Education
ಉಚಿತ ಬಸ್ ಪ್ರಯಾಣ ಕೇವಲ ಮಹಿಳೆಯರಿಗಲ್ಲ! ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪ್ರಯಾಣ
 
																								
												
												
											Free bus facility for Students : ಹೌದು, ಸದ್ಯಕ್ಕೆ ಮಹಿಳೆಯರಿಗೆ ಕರ್ನಾಟಕ ರಾಜ್ಯದಲ್ಲಿ “ಸ್ತ್ರೀ ಶಕ್ತಿ” ಎಂಬ ಹೆಸರಿನಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯವಿದ್ದು, ಇದೆ ರೀತಿ ಇದೀಗ ವಿದ್ಯಾರ್ಥಿಗಳಿಗೂ ಕೂಡ ಉಚಿತವಾಗಿ ಬಸ್ ಪ್ರಯಾಣ ಮಾಡಲು ಸರ್ಕಾರ ಅನುಮತಿ ನೀಡಿದೆ.
ಯಾವುದು ಇದು ಯೋಜನೆ?
ಇದು ಯಾವುದೇ ರೀತಿಯ ವಿಶೇಷ ಯೋಜನೆ ಅಲ್ಲ. ಬದಲಾಗಿ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ SSLC ಪರೀಕ್ಷೆಗಳು ಆರಂಭವಾಗಲಿದ್ದು, ಇದರ ಸಲುವಾಗಿ ಈ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.
ಉಚಿತ ಪ್ರಯಾಣ ಈ ಅವಧಿಗೆ ಮಾತ್ರ :
ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ಪ್ರಯಾಣವು ಕೇವಲ ಪರೀಕ್ಷಾ ಸಮಯದಲ್ಲಿ ಮಾತ್ರವಾಗಿರುತ್ತದೆ. ಏಕೆಂದರೆ ಇದನ್ನು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಸಹಾಯವಾಗಲಿ ಎಂಬ ಉದ್ದೇಶದಿಂದ ಜಾರಿಗೆ ತರಲಾಗಿದೆ.
• SSLC ವಿದ್ಯಾರ್ಥಿಗಳ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4ನೇ ತಾರೀಕಿನವರೆಗೆ ಇರಲಿದ್ದು, SSLC ವಿದ್ಯಾರ್ಥಿಗಳಿಗೆ ಈ ಸಮಯದಲ್ಲಿ ಉಚಿತ ಬಸ್ ಪ್ರಯಾಣ ಮಾಡಲು ಅವಕಾಶವಿದೆ.
• ಅದೇ ರೀತಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 1ನೇ ತಾರೀಕಿನಿಂದ ರಿಂದ 20 ರವರೆಗೆ ಇರಲಿದ್ದು, ಈ ಅವಧಿಯಲ್ಲಿ ಸಾಮಾನ್ಯ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ಬಸ್ ಪ್ರಯಾಣಕ್ಕೆ ಬೇಕಾಗುವ ದಾಖಲಾತಿಗಳು :
ವಿದ್ಯಾರ್ಥಿಗಳು ಬಸ್ ಪ್ರಯಾಣದ ಸಂಧರ್ಭದಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ ಸಾಕು. ಅದೇ ರೀತಿ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್ ಅಥವಾ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಬಹುದು.
Education
10 ಸಾವಿರಕ್ಕೂ ಹೆಚ್ಚು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಕನ್ನಡಿಗರಿಗೆ ಭರ್ಜರಿ ಮೀಸಲಾತಿ
 
														IBPS Banking Recruitment 2025 : ದೇಶಾದ್ಯಂತ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ 10,000ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಬ್ಯಾಂಕಿಂಗ್ ನೇಮಕಾತಿ ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿಯಲ್ಲಿ ಕರ್ನಾಟಕ ರಾಜ್ಯದ ಬ್ಯಾಂಕುಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹುದ್ದೆಗಳ ಉದ್ಯೋಗಾವಕಾಶವಿದೆ. ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ :
ಒಟ್ಟು 10,277 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ಒಟ್ಟು 11 ಪ್ರಮುಖ ಬ್ಯಾಂಕುಗಳಲ್ಲಿ 1,170 ಹುದ್ದೆಗಳು ಖಾಲಿ ಇವೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಪಂಜಾಬ್ ಅಂಡ್ ಸಿಂದ್ ಬ್ಯಾಂಕ್.
ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಯಾವುದಾದರೂ ಒಂದು ಪದವಿ ಮುಗಿಸಿದ್ದು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕು. ವಯೋಮಿತಿ ಅರ್ಹತೆ ನೋಡುವುದಾದರೆ ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷದ ಒಳಗಿರಬೇಕು.
ವೇತನ – 24,050ರೂ. ಯಿಂದ 54,480ರೂ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
• ಪೂರ್ವಭಾವಿ ಪರೀಕ್ಷೆ
• ಮುಖ್ಯ ಪರೀಕ್ಷೆ

ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣ ibps.in ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 175ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 850ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 21, 2025
Education
ಏರ್ಟೆಲ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಸ್ಕಾಲರ್ಶಿಪ್ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
 
														Bharti Airtel Scholarship Program 2025 – ಏರ್ಟೆಲ್ ಕಂಪನಿ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಭಾರತಿ ಏರ್ಟೆಲ್ ಫೌಂಡೇಶನ್ ನ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಉನ್ನತ ಗುಣಮಟ್ಟದ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುವಂತೆ ಹಾಗೂ ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಬಿಡಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿವೇತನ ನೀಡುತ್ತಿದ್ದಾರೆ.
ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಏನೆಲ್ಲಾ ಪ್ರಯೋಜನ ಸಿಗಲಿದೆ?
ವಿದ್ಯಾರ್ಥಿಗಳು ಕಾಲೇಜಿಗೆ ಭರಿಸುವ ಸಂಪೂರ್ಣ ಶುಲ್ಕವನ್ನು ಮರುಪಾವತಿ ಸಿಗಲಿದೆ. ಈ ಒಂದು ಪ್ರಯೋಜನವು ಸಂಪೂರ್ಣ ಕೋರ್ಸ್ ಗೆ ಅನ್ವಯಿಸಲಿದೆ. ಅದೇ ರೀತಿ ಅವರ ಹಾಸ್ಟಲ್ ಮತ್ತು ಮೆಸ್ಸಿನ ಫೀಸ್ ಅನ್ನು ಕೂಡ ಮರುಪಾವತಿ ಸಿಗಲಿದೆ. ಮೊದಲನೆಯ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೂಡ ಸಿಗಲಿದೆ.

ಇದರ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಮೊದಲನೆಯ ವರ್ಷದ ಪದವಿಗೆ ಕಡ್ಡಾಯವಾಗಿ ದಾಖಲಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 8.5 ಲಕ್ಷದ ರೂ. ಒಳಗಿರಬೇಕು. ಈ ವಿದ್ಯಾರ್ಥಿ ವೇತನವನ್ನು ಪ್ರಮುಖವಾಗಿ ಹೆಣ್ಣುಮಕ್ಕಳಿಗೆ, ಅಂಗವಿಕಲರಿಗೆ ಹಾಗೂ ತಂದೆ ಅಥವಾ ತಾಯಿ ಕಳೆದುಕೊಂಡ ಮಕ್ಕಳಿಗೆ ಅಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು :
• ಆಧಾರ್ ಕಾರ್ಡ್
• ಪದವಿ ಕೋರ್ಸಿಗೆ ದಾಖಲಾದ ಪ್ರಮಾಣ ಪತ್ರ
• 12ನೇ ತರಗತಿಯ ಅಂಕಪಟ್ಟಿ
• ಬ್ಯಾಂಕ್ ಪಾಸ್ ಬುಕ್
• ಪಾಸ್ಪೋರ್ಟ್ ಸೈಜ್ ಫೋಟೋ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜುಲೈ 2025
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ – https://www.buddy4study.com/page/bharti-airtel-scholarship
Education
ಆಳ್ವಾಸ್ ಪ್ರಗತಿ ಉದ್ಯೋಗ ಮೇಳ : 15 ಸಾವಿರಕ್ಕೂ ಹೆಚ್ಚು ಹುದ್ದೆಗಳ ಖಚಿತ ಭರವಸೆ | ನೋಂದಣಿ ಮಾಡುವ ಲಿಂಕ್ ಇಲ್ಲಿದೆ
 
														Alvas Pragati Job Fair 2025 – ಶಿಕ್ಷಣವನ್ನು ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವಂತಹ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು “ಆಳ್ವಾಸ್ ಪ್ರಗತಿ ಉದ್ಯೋಗ ಮೇಳ” ವನ್ನು ಆಯೋಜಿಸಿದ್ದು ಇದರ ಮಾಹಿತಿ ಇಲ್ಲಿದೆ.
ಉದ್ಯೋಗ ಮೇಳದ ವಿವರ :
ಒಟ್ಟು 15,900 ಹುದ್ದೆಗಳನ್ನು ವಿವಿಧ ಕಂಪನಿಗಳು ನೇಮಕ ಮಾಡಿಕೊಳ್ಳಲಿವೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನವು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 150ಕ್ಕೂ ಹೆಚ್ಚು MNC ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹೊರ ಜಿಲ್ಲೆಗಳಿಂದ ಹಾಗೂ ದೂರದ ಊರುಗಳಿಂದ ಬರುವಂತಹ ಅಭ್ಯರ್ಥಿಗಳಿಗೆ ವಸತಿ ಹಾಗೂ ಊಟದ ಸೌಲಭ್ಯಗಳನ್ನು ಕೂಡ ವ್ಯವಸ್ಥೆ ಮಾಡಲಾಗಿದೆ.
ಯಾರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು?
ಹತ್ತನೇ ತರಗತಿ ಓದಿದವರಿಂದ ಹಿಡಿದು ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಕೂಡ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.
- 
																	   Hassan12 hours ago Hassan12 hours agoಹುಡಾ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ: ಪಕ್ಷಗೋಸ್ಕರ ಕೆಲಸ ಮಾಡಿದವರಿಗೆ ಸ್ಥಾನ ನೀಡುವಂತೆ ಕಯುಮ್ ಆಗ್ರಹ 
- 
																	   Hassan14 hours ago Hassan14 hours agoನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ತಾಜಿಂ ಬೃಹತ್ ಪ್ರತಿಭಟನೆ. 
- 
																	   Hassan10 hours ago Hassan10 hours agoಹಾಸನ: ದುರ್ನಾಥ ಬೀರುತ್ತಿರುವ ರಜತಾ ಕಾಂಪ್ಲೆಕ್ಸ್ ಹಿಂಭಾಗದ ರಸ್ತೆ 
- 
																	   Hassan15 hours ago Hassan15 hours agoಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ 
- 
																	   Hassan13 hours ago Hassan13 hours agoಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ 
- 
																	   Chikmagalur17 hours ago Chikmagalur17 hours agoರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್ 
- 
																	   Kodagu10 hours ago Kodagu10 hours agoಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ 
- 
																	   Manglore11 hours ago Manglore11 hours agoಧರ್ಮಸ್ಥಳ ಪ್ರಕರಣ- ಕಾಡಿನಲ್ಲಿ ಶೋಧನೆ ನಡೆಸಿ ತೆರಳಿದ ಎಸ್ಐಟಿ ತಂಡ 

 
											 
											 
											 
											 
											