Connect with us

Chikmagalur

ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆ ಮಾಡುವ ಮೂಲಕ ಪ್ರವಾಸಿಗರಿಗೆ ಶಾಕ್ ನೀಡಿದ್ದಾರೆ.

Published

on

ಚಿಕ್ಕಮಗಳೂರು: ವಾರಾಂತ್ಯ ದಲ್ಲಿ ಮುಳ್ಳಯ್ಯನಗಿರಿ ಮತ್ತು ದತ್ತಪೀಠಕ್ಕೆ ಆಗಮಿಸಿದ ಪ್ರವಾಸಿಗರಿಗೆ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆ ಮಾಡುವ ಮೂಲಕ ಪ್ರವಾಸಿಗರಿಗೆ ಶಾಕ್ ನೀಡಿದ್ದಾರೆ.


ರಾಜ್ಯದ ನೆಚ್ಚಿನ ಪ್ರವಾಸಿಕೇಂದ್ರ ದಲ್ಲಿ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯೂ ಒಂದಾಗಿದ್ದು ವಾರಾಂತ್ಯದಲ್ಲಿ ಸಾವಿರಾರು ಪ್ರವಾಸಿಗರು ಇಲ್ಲಿಗೆ ಲಗ್ಗೆ ಇಡುತ್ತಿದ್ದಾರೆ. ಆಗಮಿಸುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಅನುಪಯುಕ್ತ ವಸ್ತುಗಳನ್ನು ಎಲ್ಲದರಲ್ಲಿ ಬಿಸಾಡುವುದರಿಂದ ಪ್ರವಾಸಿ ಕೇಂದ್ರ ಕಸದ ಕೊಂಪೆಯಾಗು ತ್ತಿದ್ದು ಗಿರಿ ಪ್ರದೇಶದಲ್ಲಿ ಪ್ಲಾಸ್ಟಿಕ್ ಸೇರಿದಂತೆ ಇತರೆ ಅನುಪಯುಕ್ತ ವಸ್ತುಗಳ ಬಳಕೆಯನ್ನು ಈಗಾ ಗಲೇ ನಿಷೇಧಿಸಲಾಗಿದೆ.


ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟು ತಪಾಸಣೆಗೆ ಮುಂದಾಗಿದ್ದು, ನೀರಿ‌ನ ಬಾಟಲಿ, ಮದ್ಯದ ಬಾಟಲಿ, ಸಿಗರೇಟ್ ಸೇರಿದಂತೆ ಇತರೆ ವಸ್ತುಗಳನ್ನು ಕೈಮರದಲ್ಲಿನ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ.
ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರ ಹುಚ್ಚಾಟ, ತರಲೆ, ಕೀಟಲೆ ಹೆಚ್ಚಾದ ಹಿನ್ನಲೆಯಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು ಈಗಾಗಲೇ ಅನೇಕರ ಮೇಲೆ ಕೇಸ್ ಕೂಡ ದಾಖಲು ಮಾಡಲಾಗಿದೆ.
ಶನಿವಾರ ಗಿರಿ ಪ್ರದೇಶಕ್ಕೆ ತೆರಳು ಸಾವಿರಾರು ಸಂಖ್ಯೆಯ ಪ್ರವಾಸಿಗರು‌ ಆಗಮಿಸಿದ್ದು, ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ವಾಹನ ತಪಾಸಣೆಗೆ ಇಳಿದರು.
ಮುಳ್ಳಯ್ಯನಗಿರಿ, ಶ್ರೀ ಗರು ದತ್ತಾತ್ರೇಯ ಬಾಬಾ ಬುಡನ್ ದರ್ಗಾ, ಮಾಣಿಕ್ಯಧಾರ ಹೋಗುವ ಮಾರ್ಗದ ಕೈಮರ ಚಕ್ ಪೋಸ್ಟ್ ನಲ್ಲಿ ಪ್ರವಾಸಿಗರ ವಾಹನಗಳಲ್ಲಿದ್ದ ಸಾವಿರಾರು ರೂ.ಮೌಲ್ಯದ ಮದ್ಯ ಸೀಜ್ ಮಾಡಿ ಪ್ರಕರಣ ದಾಖಲಿಸುವ ಮೂಲಕ ಪ್ರವಾಸಿಗರ ಬೆವರು ಇಳಿಸುವ ಕೆಲಸ ಮಾಡಿದ್ದಾರೆ.
ಒಟ್ಟಾರೆ ಜಿಟಿ ಜಿಟಿ ಮಳೆಯಲ್ಲಿ ನೆನೆದು ಸುಂದರ ಪ್ರವಾಸಿ ತಾಣಗಳಲ್ಲಿ ಕುಳಿತು ಹಾಟ್ ಹಾಟ್ ಆಗಿ ಎಣ್ಣೆ ಹೊಡಿಯೋಣ ಅಂತ ಬಂದ ಪ್ರವಾಸಿಗರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಕ್ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

Published

on

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ‌ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ‌ ಕಲ್ಪಿಸುವ‌ರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ‌ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನ‌ಸವಾರರ ಮೊಬೈಲ್‌ನಲ್ಲಿ‌ ದೃಶ್ಯ ಸೆರೆಯಾಗಿದ್ದು.‌ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading

Chikmagalur

ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

Published

on

ಚಿಕ್ಕಮಗಳೂರು ‌: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.

Continue Reading

Chikmagalur

ಕೆ‌ಎಸ್‌ಆರ್‌ಟಿಸಿ ‌ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

Published

on

ಚಿಕ್ಕಮಗಳೂರು : ಕೆ‌ಎಸ್‌ಆರ್‌ಟಿಸಿ ಬಸ್ – ಬೈ ನಡುವೆ‌ ಮುಖಾಮುಖಿ ಡಿಕ್ಕಿ‌ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್‌‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆ‌ಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ‌ ನಡೆದಿದೆ.

ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು.‌ ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ‌ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!