Kodagu
10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ
ಮಡಿಕೇರಿ : 2024 25 ನೇ ಸಾಲಿನ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶುಕ್ರವಾರದಂದು ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲೆ ಸವಿತ ಎಂ.ಜಿ ಹಾಗೂ ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಅಧಿಕಾರಿ ಎನ್.ಎ ಪೊನ್ನಮ್ಮ ವಹಿಸಿಕೊಂಡರು.
9ನೇ ತರಗತಿ ಕುಮಾರಿ ನಿಧಿ ಟಿ.ಪಿ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭಗೊಂಡಿತು. ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು. ಪ್ರಾಂಶುಪಾಲೆ ಸವಿತ ಎಂ.ಜಿಹಾಗೂ ಆಡಳಿತ ಅಧಿಕಾರಿ ಎನ್.ಎ ಪೊನ್ನಮ್ಮ ಮಕ್ಕಳಿಗೆ ಶುಭ ಹಾರೈಸಿ ಮಕ್ಕಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಿದರು.
ಕುಮಾರಿ ಲಿಷ್ಮಾ ಹಾಗೂ ಕುಮಾರಿ ಪುಣ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಮಾಸ್ಟರ್ ತರುಣ್ 9ನೇ ತರಗತಿ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
Kodagu
ಡಿ. 21ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ: ಹೈಪ್ಲೈಯರ್ಸ್ ತಂಡದ ವತಿಯಿಂದ ಪಂದ್ಯಾವಳಿ ಆಯೋಜನೆ
ಪೊನ್ನಂಪೇಟೆ : ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಹ ಪ್ರಾಯೋಜಕತ್ವದಲ್ಲಿ 4ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2025 ಅನ್ನು ಇದೇ ಡಿ.21ರಿಂದ 25ರವರೆಗೆ ಆಯೋಜಿಸಲಾಗಿದೆ. ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಈ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವಿ. ಬಾಡಗ ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಅವರು ತಿಳಿಸಿದ್ದಾರೆ.
ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ. ಬಾಡಗ ಗ್ರಾಮದಲ್ಲಿ 4ನೇ ಭಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು.

ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿರುವ ರಂಜು ಪೂಣಚ್ಚ, ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಕಳೆದ ಮೂರು ವರ್ಷ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಸಂಪೂರ್ಣವಾಗಿ ದಾನಿಗಳ ನೆರವಿನಿಂದಲೇ ಪಂದ್ಯಾವಳಿ ಜರುಗಲಿದ್ದು, ಗ್ರಾಮಸ್ಥರು ಮತ್ತು ಪ್ರಾಯೋಜಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿಯೇ ಹೈ ಫ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಕಳೆದ 3 ವರ್ಷಗಳ ಹಿಂದೆ ಹುಟ್ಟು ಹಾಕಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಹಾಕಿ ಪಂದ್ಯಾವಳಿಯನ್ನು ನಿರಂತರವಾಗಿ ಆಯೋಜಿಸುವುದರಿಂದ ಹಾಕಿ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಂತಾಗುತ್ತದೆ. ಅಲ್ಲದೆ, ಗ್ರಾಮೀಣ ಮಟ್ಟದ ಕ್ರೀಡಾಕೂಟಗಳಿಂದ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಂತಾಗುತ್ತದೆ ಎಂದು ರಂಜು ಪೂಣಚ್ಚ ವಿವರಿಸಿದರು.
ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕ್ರೀಡಾ ಕಾರ್ಯದರ್ಶಿ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಕಳೆದ ಬಾರಿ ಆಯೋಜಿಸಿದ್ದ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 18 ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ 20ಕ್ಕೂ ಹೆಚ್ಚಿನ ತಂಡಗಳನ್ನು ನಿರೀಕ್ಷಿಸಲಾಗಿದೆ. ಈಗಾಗಲೇ 12 ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಆಸಕ್ತ ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ಇದೇ ಡಿಸೆಂಬರ್ 15ರಂದು ಕೊನೆಯ ದಿನವಾಗಿರುತ್ತದೆ. ಡಿ. 16ರಂದು ಪಂದ್ಯಾವಳಿಯ ಟೈಸ್ ಅನ್ನು ಅಂತಿಮಗೊಳಿಸಲಾಗುವುದು. ಪಂದ್ಯಾವಳಿಯ ಕುರಿತ ಹೆಚ್ಚಿನ ಮಾಹಿತಿಗಾಗಿ 9481883738 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷರಾದ ಮಳವಂಡ ಗಿರೀಶ್ ಮುದ್ದಯ್ಯ, ಕಾರ್ಯದರ್ಶಿ ಮಚ್ಚಾರಂಡ ಪ್ರವೀಣ್ ತಿಮ್ಮಯ್ಯ, ಕೋಶಾಧಿಕಾರಿ ಚೇಮಿರ ನಂದಾ ನಂಜಪ್ಪ ಉಪಸ್ಥಿತರಿದ್ದರು.
Kodagu
ಏಕವಚನ ಬಳಕೆ : ಸಿಎಂ ನಡೆಗೆ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ಆಕ್ಷೇಪ
ಮಡಿಕೇರಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರ ಕುರಿತು ಏಕವಚನ ಪ್ರಯೋಗ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಮುಖ್ಯಮಂತ್ರಿಗಳು ಕೇಂದ್ರದ ಮಹಿಳಾ ಸಚಿವರ ಕುರಿತು ಏಕವಚನ ಬಳಕೆ ಮಾಡುವ ಮೂಲಕ ಸಚಿವ ಸ್ಥಾನಕ್ಕೆ ಮತ್ತು ಸಚಿವರ ಹಿರಿತನಕ್ಕೆ ಅಗೌರವ ತೋರಿದ್ದಾರೆ. ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಿ ಗೌರವಿಸುವ ಈ ನಾಡಿನಲ್ಲಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ಮತ್ತು ನಾಡಿನ ಸಂಸ್ಕೃತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ತಾವು ಅಧಿಕಾರದಲ್ಲಿದ್ದ ಅವಧಿಯಲ್ಲೆಲ್ಲ ಹಲವು ಭಾರಿ ಏಕವಚನ ಪ್ರಯೋಗಿಸಿ ಹಿರಿಯರು ಹಾಗೂ ಮಹಿಳೆಯರಿಗೆ ಮುಜುಗರ ಉಂಟು ಮಾಡಿದ್ದಾರೆ. ಇವರ ನಡೆಯ ಕುರಿತು ಆಕ್ಷೇಪಗಳು ವ್ಯಕ್ತವಾದರೂ ತಪ್ಪನ್ನು ತಿದ್ದಿಕೊಳ್ಳುವ ಬದಲು ’ನಾನು ಗ್ರಾಮೀಣ ಸೊಗಡಿನವನು’ ಎಂದು ಸಮರ್ಥಿಸಿಕೊಳ್ಳುತ್ತಲೇ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿಗಳು ಗ್ರಾಮೀಣ ಸೊಗಡಿನವರೇ ಆಗಿದ್ದರೆ ತಮ್ಮ ಪಕ್ಷದ ಅಧಿನಾಯಕ ಹಾಗೂ ನಾಯಕಿಯ ಕುರಿತು ಕೂಡ ಏಕವಚನ ಬಳಸಲಿ ಎಂದು ಅನಿತಾ ಪೂವಯ್ಯ ಸವಾಲು ಹಾಕಿದ್ದಾರೆ.
ಇನ್ನು ಮುಂದಾದರೂ ಮಹಿಳೆಯರಿಗೆ ಮತ್ತು ಅವರು ಹೊಂದಿರುವ ಹುದ್ದೆಗೆ ಗೌರವ ನೀಡುವ ಮೂಲಕ ಮುಖ್ಯಮಂತ್ರಿಗಳು ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇದೇ ವರ್ತನೆ ಮುಂದುವರೆದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Kodagu
ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಸಿಎಂರೊಂದಿಗೆ ಸಂವಾದ ನಡೆಸಿದ ಎ.ಎಸ್.ಪೊನ್ನಣ್ಣ
ಬೆಳಗಾವಿ/ಮಡಿಕೇರಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಈ ಅಧಿವೇಶನದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದ್ದಾರೆ.
-
Mandya20 hours agoಡಿ.17ಕ್ಕೆ ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಜಿಲ್ಲಾಧಿಕಾರಿಗಳಿಂದ ಸ್ಧಳ ಪರಿಶೀಲನೆ
-
Mysore19 hours agoಮೈಸೂರು ದಸರಾ: ಮಹಿಳಾ ಉದ್ಯಮಿ ಉಪಸಮಿತಿಗೆ ಎಸ್. ರಂಗನಾಥ ಸಂಚಾಲಕರಾಗಿ ನೇಮಕ
-
Hassan23 hours agoಜಿಲ್ಲಾ ಮಟ್ಟದ ಅಂತರಶಾಲಾ ಚೆಸ್ ಸ್ಪರ್ಧೆ ಯಶಸ್ವಿ
-
Kodagu24 hours agoಸಂವಿಧಾನದ ರಕ್ಷಣೆ ನಮ್ಮೆಲ್ಲರ ಹೊಣೆ : ಗಾಯತ್ರಿ ನರಸಿಂಹ
-
Hassan22 hours agoಎಂಸಿಇ ಕಾಲೇಜಿನ ಸಿವಿಲ್ ವಿಭಾಗದಲ್ಲಿ ಸ್ಪೋರ್ಟ್ಸ್ ವಿಜೇತರಿಗೆ ಸನ್ಮಾನ
-
Mysore2 minutes agoಡೆವಿಲ್ ಚಿತ್ರದ ಯಶಸ್ಸಿಗಾಗಿ ಕುಂಬಳಕಾಯಿ ದೃಷ್ಟಿ ತೆಗೆದು ಪ್ರಾರ್ಥಿಸಿದ ಅಭಿಮಾನಿಗಳು
-
Hassan4 hours agoವಾಲಿಬಾಲ್ ಪಂದ್ಯಾವಳಿಯಲ್ಲಿ ಜಗ್ಗಿಬಾಯ್ಸ್ ಪ್ರಥಮ ಸ್ಥಾನ
-
Hassan18 hours agoಡಿ.21ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಬಹಿರಂಗ ಸಭೆ: ಎಸ್.ವರಲಕ್ಷ್ಮೀ
