Connect with us

Kodagu

ಕಾಡಾನೆ ದಾಳಿ – ವೃದ್ಧರಿಗೆ ತೀವ್ರ ಗಾಯ – ಜಿಲ್ಲಾಸ್ಪತ್ರೆಗೆ ದಾಖಲು

Published

on

ವೀರಾಜಪೇಟೆ: ಕೊಡಗು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷ ಮುಂದುವರೆದಿದ್ದು, ಆನೆದಾಳಿಯಿಂದ ವೃದ್ದರೋರ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲ್ಲೂಕಿನ ಕಡಂಗ ಮರೂರು ಗ್ರಾಮದಲ್ಲಿ‌ ನಡೆದಿದೆ.
ಕಡಂಗ ಮರೂರು ಗ್ರಾಮದ 73 ವರ್ಷ ನಿವಾಸಿ ಅಮ್ಮಂಡ ಸುಬ್ರಹ್ಮಣಿ ಮನೆಯಿಂದ ಹಾಲು ತರಲು ಅಂಗಡಿಗೆ ತೆರಳುವ ಸಂದರ್ಬದಲ್ಲಿ ಕಡಂಗ ಮರೂರು ಗ್ರಾಮದ ಭದ್ರಕಾಳಿ ದೇವಾಲಯದ ಸಮೀಪದ ತೋಟದಿಂದ ಏಕಾ ಏಕಿ ಬಂದ ಮೂರು ಕಾಡಾನೆಗಳು ಸುಬ್ರಮಣಿ ಮೇಲೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಕೈ ಕಾಲುಗಳಿಗೆ ತೀವ್ರ ಪಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Kodagu

ಮೂರ್ನಾಡು ಮಡಿಕೇರಿ ಮುಖ್ಯ ರಸ್ತೆಯಲ್ಲಿ ಕಾರು ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ-ಕಾರು ಚಾಲಕ ಗಂಭೀರ

Published

on

ನಾಪೋಕ್ಲು : ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಎಂಬಲ್ಲಿ ನಡೆದಿದೆ.

ಮೂರ್ನಾಡು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಹಾಗೂ ಮಡಿಕೇರಿ ಕಡೆಯಿಂದ ಮೂರ್ನಾಡು ಮಾರ್ಗವಾಗಿ ವಿರಾಜಪೇಟೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದ್ದು ಕಾರು ಚಾಲಕ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಸಅದಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Crime

ಗಾಂಜಾ ಮಾರಾಟ ಮಾಡುತ್ತಿದ್ದ ಅಸ್ಸಾಂ ವ್ಯಕ್ತಿ ಬಂಧನ

Published

on

ವಿರಾಜಪೇಟೆ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಅಸ್ಸಾಂ ರಾಜ್ಯದ ಅಬ್ದುಲ್ ಮಜೀದ್ (31) ಬಂಧಿತ ಆರೋಪಿ. ಆರೋಪಿಯನ್ನು 300 ಗ್ರಾಂ ಗಾಂಜಾದೊAದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುವ ಹಿನ್ನೆಲೆ ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವೀರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್ ಮೋಹನ್ ಕುಮಾರ್ ಹಾಗೂ ಇತರ ಸಿಬ್ಬಂದಿಗಳ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಡಿ. 4 ರಂದು ಕಡಂಗಮರೂರು-ಬೆಳ್ಳುಮಾಡು ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Continue Reading

Kodagu

ಅನುಮಾನಸ್ಪದವಾಗಿ ವೈದ್ಯನ ಮೃತದೇಹ ಪತ್ತೆ

Published

on

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 275 ರ
ಆನೆಕಾಡು ಬಳಿ ರಸ್ತೆ ಬದಿ ನಿಂತಿದ್ದ ಕಾರಿನಲ್ಲಿ ಪಿರಿಯಾಪಟ್ಟಣ ತಾಲೂಕು ಆಯುಷ್ ವೈದ್ಯಾಧಿಕಾರಿ ಡಾ.ಸತೀಶ್ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ.

ಮೂಲತಹ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದವರಾದ ಡಾ. ಸತೀಶ್ (47) ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಣಸುಾರು ಗ್ರಾಮದ ಆಯುರ್ವೇದ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದು ಪಟ್ಟಣದ ತಾಲೂಕು ಆಯುರ್ವೇದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕಡೆಯವವರಿಗೆ ಮಾಹಿತಿ ನೀಡಿದ್ದಾರೆ

 

 

Continue Reading

Trending