Connect with us

State

ಏ. 12 ರಂದು ಕೆ.ಎಸ್.ಈಶ್ವರಪ್ಪ ಅವರಿಂದ ನಾಮಪತ್ರ ಸಲ್ಲಿಕೆ

Published

on

ಶಿವಮೊಗ್ಗ: ಈಶ್ವರಪ್ಪ ಅವರಿಗೆ ಅನ್ಯಾಯ ಆಗಿದೆ. ಯಡಿಯೂರಪ್ಪ ಅನ್ಯಾಯ ಮಾಡಿದ್ದಾರೆ. ಅನ್ಯಾಯಕ್ಕೆ ಉತ್ತರ ಕೊಡ್ತೀವಿ ಎಂದು ಜನರೇ ಹೇಳುತ್ತಿದ್ದಾತೆಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿ  ಇಂದು ಬೂತ್‌ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭೆ ಕ್ಷೇತ್ರಕ್ಕೂ ಭೇಟಿ ನೀಡಿದ್ದೇನೆ. ಎಲ್ಲಾ ಕಡೆಗಳಲ್ಲಿಯು ದೆಹಲಿಯಿಂದ ಫೋನ್‌ ಬಂದಿತ್ತುನಾನು ಚುನಾವಣೆಗೆ ಸ್ಪರ್ಧೆ ಮಾಡ್ತೀನಿ ಅಂದ ಮೇಲೆ ಪೋನ್ ಬರುತ್ತಿದೆ. ದೆಹಲಿಯಿಂದ ತಮ್ಮ ಮಗನಿಗೆ ಫೋನ್‌ ಬಂದಿದೆ ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ದಾರೆ. ಯಾರು ಏನೇ ಹೇಳಿದರೂ ಈ ಭಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದಿದ್ದಾರೆ.

12 ರಂದು  ನಾಮಪತ್ರ ಸಲ್ಲಿಕೆ

ಕಾಂಗ್ರೆಸ್‌ ಪಕ್ಷ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದೆ. ಆದರೆ ನಾನು ಈ ಬಾರಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿರುವ ಈಶ್ವರಪ್ಪ ಇದೇ 12 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಅಯೋಗ್ಯ, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕ, ಈಡಿ ದೇಶದ ಜನ ಮೋದಿ ಮೋದಿ ಅಂತಿದ್ದಾರೆ. ಶಿವರಾಜ್ ತಂಗಡಗಿ ರಾಜೀನಾಮೆ ಕೊಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ತಂಗಡಗಿಯನ್ನು ಕಿತ್ತು ಬಿಸಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕಾರಿಪುರದಲ್ಲಿಯೇ ಹೆಚ್ಚು ಲೀಡ್‌

ಇಡೀ ಲೋಕಸಭಾ ಕ್ಷೇತ್ರದಲ್ಲಿ ರಾಘವೇಂದ್ರ ವಿರುದ್ಧ ಆಕ್ರೋಶ ವ್ಯಕ್ತ ಆಗಿದೆ. ಸಾಮಾನ್ಯ ಜನ ತಿರ್ಮಾನ ಮಾಡಿದ್ದಾರೆ ನನ್ನನ್ನು ಗೆಲ್ಲಿಸುತ್ತೇನೆ ಎಂದು. ನಾನು ಗೆದ್ದು ನಿಮ್ಮ ಋಣ ತೀರಿಸುತ್ತೇನೆ. ಶಿಕಾರಿಪುರದ ಜನರೇ ನನಗೆ ಹೇಳಿದ್ದು ಹೆಚ್ಚಿನ ಬಹುಮತವನ್ನು ಆ ಕ್ಷೇತ್ರದಿಂದ ನೀಡುವುದಾಗಿ ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದು ಗಂಡಸ್ತನ ತೋರಿಸಬೇಕು

ವಿಧಾನಸಭಾ ಚುನಾವಣೆಯಲ್ಲಿ ವರುಣ,ಶಿಕಾರಿಪುರ ಹೊಂದಾಣಿಕೆ ಆಯ್ತು. ಈಗ ಕಾಂಗ್ರೆಸ್ ನಲ್ಲಿ ಶಕ್ತಿ ಇಲ್ಲದ ಡಮ್ಮಿ ಕ್ಯಾಂಡಿಡೇಟ್ ಹಾಕಿಸಿಕೊಂಡು ಬಂದಿದ್ದಾರೆ. ಗಂಡಸುತನ ಇರೋ ವ್ಯಕ್ತಿ ಜೊತೆ ಮಧು ಬಂಗಾರಪ್ಪ ಹೊಂದಾಣಿಕೆ ಮಾಡಿಕೊಂಡರೆ ನಾನು ಎಲ್ಲಿಂದ ಟಿಕೆಟ್ ತರಲಿ? ಚುನಾವಣೆಯಲ್ಲಿ ಗೆದ್ದು ಗಂಡಸ್ತನ ತೋರಿಸಿಬೇಕು

25 ಸಾವಿರ ಮಂದಿ ಮತ್ತು ಶಕ್ತಿ ಪ್ರದರ್ಶನ

ಕನಿಷ್ಠ 25 ಸಾವಿರ ಜನರ ಬೆಂಬಲದೊಂದಿಗೆ 12 ನೇ ತಾರೀಖು ನಾಮಪತ್ರ ಸಲ್ಲಿಸುತ್ತೇನೆ, ಬ್ರಹ್ಮ ಬಂದ್ರೂ ಚುನಾವಣೆಯಲ್ಲಿ ನಾನು ನಿಲ್ಲುವವನೇ. ಹಿಂದುತ್ವದ ಜಯಕ್ಕಾಗಿ 12ನೇ ತಾರೀಖು ದೊಡ್ಡ ಸಂಖ್ಯೆಯಲ್ಲಿ ಜನ ಬರಬೇಕು. ನನ್ನ ಜೊತೆ ಬರುವರು ಸ್ವಾಭಿಮಾನಿಗಳು. ಅವರ ಜೊತೆ ಹೋಗುವವರು ಕೂಲಿ ಕಾರ್ಮಿಕರು. 12 ನೇ ತಾರೀಖು ಶಕ್ತಿ ಪ್ರದರ್ಶನ ಮಾಡೋಣ ಎಂದಿದ್ದಾರೆ.

ನಿಮಗೆ ಫೋನ್‌ ಬರಬಹುದು

ರಾಜ್ಯದಲ್ಲಿ ಬಿಜೆಪಿ ಪಕ್ಷ ಹಾಳಾಗುತ್ತಿದೆ .ಪಕ್ಷ ಕಟ್ಟಿದವರಿಗೆ ನೋವಾಗಿದೆ ಅದನ್ನು ಸರಿ ಮಾಡಲು ಸ್ಪರ್ಧೆ ಮಾಡುತ್ತಿದ್ದೇನೆ.

ನೀವು ಮನೆಗೆ ಹೋದಾಗ ನಿಮಗೆ ಪೋನ್ ಬರಬಹುದು. ಬೇರೇ ಬೇರೆ ರೂಪದ ಭಯಗಳು ನಿಮಗೆ ಬರಬಹುದು .ಹೆದರಿಕೊಂಡು ಕೆಲವರು ಮನೆಯಲ್ಲಿ ಇದ್ದಾರೆ ಎಂದರು

Continue Reading
Click to comment

Leave a Reply

Your email address will not be published. Required fields are marked *

State

ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ

Published

on

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ಮಾಡಿದ್ದೇನೆ. ಭೇಟಿಗೆ ಡಿಕೆಶಿ ಅವರು ಸಮಯ ನೀಡಿದ್ದರು. ಅದರಂತೆ ಇಂದು ಭೇಟಿ ಮಾಡಿದ್ದೇನೆ. ಮದುವೆಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.

ವೈಯಕ್ತಿಕ ವಿಚಾರಕ್ಕೆ ಮಾತ್ರ ನಾನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನು ಇಲ್ಲ. ಅಧಿಕಾರದಲ್ಲಿದ್ದಾಗ, ಸರ್ಕಾರ ಇದ್ದಾಗ ಪಕ್ಷ ಬೇಧ ಮರೆತು ಭೇಟಿ ಮಾಡುವುದು ಸಾಮಾನ್ಯ. ಅದರಂತೆ ಬಿಜೆಪಿಯ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಭೇಟಿ ಮಾಡಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

State

ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

Published

on

ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್ ಗುಡ್ ಫ್ರೈಡೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ,ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

ಪವಿತ್ರ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮೌಲ್ಯ ಮಾಪನದ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.ಈ ಬಗ್ಗೆ ಯು ಟಿ ಖಾದರ್ ರವರ ಬಳಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ ಶಿಕ್ಷಕಿಯರು ಸರಕಾರದ ಜೊತೆ ಮಾತುಕತೆ ನಡೆಸಿ ವಿನಾಯಿತಿ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.

ಈ ಬಗ್ಗೆ ಶಿಕ್ಷಣ ಇಲಾಖೆಯ ಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ ಈಸ್ಟರ್ ಗುಡ್ ಫ್ರೈಡೇ ದಿನಗಳಾದ ಗುರುವಾರ,ಶುಕ್ರವಾರ ಹಾಗೂ ಭಾನುವಾರ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು.

ಅದರಂತೆ ಶಿಕ್ಷಣ ಇಲಾಖೆಯು ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ವಿನಾಯಿತಿ ನೀಡಿ ಉಳಿದ ದಿನಗಳಲ್ಲಿ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

Continue Reading

State

ಸಿದ್ದರಾಮಯ್ಯ ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ: ಆರ್‌.ಅಶೋಕ್‌

Published

on

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Continue Reading

Trending

error: Content is protected !!