Chikmagalur
ಮಾದಕ ವಸ್ತುಗಳ ಸೇವನೆ : ಆರೋಗ್ಯದ ಮೇಲೆ ದುಷ್ಪರಿಣಾಮ

ಚಿಕ್ಕಮಗಳೂರು: ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟ ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಹೇಳಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಮಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ನೆನ್ನೆ ಸಂಜೆ ನಗರದ ಡಾ|| ಬಿ.ಆರ್. ಅಂಬೇಡ್ಕರ್ ಪದವಿ ಕಾಲೇಜು ಬಾಲಕರ ವಿದ್ಯಾರ್ಥಿನಿಲಯದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನದಿಂದಾಗುವ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ. ಆರಂಭದಲ್ಲಿ ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ತೊಡಗುವ ಮದ್ಯ ಅಥವಾ ಕಡಿಮೆ ಬೆಲೆಗೆ ಸಿಗುವ ಪಾನ್ ವಸ್ತುಗಳ ಸೇವನೆ ಕೊನೆಗೆ ಮಾರಕ ಗಾಂಜಾ, ಅಫೀಮು, ಕೊಕೇನ್ ದಾಸರನ್ನಾಗಿಸುತ್ತದೆ. ಮೆದುಳಿನಲ್ಲಿ ಬದಲಾವಣೆ ತಂದು ಇನ್ನ? ಸೇವಿಸುವಂತೆ ಪ್ರೇರೇಪಿಸಿ ಕೊನೆಗೆ ವ್ಯಸನಿಗಳನ್ನಾಗಿಸುತ್ತದೆ. ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ವ್ಯಸನ ಅಪಘಾತಗಳಿಗೂ ಕಾರಣವಾಗುವುದು ಎಂದು ಹೇಳಿದರು.
ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್.ಸಿ, ಪ್ರಶಾಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾದಕ ದ್ರವ್ಯಗಳನ್ನು ವಿತರಿಸುವ ಜಾಲವನ್ನು ಮಟ್ಟ ಹಾಕಲು ಕಾನೂನಿನೊಂದಿಗೆ ಸಹಕರಿಸುವುದು, ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ಅವುಗಳ ಮಾರಕ ಪರಿಣಾಮದ ಕುರಿತು ತಿಳುವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಹಾಗೂ ಯುವ ಜನತೆ ಮುಂದಾಗಬೇಕು. ಇತ್ತೀಚಿನ ದಿನಗಳಲ್ಲಿ ಅಮಲು ಪದಾರ್ಥ ಸೇವನೆ ಇಂದಿನ ಯುವ ಜನಾಂಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದು ಆತಂಕ ಮೂಡಿಸುತ್ತಿದ್ದು, ಈ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿ, ಇಂತಹ ವ್ಯಸನಗಳ ಸೇವನೆ ಒಂದು ರೀತಿಯ ಫ್ಯಾ?ನ್ ಎಂಬುದಾಗಿ ತಿಳಿದ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗಿ ನಿರಂತರ ಉಪಯೋಗಕ್ಕೆ ತೊಡಗುತ್ತಾರೆ. ಇಂತಹ ಕಾರ್ಯಕ್ರಮ ಆಯೋಜನೆಯಿಂದ ಜಾಗೃತಿ ಮೂಡಿಸಲು ಸಾಧ್ಯ. ಜೀವನದ ಗುರಿ ಹಾಗೂ ಹಾದಿ ತಪ್ಪಿಸುವ ಮಾದಕ ವ್ಯಸನ ಹಾಗೂ ವ್ಯಸನಿಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ಬೆಳೆಸಿ ಉತ್ತಮ ಭವಿ? ರೂಪಿಸಿಕೊಳ್ಳಿ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ತಜ್ಞರು ಡಾ|| ವಿನಯ್ ಕುಮಾರ್ ಕಾರ್ಯಕ್ರಮದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗು ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು. ಮಾದಕ ವಸ್ತುಗಳ ಉಪಯೋಗ ಸಾಮಾನ್ಯವಾಗಿ ಪ್ರಪಂಚಾದ್ಯಂತ ಕಂಡು ಬರುವ ಒಂದು ದೊಡ್ಡ ಪಿಡುಗು. ಇದು ಗಂಡು-ಹೆಣ್ಣು, ಬಡವ-ಶ್ರೀಮಂತ ಎನ್ನುವ ಯಾವುದೇ ಭೇದ-ಭಾವವಿಲ್ಲದೆ ಎಲ್ಲೆಡೆಯೂ ಕಂಡು ಬರುವ ತೊಂದರೆ. ಸಾಮಾನ್ಯವಾಗಿ ಉಪಯೋಗಿಸುವ ಮಾದಕ ವಸ್ತುಗಳು: ಮದ್ಯ ತಂಬಾಕು, ಗಾಂಜಾ, ಕೋಕೇನ್, ನಿದ್ದೆ ಮಾತ್ರೆಗಳು, ಮಾದಕ ವಸ್ತುಗಳ ಚಟವು ವ್ಯಕ್ತಿಯ ಮೆದುಳಿನ ಮೇಲೆ ದೀರ್ಘ ಕಾಲದ ಮತ್ತು ಪ್ರಭಾವಿ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ಸೇವನೆಯ ತವಕ/ಹಪಹಪಿಸುವಿಕೆ, ಮಾದಕ ವಸ್ತುಗಳ ಸೇವನೆ ಮೇಲೆ ನಿಯಂತ್ರಣ ತಪ್ಪಿ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದು, ಮಾದಕ ವಸ್ತುಗಳ ದು?ರಿಣಾಮಗಳಾಗುತ್ತಿದ್ದರೂ ಅದರ ಸೇವನೆ ಹಾಗೂ ಉಪಯೋಗ ಮುಂದುವರಿಸುವುದು. ವ್ಯಕ್ತಿಯು ತನ್ನ ಜವಾಬ್ದಾರಿಗಳನ್ನು ನಿರ್ಲಕ್ಷಿಸಲಾರಂಭಿಸುತ್ತಾನೆ.
ಶಾಲೆಗೆ ಮತ್ತು ಕಾಲೇಜಿಗೆ ಚಕ್ಕರ್ ಹೊಡೆದು ಮಾದಕ ವಸ್ತು ಬಳಸಲು ಹೋಗುವುದು ಕೆಲಸಕ್ಕೆ ಗೈರು ಹಾಜರಾಗುವುದು ಕೆಲಸ ಅರ್ಧಕ್ಕೆ ಬಿಟ್ಟು ಹೋಗುವುದು ಹೆಂಡತಿ ಮಕ್ಕಳನ್ನು ನಿರ್ಲಕ್ಷಿಸುವುದು ಮನೆ ಖರ್ಚಿಗೆ ದುಡ್ಡು ಕೊಡದೆ ಅದನ್ನು ಮಾದಕ ವಸ್ತುಗಳ ಖರೀದಿಯಲ್ಲಿ ಉಪಯೋಗಿಸುವುದು ಸಾಮಾಜಿಕ ಜವಾಬ್ದಾರಿಗಳನ್ನು ನಿರ್ಲಕ್ಷಿಸುವುದು.
ವ್ಯಕ್ತಿಯು ಅಪಾಯಕಾರಿ ಸನ್ನಿವೇಶಗಳಲ್ಲಿ ಮಾದಕ ವಸ್ತುಗಳನ್ನು ಬಳಸಲಾರಂಭಿಸುತ್ತಾನೆ ಹಾಗೂ ಮಾದಕ ವಸ್ತುವಿನ ಮತ್ತಿನಲ್ಲಿರುವಾಗ ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮಾದಕ ವಸ್ತುಗಳನ್ನು ಬಳಸಿ ವಾಹನ ಚಲಾಯಿಸುವುದು, ಒಂದೇ ಸಿರಿಂಜಿನಲ್ಲಿ ಎಲ್ಲರೂ ಸೇರಿ ಇಂಜೆಕ್ಷನ್ ತೆಗೆದುಕೊಳ್ಳುವುದು, ಮಾದಕ ವಸ್ತು ತೆಗೆದುಕೊಳ್ಳಲು ಬಳಸಿದ ಸೂಜಿಯನ್ನೇ ಪದೇಪದೆ ಬಳಸುವುದು, ಇವುಗಳಿಂದ ಹಲವಾರು ತೊಂದರೆಗೆ ತುತ್ತಾಗುತ್ತಾರೆ. ಆದರಿಂದ ಇವುಗಳನ್ನು ತ್ಯಜೀಸಿ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಹೇಳಿದರು.
ಜಿಲ್ಲಾ ಗ್ರಂಥಾಲಯ ಅಧಿಕಾರಿ ಉಮೇಶ್ ಅನಾದಿ ಕಾಲದಿಂದಲೂ ಮಾದಕ ವಸ್ತುಗಳನ್ನು ಜನರು ಬಳಸುತ್ತಿದ್ದರು. ಆದರೆ ಅವು ಕೇವಲ ಮೋಜು ಅಥವಾ ಸಾಮಾಜಿಕ ಸಮಾರಂಭಗಳಲ್ಲಿ ಬಳಕೆಯಾಗುತ್ತಿದ್ದವು ಮತ್ತು ಅವುಗಳು ಮದ್ಯ, ಹೊಗೆಸೊಪ್ಪು, ಗಾಂಜಾ ಇತ್ಯಾದಿಗಳಿಗೆ ಸೀಮಿತವಾಗಿದ್ದವು.
ಸಮಯ ಕಳೆದಂತೆ ಹೊಸ-ಹೊಸ ರಾಸಾಯನಿಕ ಮಾದಕ ವಸ್ತುಗಳನ್ನು ತಯಾರಿಸಲಾಯಿತಲ್ಲದೇ, ಅವುಗಳನ್ನು ಉಪಯೋಗಿಸಲು ಹೊಸ ಹೊಸ ವಿಧಾನಗಳನ್ನೂ ಕೂಡ ಜನ ಅನ್ವೇಷಿಸತೊಡಗಿದರು. ಇದು ಒಂದು ಬೃಹತ್ ಮಾರುಕಟ್ಟೆಯಾಗಿ ಬೆಳೆದು ನಿಂತು ಜನರ ದೈಹಿಕ, ಮಾನಸಿಕ ಆರೋಗ್ಯ ಹದಗೆಟ್ಟಿಸಿತ್ತಲ್ಲದೆ, ದೇಶದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ತೊಡಕುಂಟು ಮಾಡತೊಡಗಿತು. ಇದರಿಂದ ಜನರ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತಲೆ ಇದೆ. ಇನ್ನಾದರೂ ಜನರು ಇವುಗಳ ವ್ಯಸನದಿಂದ ಮುಕ್ತರಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜೆ. ಮಂಜೇಗೌಡ ಎಲ್ಲಾರನ್ನು ಸ್ವಾಗತಿಸಿ, ಜಿಲ್ಲಾ ಗ್ರಂಥಾಲಯ ಪಾಲಕ ಮಹೇಶ್ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇಶಕರು (ಗೇಡ್-೧) ರೇವಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಮಂಜುನಾಥ್, ಡಾ. ಬಿ.ಆರ್. ಅಂಬೇಡ್ಕರ್ ಪದವಿ ಕಾಲೇಜು ಬಾಲಕರ ವಿದ್ಯಾರ್ಥಿನಿಲಯದ ನಿಲಯ ಪಾಲಕ ಶಿವಶಂಕರ್, ಹಾಗೂ ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.
Chikmagalur
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.
ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ತೀರ್ಪು ನೀಡಿತು.
Chikmagalur
ಜನಿವಾರ ತೆಗೆಸಿರುವುದು ಖಂಡನೀಯ

ಜಯಪುರ : ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಪತ್ರಿಕೆಗೆ ತಿಳಿಸಿದರು.
ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ.
ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಕೂಡಲೇ ಇಂತಹ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕಾಗಿ ಆಗ್ರಹಿಸುತ್ತೇವೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ :-ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಒಂಟಿ ಸಲಗ

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಕಾಣಿಸಿಕೊಳ್ಳದೊಡಗಿದೆ
ಮೂರು ದಿನದ ಹಿಂದೆ ಎಂಟನೇ ತಿರುವು ಬಳಿ ಸಂಜೆ ವೇಳೆ ಕಾಣಿಸಿದ್ದ ಆನೆ ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ನಿಂತಿದೆ.
ಸಂಜೆಯೂ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿದ್ದು, ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಇದ್ದು,ಆನೆ ದಾಳಿಗೆ ಮುಂದಾದರೆ ತಪ್ಪಿಸಿಕೊಳ್ಳೋದು ಕಷ್ಟ.
ನಿನ್ನೆ ಸಂಜೆ ಕಾರು ಚಾಲಕ ಆನೆಯಿಂದ ಜಸ್ಟ್ ಮಿಸ್ ಆಗಿದ್ದು ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳಿಯರು, ಪ್ರವಾಸಿಗರು ಒತ್ತಾಯಿಸಿದ್ದಾರೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu19 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu16 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Mysore11 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ