Connect with us

National

ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಅನಾರೋಗ್ಯದಿಂದ ನಿಧನ

Published

on

ಢಾಕಾ: ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಬೇಗಂ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸುತ್ತಾರೆ ಎಂದು ಭಾವಿಸಲಾಗಿತ್ತು. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಅಧ್ಯಕ್ಷೆ ನಿಧನಕ್ಕೆ ಪಕ್ಷವು ಸಂತಾಪ ಸೂಚಿಸಿದೆ.
ನ. 23 ರಂದು ಹೃದಯ ಮತ್ತು ಶ್ವಾಸಕೋಶದಲ್ಲಿ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ 36 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಜಿಯಾ, ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ ಮತ್ತು ಮೂತ್ರಪಿಂಡಗಳು, ಶ್ವಾಸಕೋಶಗಳು, ಹೃದಯ ಮತ್ತು ಕಣ್ಣುಗಳ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಮಸ್ಯೆಗಳು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಬಾಂಗ್ಲಾದೇಶ, ಯುಕೆ, ಯುಎಸ್, ಚೀನಾ ಮತ್ತು ಆಸ್ಟ್ರೇಲಿಯಾದ ತಜ್ಞರು ಚಿಕಿತ್ಸೆ ನೀಡುತ್ತಿದ್ದರು.
ಬೇಗಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಢಾಕಾದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
Continue Reading

National

ಮೇಕೆದಾಟು ಜಲಾಶಯ ಯೋಜನೆಗೆ ಭೂಮಿಪೂಜೆ ಘೋಷಣೆ: ಪಿಎಂ ಮೋದಿಗೆ ಪತ್ರ ಬರೆದ ವಿಜಯ್‌

Published

on

ಚೆನ್ನೈ: ಕರ್ನಾಟಕ ಸರ್ಕಾರದ  ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು  ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್  ಅವರು ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ? 

ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ  ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಒಪ್ಪಿಗೆಯನ್ನು ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು ಎಂದು ವಿಜಯ್ ಅವರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.

ಅಲ್ಲದೇ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (DPR) ತಕ್ಷಣವೇ ತಿರಸ್ಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗದ (CWC) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Continue Reading

National

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಮೀಸಲಾತಿ ಏಕೆ?: ಸುಪ್ರೀಂ ಪ್ರಶ್ನೆ

Published

on

ನವದೆಹಲಿ: ಮೀಸಲಾತಿಯ ಮೂಲಕ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿದ ಕುಟುಂಬಗಳ ಮಕ್ಕಳು, ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸುವುದು ಸೂಕ್ತವೇ? ಎಂದು ಸುಪ್ರೀಂಕೋರ್ಟ್ ಶುಕ್ರವಾರ ಪ್ರಶ್ನಿಸಿದೆ. ಅಲ್ಲದೇ ಮೀಸಲಾತಿ ನಿಯಮ ಬದಲಾವಣೆಗಳು ಸಾಮಾಜಿಕ ಚಲನಶೀಲತೆಗೆ ಕಾರಣವಾಗುತ್ತವೆ ಎಂದು ಹೇಳಿದೆ.

ಪೋಷಕರು ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಏಕೆ ಇರಬೇಕು? ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದೊಂದಿಗೆ, ಸಾಮಾಜಿಕ ಚಲನಶೀಲತೆ ಸಂಬಂಧ ಹೊಂದಿದೆ. ಆದ್ದರಿಂದ ಮಕ್ಕಳಿಗೆ ಮೀಸಲಾತಿ ಪಡೆಯಲು, ನಾವು ಎಂದಿಗೂ ಅದರಿಂದ ಹೊರಬರುವ ಪ್ರಯತ್ನ ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅಭಿಪ್ರಾಯಪಟ್ಟಿದ್ದಾರೆ. ೨೦೨೦ರಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತ್ತು.


ಮೀಸಲಾತಿ ಯಾರಿಗೆ? ಎಂಬುದು ನಾವು ಕಾಳಜಿವಹಿಸಬೇಕಾದ ವಿಷಯ. ಉತ್ತಮ ಉದ್ಯೋಗದಲ್ಲಿರುವ ಪೋಷಕರ ಮಕ್ಕಳಿಗೂ ಮೀಸಲಾತಿ ವಿಸ್ತರಿಸಿದರೆ ಏನು ಪ್ರಯೋಜನ? ಉತ್ತಮ ಆದಾಯವನ್ನು ಪಡೆಯುತ್ತಿರುವ ಪೋಷಕರ ಮಕ್ಕಳು ಮೀಸಲಾತಿಯಿಂದ ಹೊರಬರಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.

ಕರ್ನಾಟಕದ ಅರ್ಜಿ ವಿಚಾರಣೆ:
ರಾಜ್ಯ ಸರ್ಕಾರಿ ಉದ್ಯೋಗಿಗಳಾಗಿರುವ ಪೋಷಕರನ್ನು ಹೊಂದಿರುವ ಅರ್ಜಿದಾರರನ್ನು ಕೆನೆಪದರ ಆಧಾರದ ಮೇಲೆ ಮೀಸಲಾತಿಯಿಂದ ಹೊರಗಿಟ್ಟ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ, ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಮೀಸಲಾತಿ ಕುರಿತು ಈ ಅವಲೋಕನಗಳನ್ನು ಮಾಡಿದೆ.

ಈ ಪ್ರಕರಣವು ಕರ್ನಾಟಕದ ಹಿಂದುಳಿದ ವರ್ಗಗಳಲ್ಲಿ ವರ್ಗ II(ಂ) ಅಡಿಯಲ್ಲಿ ವರ್ಗೀಕರಿಸಲಾದ ಕುರುಬ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದೆ. ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ, ಮೀಸಲು ವರ್ಗದ ಅಡಿಯಲ್ಲಿ ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಆದಾಗ್ಯೂ, ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯು, ಅಭ್ಯರ್ಥಿ ಕೆನೆಪದರದೊಳಗೆ ಬರುತ್ತಾರೆ ಎಂದು ತೀರ್ಮಾನಿಸಿದ ನಂತರ ಅವರಿಗೆ ಜಾತಿ ಸಿಂಧುತ್ವ ಪ್ರಮಾಣಪತ್ರವನ್ನು ನಿರಾಕರಿಸಿತು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಸುಮಾರು ೧೯.೪೮ ಲಕ್ಷ ರೂ. ಎಂದು ನಿರ್ಣಯಿಸಲಾಗಿದೆ. ಈ ಕುರಿತು ನಡೆದ ವಿಚಾರಣೆ ಸಂದರ್ಭದಲ್ಲಿ, ಪೋಷಕರ ವಾರ್ಷಿಕ ಆದಾಯ ಮಿತಿ ಮೀರಿದ್ದರೆ ಮೀಸಲಾತಿ ಪಡೆಯಲು ಅನರ್ಹ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.

Continue Reading

National

ಆಫ್ರಿಕಾದಲ್ಲಿ ಎಬೋಲಾ ಆತಂಕ: ಭಾರತದಲ್ಲಿ ಹೈಅಲರ್ಟ್‌, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

Published

on

ನವದೆಹಲಿ/ಬೆಂಗಳೂರು: ಆಫ್ರಿಕಾದ ಹಲವು ಭಾಗಗಳಲ್ಲಿ ಪ್ರಾಣಾಂತಿಕ ಎಬೋಲಾ ವೈರಸ್‌ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಏರ್‌ಪೋರ್ಟ್‌ಗಳಲ್ಲಿ ಎಬೋಲಾ ತಪಾಸಣೆ ಪ್ರಾರಂಭವಾಗಿದ್ದು, ಹೈ-ರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ವಹಿಸಲಾಗಿದೆ.

ಈ ಬೆಳವಣಿಗೆಯ ನಡುವೆಯೇ ದೆಹಲಿಯಲ್ಲಿ ನಡೆಯಬೇಕಿದ್ದ ಭಾರತ–ಆಫ್ರಿಕಾ ಒಕ್ಕೂಟದ ಶೃಂಗಸಭೆಯನ್ನು ಮುಂದೂಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ರಾಜ್ಯಗಳಿಗೆ ಕೇಂದ್ರದ ಸೂಚನೆ

ಎಬೋಲಾ ಹರಡುವಿಕೆ ತಡೆಯಲು ರಾಜ್ಯ ಆರೋಗ್ಯ ಇಲಾಖೆಗೆ ಕೇಂದ್ರ ಸರ್ಕಾರ ಹಲವು ನಿರ್ದೇಶನಗಳನ್ನು ನೀಡಿದೆ.

ಆರೋಗ್ಯ ಇಲಾಖೆಗೆ ನೀಡಿದ ಪ್ರಮುಖ ಸೂಚನೆಗಳು:

  • ಕ್ವಾರಂಟೈನ್ ಸೆಂಟರ್‌ಗಳನ್ನು ಗುರುತಿಸುವುದು
  • ಐಸೋಲೇಷನ್ ಸೌಲಭ್ಯ ಹೊಂದಿರುವ ಪ್ರತ್ಯೇಕ ಕೇಂದ್ರಗಳನ್ನು ಸಿದ್ಧಪಡಿಸುವುದು
  • ಹೆಲ್ತ್ ಸ್ಕ್ರೀನಿಂಗ್ ಸಿಬ್ಬಂದಿಯನ್ನು ಹೆಚ್ಚಿಸುವುದು
  • ಶಂಕಿತ ಪ್ರಕರಣಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬುಲೆನ್ಸ್ ನಿಯೋಜನೆ
  • ಎಬೋಲಾ ಚಿಕಿತ್ಸೆ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಆರೋಗ್ಯ ಸಿಬ್ಬಂದಿಗೆ ತರಬೇತಿ

ಏರ್‌ಪೋರ್ಟ್‌ಗಳಿಗೆ ವಿಶೇಷ ಮಾರ್ಗಸೂಚಿ

ಎಬೋಲಾ ನಿಯಂತ್ರಣಕ್ಕಾಗಿ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ.

ಪ್ರಯಾಣಿಕರಿಗೆ ಸೂಚನೆ:

  • ತ್ರಿಬಲ್ ಲೇಯರ್ ಮಾಸ್ಕ್ ಕಡ್ಡಾಯ
  • ಹ್ಯಾಂಡ್ ಗ್ಲೌಸ್ ಧರಿಸಬೇಕು
  • ಸ್ಯಾನಿಟೈಸರ್ ಬಳಸಬೇಕು
  • ಶಂಕಿತ ಪ್ರಕರಣ ಕಂಡುಬಂದರೆ ತಕ್ಷಣ ವರದಿ ಮಾಡಬೇಕು
  • ಟ್ರಾವೆಲ್ ಹಿಸ್ಟರಿ ದಾಖಲಿಸಬೇಕು
  • ಸೆಲ್ಫ್ ಡಿಕ್ಲರೇಷನ್ ಫಾರ್ಮ್ ಸಲ್ಲಿಕೆ ಕಡ್ಡಾಯ

ಎಬೋಲಾ ಶಂಕಿತರಿಗೆ ಐಸೋಲೇಷನ್ ಕ್ರಮ

  • ಪ್ರತ್ಯೇಕ ಕೊಠಡಿಯಲ್ಲಿ ಇರಿಸಲಾಗುವುದು
  • ಅಟ್ಯಾಚ್ಡ್ ಬಾತ್‌ರೂಮ್ ಇರುವ ಕೊಠಡಿ ಕಡ್ಡಾಯ
  • ವೈದ್ಯಕೀಯ ಸಿಬ್ಬಂದಿಗೆ PPE ಕಿಟ್ ಕಡ್ಡಾಯ
  • ಪ್ರತಿ 2 ಗಂಟೆಗೆ ಆಕ್ಸಿಜನ್ ಮಟ್ಟ ಪರೀಕ್ಷೆ
  • ಹೃದಯ ಕಾರ್ಯಪಟುತೆಯ ಮೇಲ್ವಿಚಾರಣೆ

ಹೈ-ರಿಸ್ಕ್ ದೇಶಗಳಿಂದ ಬಂದವರು ಏನು ಮಾಡಬೇಕು?

  • 21 ದಿನಗಳ ಒಳಗೆ ಲಕ್ಷಣ ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು
  • ಜ್ವರ, ವಾಂತಿ, ದೌರ್ಬಲ್ಯ ಸೇರಿದಂತೆ ಯಾವುದೇ ಲಕ್ಷಣ ಕಂಡರೂ ವೈದ್ಯರನ್ನು ಸಂಪರ್ಕಿಸಬೇಕು
  • ಪ್ರಯಾಣದ ವಿವರಗಳನ್ನು ಆರೋಗ್ಯ ಇಲಾಖೆಗೆ ನೀಡಬೇಕು
  • ವಿಮಾನ ನಿಲ್ದಾಣ ತಪಾಸಣೆಯ ನಂತರವೂ ಲಕ್ಷಣ ಕಂಡುಬಂದರೆ ಪರೀಕ್ಷೆ ಕಡ್ಡಾಯ

ಎಬೋಲಾ ಎಷ್ಟು ಅಪಾಯಕಾರಿ?

ವಿಶ್ವ ಆರೋಗ್ಯ ಸಂಸ್ಥೆ (WHO) ಮಾಹಿತಿ ಪ್ರಕಾರ, ಎಬೋಲಾ ವೈರಸ್‌ ಮರಣ ಪ್ರಮಾಣ ಸರಾಸರಿ 50%ರವರೆಗೆ ಇರಬಹುದು. ಸೋಂಕಿತ ವ್ಯಕ್ತಿಯ ದೇಹದ ದ್ರವಗಳ ಸಂಪರ್ಕದಿಂದ ಈ ವೈರಸ್ ಹರಡುತ್ತದೆ. ಕೋವಿಡ್‌ನಂತೆ ಗಾಳಿಯಲ್ಲಿ ವೇಗವಾಗಿ ಹರಡುವ ಸೋಂಕು ಅಲ್ಲವಾದರೂ, ತೀವ್ರ ಜಾಗ್ರತೆ ಅಗತ್ಯವೆಂದು ತಜ್ಞರು ಎಚ್ಚರಿಸಿದ್ದಾರೆ.

Continue Reading

Trending

error: Content is protected !!