Chikmagalur
ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಚಿಕ್ಕಮಗಳೂರು: ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕರಾಗಿ ಎಂ.ಎಸ್ ಜಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ಷಕೀಲ್ಅಹಮದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗರಾಜ್ ಡಿ.ಟಿ. ಘೋಷಿಸಿದರು
ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಸಮಾಜ ಸೇವಕರಾದ ಮೈಲಿಮನೆ ಪೂರ್ಣೆಶ್ ಅಭಿನಂದಿಸಿ ಮಾತನಾಡಿ ರೈತರ ಸಮಸ್ಯೆಗಳಿಗೆ ಸ್ಪಂಧಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಿಸುತ್ತಾರೆಂಬ ಬಹಳ ನಿರೀಕ್ಷೆ ಇದೆ ಎಂದ ಅವರು ತಮ್ಮ ಆಡಳಿಯ ಅವದಿಯಲ್ಲಿ ಹೆಚ್ಚು ಪರೋಪಕಾರಿ ಕಾರ್ಯಗಳನ್ನು ನಿರ್ವಹಿಸಲಿ ಎಂದು ತಿಳಿಸಿದರು.
ಸಹಕಾರ ಸಂಘದ ವತಿಯಿಂದ ಕೃಷಿಕರಿಗೆ ವ್ಯಾಪಾರಸ್ಥರಿಗೆ ಮತ್ತು ವಾಹನ ಸಾಲವನ್ನು ವಿತರಿಸಲಾಗುತ್ತಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡಿ ಸಂಘದ ಅಭಿವೃದ್ಧಿಯ ಜೊತೆಗೆ ನೀವು ಸಹ ಅಭಿವೃದ್ಧೀ ಹೊಂದಬೇಕೆಂದು ತಿಳಿಸಿದರು.
ಮೈಲಿಮನೆ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ಗೌಡ ಮಾತನಾಡಿ ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಸುಮಾರು ೧೦೦ ವರ್ಷಗಳ ಇತಿಹಾಸವಿದೆ. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕರುಗಳು ಈ ಸಂಘದ ಬೆಳವಣಿಗೆಗೆ ಸಹಕರಿಸಬೇಕು ರೈತರ ಯಾವ ಸಮಸ್ಯೆಗಳನ್ನು ಸಾಮಾನ್ಯವಾಗಿ ಪರಿಗಣಿಸಿ ಕಡೆಗಣಿಸದೇ ಎಲ್ಲಾ ಸಮಸ್ಯೆಗಳಿಗೂ ವ್ಯವಸ್ಥಿತವಾದ ಪರಿಹಾರ ನೀಡಿ ಸಂಘವನ್ನು ಇನ್ನಷ್ಟು ಭದ್ರಗೊಳಿಸಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್ ಜಯಚಂದ್ರ ಮಾತನಾಡಿ. ಸಂಘದ ಸದಸ್ಯರೆಲ್ಲರು ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಈ ಸಹಕಾರ ಸಂಘದಲ್ಲಿ ೪ ಸಾವಿರಕ್ಕು ಹೆಚ್ಚು ಸದಸ್ಯರಿದ್ದು ಅಗತ್ಯ ಇರುವವರಿಗೆ ಸಾಲ ಸೌಲಭ್ಯಗಳನ್ನು ಎಲ್ಲಾ ನಿರ್ದೇಶಕರುಗಳ ಸಹಕಾರ ಪಡೆದು ನೀಡುವುದಾಗಿ ತಿಳಿಸಿದರು.
ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಷಕೀಲ್ ಅಹಮದ್ ಮಾತನಾಡಿ. ಸಂಘದ ಉಪಾಧ್ಯಕ್ಷ ಸ್ತಾನ ದೊರಕಿರುವುದು ಸಂತೋಷವಾಗಿದೆ ನನ್ನ ಕರ್ತವ್ಯ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು
ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಬಿ.ಬಿ ನಿಂಗಯ್ಯ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಟಿ.ಡಿ ಮಲ್ಲೇಶ್, ನಿರ್ದೇಶಕರಾದ ರತೀಶ್ ಕುಮಾರ್ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಧ ಸತೀಶ್ ನಿರ್ದೇಶಕರಾದ ಮುಗುಳುವಳ್ಳಿ ನಿರಂಜನ್, ನಿರ್ದೇಶಕರುಗಳಾದ ಎಂ.ಜಿ ಪೂರ್ಣೇಶ್, ಹಫೀಜುರ್ ರೆಹಮಾನ್, ಮಹಮದ್ ತಾಹೇರ್ ಏಕ್ಬಾಲ್, ಅನು ರಾಜೇಗೌಡ, ಸರ್ವರಿಬೇಗಮ್, ದೇವರಾಜು, ಕಿಶನ್, ಅರ್ಪಿತ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಪವನ್ ಕುಮಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಹೆಚ್ ವೆಂಕಟೇಶ್ ನೂತನ ಅಧ್ಯಕ್ಷ, ಉಪಾಧ್ಯಕ್ಷರನು ಅಭಿನಂದಿಸಿದರು.
Chikmagalur
ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ರಥೋತ್ಸವ

ಜಯಪುರ : ಗುಡ್ಡೆತೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಕ್ಷಿಣ ತಿರುಪತಿ ಎಂದೇ ಖ್ಯಾತಿಯಾಗಿರುವ ಮೇಗೂರು ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವವು ಫೆಬ್ರವರಿ 15 ಶನಿವಾರ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಲಕ್ಷ್ಮೀ ನರಸಿಂಹಮೂರ್ತಿ ಭಟ್ಟರು, ನವೀನ್ ನಾಗೇಂದ್ರ ಭಟ್ಟರು, ದೇವಸ್ಥಾನದ ಧರ್ಮದರ್ಶಿಗಳಾದ ರಘುಪತಿ ಹೆಬ್ಬಾರ್, ಸಮಿತಿಯ ಅಧ್ಯಕ್ಷರಾದ ಟಿ ಪ್ರಕಾಶ್, ಕೊಪ್ಪ ತಾಲೂಕು ತಹಸೀಲ್ದಾರರಾದ ಲಿಖಿತ ಮೋಹನ್, ಶಿರಸ್ತದಾರ್ ನಾಗರಾಜ್, ರವಿನ್ಯು ಇನ್ಸ್ಪೆಕ್ಟರ್ ವಿನಯ್ ಹಾಗೂ ಸುತ್ತಮುತ್ತಲಿನ ಸಹಸ್ರರು ಭಕ್ತಾದಿಗಳು ಭಾಗಿಯಾಗಿದ್ದರು.
ವರದಿ :- ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್

ಚಿಕ್ಕಮಗಳೂರು: ಫೆ. ೧೫: ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷ್ಷೆ ಸುಜಾತ ಶಿವಕುಮಾರ್ ಹೇಳಿದರು.
ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂತ ಸೇವಾಲಾಲರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದರು. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ, ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದವರು ಎಂದ ಅವರು ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದ ಮಹಾಪುರುಷ ಎಂದು ಹೇಳಿದರು.
ಬೇಲೂರು ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀನಿವಾಸ್ ಉಪನ್ಯಾಸ ನೀಡಿ ಮಾನವ ಜನ್ಮ ಪವಿತ್ರವಾದದ್ದು, ಇದನ್ನು ಹಾಳು ಮಾಡಿಕೊಳ್ಳಬಾರದು, ವ್ಯಸನಗಳಿಂದ ದೂರವಿರಬೇಕು. ಹರಿಷಡ್ ವರ್ಗಗಳನ್ನು ಸುಟ್ಟು ಹಾಕಿ ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಸಾರಿದವರು ಸಂತ ಸೇವಾ ಲಾಲ್. ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರಿಗೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರಲ್ಲದೆ ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಿಸಲು ಪ್ರೇರೇಪಿಸಿದರು ಎಂದರು.
ಮಹಾನೀಯರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆದಾಗ ಮಾತ್ರ ನಾವು ಇತರರಿಗೆ ಮಾದರಿಯಾಗಲು ಸಾಧ್ಯ, ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನದಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದಾರೆ. ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಂಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು ಎಂದು ಹೇಳಿದರು
ಉಪತಹಶಿಲ್ದಾರ್ ರಾಮ್ ರಾವ್ ದೇಸಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸೇವಾಲಾಲ್ ಒಬ್ಬ ದನಕಾಯುವ ಗೋಪಾಲಕನಾಗಿ ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದವರು ಎಂದು ತಿಳಿಸಿದರು.
ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರು. ಸೇವಾ ಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್,ಎಲ್ಲರನ್ನು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ಲಲಿತಾ ರವಿನಾಯ್ಕ್, ಸಂತ ನೇವಾಲಾಲ್ ಬಂಜಾರ ಅಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ್ ನಾಯ್ಕ್, ಶ್ರೀ ರಾಮ್ ನಾಯ್ಕ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಸಮಿತಿ ಸದಸ್ಯ ಲಕ್ಷ್ಮಣ್ ಹೆಚ್,ಎಸ್,ಬಂಜಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
Chikmagalur
ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜು ಪುಡಿಪುಡಿ

ಚಿಕ್ಕಮಗಳೂರು: ಕಿಡಿಗೇಡಿಗಳ ಗುಂಪು ಹಿಂದೂ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಲ್ಲುತೂರಾಟ ನಡೆಸಿರುವ ಘಟನೆ ನಗರದ ವಿಜಯಪುರ ಬಡಾವಣೆಯಲ್ಲಿ ಕಳೆದ ರಾತ್ರಿ ನಡೆದಿದೆ. ಕಿಡಿಗೇಡಿಗಳ ಗುಂಪೊಂದು ತಡರಾತ್ರಿ ಮಹೇಶ್ ಎಂಬುವವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದೆ. ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.
ಕಲ್ಲು ತೂರಾಟ ನಡೆಸಿ, ಘೋಷಣೆಗಳನ್ನು ಕೂಗಿ ಯುವಕರು ಎಸ್ಕೆಪ್ ಆಗಿದ್ದಾರೆ. ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಸವನಹಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಗಳೂಎರು ಎಸ್ ಪಿ ವಿಕ್ರಂ ಅಮಟೆ ಆಯ್ಕೆ, ರಾತ್ರಿ ಮನೆಯೊಂದರ ಮೇಲೆ ಕಿಡಿಗೇಡುಗಳು ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
-
Mysore21 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu21 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Kodagu24 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore21 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Mandya22 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Mandya21 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Tech14 hours ago
ಅತ್ಯಂತ ಶಕ್ತಿಶಾಲಿ ಕ್ಯಾಮೆರಾ ಹೊಂದಿರುವ ಮಧ್ಯಮ ಬೆಲೆಯ ವಿವೋ ಕಂಪನಿಯ Vivo V50 ಹೊಸ ಫೋನ್ ಬಿಡುಗಡೆ : ಬೆಲೆ ಎಷ್ಟು?
-
Hassan19 hours ago
ಹಾಸನ ವಿಮಾನ ನಿಲ್ದಾಣದ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ: ಎಚ್ಡಿ ಕುಮಾರಸ್ವಾಮಿ