ಲಿ 12000,733.80 ಕೋಟಿ ರೂ. ಹಣ ವ್ಯಯವಾಗಿದೆ. ಇಷ್ಟು ದೊಡ್ಡ ಮೊತ್ತವನ್ನು ಇಡೀ ದೇಶದಲ್ಲೇ ಯಾವ ಸರ್ಕಾರವೂ ನೀಡಿಲ್ಲ. ಈ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ. 14 ರಂದು ದೃಷ್ಟಿ ಹೀನರಿಗಾಗಿ ವಿಶೇಷ ಉಪಕರಣ ಅಳವಡಿಸಿರುವ ನೂತನ ಸಾರಿಗೆ ಬಸ್‌ಗಳನ್ನು ಸಚಿವ ರಾಮಲಿಂಗ ರೆಡ್ಡಿ ಅವರು ಮೈಸೂರಿನಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮ ನಗರ ಬಸ್ ನಿಲ್ದಾಣದಲ್ಲಿ ಮೊದಲ ಹಂತದಲ್ಲಿ 200 ಬಸ್ ಲೋಕಾರ್ಪಣೆ ಆಗಲಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಜನ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Continue Reading

Trending

error: Content is protected !!