Connect with us

Chikmagalur

ಸಾಲಬಾಧೆಯಿಂದ ಭದ್ರಾ ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ

Published

on

ಚಿಕ್ಕಮಗಳೂರು : ಸಾಲಬಾಧೆಯಿಂದ ಮನನೊಂದ ರೈತನೋರ್ವ ಭದ್ರಾ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮೆಣಸೂರಿನಲ್ಲಿ ನಡೆದಿದೆ.
ಮೃತನನ್ನು ಮೆಣಸೂರು ಗ್ರಾಮದ ನಿವಾಸಿ ೩೨ ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ. ಮೃತ ಸಂತೋಷ್ ಖಾಸಗಿಯವರಿಂದ ೪ ಲಕ್ಷ ರೂ. ಪಡೆದಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಕಳೆದ ಸೋಮವಾರದಿಂದ ಸಂತೋಷ್ ನಾಪತ್ತೆಯಾಗಿದ್ದರು. ಸಂತೋಷ್ ಬೈಕ್ ಪತ್ತೆಯಾದ ಹಿನ್ನೆಲೆಯಲ್ಲಿ ಮೆಣಸೂರು ಬಳಿಯ ಭದ್ರಾ ಹಿನ್ನೀರಿನಲ್ಲಿ ಶೊಧ ಕಾರ್ಯ ನಡೆಸಲಾಗಿದ್ದು, ಸಂತೋಷ್ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ. ನರಸಿಂಹರಾಜಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ಅಸ್ಸಾಂನಿಂದ ಬಂದಿರುವ ಕಾರ್ಮಿಕನಿಂದ ಕಾಫಿ ತೋಟದಲ್ಲಿ ಗೋ ಹತ್ಯೆ

Published

on

ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಗೋ ಹತ್ಯೆ ಮಾಡಿದ ಘಟನೆ ನಡೆದಿದ್ದು, ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿರುವ ಕಾರ್ಮಿಕರಿಂದ ಕೃತ್ಯ ನಡೆದಿದೆ.

ಗೋವುಗಳನ್ನು ಕದ್ದು ತೋಟದಲ್ಲಿ ಹತ್ಯೆ ಮಾಡಲಾಗಿದೆ.ಖಚಿತ ಮಾಹಿತಿ ಮೇರೆಗೆ ಪೊಲೀಸರಿಂದ ದಾಳಿ ನಡೆದಿದ್ದು ಆರೋಪಿಗಳು-ಗೋಮಾಂಸ ಪಕ್ಷಕ್ಕೆ ಪಡೆಯಲಾಗಿದೆ.
ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರಿನ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು,ಎರಡು ದನಗಳನ್ನು ಹತ್ಯೆ ಮಾಡಿ, ಮಾಂಸ ಹಂಚಿಕೆ ವೇಳೆಯಲ್ಲಿ ದಾಳಿ ಆಗಿದೆ.

ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿಆರೋಪಿಗಳಾದ ಅನ್ಸರ್, ಮಜೀದ್, ಮುಜಾಮಿಲ್ ನನ್ನು ಬಂಧಿಸಿದ್ದಾರೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

Continue Reading

Chikmagalur

ಬೆಂಗಳೂರಿನಲ್ಲಿ ಅಪಘಾತ: ಚಂದ್ರೇಗೌಡ ಸಹಿತ ಮೂವರು ಸ್ಥಳದಲ್ಲೇ ಸಾ*ವು

Published

on

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ರಸ್ತೆ ಅಪಘಾತದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಿ.ಎಸ್.ಚಂದ್ರೇಗೌಡ ಸೇರಿದಂತೆ ಮೂವರು ಸ್ಥಳದಲ್ಲೇ ಸಾವಪ್ಪಿದ್ದಾರೆ.

ಬೆಂಗಳೂರಿನಿಂದ ಕಾರಿನಲ್ಲಿ ಬರುತ್ತಿರುವಾಗ ನಾಗಮಂಗಲದ ಸಮೀಪದ ನಾಗತಿಹಳ್ಳಿಯಲ್ಲಿ ಚಾಲನಕ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಅಪ್ಪಳಿಸಿ ಉರುಳಿಬಿದ್ದಿದ್ದು, ವಾಹನ ಚಾಲನೆ ಮಾಡುತ್ತಿದ್ದ ಚಂದ್ರೇಗೌಡ (60) ಅವರ ಪತ್ನಿ ಸರೋಜಮ್ಮ (55) ಜಯಮ್ಮ (70) ಅವರುಗಳು ಅಸುನೀಗಿದ್ದಾರೆ ಹೇಳಲಾಗಿದೆ.


ಕೆಲವು ದಿನಗಳ ಹಿಂದೆ ಹಾಂಕಾಂಗ್ ಪ್ರವಾಸ ಕೈಗೊಂಡಿದ್ದರು. ನಿನ್ನೆ ಬೆಂಗಳೂರಿನಲ್ಲಿರುವ ಅಳಿಯನ ಮನೆಯಲ್ಲಿ ಉಳಿದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಚಿಕ್ಕಮಗಳೂರು ನಗರಕ್ಕೆ ಆಗಮಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಂಬಂಧಿಕರಿಗೆ ವಿಷಯ ತಿಳಿಯುತ್ತಿದ್ದಂತೆ ಮೃತ ದೇಹಗಳನ್ನು ತರಲು ಬೆಂಗಳೂರಿಗೆ ತೆರಳಿದ್ದಾರೆ.

ಮೃತ ಡಿ.ಎಸ್.ಚಂದ್ರೇಗೌಡ ಜಿಲ್ಲಾಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಸಿಡಿಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎರಡು ಬಾರಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ತಾಲೂಕು ಕನಕ ಸಂಘದ ತಾಲೂಕು ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

Continue Reading

Chikmagalur

ಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು

Published

on

ಚಿಕ್ಕಮಗಳೂರು : ಜಿಲ್ಲೆಯ ಬಾಳೆಹೊನ್ನೂರಿನಲ್ಲಿ  ಮತ್ತೊಂದು ಕಾಡಾನೆ ದಾಳಿ ಪ್ರಕರಣ ದಾಖಲಾಗಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ಆದರೆ ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಮಿಕ ಶಿವಮೊಗ್ಗ ಜಿಲ್ಲೆ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ.

ತೋಟದಲ್ಲೇ ಮೂರು ಕಾಡಾನೆಗಳು ಬೀಡು ಬಿಟ್ಟಿವೆ. ಆನೆ ದಾಳಿಯಿಂದ ಪ್ರಜ್ಞೆ ತಪ್ಪಿರೋ ಕೂಲಿ ಕಾರ್ಮಿಕ, ಬದುಕಿರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಘಟನೆಯಿಂದ ಕಾರ್ಮಿಕನ ಎಡಗೈ ನಡುಗುತ್ತಿದ್ದು ಪ್ರಜ್ಞಾಹೀನನಾಗಿದ್ದಾರೆ.

ಕಾರ್ಮಿಕ ಗಣಪತಿಯನ್ನು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಇನ್ನೂ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

Trending

error: Content is protected !!