National
ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರು ಅನಾರೋಗ್ಯದಿಂದ ನಿಧನ

National
ಮೇಕೆದಾಟು ಜಲಾಶಯ ಯೋಜನೆಗೆ ಭೂಮಿಪೂಜೆ ಘೋಷಣೆ: ಪಿಎಂ ಮೋದಿಗೆ ಪತ್ರ ಬರೆದ ವಿಜಯ್
ಚೆನ್ನೈ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ತಮಿಳುನಾಡಿನ ಸಿಎಂ ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಒಪ್ಪಿಗೆಯನ್ನು ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು ಎಂದು ವಿಜಯ್ ಅವರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.
ಅಲ್ಲದೇ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (DPR) ತಕ್ಷಣವೇ ತಿರಸ್ಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗದ (CWC) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.
National
ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಮೀಸಲಾತಿ ಏಕೆ?: ಸುಪ್ರೀಂ ಪ್ರಶ್ನೆ
ನವದೆಹಲಿ: ಮೀಸಲಾತಿಯ ಮೂಲಕ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿದ ಕುಟುಂಬಗಳ ಮಕ್ಕಳು, ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸುವುದು ಸೂಕ್ತವೇ? ಎಂದು ಸುಪ್ರೀಂಕೋರ್ಟ್ ಶುಕ್ರವಾರ ಪ್ರಶ್ನಿಸಿದೆ. ಅಲ್ಲದೇ ಮೀಸಲಾತಿ ನಿಯಮ ಬದಲಾವಣೆಗಳು ಸಾಮಾಜಿಕ ಚಲನಶೀಲತೆಗೆ ಕಾರಣವಾಗುತ್ತವೆ ಎಂದು ಹೇಳಿದೆ.
ಪೋಷಕರು ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಏಕೆ ಇರಬೇಕು? ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದೊಂದಿಗೆ, ಸಾಮಾಜಿಕ ಚಲನಶೀಲತೆ ಸಂಬಂಧ ಹೊಂದಿದೆ. ಆದ್ದರಿಂದ ಮಕ್ಕಳಿಗೆ ಮೀಸಲಾತಿ ಪಡೆಯಲು, ನಾವು ಎಂದಿಗೂ ಅದರಿಂದ ಹೊರಬರುವ ಪ್ರಯತ್ನ ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅಭಿಪ್ರಾಯಪಟ್ಟಿದ್ದಾರೆ. ೨೦೨೦ರಲ್ಲಿ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಮೀಸಲಾತಿ ಯಾರಿಗೆ? ಎಂಬುದು ನಾವು ಕಾಳಜಿವಹಿಸಬೇಕಾದ ವಿಷಯ. ಉತ್ತಮ ಉದ್ಯೋಗದಲ್ಲಿರುವ ಪೋಷಕರ ಮಕ್ಕಳಿಗೂ ಮೀಸಲಾತಿ ವಿಸ್ತರಿಸಿದರೆ ಏನು ಪ್ರಯೋಜನ? ಉತ್ತಮ ಆದಾಯವನ್ನು ಪಡೆಯುತ್ತಿರುವ ಪೋಷಕರ ಮಕ್ಕಳು ಮೀಸಲಾತಿಯಿಂದ ಹೊರಬರಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.
ಕರ್ನಾಟಕದ ಅರ್ಜಿ ವಿಚಾರಣೆ:
ರಾಜ್ಯ ಸರ್ಕಾರಿ ಉದ್ಯೋಗಿಗಳಾಗಿರುವ ಪೋಷಕರನ್ನು ಹೊಂದಿರುವ ಅರ್ಜಿದಾರರನ್ನು ಕೆನೆಪದರ ಆಧಾರದ ಮೇಲೆ ಮೀಸಲಾತಿಯಿಂದ ಹೊರಗಿಟ್ಟ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ, ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ಮೀಸಲಾತಿ ಕುರಿತು ಈ ಅವಲೋಕನಗಳನ್ನು ಮಾಡಿದೆ.
ಈ ಪ್ರಕರಣವು ಕರ್ನಾಟಕದ ಹಿಂದುಳಿದ ವರ್ಗಗಳಲ್ಲಿ ವರ್ಗ II(ಂ) ಅಡಿಯಲ್ಲಿ ವರ್ಗೀಕರಿಸಲಾದ ಕುರುಬ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಸಂಬಂಧಿಸಿದೆ. ಅವರನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ, ಮೀಸಲು ವರ್ಗದ ಅಡಿಯಲ್ಲಿ ಸಹಾಯಕ ಎಂಜಿನಿಯರ್ (ವಿದ್ಯುತ್) ಹುದ್ದೆಗೆ ಆಯ್ಕೆ ಮಾಡಲಾಗಿದೆ.
ಆದಾಗ್ಯೂ, ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯು, ಅಭ್ಯರ್ಥಿ ಕೆನೆಪದರದೊಳಗೆ ಬರುತ್ತಾರೆ ಎಂದು ತೀರ್ಮಾನಿಸಿದ ನಂತರ ಅವರಿಗೆ ಜಾತಿ ಸಿಂಧುತ್ವ ಪ್ರಮಾಣಪತ್ರವನ್ನು ನಿರಾಕರಿಸಿತು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಸುಮಾರು ೧೯.೪೮ ಲಕ್ಷ ರೂ. ಎಂದು ನಿರ್ಣಯಿಸಲಾಗಿದೆ. ಈ ಕುರಿತು ನಡೆದ ವಿಚಾರಣೆ ಸಂದರ್ಭದಲ್ಲಿ, ಪೋಷಕರ ವಾರ್ಷಿಕ ಆದಾಯ ಮಿತಿ ಮೀರಿದ್ದರೆ ಮೀಸಲಾತಿ ಪಡೆಯಲು ಅನರ್ಹ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು.
National
ಆಫ್ರಿಕಾದಲ್ಲಿ ಎಬೋಲಾ ಆತಂಕ: ಭಾರತದಲ್ಲಿ ಹೈಅಲರ್ಟ್, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
-
State24 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Mysore13 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Mysore7 hours agoದೈವ ನಿಂದನೆ ಪ್ರಕರಣ: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್
-
State5 hours agoರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ನಾಯಕತ್ವ ಬದಲಾವಣೆ: ಹೈಕಮಾಂಡ್ ಸಭೆ ಕುತೂಹಲ
-
Sports5 hours agoಧರ್ಮಶಾಲಾದಲ್ಲಿ ಆರ್ಸಿಬಿಗೆ ಗುಡ್ ನ್ಯೂಸ್: ಫಿಲ್ ಸಾಲ್ಟ್ ಕಮ್ಬ್ಯಾಕ್ ಸಾಧ್ಯತೆ
-
Hassan7 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Hassan6 hours ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Manglore9 hours agoಪ್ರವಾಸಿಗರಿಗೆ ಜಲಪಾತ ವೀಕ್ಷಣೆ, ಪರ್ವತ ಏರಲು ಜೂ.1ರಿಂದ ಅವಕಾಶ
