Connect with us

State

ನಕಲಿ ಬಿಪಿಎಲ್ ಕಾರ್ಡ್ ಯಜಮಾನಿಯರಿಗೆ ‘ಗೃಹಲಕ್ಷ್ಮೀ’ಯ 6ನೇ ಕಂತಿನ ಹಣ ಸಿಗಲ್ಲ

Published

on

Gruhalakshmi Scheme: ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಲ್ಲಿ ಒಂದಾಗಿರುವ ಗೃಹಲಕ್ಷ್ಮಿ(Gruhalakshmi)ಯೋಜನೆಯ 5 ಕಂತು ಹಣಗಳು ಈಗಾಗಲೇ. ಮಹಿಳೆಯರ ಖಾತೆಗೆ ಜಮಾ ಆಗಿದೆ. ಇದೀಗ ಮುಂದಿನ ಕಂತಿನ ಹಣಕ್ಕಾಗಿ ಎಲ್ಲಾ ಯಜಮಾನಿಯರು ಕಾಯುತ್ತಿದ್ದಾರೆ. ಆದರೆ ಈ ನಡುವೆ ರಾಜ್ಯದ ಯಜಮಾನಿಯರಿಗೆ ಸರ್ಕಾರವು ಒಂದು ಅಘಾತಕಾರಿ ಸುದ್ದಿ ನೀಡಿದ್ದು ಈ ಮಹಿಳೆಯರಿಗೆ 6ನೇ ಕಂತಿನ ಗೃಹಲಕ್ಷ್ಮೀ ದುಡ್ಡು ಸಿಗುವುದಿಲ್ಲ ಎಂದು ಹೇಳಿದೆ.

ಹೌದು, ಸರ್ಕಾರ ಈಗಾಗಲೇ ಕೆಲವು ಮಹಿಳೆಯರಿಗೆ 6ನೇ ಕಂತಿನ ಹಣವನ್ನು ಜಮೆ ಮಾಡಿದೆ. ಇನ್ನು ಕೆಲವು ಮಹಿಳೆಯರಿಗೆ 6ನೇ ಕಂತಿನ ಹಣ ಜಮೆ ಯಾಗಿಲ್ಲ. ಯಾಕೆಂದರೆ ಗೃಹಲಕ್ಷ್ಮೀ ಯೋಜನೆಗೆ(Gruhalakshmi scheme)ಅರ್ಜಿ ಸಲ್ಲಿಕೆ ನೊಂದಣಿ ಮಾಡುವಾಗ ಕೆಲವೊಂದು ನಿಯಮ ಗಳನ್ನು ಮಹೀಳಾ ಮತ್ತು ಮಕ್ಕಳ ಇಲಾಖೆ ಮಾಹಿತಿ ನೀಡಿತ್ತು‌ ಆದರೆ ಕೆಲವೊಂದು ಮಹೀಳೆಯರು ಈ ನಿಮಯಗಳನ್ನು ಉಲ್ಲಂಘಿಸಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಇದನ್ನೆಲ್ಲಾ ಸರಕಾರ ಈಗ ಪರಿಶೀಲನೆ ಮಾಡಿದ್ದು ಗೃಹಲಕ್ಷ್ಮೀ ಯೋಜನೆಯ ಮಾನದಂಡಗಳನ್ನು ಉಲ್ಲಂಘನೆ ಮಾಡಿರುವ ಮಹಿಳೆಯರ ಖಾತೆಗೆ ಹಣ ಜಮಾ ಮಾಡದಿರಲು ಕ್ರಮ ಕೈಗೊಂಡಿದೆ.

ಜೊತೆಗೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಪಡೆಯುತ್ತಿರುವರಲ್ಲಿ ಕೆಲವರು ಸರ್ಕಾರಕ್ಕೆ ಮೋಸ ಮಾಡಿದ್ದಾರೆ. ಅದೇನೆಂದರೆ ಈಗಾಗಲೇ ಸಾವಿರಾರು ನಕಲಿ ಬಿಪಿಎಲ್‌ ಕಾರ್ಡು (BPL Card) ಗಳನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಹೀಗಾಗಿ ಇಂತಹ ನಕಲಿ ಕಾರ್ಡುಗಳನ್ನು ನೀಡಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ, ಇದುವರೆಗೆ ಹಣವನ್ನು ಪಡೆದುಕೊಳ್ಳುತ್ತಿರುವ ಜನರಿಗೆ ಸರಕಾರ ಬಿಸಿ ಮುಟ್ಟಿಸಿದೆ.

ಅಂದರೆ ಸರ್ಕಾರವು ಸರಕಾರಿ ನೌಕರರಿಗೆ, ನಾಲ್ಕು ಚಕ್ರದ ವಾಹನ ಹೊಂದಿದವರಿಗೆ ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದೆ. ಇದೇ ಮಾನದಂಡವನ್ನೇ ಇದೀಗ ಗೃಹಲಕ್ಷ್ಮೀ ಯೋಜನೆಗೆ ಪ್ರಯೋಗಿಸುತ್ತಿದ್ದು, ಈ ರೀತಿ ನಕಲಿ ಕಾರ್ಡ್ ಬಳಸಿ ಗೃಹಲಕ್ಷ್ಮೀ ಲಾಭ ಪಡೆಯುವವರನ್ನು ಸರ್ಕಾರ ಪತ್ತೆ ಹಚ್ಚಿ ಪಟ್ಟಿ ಬಿಡುಗಡೆ ಮಾಡಿದೆ.

Continue Reading
Click to comment

Leave a Reply

Your email address will not be published. Required fields are marked *

Education

ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ : ಆಕರ್ಷಕ ಸಂಬಳ

Published

on

IPPB Recruitment 2025 : ಕೇಂದ್ರ ಸರ್ಕಾರಿ ಉದ್ಯೋಗಗಳಿಗಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಗೆ ಸಂಬಂದಿಸಿದ ಹುದ್ದೆಗಳ ವಿವರ, ಅರ್ಹತೆಗಳ ವಿವರ, ಸಂಬಳದ ವಿವರ, ವಯೋಮಿತಿ ವಿವರ, ಅರ್ಜಿ ಶುಲ್ಕ ಸೇರಿದಂತೆ ಇತ್ಯಾದಿ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ :

• ಡೆಪ್ಯೂಟಿ ಜನರಲ್ ಮ್ಯಾನೇಜರ್ – 01 ಹುದ್ದೆ
• ಚೀಪ್ ಆಪರೇಟಿಂಗ್ ಆಫೀಸರ್ – 01 ಹುದ್ದೆ
• ಚೀಪ್ HR ಆಫೀಸರ್ – 01 ಹುದ್ದೆ
• ಜನರಲ್ ಮ್ಯಾನೇಜರ್ – 01 ಹುದ್ದೆ
• ಚೀಫ್ ಕಾಂಪ್ಲೆಯನ್ಸ್ ಆಫೀಸರ್ – 01 ಹುದ್ದೆ

ಶೈಕ್ಷಣಿಕ ವಿದ್ಯಾರ್ಹತೆಗಳ ವಿವರ :

• ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ ಹುದ್ದೆಗೆ ಸಿಎ ಮುಗಿಸಿರಬೇಕು.
• ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದಾದರೂ ಒಂದು ಪದವಿ ಮುಗಿಸಿರಬೇಕು.
• ಚೀಫ್ ಕಾಂಪ್ಲೆಯನ್ಸ್ ಆಫೀಸರ್ ಹುದ್ದೆಗೆ ಸಿಎ/ MBA, ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
• ಚೀಪ್ HR ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು HR ವಿಭಾಗದಲ್ಲಿ MBA ಮುಗಿಸಿರಬೇಕು.
• ಚೀಪ್ ಆಪರೇಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದಾದರೂ ಒಂದು ಪದವಿ ಮುಗಿಸಿರಬೇಕು.

ಸಂಬಳ ಎಷ್ಟು ಸಿಗಲಿದೆ?

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಾರ್ಷಿಕ ವೇತನ ಪ್ಯಾಕೇಜ್ ರೂ. 3,16,627 ರಿಂದ ರೂ. 4,36,271 ರವರೆಗೆ ಸಿಗಲಿದೆ.

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – 150ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 750ರೂ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22 ಆಗಸ್ಟ್ 2025

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ – https://ibpsonline.ibps.in/ippbljul25/

Continue Reading

State

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ದೂರುದಾರನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು SIT ಸಿದ್ಧತೆ

Published

on

ಬೆಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ  ಸಂಬಂಧಿಸಿದಂತೆ ದೂರುದಾರನ  ಹಿಂದಿರುವ ವ್ಯಕ್ತಿಗಳಿಗೆ ವಿಶೇಷ ತನಿಖಾ ತಂಡ  ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ  ಪ್ರಕರಣ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ನಡೆಸಿತ್ತು. 15 ದಿನಗಳ ಕಾಲ ಭಾರೀ ಮಳೆಯ ಮಧ್ಯೆಯೂ 17 ಪಾಯಿಂಟ್‌ಗಳಲ್ಲಿ ಉತ್ಖನನ ನಡೆಸಿದರೂ ದೂರುದಾರ ಮಾಸ್ಕ್ ಮ್ಯಾನ್ ಹೇಳಿದ್ದ ಪಾಯಿಂಟ್‌ 6 ಬಿಟ್ಟು ಬೇರೆ ಕಡೆ ಮೂಳೆಗಳು ಹೂತಿದ್ದ ಮೂಳೆಗಳು ದೊರೆತಿಲ್ಲ.

ಮೂಳೆಗಳು ಸಿಗದ ಕಾರಣ ಉತ್ಖನನ ಕಾರ್ಯವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿದೆ. ದೂರುದಾರ ವ್ಯಕ್ತಿ ಇನ್ನೂ 13 ಪಾಯಿಂಟ್ ತೋರಿಸುತ್ತೇನೆ. ಅಲ್ಲೂ ಉತ್ಖನನ ಮಾಡಿ ಎಂದು ಒತ್ತಾಯಿಸಿದರೂ ಅಧಿಕಾರಿಗಳು ಆತನನ್ನೇ ಎಸ್‌ಐಟಿ ಕಚೇರಿಯಲ್ಲಿ ಕೂರಿಸಿ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಎಸ್‌ಐಟಿ ಅಧಿಕಾರಿಗಳು, ಬುರುಡೆ ಕಥೆ ಹೇಳಿರುವ ದೂರುದಾರನ ಬಾಯಿ ಬಿಡಿಸುವ ಪ್ರಯತ್ನ ನಡೆಸಿದ್ದಾರೆ. ಆತ ನೀಡಿರುವ ದೂರು ಸುಳ್ಳು ಅನ್ನೋ ನಿರ್ಧಾರಕ್ಕೆ ಬಂದ ಎಸ್‌ಐಟಿ ಅಧಿಕಾರಿಗಳು ಆತನನ್ನೇ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪ್ಲಾನ್ ಮಾಡಿದ್ದಾರೆ. ಆತನ ಹಿಂದೆ ಯಾರೋ ಇದ್ದು ಇದನ್ನೆಲ್ಲ ಮಾಡಿಸಿದ್ದಾರೆ ಎಂಬ ಶಂಕೆ ಮೂಡಿದ್ದು, ಅನೇಕ ವ್ಯಕ್ತಿಗಳಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಲಿದ್ದಾರೆ.

ಈ ಮಧ್ಯೆ ದೂರುದಾರ ವ್ಯಕ್ತಿ ಪ್ರಾರಂಭದಲ್ಲಿ ನ್ಯಾಯಾಲಯಕ್ಕೆ ಹಾಜರುಡಿಸಿದ ತಲೆ ಬುರುಡೆಯ ತನಿಖೆಯನ್ನೂ ಅಧಿಕಾರಿಗಳು ಮುಂದುವರಿಸಿದ್ದಾರೆ. ಈ ತಲೆ ಬುರುಡೆ ಪುರುಷನದ್ದು ಅನ್ನೋದು ತನಿಖೆ ವೇಳೆ ಬಹಿರಂಗಗೊಂಡಿದ್ದು ಈಗ ಆ ತಲೆ ಬುರುಡೆಯ ಮಹಜರು ನಡೆಸಲು ಎಸ್‌ಐಟಿ ತಯಾರಿ ನಡೆಸಿದೆ.
Continue Reading

State

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಇನ್ನಿಲ್ಲ*

Published

on

ಬೆಂಗಳೂರು : ಆಗಸ್ಟ್ 14ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ತಾನೆ ಉಪಮುಖ್ಯಮಂತ್ರಿ, ಡಿಕೆ ಶಿವಕುಮಾ‌ರ್ ಅವರು ಕಲ್ಬುರ್ಗಿಯಲ್ಲಿ ಶರಣಬಸವಪ್ಪ ಅಪ್ಪಾಜಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದರು.

ಡಿಸಿಎಂ ಡಿಕೆ ಶಿವಕುಮಾ‌ರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ. ವಕ್ಸ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, “ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು” ಎಂದು ಹೇಳಿದ್ದರು. ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಡಿ ಕೆ ಶಿವಕುಮಾ‌ರ್ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.

Continue Reading

Trending

error: Content is protected !!