Connect with us

Cinema

ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ

Published

on

ಬೆಂಗಳೂರು : 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನಡೆದ ‘ಫಿಯರ್‌ಲೆಸ್ ಫಿಲ್ಮ್ ಮೇಕಿಂಗ್ʼ (ಭಯವಿಲ್ಲದ ಚಲನಚಿತ್ರ ನಿರ್ಮಾಣ) ಸಂವಾದದಲ್ಲಿ ಬಾಲಿವುಡ್‌ ನಟ-ನಿರ್ದೇಶಕ ಅನುರಾಗ್‌ ಕಶ್ಯಪ್‌ ಭಾಗವಹಿಸಿ, ಸದ್ಯದ ಸಿನಿಮಾ ಪ್ರವೃತ್ತಿ, ರಾಜಕೀಯ ಮತ್ತು ತಂತ್ರಜ್ಞಾನದ ಬಗ್ಗೆ ಮುಕ್ತವಾಗಿ ಮಾತನಾಡಿದರು. ಖ್ಯಾತ ಚಿತ್ರ ವಿಮರ್ಶಕ ಭಾರದ್ವಾಜ್ ರಂಗನ್ ಈ ಸಂವಾದವನ್ನು ನಡೆಸಿಕೊಟ್ಟರು.

ʼಇಂದಿನ ದಿನಗಳಲ್ಲಿ ‘ಗ್ಯಾಂಗ್ಸ್ ಆಫ್ ವಾಸೇಪುರ್’ ಅಥವಾ ‘ಬ್ಲ್ಯಾಕ್ ಫ್ರೈಡೇ’ ನಂತಹ ಚಿತ್ರಗಳನ್ನು ಮಾಡುವುದು ಅಸಾಧ್ಯ. ಕೆಲವು ವಿಷಯಗಳು ರಾಜಕೀಯವಾಗಿ ಸೂಕ್ಷ್ಮವಾಗಿ ಪರಿಣಮಿಸಿದ್ದು, ವಿವಾದಗಳಿಗೆ ಕಾರಣವಾಗುತ್ತದೆ’ ಎಂದು ಅನುರಾಗ್‌ ಕಶ್ಯಪ್‌ ಅಭಿಪ್ರಾಯಪಟ್ಟಿದ್ದಾರೆ.

 

ʼಇರಾನ್ ಅಥವಾ ರಷ್ಯಾದಂತಹ ರಾಷ್ಟ್ರಗಳ ನಿರ್ದೇಶಕರು ನಮಗಿಂತ ಹೆಚ್ಚಿನ ನಿರ್ಬಂಧಗಳ ನಡುವೆಯೂ ಸಿನಿಮಾ ಮಾಡುತ್ತಿದ್ದಾರೆ. ಭಾರತೀಯ ನಿರ್ದೇಶಕರು ಅವರಿಂದ ಸ್ಫೂರ್ತಿ ಪಡೆಯಬೇಕುʼ ಎಂದು ಹೇಳಿದರು.

 

ಇತ್ತೀಚಿನ ‘ಧುರಂಧರ್’ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಅನುರಾಗ್ ಕಶ್ಯಪ್, ʼಇದು ಧೈರ್ಯಶಾಲಿ ಮುಖ್ಯವಾಹಿನಿ ಚಿತ್ರಕ್ಕೆ ಉತ್ತಮ ಉದಾಹರಣೆ. ನನಗೆ ಈ ಸಿನಿಮಾ ಇಷ್ಟವಾಯಿತು, ಆದರೆ, ಕೆಲವು ಸಿದ್ಧಾಂತಗಳು ಇಷ್ಟವಾಗಲಿಲ್ಲ. “ಇದು ಹೊಸ ಭಾರತ” ಎಂಬ ಸಂಭಾಷಣೆ ಮತ್ತು ಒಂದು ಸುದೀರ್ಘ ರಾಜಕೀಯ ಏಕಪಾತ್ರಾಭಿನಯ ಸೇರಿದಂತೆ ಒಟ್ಟು ಮೂರು ದೃಶ್ಯಗಳು ಚಿತ್ರಕ್ಕೆ ಅನಗತ್ಯವಾಗಿದ್ದವು; ಇವುಗಳಿಲ್ಲದಿದ್ದರೂ ಚಿತ್ರದ ಪ್ರಭಾವ ಕುಗ್ಗುತ್ತಿರಲಿಲ್ಲʼ ಎಂದು ಅವರು ಅಭಿಪ್ರಾಯಪಟ್ಟರು.

ಸಿನಿಮಾಗಳನ್ನು ‘ಪ್ರಚಾರ’ ಅಥವಾ ‘ಪ್ರೊಪಗಾಂಡಾ’ ಎಂದು ಕರೆಯುವುದೇ ಒಂದು ರೀತಿಯ ಪ್ರಚಾರ ಎಂದ ಕಶ್ಯಪ್, ʼಹಾಲಿವುಡ್‌ನ ಮಾರ್ವೆಲ್ ಚಿತ್ರಗಳು ಅಮೆರಿಕದ ಶ್ರೇಷ್ಠತೆಯನ್ನು ಸಾರುತ್ತವೆ, ಆದರೆ ಯಾರೂ ಅದನ್ನು ಆ ದೃಷ್ಟಿಕೋನದಲ್ಲಿ ಟೀಕಿಸುವುದಿಲ್ಲʼ ಎಂದರು.

 

ಕನ್ನಡದ ‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆ ಮಾತನಾಡಿದ ಅವರು, ಅದನ್ನು ಅತ್ಯಂತ ಧೈರ್ಯಶಾಲಿ ಪ್ರಯತ್ನ ಎಂದು ಶ್ಲಾಘಿಸಿದರು. ʼಟೀಸರ್ ವಿರುದ್ಧ ವ್ಯಕ್ತವಾದ ಆಕ್ರೋಶವು ನಮ್ಮ ಸಾಂಸ್ಕೃತಿಕ ಬೂಟಾಟಿಕೆಯನ್ನು ತೋರಿಸುತ್ತದೆ. ತೆರೆಯ ಮೇಲೆ ಪುರುಷ ನಟರು ಶರ್ಟ್ ಇಲ್ಲದೆ ಕಾಣಿಸಿಕೊಂಡರೆ ಅಥವಾ ಅತಿಯಾದ ಪೌರುಷ ತೋರಿಸಿದರೆ ಯಾರೂ ಪ್ರಶ್ನಿಸುವುದಿಲ್ಲ. ಆದರೆ ಒಬ್ಬ ಮಹಿಳೆ ತನ್ನ ಲೈಂಗಿಕತೆಯನ್ನು ಆಚರಿಸಿದರೆ ಅದನ್ನು ಒಪ್ಪಲು ಕಷ್ಟವಾಗುತ್ತದೆʼ ಎಂದು ಅವರು ಬೇಸರ ವ್ಯಕ್ತಪಡಿಸಿದರು.

 

ಕನ್ನಡ ಸಾಹಿತ್ಯದ ಬಗ್ಗೆ ತಮಗಿರುವ ಪ್ರೀತಿಯನ್ನು ವ್ಯಕ್ತಪಡಿಸಿದ ಅನುರಾಗ್ ಕಶ್ಯಪ್, ಖ್ಯಾತ ಬರಹಗಾರ ವಿವೇಕ್ ಶಾನಭಾಗ್ ಅವರ ‘ಘಾಚರ್ ಘೋಚರ್’ ಕಾದಂಬರಿಯನ್ನು ಆಧರಿಸಿ ಕನ್ನಡ ಚಿತ್ರವೊಂದನ್ನು ನಿರ್ಮಿಸುತ್ತಿರುವುದಾಗಿ ಬಹಿರಂಗಪಡಿಸಿದರು. ಈ ಚಿತ್ರವು ಸದ್ಯ ಬರವಣಿಗೆ ಹಂತದಲ್ಲಿದ್ದು, ಮುಂದೆ ಹಿಂದಿಯಲ್ಲೂ ಬರಲಿದೆ. ಇದರ ನಿರ್ದೇಶಕರು ಮತ್ತು ಕಲಾವಿದರ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದರು.

ಇಂದಿನ ಪ್ರೇಕ್ಷಕರು ಮೊಬೈಲ್ ಫೋನ್‌ಗಳಲ್ಲಿ ಸಿನಿಮಾ ನೋಡಲು ಇಷ್ಟಪಡುತ್ತಿದ್ದಾರೆ ಮತ್ತು ನಿಧಾನಗತಿಯ ಸಿನಿಮಾಗಳಿಗೆ ಗಮನ ಸೆಳೆಯುವುದು ಕಷ್ಟವಾಗುತ್ತಿದೆ ಎಂದ ಅವರು, ʼಇದು ತಂತ್ರಜ್ಞಾನದ ಬದಲಾವಣೆಯ ಫಲವೇ ಹೊರತು ಪ್ರೇಕ್ಷಕರ ತಪ್ಪಲ್ಲʼ ಎಂದು ಅವರು ವಿಶ್ಲೇಷಿಸಿದರು.

 

ರಾಜಕೀಯ ಚಿತ್ರಗಳ ಬಗ್ಗೆ ಪ್ರತಿಕ್ರಿಯಿಸುತ್ತಾ, ʼಹಿಟ್ಲರ್ ಸತ್ತ ನಂತರವಷ್ಟೇ ಜರ್ಮನಿಯಲ್ಲಿ ಅವನ ವಿರುದ್ಧ ಸಿನಿಮಾಗಳು ಬಂದವು. ಪ್ರತಿಯೊಂದಕ್ಕೂ ಸಮಯ ಬರಬೇಕುʼ ಎಂದು ಮಾರ್ಮಿಕವಾಗಿ ನುಡಿದರು.

Continue Reading

Cinema

‘ಟಾಕ್ಸಿಕ್’ ತಬಾಹಿ ಹಾಡು ವೈರಲ್: ಯಶ್ ಅವರ ಹಳೆಯ ರೊಮ್ಯಾಂಟಿಕ್ ದೃಶ್ಯದ ಹೇಳಿಕೆ ಮತ್ತೆ ಚರ್ಚೆಯಲ್ಲಿ

Published

on

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡು ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ಹಾಡಿನಲ್ಲಿರುವ ರೊಮ್ಯಾಂಟಿಕ್ ಹಾಗೂ ಬೋಲ್ಡ್ ದೃಶ್ಯಗಳು ಸಿನಿಪ್ರಿಯರ ಗಮನ ಸೆಳೆದಿದ್ದು, ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ಜೋಡಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.

ಈ ಬೆಳವಣಿಗೆಯ ನಡುವೆ, ಯಶ್ ಅವರು ಈ ಹಿಂದೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆ ಮತ್ತೆ ವೈರಲ್ ಆಗಿದೆ. ಆ ಸಂದರ್ಭದಲ್ಲಿ ಮಾತನಾಡಿದ್ದ ಅವರು, ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸುವುದು ತಮ್ಮ ಪಾಲಿಗೆ ಅತ್ಯಂತ ಸವಾಲಿನ ಕೆಲಸ ಎಂದು ಹೇಳಿದ್ದರು.

“ಜನರು ನೀವು ರೊಮ್ಯಾಂಟಿಕ್ ದೃಶ್ಯಗಳನ್ನು ಚೆನ್ನಾಗಿ ಮಾಡುತ್ತೀರಿ ಎಂದು ಹೇಳಿದಾಗ ನನಗೆ ಅಚ್ಚರಿಯಾಗುತ್ತದೆ. ಅಂತಹ ದೃಶ್ಯಗಳನ್ನು ಮಾಡುವಾಗ ನಾನು ತುಂಬಾ ನರ್ವಸ್ ಆಗುತ್ತಿದ್ದೆ. ನಾನು ರೊಮ್ಯಾಂಟಿಕ್ ಸೀನ್ ಮಾಡುತ್ತಿದ್ದಾಗ ರಾಧಿಕಾ ಸೇರಿದಂತೆ ಸೆಟ್‌ನಲ್ಲಿದ್ದವರು ನನ್ನನ್ನು ನೋಡಿ ನಗುತ್ತಿದ್ದರು,” ಎಂದು ಯಶ್ ಹೇಳಿದ್ದರು.

ಇದೇ ವೇಳೆ, ತಮ್ಮ ವೈಯಕ್ತಿಕ ನಿಲುವಿನ ಬಗ್ಗೆ ಮಾತನಾಡಿದ್ದ ಅವರು, “ನನ್ನ ಪೋಷಕರೊಂದಿಗೆ ಕುಳಿತು ನೋಡಲು ಮುಜುಗರವಾಗುವ ದೃಶ್ಯಗಳಲ್ಲಿ ನಾನು ನಟಿಸುವುದಿಲ್ಲ. ಏಕೆಂದರೆ ಅಂತಹ ದೃಶ್ಯಗಳು ಸಾಮಾನ್ಯ ಪ್ರೇಕ್ಷಕರಿಗೂ ಅಸಹಜ ಭಾವನೆ ಉಂಟುಮಾಡಬಹುದು,” ಎಂದು ತಿಳಿಸಿದ್ದರು.

ಆದರೆ, ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡಿನಲ್ಲಿನ ಆಪ್ತ ದೃಶ್ಯಗಳ ಹಿನ್ನೆಲೆಯಲ್ಲಿ, ಯಶ್ ಅವರ ಈ ಹಿಂದಿನ ಹೇಳಿಕೆ ಮತ್ತೆ ಚರ್ಚೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅವರ ಹಳೆಯ ಮತ್ತು ಇಂದಿನ ಪಾತ್ರದ ಆಯ್ಕೆಯನ್ನು ಹೋಲಿಕೆ ಮಾಡುತ್ತಿದ್ದು, ಇನ್ನೂ ಕೆಲವರು ಚಿತ್ರದ ಕಥೆ ಮತ್ತು ಪಾತ್ರದ ಅಗತ್ಯಕ್ಕೆ ಅನುಗುಣವಾಗಿ ನಟರು ವಿಭಿನ್ನ ರೀತಿಯ ದೃಶ್ಯಗಳಲ್ಲಿ ಅಭಿನಯಿಸುವುದು ಸಹಜ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಆದಾಗ್ಯೂ, ಈ ವಿಚಾರದ ಕುರಿತು ಯಶ್ ಅವರು ಯಾವುದೇ ಹೊಸ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Continue Reading

Cinema

ಟಿವಿ TRP ಪ್ರಕಟಣೆ ತಾತ್ಕಾಲಿಕ ಸ್ಥಗಿತ: ವಾಹಿನಿಗಳು, ಜಾಹೀರಾತು ಕ್ಷೇತ್ರಕ್ಕೆ ಹೊಸ ಸವಾಲು

Published

on

ಬೆಂಗಳೂರು: ಭಾರತೀಯ ಟೆಲಿವಿಷನ್ ಉದ್ಯಮಕ್ಕೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC) ತನ್ನ ಪರವಾನಗಿ (ಲೈಸೆನ್ಸ್) ನವೀಕರಣ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಎಲ್ಲಾ ಟಿವಿ ಚಾನೆಲ್‌ಗಳ ಟೆಲಿವಿಷನ್ ರೇಟಿಂಗ್ ಪಾಯಿಂಟ್ (TRP) ಪ್ರಕಟಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯ (MIB) ಜಾರಿಗೆ ತಂದಿರುವ ಹೊಸ Television Ratings Policy-2026 ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮನರಂಜನೆ, ಸುದ್ದಿ, ಕ್ರೀಡೆ, ಸಿನಿಮಾ, ಪ್ರಾದೇಶಿಕ ಹಾಗೂ ಇನ್‌ಫೊಟೇನ್ಮೆಂಟ್ ಸೇರಿದಂತೆ ಎಲ್ಲ ವಿಭಾಗಗಳ ವಾಹಿನಿಗಳ ವಾರದ ವೀಕ್ಷಕರ ಅಂಕಿ-ಅಂಶಗಳು ಸದ್ಯ ಲಭ್ಯವಾಗುವುದಿಲ್ಲ.

TRP ಎನ್ನುವುದು ಟಿವಿ ಕಾರ್ಯಕ್ರಮಗಳು ಮತ್ತು ವಾಹಿನಿಗಳ ವೀಕ್ಷಕರ ಸಂಖ್ಯೆಯನ್ನು ಅಳೆಯುವ ಅಧಿಕೃತ ಮಾನದಂಡವಾಗಿದೆ. ಇದೇ ಅಂಕಿ-ಅಂಶಗಳ ಆಧಾರದ ಮೇಲೆ ಜಾಹೀರಾತು ದರ ನಿಗದಿ, ಸ್ಪಾನ್ಸರ್‌ಶಿಪ್ ಒಪ್ಪಂದಗಳು, ಹೊಸ ಕಾರ್ಯಕ್ರಮಗಳ ಯೋಜನೆ ಹಾಗೂ ವಾಹಿನಿಗಳ ಸ್ಪರ್ಧಾತ್ಮಕ ಸ್ಥಾನಮಾನ ನಿರ್ಧಾರವಾಗುತ್ತದೆ.

TRP ಪ್ರಕಟಣೆ ಸ್ಥಗಿತಗೊಂಡಿರುವುದರಿಂದ ಜಾಹೀರಾತುದಾರರು, ಪ್ರಸಾರ ಸಂಸ್ಥೆಗಳು, ಮೀಡಿಯಾ ಏಜೆನ್ಸಿಗಳು ಹಾಗೂ ಹೂಡಿಕೆದಾರರು ನಿರ್ಧಾರ ಕೈಗೊಳ್ಳುವಲ್ಲಿ ಅನಿಶ್ಚಿತತೆಯನ್ನು ಎದುರಿಸುವ ಸಾಧ್ಯತೆ ಇದೆ. ವಾರದ TRP ಆಧರಿಸಿ ಜಾಹೀರಾತು ಬಜೆಟ್ ಹಂಚಿಕೆ ಮಾಡುವ ಬ್ರ್ಯಾಂಡ್‌ಗಳು ಈಗ ಪರ್ಯಾಯ ಡೇಟಾ ಹಾಗೂ ಡಿಜಿಟಲ್ ವೀಕ್ಷಕರ ಅಂಕಿ-ಅಂಶಗಳನ್ನು ಹೆಚ್ಚಾಗಿ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಾಹಿನಿಗಳಿಗೂ ಈ ಬೆಳವಣಿಗೆ ಸವಾಲಾಗಿ ಪರಿಣಮಿಸಿದೆ. ಹೊಸ ಧಾರಾವಾಹಿಗಳು, ರಿಯಾಲಿಟಿ ಶೋಗಳು ಹಾಗೂ ಕಾರ್ಯಕ್ರಮಗಳ ಸಮಯ ಬದಲಾವಣೆಯಂತಹ ನಿರ್ಧಾರಗಳನ್ನು ಸಾಮಾನ್ಯವಾಗಿ TRP ಆಧರಿಸಿ ಕೈಗೊಳ್ಳಲಾಗುತ್ತಿತ್ತು. ಇದೀಗ ಸಾಮಾಜಿಕ ಜಾಲತಾಣಗಳ ಪ್ರತಿಕ್ರಿಯೆ, ಡಿಜಿಟಲ್ ವೀಕ್ಷಣೆ ಹಾಗೂ ಆಂತರಿಕ ವಿಶ್ಲೇಷಣೆಗಳನ್ನೇ ಹೆಚ್ಚು ಅವಲಂಬಿಸಬೇಕಾಗಿದೆ.

ಭಾರತೀಯ ಟಿವಿ ಉದ್ಯಮದಲ್ಲಿ TRP ಪ್ರಕಟಣೆ ಈ ಹಿಂದೆ 2015ರಲ್ಲಿ BARC ವ್ಯವಸ್ಥೆ ಜಾರಿಗೆ ಬಂದ ವೇಳೆ, 2019ರಲ್ಲಿ TRAI ಹೊಸ ಟ್ಯಾರಿಫ್ ಆದೇಶದ ನಂತರ ಹಾಗೂ 2020ರಲ್ಲಿ TRP ಹಗರಣದ ಹಿನ್ನೆಲೆಯಲ್ಲಿ ಕೆಲವು ವಿಭಾಗಗಳಿಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಆದರೆ ಈ ಬಾರಿ ಸರ್ಕಾರದ ಹೊಸ ನಿಯಮಾವಳಿಯಡಿ ಪರವಾನಗಿ ನವೀಕರಣ ಕಡ್ಡಾಯವಾಗಿರುವುದರಿಂದ ಪ್ರಕಟಣೆ ನಿಲ್ಲಿಸಲಾಗಿದೆ.

BARCಗೆ ಹೊಸ ಪರವಾನಗಿ ಯಾವಾಗ ಸಿಗಲಿದೆ ಎಂಬ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ TRP ವರದಿಗಳು ಯಾವಾಗ ಮರುಪ್ರಾರಂಭವಾಗಲಿವೆ ಎಂಬ ಪ್ರಶ್ನೆಗೆ ಸದ್ಯ ಸ್ಪಷ್ಟ ಉತ್ತರ ಇಲ್ಲ.

Continue Reading

Cinema

ಆಪ್ತನ ಅಗಲಿಕೆಗೆ ಕಂಗಾಲಾದ ನಟಿ ಕೃಷಿ ತಾಪಂಡ: ಗೆಳೆಯ ವೈಶಾಕ್ ನೆನೆದು ಭಾವುಕ ಪೋಸ್ಟ್!

Published

on

ಬೆಂಗಳೂರು : ಇತ್ತೀಚೆಗೆ ನಟಿ ಕೃಷಿ ತಾಪಂಡ ಅವರು ವಾಸವಿದ್ದ ಫ್ಲ್ಯಾಟ್‌ನಲ್ಲೇ ಅವರ ಆಪ್ತ ಗೆಳೆಯ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಬಗ್ಗೆ ನಟಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.

“ಇಂತಹದ್ದೊಂದು ಬರಹವನ್ನು ಬರೆಯಬೇಕಾಗಿ ಬರುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ನನಗೆ ಈ ಸಮಯದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ ನೀಡುವ ಮಾನಸಿಕ ಶಕ್ತಿ ಇಲ್ಲದಿದ್ದರೂ, ಸುತ್ತಲೂ ಕೇಳಿಬರುತ್ತಿರುವ ನಿರಂತರ ಊಹಾಪೋಹಗಳು ಮತ್ತು ಪ್ರಶ್ನೆಗಳಿಂದಾಗಿ ಈ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಅತ್ಯಂತ ಆಪ್ತರಾಗಿದ್ದ, ನನ್ನನ್ನು ರಕ್ಷಿಸುತ್ತಿದ್ದ ವ್ಯಕ್ತಿಯನ್ನು ಕಳೆದುಕೊಂಡ ನೋವಿನಲ್ಲಿ ನಾನಿದ್ದೇನೆ. ಈ ನಷ್ಟದಿಂದ ಹೊರಬರಲು ನನಗೆ ಸಾಧ್ಯವಾಗುತ್ತಿಲ್ಲ” ಎಂದು ಪೋಸ್ಟ್ ಮಾಡಿದ್ದಾರೆ.

“ಅವರ ಕುಟುಂಬ ಮತ್ತು ಆಪ್ತರು ಈ ದೊಡ್ಡ ನಷ್ಟವನ್ನು ಅರಗಿಸಿಕೊಳ್ಳಲು ಹೆಣಗಾಡುತ್ತಿರುವಾಗ, ನಿರಂತರವಾಗಿ ಕಥೆಗಳನ್ನು ಸೃಷ್ಟಿಸಲಾಗುತ್ತಿದೆ. ಕೆಲವು ಮಾಧ್ಯಮಗಳು ಗೌರವಯುತವಾಗಿ ನಡೆದುಕೊಂಡರೆ, ಇನ್ನು ಕೆಲವು ಕೇವಲ ರಿಯಾಕ್ಷನ್‌ಗಾಗಿ ಒತ್ತಾಯಿಸುತ್ತಿವೆ. ನೀವು ಹೇಗಿದ್ದೀರಾ ಎಂದು ಕೇಳುವ ಬದಲು ನಿಮ್ಮ ರಿಯಾಕ್ಷನ್ ಏನು ಎಂದು ಕೇಳುತ್ತಿದ್ದಾರೆ” ಎಂದಿದ್ದಾರೆ.

“ಇಲ್ಲಿ ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ. ಸ್ನೇಹಿತರು ತಮ್ಮ ಆಪ್ತನನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಂದು ಅನಗತ್ಯ ಪ್ರಶ್ನೆ, ಊಹೆ ಮತ್ತು ವದಂತಿಗಳು ಇಲ್ಲಿ ಉಳಿದು ನೋವು ಅನುಭವಿಸುತ್ತಿರುವವರ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ನಮಗೆ ಶಾಂತಿಯಿಂದ ದುಃಖಿಸಲು ಬಿಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.

“ಸದ್ಯಕ್ಕೆ ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಉತ್ತರಿಸುವ ಶಕ್ತಿ ನನಗಿಲ್ಲ. ಆದರೆ ನಿಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಚಿರಋಣಿ. ಯಾರಿಗಾದರೂ ಬದುಕಲು ಕಾರಣ ನೀಡಲು ಸಾಧ್ಯವಾಗದಿದ್ದರೆ, ಕನಿಷ್ಠ ಅವರು ಭರವಸೆ ಕಳೆದುಕೊಳ್ಳುವಂತೆ ಮಾಡಬೇಡಿ. ದಯವಿಟ್ಟು ಎಲ್ಲರೂ ದಯೆ ಮತ್ತು ಕರುಣೆಯನ್ನು ಆಯ್ಕೆ ಮಾಡಿಕೊಳ್ಳಿ. ದಯವಿಟ್ಟು ಇದನ್ನು ಇಷ್ಟಕ್ಕೇ ನಿಲ್ಲಿಸಿ” ಎಂದು ಕೇಳಿಕೊಂಡಿದ್ದಾರೆ.

Continue Reading

Trending

error: Content is protected !!