Connect with us

Uncategorized

ಗ್ರಾಮೀಣ ಶಾಲೆಗಳ ಬೆಳವಣಿಗೆಗೆ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ : ಎಸಿ ಶ್ರೀನಿವಾಸ್ ಕರೆ

Published

on

ನಾಗಮಂಗಲ : ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಹಾಗೂ ಕಡ್ಡಾಯವಾಗಿ ಮಕ್ಕಳನ್ನು ಸರ್ಕಾರಿಗೆ ಶಾಲೆಗೆ ಸೇರಿಸುವಂತೆ ಉಪವಿಭಾಗಾಧಿಕಾರಿ ಶ್ರೀನಿವಾಸ್ ಕರೆ ನೀಡಿದರು.

ಅವರು ತಾಲೂಕಿನ ದೇವಲಾಪುರ ಹೋಬಳಿ ಕೇಂದ್ರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಿರಿ ಸಂಭ್ರಮ -25 ಶಾಲಾ ವಾರ್ಷಿಕೋತ್ಸವದ ನಗಾರಿ ಬಾರಿಸುವ ಮುಖಾಂತರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಶಿಕ್ಷಣ ಕೊಡಿಸುವ ಮುಖಾಂತರ, ಶಿಕ್ಷಣ ಆಸ್ತಿ ನೀಡುವ ಜೊತೆಗೆ ಜ್ಞಾನ ಸಂಪತ್ತು ಕೂಡ ಮೈಗೂಡಿಸಿಕೊಂಡು ಸಮಾಜ ಕಟ್ಟಲು ಅವರುಗಳು ಮಾದರಿಯಾಗಲು ಸಹಕಾರವಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ವಿಧ್ಯಾರ್ಜನೆಯ ಕೊಡಿಸಲು ಖಾಸಗಿ ಶಾಲೆಯ ವ್ಯಾಮೋಹಗಳನ್ನ ಬಿಟ್ಟು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಸೇರಿಸಿ ಅವರುಗಳ ಉಜ್ವಲ ಭವಿಷ್ಯಕ್ಕೆ ಹೊಸ ಮುನ್ನುಡಿ ಬರೆಯಲು ಪೋಷಕರು ಸಹಕರಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಅಪ್ಪಾಜಿಗೌಡ, ಮಂಡ್ಯ ಡಯಟ್ ಪ್ರಾಚಾರ್ಯ ಮಹೇಶ್, ತಾಲೂಕು ಶಿಕ್ಷಣಾಧಿಕಾರಿ ಯೋಗೇಶ್, ಸಂಪನ್ಮೂಲ ಸಮನ್ವಯಧಿಕಾರಿ ರವೀಶ್. ಜಿಲ್ಲಾ ಮತ್ತು ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೆ ವೈ ಮಂಜುನಾಥ್ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರಮೇಶ್ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರಮೇಶ್ ಉಪಸ್ಥಿತರಿದ್ದರು

Continue Reading

Uncategorized

ಮರಳಾಗಾಲ ಗ್ರಾಮದ ಜಗಧೀಶ್(53) ನಿಧನ

Published

on

ಶ್ರೀರಂಗಪಟ್ಟಣ : ತಾಲ್ಲೂಕಿನ ಮರಳಾಗಾಲ ಗ್ರಾಮದ ದಿ.ಮಹದೇವು ರವರ ಮಗ ಎಂ ಜಗದೀಶ್(53) ರವರು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಪ್ರಮಾಣದ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಕ್ರಿಯೆಯನ್ನು ಅವರ ಸ್ವ-ಗ್ರಾಮ ಮರಳಾಗಾಲದಲ್ಲಿ ಮದ್ಯಾಹ್ನ ನೆರವೇರಿಸುವುದಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

Continue Reading

Hassan

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ

Published

on

50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,

ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,

*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*

ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,

ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,

ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,

ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,

ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು

Continue Reading

Kodagu

ಉಡೋತ್ ಮೊಟ್ಟೆ : ಡಿ.6 & 7  ರಂದು ಕೊರಗಜ್ಜ ದೈವದ ನೇಮೋತ್ಸವ

Published

on

ಮಡಿಕೇರಿ : ಉಡೋತ್‌ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ.

ಡಿ.6ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು. ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ.

ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9900931278 , 9591304757೯೫೯೧೩೦೪೭೫೭, ೯೪೮೩೩೯೯೦೭೭ ಸಂಪರ್ಕಿಸಬಹುದಾಗಿದೆ.

Continue Reading

Trending

error: Content is protected !!