Crime
ಹೆತ್ತ ತಾಯಿ ಕೊಲ್ಲಲು ತಾನಿದ್ದ ಮನೆಗೆ ಬೆಂಕಿ ಇಟ್ಟ ದುಷ್ಟ
ಮೈಸೂರು :
ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…!
ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್.
ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ ಘಟನೆ.
ಶಿವಪ್ರಕಾಶ್ (26) ಮನೆಗೆ ಬೆಂಕಿ ಹಚ್ಚಿದ ಭೂಪ.
ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿರುವ ಕಲಾವತಿ.
ಕಲಾವತಿಗೆ ಇಬ್ಬರು ಮಕ್ಕಳು. ಈ ಪೈಕಿ ಎರಡನೇ ಪುತ್ರನೇ ಶಿವಪ್ರಕಾಶ್.
ಮತ್ತೊಂದು ಮದುವೆಯಾಗಿ ಪ್ರತ್ಯೇಕವಾಗಿರುವ ಪತಿ.
ಕುಡಿತದ ಚಟಕ್ಕೆ ಒಳಗಾಗಿರುವ ಶಿವಪ್ರಕಾಶ್ ನಿಂದ ಹಣಕ್ಕಾಗಿ ಕಿರುಕುಳ.
ಎರಡು ದಿನಗಳ ಹಿಂದೆ ತಾಯಿ ಬಳಿ ಹಣ ಕೇಳಿದ್ದ ಶಿವಪ್ರಕಾಶ್.
ಹಣ ಇಲ್ಲ ಎಂದಿದ್ದಕ್ಕೆ ತಾಯಿ ಮನೆ ಒಳಗೆ ಇದ್ದಾಗಲೇ ಹೊರಗಿನಿಂದ ಮನೆಗೆ ಬೆಂಕಿ ಹಚ್ಚಿರುವ ಶಿವಪ್ರಕಾಶ್.
ಈ ವೇಳೆ ಕಲಾವತಿಯನ್ನು ರಕ್ಷಿಸಿದ ಸ್ಥಳೀಯರು.
ಮನೆಯಲ್ಲಿದ್ದ 60 ಸಾವಿರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿ.
ದಕ್ಷಿಣ ಠಾಣೆ ಪೊಲೀಸರಿಂದ ಆರೋಪಿ ಶಿವಪ್ರಕಾಶ್ ಬಂಧನ.
Crime
ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಎಲ್ಎಲ್ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾ**ವು
ಹಾಸನ : ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಎಲ್ಎಲ್ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಮತ್ತೋರ್ವ ಯುವಕನಿಗೆ ಗಂಭೀರ ಗಾಯ
ಚಂದನ್ (22) ಮೃತ ಎಲ್ಎಲ್ಬಿ ವಿದ್ಯಾರ್ಥಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರಿಅಸಡೆ ಗ್ರಾಮದ ಬಳಿ ಘಟನೆ
ಪಕ್ಕದ ಮನೆಯ ಭರತ್ ಎಂಬುವವನ ಜೊತೆ KA-46-J-4594 ನಂಬರ್ನ ಬೈಕ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಚಂದನ್
ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ KA-13-M-2664 ನಂಬರ್ನ ಜೀಪ್ ನಡುವೆ ಸಂಭವಿಸಿದ ಅಪಘಾತ
ಸ್ಥಳದಲ್ಲೇ ಬೈಕ್ನಲ್ಲಿದ್ದ ಚಂದನ್ ಸಾವು
ಗಾಯಾಳು ಭರತ್ ಆಸ್ಪತ್ರೆಗೆ ರವಾನೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಚಿನ್ನದಂಗಡಿ ಕ್ಳಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕನ ಹ*ತ್ಯೆ..
ಮಂಡ್ಯ: ಚಿನ್ನದಂಗಡಿಗೆ ಕನ್ನ..ಕಳ್ಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕನ ಹತ್ಯೆ..ಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ
ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (60) ಕೊಲೆಯಾದ ವ್ಯಕ್ತಿ. ಹೋಟೆಲ್ ಪಕ್ಕದಲ್ಲೆ ಇದ್ದ ಮಹಾಲಕ್ಷ್ಮಿ ಜ್ಯುವೆಲರ್ಸ್ ಗೆ ಬೆಳಗ್ಗಿನ ಜಾವ 3 ಗಂಟೆ ವೇಳೆ ಕಳ್ಳರ ಗ್ಯಾಂಗ್ ಒಂದು ಎಂಟ್ರಿ ಕೊಟ್ಟು ಗ್ಯಾಸ್ ಕಟರ್ ಮೂಲಕ ಚಿನ್ನದಂಗಡಿ ಶಟರ್ ಓಪನ್ ಮಾಡಿ
ಚಿನ್ನಾಭರಣ ದೋಚಿದ್ದಾರೆ.

ಶಬ್ದ ಕೇಳಿ ಹೋಟೆಲ್ ನಿಂದ ಹೊರಬಂದ ಮಾದಪ್ಪ ಕಳ್ಳರ ಗ್ಯಾಂಗ್ ಅನ್ನು ನೋಡಿದ್ದಾರೆ.
ಈ ವೇಳೆ ಮಾದಪ್ಪನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಜೊತೆಗೆ ಹಣ ದೋಚಿ ಸಿಸಿ ಕ್ಯಾಮರಾ ಡಿವಿಆರ್ ಅನ್ನು ಖಾದಿಮರು ಹೊತ್ತೊಯ್ದಿದ್ದಾರೆ
ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಳದಂಡಿ ಹಾಗೂ ಕಿರುಗಾವಲು ಠಾಣಾ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಭಂದ ಕಿರುಗಾವಲು ಠಾಣೆಯಲ್ಲಿ ಪ್ರಕರಣ ದಾಖಲೂಗೊಂಡಿದ್ದು ಕಳ್ಳರಿಗಾಗಿ ಹುಡುಕಾಟ ನಡೆಸಲಾಗಿದೆ.
Crime
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ-ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಧರ್ಮಸ್ಥಳ ಗ್ರಾಮ ಮತ್ತು ಅಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಬುರುಡೆ ಪತ್ತೆಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ.
-
State11 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
State23 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Hassan7 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
National24 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Chikmagalur13 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan10 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Politics23 hours agoಡಿಕೆ ಬ್ರದರ್ಸ್ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಪೊಲೀಸರು
-
Mysore11 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
