Connect with us

Mandya

*ಎಂಜಿನಿಯರಿಂಗ್ ಶಿಕ್ಷಣ ಭವಿಷ್ಯದ ವೃತ್ತಿಪರರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಇಟಿ ಜಂಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್*

Published

on

ಮಂಡ್ಯ: ಎಂಜಿನಿಯರಿಂಗ್ ಶಿಕ್ಷಣ ಭವಿಷ್ಯದ ವೃತ್ತಿಪರರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಿಇಟಿ ಜಂಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ತಿಳಿಸಿದರು.

 

ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ಲೇಸ್ ಮೆಂಟ್ ಸಭಾಂಗ ಣದಲ್ಲಿ ನೆಡೆದ ಪಿಇಎಸ್ಇ ಓಪನ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೆ.ವಿ.ಶಂಕರಗೌಡರ ದೂರದೃಷ್ಟಿಯಿಂದ ಸ್ಥಾಪನೆಯಾದ ಪ್ರತಿಷ್ಠಿತ ಪಿ.ಇ.ಎಸ್. ಇಂಜಿನಿ ಯರಿಂಗ್ ಕಾಲೇಜು ಇಂದು ತನ್ನ ಮುಕ್ತ ದಿನಾಚರಣೆ ಕಾರ್ಯಕ್ರಮ

ವನ್ನು ಯಶಸ್ವಿಯಾಗಿ ನಡೆಸಿತು.

 

ಈ ಕಾರ್ಯಕ್ರಮವು ಮಂಡ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಪೇಕ್ಷಿತ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶವನ್ನು ಒದಗಿಸಿತು.

 

ಕಾರ್ಯಕ್ರಮವು ಸಂಸ್ಥಾಪಕ ಅಧ್ಯಕ್ಷರಾದ ಪಿ.ಇ.ಟಿ. ಕೆ.ವಿ.ಶಂಕರ ಗೌಡ ಅವರು ಮಂಡ್ಯದ ಯುವಕರಿಗೆ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣವನ್ನು ಒದಗಿಸುವ ಗುರಿಯ ದೂರದೃಷ್ಟಿಗೆ ಸಾಕ್ಷಿಯಾಯಿತು.

 

ಕೆಸಿಇಟಿ ಸೆಲ್‌ನ ತಜ್ಞ ಉದಯಶಂಕರ್ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಅಧಿವೇಶನವನ್ನು ನಡೆಸಿದರು ಮತ್ತು ಕೆಸಿಇಟಿ ಕೌನ್ಸೆಲಿಂಗ್‌ಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಸಲಹೆಗಳನ್ನು ನೀಡಿದರು.

ನಿರೀಕ್ಷಿತ ವಿದ್ಯಾರ್ಥಿಗಳು ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು, ಪ್ರಸ್ತುತ ವಿದ್ಯಾರ್ಥಿಗಳು ಮತ್ತು ಪ್ರವೇಶ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ತಮ್ಮ ವೃತ್ತಿಜೀವನದ ಆಯ್ಕೆಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ಪಡೆದರು.

ಈ ಕಾರ್ಯಕ್ರಮವು ಹಲವಾರು ನವೀನ ವಿದ್ಯಾರ್ಥಿ ಯೋಜನೆಗಳನ್ನು ಪ್ರದರ್ಶಿಸಿತು, ಇದು ಕಾಲೇಜಿನ ಸೃಜನಶೀಲತೆ ಮತ್ತು ಸಂಶೋಧನೆಯ ಬದ್ಧತೆಯನ್ನು ಪ್ರತಿಬಿಂಬಿ

ಸುತ್ತದೆ.ವಿಭಾಗೀಯ ಮಳಿಗೆಗಳು ವಿವಿಧ ಎಂಜಿನಿಯರಿಂಗ್ ಕೋರ್ಸ್‌ಗಳು ಮತ್ತು ಪ್ರವೇಶ ಪ್ರಕ್ರಿಯೆಗಳ ಕುರಿತು ಮಾಹಿತಿಯನ್ನು ಒದಗಿಸಿದವು.

 

ಉದ್ಘಾಟನಾ ಸಮಾರಂಭದಲ್ಲಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎಚ್.ಎಂ.ನಂಜುಂಡಸ್ವಾಮಿ ಮತ್ತು ಉಪಪ್ರಾಂಶುಪಾಲ ಡಾ.ವಿನಯ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಬೈಕ್ ಅಪಘಾತ : ಇಂಜಿನಿಯರ್, ಮಧುಮಗಳ ದಾರುಣ ಸಾ*ವು

Published

on

ಮಂಡ್ಯ : ಸ್ಕೂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಹಸೆಮಣೆ ಏರಬೇಕಿದ್ದ ನವ ವಧುವೊಬ್ಬಳು ಮಸಣ ಸೇರಿದ ಧಾರುಣ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹೆಚ್ ಬಸಾಪುರ ಗೇಟ್ ಬಳಿ ಜರುಗಿದೆ.

ಬಾಳೆಹೊನ್ನಿಗ ಗ್ರಾಮದ ವಾಸಿ ಕೃಷ್ಣೇಗೌಡ ಎಂಬುವರ ಮಗಳಾದ 26 ವರ್ಷದ ಶರಣ್ಯ ಎಂಬಾಕೆಯೇ ಮೃತಪಟ್ಟ ದುರ್ದೈವಿಯಾಗಿದ್ದು, ಈಕೆ ಕನಕಪುರ ತಾಲ್ಲೂಕು ಕಾಡನಹಳ್ಳಿ ಗ್ರಾ.ಪಂ ಯಲ್ಲಿ ನರೇಗಾ ಯೋಜನೆಯ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇನ್ನು 20 ದಿನಗಳಲ್ಲಿ ಈಕೆಗೆ ಮದುವೆ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಸಹ ಆಗಿತ್ತು.
ಶನಿವಾರ ಬೆಳಿಗ್ಗೆ 10.30 ರ ಸಮಯದಲ್ಲಿ ಕಾರ್ಯನಿಮಿತ್ತ ಬಾಳೆಹೊನ್ನಿಗ ಗ್ರಾಮದಿಂದ ಹಲಗೂರು ಕಡೆಗೆ ತಮ್ಮ ಹೊಂಡಾ ಡಿಯೋದಲ್ಲಿ ಬರುತ್ತಿದ್ದ ಇವರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.

ತಲೆಗೆ ತೀವ್ರ ಪೆಟ್ಟು ಬಿದ್ದು ಶರಣ್ಯ ಸ್ಥಳದಲ್ಲೇ ಸಾವನ್ನಪ್ಪಿ ದ್ದಾರೆ ಎಂದು ತಿಳಿದುಬಂದಿದ್ದು,
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಲಗೂರು ಪೊಲೀಸರು ‌ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Mandya

ರಾಜ್ಯದಲ್ಲಿ ದೇವಲಯಗಳ ವಾಸ್ತುಶಿಲ್ಪ ಕಲೆ ಕಾಲೇಜಿನ ಅವಶ್ಯಕತೆ ಇದೆ : ಶಿಲ್ಪಿ ಅರುಣ್ ಯೋಗಿರಾಜ್

Published

on

ಮಂಡ್ಯ : ಶಿಲ್ಪಿಗಳು ಸರ್ಕಾರಿ ದೇವಸ್ಥಾನಗಳ ಅಥವಾ ಪುನರ್ ಸ್ಥಾಪನೆ ಕೆಲಸ ಮಾಡಬೇಕೆಂದರೆ ದೇವಾಲಯ ವಸ್ತು ಶಿಲ್ಪ ಕಲೆಯಲ್ಲಿ ಪದವಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ‌. ನಾವು ಕೆಲಸದಲ್ಲಿ ಏಷ್ಟೇ ಪರಿಣಿತರಾದರು ಪದವಿ ಪ್ರಮಾಣ ಪತ್ರವಿಲ್ಲದಿದ್ದರೆ ಕೆಲಸ ಮಾಡಲು ಅರ್ಹತೆ ಇರುವುದಿಲ್ಲ.‌ ಈ ಹಿನ್ನಲೆಯಲ್ಲಿ


ಕರ್ನಾಟಕದಲ್ಲಿ ದೇವಾಲಯದ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ರವರು ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಲ್ಪಕಲೆಯ ನಾಡು ಕಲೆಗಳ ಬೀಡು ಎಂದು ನಮ್ಮ ರಾಜ್ಯವನ್ನು ಕರೆಯುತ್ತೇವೆ, ನಮ್ಮಲ್ಲಿ ದೇವಾಲಯ ವಾಸ್ತುಶಿಲ್ಪಕಲೆ ಕಾಲೇಜು ತೆರೆದು ಪದವಿ ನೀಡಿದರೆ ಅನೇಕ ಕೆಲಸಗಳು ನಮ್ಮ ಕರ್ನಾಟಕ ಜನಕ್ಕೆ ದೊರೆಯುತ್ತದೆ ಎಂದರು.

ಶಿಲ್ಪಿಗಳು ಶತಮಾನಗಳಿಂದ ದೇಶಕ್ಕೆ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ ಅದರಲ್ಲಿ ಅಗ್ರಗಣ್ಯರು ಅಮರಶಿಲ್ಪಿ ಜಕಣಾಚಾರ್ಯರು ಅವರು ನಿರ್ಮಿಸಿರುವ ದೇವಾಲಯಗಳು ಇವತ್ತಿಗೂ ತನ್ನ ಕಲೆ ಮಾಸಿ ಹೋಗದಂತೆ ತನ್ನ ಅಸ್ತಿತ್ವ ಕಾಪಾಡಿಕೊಂಡಿವೆ, ಶಿಲ್ಪಿಗಳು ನಿರ್ಮಿಸುವ ವಿಗ್ರಹ ಅವರು ಸತ್ತ ನಂತರವೂ ಪೂಜೆಗೊಳಪಡುತ್ತದೆ, ನನಗೆ ಬೆಲೆ ಕೊಡುತ್ತಿರುವುದು ನಾನೊಬ್ಬ ಶಿಲ್ಪಿ ಎಂದೆಲ್ಲಾ ನಾನು ಮಾಡಿದ ಕೆಲಸಕ್ಕೆ ಅದರ ಹಿಂದೆ ಇರುವ ಕಲೆ ಶ್ರಮಕ್ಕೆ ಮತ್ತು ಅದರ ಇತಿಹಾಸಕ್ಕೆ ಎಂದರು.

ಶ್ರಮದ ಜೀವನಕ್ಕೆ ಸಾರ್ಥಕತೆ ಇದೆ ಅದಕ್ಕೆ ನಾನೇ ಉದಾಹರಣೆ, ಇವತ್ತಿನ ಆಧುನಿಕತೆ ವೈಜ್ಞಾನಿಕವಾಗಿ ಏಷ್ಟೇ ಮುಂದುವರಿದಿದ್ದರು ಮಾಡಲು ಅಸಾಧ್ಯವಾದ ಕೆಲಸಗಳನ್ನು ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಪೂರ್ವಜರು ಮಾಡಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರು ಮಾತನಾಡಿ,
ಅರುಣ್ ಯೋಗಿರಾಜ ತುಂಬಾ ಪರಿಶ್ರಮ ಪಟ್ಟು ಅಯೋಧ್ಯೆಯಲ್ಲಿ ಸುಂದರವಾದ ರಾಮ ಮೂರ್ತಿಯನ್ನು ಕೆತ್ತಿ ಇಡೀ ವಿಶ್ವದಲ್ಲೇ ಹೆಸರು ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.

ರೈತರ ಕುಡುಗೋಲು ತಟ್ಟಿಸುವುದರಿಂದ ಹಿಡಿದು ಸಾಮಾನ್ಯ ವ್ಯಕ್ತಿಗಳು ಮನೆ ನಿರ್ಮಾಣ ಮಾಡುವುದಕ್ಕೂ ನಿಮ್ಮ ಕಸುಬುಗಳ ಅಗತ್ಯವಿದೆ ಇಂತಹ ಉತ್ತಮ ಸೇವೆಯನ್ನು ಸಾಮಾಜಕ್ಕೆ ಸಲ್ಲಿಸುತ್ತಿರುವ ವಿಶ್ವಕರ್ಮ ಜನಾಂಗದ ಬಗ್ಗೆ ಗೌರವ ಇದೆ ಎಂದರು.

ಕಾರ್ಯಕ್ರಮದಲ್ಲಿ ನಗರರಸಭೆ ಅಧ್ಯಕ್ಷ ಎಂ .ಪಿ.ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ ವಿ ನಂದೀಶ್, ಸಾಹಿತಿ ಕೆ.ಪಿ ಸ್ವಾಮಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Continue Reading

Mandya

ಡಾ.ಬಿ.ಆರ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳಬೇಕಾಗಿದೆ: ನಿ.ನ್ಯಾನಾಗಮೋಹನ ದಾಸ್

Published

on

ಮಂಡ್ಯ : ಡಾ.ಬಿ.ಆರ್.ಅಂಬೇಡ್ಕರ್ ರವರು ಹಾಗೂ ಹಿರಿಯರು ದೇಶದ ಬೆಳವಣಿಗೆಗೆ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಸಂವಿಧಾನವು ಜಗತ್ತಿನ ಅತಿ ದೊಡ್ಡ ಸಂವಿಧಾನವಾಗಿದ್ದು, ಸಂವಿಧಾನ ರಚನೆಯಾಗಿ ಹಲವಾರು ವರ್ಷಗಳಾದರೂ ಅನೇಕರಿಗೆ ಸಂವಿಧಾನದ ರಚನೆ ಮತ್ತು ಅದರ ಮೂಲ ತತ್ವಗಳ ಬಗ್ಗೆ ತಿಳಿದೇ ಇಲ್ಲ ಎಂಬುದು ಯೋಚಿಸುವ ವಿಷಯವಾಗಿದೆ ಎಂದರು.

ಸಾರ್ವಜನಿಕರಿಗೆ ಉಪಯುಕ್ತವಾಗಲೆಂದು 2018 ರಲ್ಲಿ ನಾನು ‘ಸಂವಿಧಾನ ಓದು’ ಎಂಬ ಪುಸ್ತಕ ರಚಿಸಿದ್ದೇನೆ, ಕಳೆದ 6 ವರ್ಷದಲ್ಲಿ 2000 ಕ್ಕೂ ಹೆಚ್ಚು ಉಪನ್ಯಾಸವನ್ನು ಸಂವಿಧಾನದ ಬಗ್ಗೆ ನೀಡಿದ್ದೇನೆ. ಇಷ್ಟಾದರೂ ರಾಜ್ಯದ ಒಂದಿಷ್ಟು ಜನರನ್ನು ತಲುಪಲು ವಿಫಲರಾಗಿದ್ದೇವೆ. ಜಿಲ್ಲೆಯ ಯುವ ಜನರಿಗೆ ಸಂವಿಧಾನದ ಮಹತ್ವ ಮೂಲ ತತ್ವಗಳನ್ನು ತಿಳಿಸುವುದೇ ಈ ಶಿಬಿರದಲ್ಲಿ ಮೂಲ ಉದ್ದೇಶ. ಜೊತೆಗೆ ನಾವು ಅಭಿವೃದ್ಧಿಯತ್ತ ಸಾಗಲು ಇರುವ ಒಂದೇ ದಾರಿ ಎಂದರೆ ಅದು ಹಿರಿಯರು ಕೊಟ್ಟ ನಮ್ಮ ಸಂವಿಧಾನ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ಮಾತನಾಡಿ, ನಾನು ಯು.ಪಿ.ಎಸ್.ಸಿ. ಪರೀಕ್ಷೆ ಬರೆಯುವ ಸಮಯದಲ್ಲಿ ಮೊಟ್ಟ ಮೊದಲು ನಾನು ಓದಿದ್ದು ಸಂವಿಧಾನದ ಪುಸ್ತಕ. ಮೊದಲು ಓದುವಾಗ ಕಾನೂನಿನ ಭಾಷೆ ಅರ್ಥ ಮಾಡಿಕೊಳ್ಳಲು ಕಷ್ಟವಾಯಿತು. ಆದರೆ ಅದನ್ನು ಅರ್ಥ ಮಾಡಿಕೊಂಡಾಗ ಸಮಾಜದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬ ಸಂಗತಿಯನ್ನು ಅರಿತುಕೊಂಡೆ ಎಂದರು.

ನಮಗೆ ಕಷ್ಟ ಬಂದಾಗ ಯಾರೂ ನಮ್ಮ ಜೋತೆ ನಿಲ್ಲುವುದಿಲ್ಲ. ನಮ್ಮ ಬದುಕಿನ ಹೋರಾಟವನ್ನು ನಾವೇ ಮಾಡಬೇಕು. ಅದು ಜೀವನದ ತತ್ವ. ನಮ್ಮನ್ನು ಹೊರತು ಪಡಿಸಿ ನಮ್ಮನ್ನು ಕಾಪಾಡುವ ಶಕ್ತಿ ಯಾರಿಗಾದರೂ ಇದೆ ಎಂದರೆ ಅದು ಕೇವಲ ಭಾರತೀಯ ಸಂವಿಧಾನಕ್ಕೆ ಮಾತ್ರ ಎಂದು ಹೇಳಿದರು.

ಸಭೆಯಲ್ಲಿ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾಧು, ನಗರಸಭೆ ಮಾಜಿ ಅಧ್ಯಕ್ಷ ಸಿದ್ಧರಾಜು,ಮಹಿಳಾ ರೈತ ಮುಖಂಡರಾದ ಸುನಂದ ಜೈರಾಮ್, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಕೃಷ್ಣ.ಆರ್, ಕಾರ್ಮಿಕ ಮುಖಂಡರಾದ ಸಿ.ಕುಮಾರಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Continue Reading

Trending

error: Content is protected !!