Connect with us

Hassan

ಹೊಸಕೋಟೆ ಸಹಕಾರ ಸಂಘಕ್ಕೆ 12ಜನ ನೂತನ ನಿರ್ದೇಶಕರ ಆಯ್ಕೆ

Published

on

ವರದಿ ಸತೀಶ್ ಚಿಕ್ಕಕಣಗಾಲು
ಆಲೂರು: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದು 12ಜನ ನೂತನ ನಿರ್ದೇಶಕರುಗಳು ಆಯ್ಕೆಯಾದರು.

ತಾಲೂಕಿನ ಕೆಂಚಮ್ಮ ಹೊಸಕೋಟೆ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 12ಜನ ನಿರ್ದೇಶಕ ಸದಸ್ಯ ಬಲ ಹೊಂದಿದ್ದು ನೂತನ ನಿರ್ದೇಶಕ 23 ಜನ ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಚುನಾವಣೆ ಮೂಲಕ ನೂತನ ನಿರ್ದೇಶಕರನ್ನ ಆಯ್ಕೆ ಮಾಡಲಾಯಿತು.

ಸಾಮಾನ್ಯ ಕ್ಷೇತ್ರದಿಂದ ಅವಿನಾಶ್, ವಿ.ಎಸ್ ಆನಂದ್, ಚಂದ್ರು, ಕುಬೇರಪ್ಪ, ಯೋಗೇಶ್, ಮಹಿಳಾ ಕ್ಷೇತ್ರದಿಂದ ಮಂಜುಳಾ, ಗಿರಿಜಾ, ಹಿಂದುಳಿದ ವರ್ಗ ‘ಎ’ ನಿಂದ ರವಿ ಕುಮಾರ್, ಹಿಂದುಳಿದ ವರ್ಗ ‘ಬಿ‌’ ನಿಂದ ಮೋಹನ್ ಕುಮಾರ್, ಪರಿಶಿಷ್ಟ ಜಾತಿಯಿಂದ ಪುಟ್ಟಸ್ವಾಮಿ ಆಯ್ಕೆಯಾದರೆ ಪರಿಶಿಷ್ಟ ಪಂಗಡದಿಂದ ಶಾಂತಪ್ಪ ನಾಯಕ ಅವಿರೋಧವಾಗಿ ಆಯ್ಕೆಯಾದರು, ಇನ್ನೂ ಸಾಲಗಾರರಲ್ಲದ ಕ್ಷೇತ್ರದಿಂದ ಕಿಶೋರ್ ಕುಮಾರ್ ಆಯ್ಕೆಯಾದರು 2030ರವರೆಗೆ ಚುನಾಯಿತರು ನಿರ್ದೇಶಕರಾಗಿ ಮುಂದುವರೆಯುತ್ತಾರೆ ಎಂದು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ತಾಲ್ಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಕುಮಾ‌ರ್ ತಿಳಿಸಿದರು.

ಚುನಾವಣೆ ಮೂಲಕ ನೂತನ ನಿರ್ದೇಶಕರುಗಳ ಆಯ್ಕೆ ಘೋಷಣೆ ಹೊರಬಿದ್ದ ಸಂದರ್ಭದಲ್ಲಿ ಹಾಸನ ಜಿಲ್ಲಾ ಹೆಚ್‌ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್, ಬೆಳಮೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್. ಎಸ್ ನಟರಾಜ್, ಪಾಳ್ಯ ಸೊಸೈಟಿ ನಿರ್ದೇಶಕ ಕಟ್ಟೆಗದ್ದೆ ನಾಗರಾಜ್, ಬಿಜೆಪಿ ಮುಖಂಡ ಕೆ.ಕೆ ಪ್ರಸಾದ್, ರುದ್ರೇಶ್ ಕಾಡ್ಲೂರು, ನಂದನ್, ಚಂದ್ರಶೇಖರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿವೇಕ್ ವೈದ್ಯನಾಥ್ ಸೇರಿದಂತೆ ಮುಂತಾದವರು ನೂತನ ನಿರ್ದೇಶಕರುಗಳನ್ನು ಅಭಿನಂದಿಸಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಪೋಟೋ ಕ್ಯಾಪ್ಶನ್: ಹೊಸಕೋಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚುನಾಯಿತನಾದ ನೂತನ ನಿರ್ದೇಶಕರನ್ನ ಹಾಸನ ಜಿಲ್ಲಾ ಹೆಚ್ ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಲ್ಲಿ ಜಗದೀಶ್, ಆರ್.ಎಸ್ ನಟರಾಜ್ ಕೆ.ಕೆ ಪ್ರಸಾದ್ ಸೇರಿದಂತೆ ಇತರರು ಅಭಿನಂದಿಸಿದರು.

Continue Reading

Hassan

ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್‌ ಪಟೇಲ್‌

Published

on

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್‌ಪಟೇಲ್ ಹೇಳಿಕೆ ನೀಡಿದರು.

ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ‌. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ‌ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.

ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

Continue Reading

Hassan

ಆಟೋ ಹತ್ತಿಸುವ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿ

Published

on

ಹಾಸನ: ಆಟೋ ಹತ್ತಿಸುವ ನೆಪದಲ್ಲಿ ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಅಪರಿಚಿತ ಪರಾರಿಯಾಗಿರುವ ಘಟನೆ
ಸಾಲಗಾಮೆ ಹೋಬಳಿ ಸುಂಕದಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಎಂಬುವರು ಸಾಲಗಾಮೆ ಗೇಟ್‌ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ಏ.೧೮ ರಂದು ಊರಿನಿಂದ ಬಸ್ಸಿನಲ್ಲಿ ಹಾಸನಕ್ಕೆ ಹೋಗಿದ್ದರು.

ಅಲ್ಲಿಂದ ಹೂವಿನಹಳ್ಳಿ ಕಾವಲು ಹೊಸೂರಿಗೆ ಬಸ್ಸಿನಲ್ಲಿ ಬಂದು ಇಳಿದು ಸರ್ಕಾರಿ ಆಸ್ಪತ್ರೆಗೆ ಹೋದರು. ಆದರೆ ಗುಡ್‌ಫ್ರೈಡೆ ನಿಮಿತ್ತ ರಜೆ ಇದ್ದುದರಿಂದ ವಾಪಸ್ ಊರಿಗೆ ಹೋಗಲೆಂದು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಆಸ್ಪತ್ರೆ ಮುಂದೆ ರಸ್ತೆಯ ಬದಿಯಲ್ಲಿ ನಿಂತಿದ್ದರು.

 

ಅಲ್ಲಿಗೆ ಬಂದ ಸುಮಾರು ೩೦-೩೫ ವರ್ಷ ವಯಸ್ಸಿನ ವ್ಯಕ್ತಿ, ಅಜ್ಜಿ ನಿಂತಿದ್ದಲ್ಲಿಗೆ ಬಂದು ಯಾವೂರವ್ವ ಎಂದು ಕೇಳಿ, ನನ್ನ ಬೈಕಿಗೆ ಬನ್ನಿ ಕರೆದುಕೊಂಡು ಹೋಗುತ್ತೇನೆಂದು ಹೇಳಿದ್ದಾನೆ.

ಮಗಳ ಊರಾದ ಅರೇಕಲ್ ಹೊಸಳ್ಳಿ ಗ್ರಾಮದ ಮನೆಗೆ ಹೋಗುತ್ತೇನೆಂದು ಹೇಳಿದಾಗ ಆಟೋದಲ್ಲಿ ಹೋಗಿ ಎಂದು ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದ ಆಸಾಮಿ, ರಸ್ತೆಯಲ್ಲಿ ಹೋಗುತ್ತಿದ್ದ ಆಟೋವನ್ನು ಅಡ್ಡಹಾಕಿ ನಿಲ್ಲಿಸಿ, ಅಜ್ಜಿ ಆಟೋದ ಒಳಕ್ಕೆ ಕಾಲಿಟ್ಟು ಹತ್ತುವಾಗ ಅವರ ಕೊರಳಿನಲ್ಲಿದ್ದ ಸುಮಾರು ೪೦ ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಮಾಂಗಲ್ಯ ಸರದ ಅಂದಾಜು ಬೆಲೆ ೩ ಲಕ್ಷ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Hassan

ಎಸ್‌ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕ‌ರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು‌ ಎಂದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.

Continue Reading

Trending

error: Content is protected !!