Location
ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಶ್ರಮಿಸೋಣ- ವಿಜಯೇಂದ್ರ ಮನವಿ
ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ
ಗೆಲುವಿಗೆ ಶ್ರಮಿಸೋಣ- ವಿಜಯೇಂದ್ರ ಮನವಿ
ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. ವೇದಿಕೆ ಮೇಲಿರುವ ಮತ್ತು ಸಭೆಯಲ್ಲಿ ಭಾಗವಹಿಸಿದ ಎಲ್ಲ ಹಿರಿಯರು ಪಕ್ಷದ ಭವಿಷ್ಯದ ದೃಷ್ಟಿಯಿಂದ ಮತ್ತು ಪಕ್ಷಕ್ಕೆ ಶಕ್ತಿ ತುಂಬಲು ಮಾರ್ಗದರ್ಶನ, ಸಲಹೆ, ಸೂಚನೆಗಳನ್ನು ಮುಕ್ತವಾಗಿ ಕೊಡಬೇಕು ಎಂದು ವಿನಂತಿಸಿದರು.

ಪಕ್ಷವು ಕರ್ನಾಟಕದಲ್ಲಿ ಇಷ್ಟು ಎತ್ತರಕ್ಕೆ ಬೆಳೆದು ನಿಲ್ಲಲು ಬಿ.ಎಸ್. ಯಡಿಯೂರಪ್ಪನವರು, ಸದಾನಂದಗೌಡರು, ಈಶ್ವರಪ್ಪನವರು, ಸಿ.ಟಿ.ರವಿಯವರು, ಬಸವರಾಜ ಬೊಮ್ಮಾಯಿಯವರು ಸೇರಿ ಅನೇಕ ಹಿರಿಯರು ಕಾರಣಕರ್ತರಾಗಿದ್ದಾರೆ. ಅಂಥ ಎಲ್ಲ ಹಿರಿಯರು ಇಲ್ಲಿದ್ದಾರೆ. ಎಲ್ಲರ ಪರಿಶ್ರಮ ಪಕ್ಷದ ಬೆಳವಣಿಗೆಗೆ ಕಾರಣವಾಗಿದೆ ಎಂದು ವಿಶ್ಲೇಷಿಸಿದರು.
ಬಿಜೆಪಿಯ ಬೃಹದಾದ ಕಟ್ಟಡ ಮಾತ್ರ ನಮಗೆ ಕಾಣುತ್ತದೆ. ಆದರೆ, ಕಟ್ಟಡದ ಅಡಿಪಾಯ ನಮಗೆ ಗೋಚರಿಸುವುದಿಲ್ಲ. ಬಿಜೆಪಿಗೆ ಸುಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಿದರು.
ಪಕ್ಷದ ರಾಷ್ಟ್ರದ ಹಿರಿಯರ ಆಶೀರ್ವಾದದಿಂದ ಈ ಜವಾಬ್ದಾರಿ ನನ್ನ ಹೆಗಲ ಮೇಲಿದೆ. ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಸಹಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿ ಇಟ್ಟುಕೊಳ್ಳೋಣ. ಲೋಕಸಭೆ ಚುನಾವಣೆ ಮಾತ್ರವಲ್ಲದೆ, ನಂತರ ಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ವಿಧಾನ ಪರಿಷತ್ ಸೇರಿ ಎಲ್ಲ ಚುನಾವಣೆಗಳಲ್ಲಿ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲೇಬೇಕಿದೆ ಎಂದು ತಿಳಿಸಿದರು.
ಈ ಗುರಿ ತಲುಪಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದು ನುಡಿದರು.

ಈ ಸಭೆಯಲ್ಲಿ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
Kodagu
ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಟೂರ್ನಮೆಂಟ್
ಮಡಿಕೇರಿ : ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ 2025–26 ನೆರವೇರಿತು. 80 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು. ಎರಡು ವರ್ಷಗಳಿಂದ ಕೊಡಗು ವಿದ್ಯಾಲಯ ಈ ಪಂದ್ಯಾವಳಿಗೆ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕೂಡ ಅದನ್ನು ಯಶಸ್ವಿಯಾಗಿ ಆಯೋಜಿಸಿತು.
ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ಅಧ್ಯಕ್ಷ ಮಲ್ಲೆಂಗಡ ರಚನ್ ಪೊನ್ನಪ್ಪ ದೀಪ ಬೆಳಗಿಸಿ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಟೇಬಲ್ ಟೆನಿಸ್ ಕ್ರೀಡೆ ಶಿಸ್ತು, ಏಕಾಗ್ರತೆ ಮತ್ತು ಕ್ರೀಡಾತ್ಮಕತೆಯನ್ನು ಬೆಳೆಸುವ ಕ್ರೀಡೆಯಾಗಿದೆ ಎಂದು ರಚನ್ ಪೊನ್ನಪ್ಪ ಹೇಳಿದರು.
ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿದ ಶಾಲಾ ಆಡಳಿತ ಮಂಡಳಿ ನಿದೇ೯ಶಕ ಗುರುದತ್ ಸಿ. ಎಸ್. ಟೇಬಲ್ ಟೆನಿಸ್ ಮನಸ್ಸಿನ ಏಕಾಗ್ರತೆ ಮತ್ತು ಗಮನವನ್ನು ವೃದ್ಧಿಸುವ ಕ್ರೀಡೆ ಎಂದು ತಿಳಿಸಿದರು.
ಟೇಬಲ್ ಟೆನ್ನಿಸ್ ಟ್ರೈನಿಂಗ್ ಅಕಾಡೆಮಿಯ ಸಂಚಾಲಕ ಹರಿಶಂಕರ್
ಸೇರಿದಂತೆ ಅತಿಥಿಗಳಿಗೆ ಗೌರವ ಸಲ್ಲಿಸಲಾಯಿತು.
ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ,
ಆಡಳಿತಾಧಿಕಾರಿ ರವಿ ಪಿ. ಶಾಲಾ ನಿರ್ವಹಣಾ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಜರಿದ್ದರು.
ಪಂದ್ಯಾವಳಿಯ ಫಲಿತಾಂಶಗಳು – :
14 ವಷ೯ದೊಳಗಿನ ವಿದ್ಯಾಥಿ೯ನಿಯರ ಸಿಂಗಲ್ಸ್ ವಿಭಾಗ (ಸಿಂಗಲ್ಸ್ ) – ಪ್ರಥಮ- ಅಮೃತಾ ನೀಲಮ್ಮ (ಕೊಡಗು ವಿದ್ಯಾಲಯ), ದ್ವಿತೀಯ – ಸಾಧನಾ ಕಾವೇರಮ್ಮ (ಕೊಡಗು ವಿದ್ಯಾಲಯ)
14 ವಷ೯ದೊಳಗಿನ ವಿದ್ಯಾಥಿ೯ಗಳ ಸಿಂಗಲ್ಸ್ ವಿಭಾಗ – ಪ್ರಥಮ ದೇವಾರ್ಯ ಎಂ. ವೈ. (ಮೂರ್ನಾಡು ಎಜ್ಯೂಕೇಶನಲ್ ಸೊಸೈಟಿ ಮೂರ್ನಾಡು), ದ್ವಿತೀಯ – ಗಗನ್ ಎಚ್. ಎಸ್. (ಮೋರಾರ್ಜಿ ದೆಸಾಯಿ ವಸತಿ ಶಾಲೆ ಕೂಡಿಗೆ)

18 ವಷ೯ದೊಳಗಿನ ವಿದ್ಯಾಥಿ೯ನಿಯರ ಸಿಂಗಲ್ಸ್ ವಿಭಾಗ – ಪ್ರಥಮ – ಶೀತಲ್ ಎಂ. ಎ. (ಮೋರಾರ್ಜಿ ದೆಸಾಯಿ ವಸತಿ ಶಾಲೆ ಕೂಡಿಗೆ ), ದ್ವಿತೀಯ – ಆದ್ಯಾ ಗಂಗಮ್ಮ ( ಕೊಡಗು ವಿದ್ಯಾಲಯ)
16 ವಷ೯ದೊಳಗಿನ ವಿದ್ಯಾಥಿ೯ಗಳ ಸಿಂಗಲ್ಸ್ ವಿಭಾಗ – ಪ್ರಥಮ – ಅವನೀಶ್ ಕೃಷ್ಣ ಜಿ. ಹೆಚ್. ( ಕೊಡಗು ವಿದ್ಯಾಲಯ) ,ದ್ವಿತೀಯ ಶಿಶಿರ ಜಿ. ಎಸ್. (ಸರ್ಕಾರಿ ಜೂನಿಯರ್ ಕಾಲೇಜು, ಮಡಿಕೇರಿ )
14 ವಷ೯ದೊಳಗಿನ ಡಬಲ್ಸ್ ವಿಭಾಗ – ಪ್ರಥಮ- ಶಶಾಂಕ್ ಎಚ್. ಎಂ. ಮತ್ತು ಗಗನ್ ಎಚ್. ಎಸ್. (ಮೋರಾರ್ಜಿ ದೆಸಾಯಿ ವಸತಿ ಶಾಲೆ ಕೂಡಿಗೆ.), ದ್ವಿತೀಯ – ನಿರಂಜನ್ ಎನ್. ಮಚ್ಚು ಫೆಲಿಕ್ಸ್ ರೋನಾಲ್ಡ್ ಆರ್. (ಕೊಡಗು ವಿದ್ಯಾಲಯ)
18 ವಷ೯ದೊಳಗಿನ ವಿದ್ಯಾಥಿ೯ನಿಯರ ಡಬಲ್ಸ್ ವಿಭಾಗ – ಪ್ರಥಮ – ಶೀತಲ್ ಎಂ. ಎ. ಮತ್ತು ಪ್ರಕೃತಿ ಎಸ್. ಪಿ. (ಮೋರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ), ದ್ವಿತೀಯ – ಆದ್ಯಾ ಗಂಗಮ್ಮ ಮತ್ತು ಅಮೃತಾ ನೀಲಮ್ಮ (ಕೊಡಗು ವಿದ್ಯಾಲಯ )
16 ವಷ೯ದೊಳಗಿನ ಬಾಲಕರ ಡಬಲ್ಸ್ ವಿಭಾಗ – ಪ್ರಥಮ – ಗಗನ್ ಎಸ್. ಮತ್ತು ಕೌಶಿಕ್ ಕೆ. (ಸರ್ಕಾರಿ ಜೂನಿಯರ್ ಕಾಲೇಜು ಮಡಿಕೇರಿ ), ದ್ವಿತೀಯ – ಶಿಶಿರ ಜಿ. ಎಸ್. ಮತ್ತು ಆರೋನ್ ಎಂ. ವೈ. (ಸರ್ಕಾರಿ ಜೂನಿಯರ್ ಕಾಲೇಜು, ಮಡಿಕೇರಿ )
Mysore
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ಗೆ ಚಾಲನೆ
ಮೈಸೂರು: ನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್ಐಎಚ್) ಎರಡು ದಿನಗಳ ಸಾಫ್ಟ್ವೇರ್ ಆವೃತ್ತಿಗೆ ಉದ್ಯಮಿ ರೋಹಿತ್ ಆರಾಧ್ಯ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೇವಲ ಜ್ಞಾನ ಇದ್ದರೆ ಪ್ರಯೋಜನ ಆಗಲಾರದು ಎನ್ನುವ ಹಂತದ ತಾಂತ್ರಿಕ ಪರಿವರ್ತನೆಯ ಅಂಚಿಗೆ ಜಗತ್ತು ಬಂದು ನಿಂತಿದೆ. ಈಗ ಯಾವುದೇ ಮಾಹಿತಿ ನಮ್ಮ ಬೆರಳ ತುದಿಯಲ್ಲಿ ಲಭ್ಯವಿದೆ. ನೀವು ಅದನ್ನು ಹೇಗೆ ಬಳಸುತ್ತೀರಿ, ನೀವು ಹೇಗೆ ಮೌಲ್ಯವನ್ನು ಸೇರಿಸುತ್ತೀರಿ, ನಿಮ್ಮ ಆಲೋಚನೆಗಳನ್ನು ಎಷ್ಟು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುತ್ತೀರಿ ಎಂಬುದು ಮುಖ್ಯ ಎಂದರು.

ಯಶಸ್ಸು ಗಳಿಸಬೇಕಾದರೆ ಶೇ.5ರಷ್ಟು ಮಾತ್ರ ಕಲ್ಪನೆ ಮಾಡಿಕೊಳ್ಳಬೇಕು, ಶೇ.95ರಷ್ಟು ಕಲ್ಪನೆಯ ಕಾರ್ಯಗತಗೊಳಿಸುವಿಕೆಗೆ ಮೀಸಲು ಇಡಬೇಕು. ಆಗ ಮಾತ್ರ ಯಶಸ್ಸು ದೊರೆಯುತ್ತದೆ. ಭಾರತೀಯ ಮಾರುಕಟ್ಟೆ ವಿಶಿಷ್ಟ ಮತ್ತು ಭಾವನಾತ್ಮಕವಾಗಿದೆ. ಉತ್ಪನ್ನದ ಯಶಸ್ಸು ಸಂಕೀರ್ಣತೆಯ ಮೇಲೆ ಅವಲಂಬಿತವಾಗಿಲ್ಲ, ಬದಲಿಗೆ ಸರಳತೆ ಮತ್ತು ಪ್ರಸ್ತುತತೆಯ ಮೇಲೆ ಅವಲಂಬಿತವಾಗಿದೆ. ಅಜ್ಞಾತ ಸಮಸ್ಯೆಯನ್ನು ಗುರುತಿಸುವುದು ದೊಡ್ಡ ಸವಾಲು ಎಂದರು.
ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಶ್ರೀಶೈಲ ರಾಮಣ್ಣನವರ್, ಎಐಸಿಟಿಇ ಪ್ರತಿನಿಧಿ ಅಖಿಲೇಶ್ ಕುಮಾರ್ ಸಿಂಗ್, ವಿವಿಸಿಇ ಉಪಪ್ರಾಂಶುಪಾಲರಾದ ಶೋಭಾ ಶಂಕರ್, ಆದಿತ್ಯ ಸಿ.ಆರ್., ನೋಡಲ್ ಸೆಂಟರ್ ಪ್ರಭಾರಿ ನಿತಿನ್ ಕುಮಾರ್ ಮುಂತಾದವರಿದ್ದರು.
Mandya
ನಕಲಿ ಜನನ ಮತ್ತು ಮರಣ ಪತ್ರ ನೀಡಿವವರ ವಿರುದ್ಧ ಕ್ರಮ: ಡಾ.ಕುಮಾರ
ಮಂಡ್ಯ : ಜಿಲ್ಲೆಯಲ್ಲಿ ನಕಲಿ ಜನನ ಮತ್ತು ಮರಣ ಪತ್ರ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಜನನ ಮತ್ತು ಮರಣ ಸಮನ್ವ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಬೆಳೆ ಕಟಾವು ಪ್ರಯೋಗ ಹಾಗೂ ಕೃಷಿ ಅಂಕಿ ಅಂಶ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನನ ಮತ್ತು ಮರಣ ವನ್ನು ನೊಂದಣಿ ಮಾಡಲು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳಿಗೆ ಅಧಿಕಾರಿಯನ್ನು ನೀಡಲಾಗಿದೆ. ಜನನ ಹಾಗೂ ಮರಣ ಸಂಭವಿಸಿದ 30 ದಿನಗಳೊಳಗಾಗಿ ಜನನ ಮತ್ತು ಮರಣ ಪತ್ರ ಮಾಡಿಸಿಕೊಳತಕ್ಕದ್ದು. ಇಲ್ಲವಾದಲ್ಲಿ 30 ದಿನಗಳು ಮೀರಿದರೆ ತಹಶೀಲ್ದಾರ್ ಬಳಿ ತೆರಳಬೇಕು. 1 ವರ್ಷ ಮೀರಿದರೆ ಕೋರ್ಟ್ ನ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಬೇಕಾಗಿರುತ್ತದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಕುರಿತು ಅರಿವು ಇರುವುದಿಲ್ಲ. ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ಇದರ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಜನನ ಪತ್ರ ನೀಡಲು ಆಸ್ಪತ್ರೆಗಳಲ್ಲಿ ವಿಳಂಬವಾಗುತ್ತಿದೆ. ಸದರಿ ವರ್ಷ ಜಿಲ್ಲೆಯಲ್ಲಿ 1 ವರ್ಷ ಮೇಲ್ಪಟ್ಟ 30 ಮಕ್ಕಳಿಗೆ ಜನನ ಪ್ರಮಾಣ ಪತ್ರ ನೊಂದಣಿ ಆಗಿಲ್ಲ. ಯಾವುದೇ ಕಾರಣಕ್ಕೂ ಜನನ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗಬಾರದು, ಜನನ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಮಗುವಿನ ತಂದೆ ತಾಯಿ ಹೆಸರು ಹಾಗೂ ವಿಳಾಸವನ್ನು ಖಾತ್ರಿ ಪಡಿಸಿಕೊಂಡು ನೊಂದಣಿ ಮಾಡಬೇಕು ಎಂದು ಸೂಚಿಸಿದರು.
ಜನನ ಮತ್ತು ಮರಣ ಸಂಭವಿಸಿದ 30 ದಿನಗಳೊಳಗಾಗಿ ಪ್ರಮಾಣ ಪತ್ರ ಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯ ಮೂಲಕ ಜನರಿಗೆ ಜಾಗೃತಿ ಮೂಡಿಸಿ ಎಂದರು.
ಹೆಚ್ಚು ಇಳುವರಿ ಕೊಡುವ ನೂತನ ತಳಿಗಳ ಕುರಿತು ರೈತರಿಗೆ ಅರಿವು ಮೂಡಿಸಿ
ಜಿಲ್ಲೆಯ ರೈತರು ಸಾಂಪ್ರದಾಯಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ. ಸಾಂಪ್ರದಾಯಕ ಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕುಸಿಯುತ್ತದೆ. ರೈತರು ಮಿಶ್ರ ಬೆಳೆ ಮತ್ತು ಪರ್ಯಾಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಿಶ್ರಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ರೈತರಿಗೆ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಅರಿವು ಮೂಡಿಸಿ ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕೆಲವು ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನು ತಪ್ಪಾಗಿ ನಮೂದಿಸಲಾಗಿದೆ. ಅಧಿಕಾರಿಗಳು ಸಭೆ ನಡೆಸಿ ತಪ್ಪಾಗಿರುವ ಮಾಹಿತಿಯನ್ನು ತತ್ರಾಂಶದಿಂದ ತೆಗೆದುಹಾಕಿ. ಹಾಗೂ ಬೆಳೆ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ಸಲ್ಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಬೆಳೆ ಕಟಾವಿಗೆ ಸೂಕ್ತ ದರ ನಿಗಧಿ
ಭತ್ತ ಮತ್ತು ರಾಗಿ ಬೆಳೆ ಕಟಾವಿನ ವಿಚಾರದಲ್ಲಿ ದಲ್ಲಾಳಿಗಳು ಮನಸ್ಸು ಇಚ್ಛೆ ಧರ ನಿಗದಿ ಪಡಿಸಿ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಭತ್ತ ಮತ್ತು ರಾಗಿ ಕಟಾವಿಗೆ ಸೂಕ್ತ ದರ ನಿಗದಿಪಡಿಸಬೇಕು. ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರ ವಿಧಿಸುವ ಬೇಳೆ ಕಟಾವು ಯಂತ್ರಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಅಪರ ಪೊಲೀಸ್ ಅಧಿಕ ತಿಮ್ಮಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Mysore19 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore22 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Mandya2 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Special17 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
State23 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur22 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Chikmagalur22 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Mysore4 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
