Uncategorized
ಸಂಸದ ಪ್ರಜ್ವಲ್ ರೇವಣ್ಣ ಮೇಲೆ ದಾಖಲಾಯ್ತು ಎಫ್.ಐ.ಆರ್!

ಹಾಸನ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ರ ಅಡಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು ಶೀಘ್ರವೇ ತನಿಖಾ ತಂಡ ಪ್ರಜ್ವಲ್ ಅವರ ಹುಡುಕಾಟಕ್ಕೆ ಮುಂದಾಗಲಿದೆ ಎನ್ನಲಾಗುತ್ತಿದೆ
Uncategorized
ಯುವ ಜನಾಂಗಕೆ ಪುನೀತ್ ರಾಜಕುಮಾರ್ ಪ್ರೇರಣೆ: ನಜರಬಾದ್ ನಟರಾಜ್

ಮೈಸೂರು: ಪುನೀತ್ ರಾಜಕುಮಾರ್ 50ನೇ ಹುಟ್ಟು ಹಬ್ಬದ ಪ್ರಯುಕ್ತ ಸೋಮವಾರ ಸಾರ್ವಜನಿಕರಿಗೆ ಮಜ್ಜಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಜ್ಜಿಗೆ ವಿತರಣೆ ಮಾಡಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್ ಯುವ ಜನಾಂಗಕ್ಕೆ ಪುನೀತ್ ರಾಜಕುಮಾರ್ ಪ್ರೇರಣೇ ಎಂದರೆ ತಪ್ಪಾಗಲಾರದು ಏಕೆಂದರೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅಂತಹದ್ದು ಎಂದು ಪುನೀತ್ ಗುಣಗಾನ ಮಾಡಿದರು.
Uncategorized
ಕೊಡಗು ವಿದ್ಯಾಲಯದಲ್ಲಿ ಯುಕೆಜಿ ವಿದ್ಯಾಥಿ೯ಗಳಿಗೆ ಪದವಿ ಪ್ರಧಾನ

ಮಡಿಕೇರಿ : ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಶಿಸ್ತು, ಜೀವನಮೌಲ್ಯಗಳನ್ನು ಸರಿಯಾದ ರೀತಿಯಲ್ಲಿ ಕಲಿಸಿಕೊಡಬೇಕು. ಸ್ವಚ್ಛಂದ ಜೀವನದ ಬಗೆಗಿನ ಎಚ್ಚರಿಕೆಯನ್ನೂ ಇಂದಿನ ಮಕ್ಕಳಿಗೆ ತಿಳಿಹೇಳುವುದು ಅಗತ್ಯ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಕಿವಿಮಾತು ಹೇಳಿದರು.
ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಯುಕೆಜಿ ವಿದ್ಯಾಥಿ೯ಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹುಟ್ಟಿಂದನಿಂದಲೇ ಮಕ್ಕಳನ್ನು ಅತಿಯಾದ ಪ್ರೀತಿಯಿಂದ ಪೋಷಕರು ಸಲಹುತ್ತಾ ಮಕ್ಕಳು ಮಾಡಿದ್ದೆಲ್ಲವೂ ಸರಿ ಎಂದು ಭಾವಿಸುತ್ತಾರೆ. ಇದರಿಂದಾಗಿ ಸ್ವಚ್ಛಂದತೆಯನ್ನು ಹೆಚ್ಚಾಗಿಯೇ ಮಕ್ಕಳು ಬೆಳೆಸಿಕೊಂಡು ಸಮಾಜದಲ್ಲಿ ದಾರಿ ತಪ್ಪುವ ಸಾಧ್ಯತೆಯೂ ಹೆಚ್ಚಾಗಿದೆ. ಇಂಥ ಸಂದಭ೯ ಜೀವನಮೌಲ್ಯ, ಶಿಸ್ತನ್ನು ಕೂಡ ಸರಿಯಾದ ರೀತಿಯಲ್ಲಿ ಸರಿಯಾದ ವಯಸ್ಸಿನಲ್ಲಿಯೇ ಕಲಿಸುವ ಮೂಲಕ ತಮ್ಮ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಅನಂತಶಯನ ಹೇಳಿದರು.
ತಮ್ಮ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆ, ಶಿಕ್ಷಕ ವಗ೯ದ ಬಗ್ಗೆ ಪೋಷಕರು ನಂಬಿಕೆ ಹೊಂದಿರಬೇಕು. ಶಿಕ್ಷಣ ಸಂಸ್ಥೆಗಳೇ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಕೇಂದ್ರಗಳೆಂದು ಮರೆಯಬಾರದು ಎಂದು ಕಿವಿಮಾತು ಹೇಳಿದ ಅನಂತಶಯನ, ಕೊಡಗು ವಿದ್ಯಾಲಯವು ಆದ್ಯಾತ್ಮಿಕ ಸಾಧಕ ಸದ್ಗುರು ಜಾಕ್ ಸುಬ್ಬಯ್ಯ ಅವರಿಂದ ಸ್ಥಾಪಿಸಲ್ಪಟ್ಟ ಕಾರಣದಿಂದ ಇಂದಿಗೂ ಈ ಸಂಸ್ಥೆಯು ಸದಾ ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾಗಿದೆ ಎಂದು ಶ್ಲಾಘಿಸಿದರು.
ಸಾಧಿಸುವ ಛಲವಿದ್ದಲ್ಲಿ ಯಾವುದೇ ವ್ಯಕ್ತಿಯೂ ಎಷ್ಟೇ ಎತ್ತರದ ಬೆಟ್ಟ, ಗುಡ್ಡಗಳನ್ನು ಸಲೀಸಾಗಿ ಏರಬಲ್ಲ. ಎಷ್ಟೇ ದೂರದವರೆಗೂ ಸಮುದ್ರದಲ್ಲಿ ಈಜಬಲ್ಲ,ಗಗನದಲ್ಲಿ ಹಾರಬಲ್ಲ ಸಾಮಥ್ಯ೯ ಹೊಂದಬಲ್ಲ ಎಂದು ಹೇಳಿದ ಅನಂತಶಯನ, ಛಲ ಹಾಗೂ ಕಠಿಣ ಪರಿಶ್ರಮ ಇಂಥ ಸಾಧನೆಗೆ ಅತ್ಯಗತ್ಯ ಎಂದು ಹೇಳಿದರು. ದೊಡ್ಡ ಮಟ್ಟದ ಸಾಧನೆಯ ಕನಸುಗಳನ್ನು ಕಾಣಿ ಎಂದು ಕರೆ ನೀಡಿದ ಅವರು, ಬೆಟ್ಟಗುಡ್ಡಗಳು ಅವುಗಳ ಎಚ್ಚರದಿಂದ ಮಾತ್ರವೇ ದೊಡ್ಡವು ಎನಿಸಿಕೊಂಡಿಲ್ಲ. ಬದಲಿಗೆ ಅವುಗಳು ಮಾನವನಿಗೆ ಒಡ್ಡುವ ಸವಾಲಿನಿಂದಾಗಿ ನಿಜವಾಗಿಯೂ ಅವುಗಳು ಹಿರಿಯದ್ದಾಗಿವೆ ಎಂದು ಹೇಳಿದರು.
ಎಂದಿಗೂ ಪುಟ್ಟ ಮಕ್ಕಳು ಇತರರೊಂದಿಗೆ ಜಗಳವಾಡದೇ ಗೆಳೆತನ ಕಾಪಾಡಿಕೊಳ್ಳಿ, ಗೆಳೆತನವೇ ಜೀವನದ ಬಹುದೊಡ್ಡ ಸಂಪತ್ತಾಗಿದೆ ಎಂಬುದನ್ನು ಮರೆಯದಿರಿ ಎಂದೂ ಅನಂತಶಯನ ಪುಟಾಣಿಗಳಿಗೆ ಕಿವಿಮಾತು ಹೇಳಿದರು.
ಕಾಯ೯ಕ್ರಮದಲ್ಲಿ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ, ವ್ಯವಸ್ಥಾಪಕರಾದ ರವಿ ಪಿ, ವೇದಿಕೆಯಲ್ಲಿದ್ದರು.
ವಿದ್ಯಾಥಿ೯ನಿ ಶಾವಿ೯ ಭರತ್ ಸ್ವಾಗತಿಸಿ, ಸ್ಟಿಫಾನಿಯಾ ಸ್ಟ್ಯಾನಿ, ಆಂಚಲ್ ಅಯ್ಯಪ್ಪ ಮತ್ತು ಶಾವಿ೯ಕ್ ಅನುಭವ ಹಂಚಿಕೊಂಡ ಕಾಯ೯ಕ್ರಮದಲ್ಲಿ ಶಿಕ್ಷಕಿ ವೀಣಾ ಎಂ.ಎಂ.ನಿರೂಪಿಸಿ, ಶಿಕ್ಷಕಿಯರಾದ ಟಿ.ಪಿ.ರಮ್ಯ ಹಾಗೂ ಬಿ.ಬಿ.ಭಾರತಿ ನಿವ೯ಹಿಸಿದರು. ಐಶಾನಿ ವಂದಿಸಿದರು. ಯುಕೆಜಿ ವಿದ್ಯಾಥಿ೯ಗಳಿಂದ ಅತ್ಯಾಕಷ೯ಕ ಸಾಂಸ್ಕೖತಿಕ ಕಾಯ೯ಕ್ರಮಗಳು ಮನಸೆಳೆದವು
Uncategorized
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್

ಬೇಲೂರು: ಕಾಡಾನೆ ಸೆರೆ ಕಾರ್ಯಾಚರಣೆ
ಮೊದಲ ದಿನದ ಕಾರ್ಯಾಚರಣೆ ಯಶಸ್ವಿ
ಸತತ ನಾಲ್ಕು ಗಂಟೆಗಳ ನಂತರ ಕಾರ್ಯಾಚರಣೆ ಯಶಸ್ವಿ
ಬೇಲೂರು ತಾಲ್ಲೂಕಿನ, ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್ನಲ್ಲಿ ಸೆರೆ ಸಿಕ್ಕ ಕಾಡಾನೆ
ಪುಂಡಾನೆಗಳನ್ನು ಗುರುತಿಸಿದ್ದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ
ಅರವಳಿಕೆ ಚುಚ್ಚುಮದ್ದು ನೀಡಿದ ವೈದ್ಯರು
ಅರವಳಿಕೆ ಚುಚ್ಚುಮದ್ದು ನೀಡುತ್ತಿದ್ದಂತೆ ಜೊತೆಗಿದ್ದ ಕಾಡಾನೆ ಜೊತೆ ಓಡಾಡಿದ ಒಂಟಿಸಲಗ
ಒಂದು ಗಂಟೆಗೂ ಹೆಚ್ಚು ಕಾಲ ಎಲ್ಲೆಂದರಲ್ಲಿ ಓಡಾಡಿದ ಒಂಟಿಸಲಗ
ಹರಸಾಹಸಪಟ್ಟು ಎರಡು ಕಾಡಾನೆಗಳನ್ನು ಬೇರ್ಪಡಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ನಂತರ ಕುಸಿದು ಬಿದ್ದ ಒಂಟಿಸಲಗ
ಕಾಡಾನೆಯನ್ನು ಸೆರೆ ಹಿಡಿದು ಎಳೆದು ತಂದ ಸಾಕಾನೆಗಳು
ಕ್ಯಾಪ್ಟನ್ ಪ್ರಶಾಂತ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ