State
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
Free sewing machine fill this application :
ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತಾವಲಿಗೆ ಯಂತ್ರ ನೀಡಲಾಗುತ್ತದೆ ಹಾಗೂ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಯಾರು ಬರ್ತಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ
ವಾಣಿಜ್ಯ ಇಲಾಖೆ ಕಡೆಯಿಂದ ಅರ್ಹ ಮಹಿಳೆಯರಿಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ಹೊಲಿಗೆ ಯಂತ್ರ ನೀಡಲಾಗುವುದು
ಹೊಲಿಗೆ ಯಂತ್ರ application-2024
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ 20204 ವರ್ಷದಲ್ಲಿ ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತ ವಲಗೆ ಯಂತ್ರ ನೀಡಲಾಗುತ್ತದೆ ಹಾಗೂ ಈ ಯೋಜನೆ ಸ್ವ-ಉದ್ಯೋಗವನ್ನು ಮಹಿಳೆಯರು ಕೈಗೊಳ್ಳಲಿ ಎಂದು ಈ ಯೋಜನೆ ಆರಂಭಿಸಲಾಗಿದೆ.
ಅರ್ಜಿ ಸಲ್ಲಿಸಲು
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಭೇಟಿ ನೀಡಿ
ಉಚಿತ ಹೊಲಿಗೆಯಂತ್ರ ಕರ್ನಾಟಕದಲ್ಲಿ ಮೊದಲು ಎಲ್ಲೆಲ್ಲಿ ನೀಡಲಾಗುತ್ತದೆ.
- ಚಿಕ್ಕಬಳ್ಳಾಪುರ
- ಗದಗ
- ಯಾದಗಿರಿ
- ಮಂಡ್ಯ
- ರಾಯಚೂರು
- ಹಾಸನ
- ಚಿಕ್ಕಮಗಳೂರು
- ತುಮಕೂರು
- ಮೈಸೂರು
- ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಕೋಲಾರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
Free sewing machine fill this application : ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು.
ಈ ಯೋಜನೆ ಅಡಿಯಲ್ಲಿ ಬಡ ಜನರು ಪರಿಚಯ ಸಲ್ಲಿಸಬಹುದು ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ಅರ್ಜಿಯನ್ನು ಸಲ್ಲಿಸಲು ಅನಾರಗಿರುತ್ತಾರೆ. ಹೊಲಿಗೆ ವೃತ್ತಿಯನ್ನು ಮಾಡುತ್ತಿರುವವರು ಮೊದಲು ಆದ್ಯತೆ ನೀಡಲಾಗುತ್ತದೆ ಆನ್ಲೈನ್ ಮೂಲಕ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಥವಾ ಕಟ್ಟಡ ಕಾರ್ಮಿಕ ಇಲಾಖೆ ಅಥವಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಭೇಟಿ ನೀಡುವ ಮೂಲಕ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು
Free sewing machine application documents- ಬೇಕಾದ ಅಗತ್ಯ ದಾಖಲಾತಿಗಳು:
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
- ಜನ್ಮ ದಿನಾಂಕ ಹೊಂದಿರುವ ದಾಖಲೆ ( ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ವರ್ಗಾವಣೆ ಪ್ರಮಾಣ ಪತ್ರ ಇತ್ಯಾದಿ)
- ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕ ರೇಷನ್ ಕಾರ್ಡ್ಹೊ
- ಲಿಗೆ ವೃತ್ತಿ ಮಾಡುತ್ತಿದ್ದರೆ ಅಂಗಡಿಯ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಜೆರಾಕ್ಸ್ಕಾ
- ರ್ಮಿಕ ಇಲಾಖೆ ಲೇಬರ್ ಕಾರ್ಡ್
ಕಟ್ಟಡ ಕಾರ್ಮಿಕ ಇಲಾಖೆಯಿಂದ ನೀಡಲಾದ ಲೇಬರ ಕಾರ್ಡ್ ಇಲ್ಲದಿದ್ದರೆ ಈಗಲೇ ಅದನ್ನು ಮಾಡಿಸಿ ಕಡ್ಡಾಯವಾಗಿ ಅದು ಬೇಕಾಗುತ್ತದೆ.
ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರತಿ ಮನೆಯ ಒಬ್ಬರಿಗೆ ನೀಡಲಾಗುತ್ತದೆ ಹಾಗೂ ಹೆಣ್ಣು ಮಕ್ಕಳಿಗೆ ಮಾತ್ರ ನೀಡಲಾಗುತ್ತದೆ.
State
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.
ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಕೆಯುಡಬ್ಲೂಜೆ ಸಂತಾಪ:
ಹಿರಿಯ ಪತ್ರಕರ್ತರದ ಅರ್ಜುನ್ ದೇವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.
ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ.
State
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ಏರ್ಪಡಿಸಿದ್ದ ಸಂವಾದ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮವನ್ನು ಬೆಂಗಳೂರು ನಗರ ವಿವಿ ಪ್ರೊ.ಲಿಂಗರಾಜ ಗಾಂಧಿ ಉದ್ಘಾಟಿಸಿದರು.
ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಅನಂತ ಚಿನಿವಾರ್ , ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರೊ.ಎನ್.ನರಸಿಂಹಮೂರ್ತಿ ಕೆ ಯು ಡ ಬ್ಲೂೃ ಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಭಾಗವಹಿಸಿದ್ದರು.
State
ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ಒಡವೆ, ಮದ್ಯ ಎಲ್ಲಿಗೆ ಹೋಗುತ್ತೆ? ವಶ ಪಡಿಸಿಕೊಂಡ ಹಣ ವಾಪಸ್ ಪಡೆಯಬಹುದಾ?
* ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ದೊಡ್ಡ ಮೊತ್ತದ ಹಣವನ್ನು ವಾಹನಗಳಲ್ಲಿ ತೆಗೆದುಕೊಂಡು ಹೋಗಲು ಆಗುವುದಿಲ್ಲ. ಹೈವೇಗಳಲ್ಲಿ, ಗಡಿ ಭಾಗದಲ್ಲಿ, ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ತಪಾಸಣೆ ಮಾಡಲಾಗುತ್ತಿರುತ್ತದೆ. ಮದುವೆಗೆ ಹೋಗುತ್ತಿದ್ದೇವೆ, ಆಸ್ಪತ್ರೆಯಲ್ಲಿ ಆಪರೇಷನ್ ಇದೆ. ಹೀಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದೀವಿ ಎಂದರೂ ಅಧಿಕಾರಿಗಳು ಬಿಡುವುದಿಲ್ಲ. ಹಣ ನಿಮ್ಮದು ಎನ್ನಲು ಪುರಾವೆ ನೀಡಿ ಎನ್ನುತ್ತಾರೆ. ಈ ರೀತಿ ಚುನಾವಣೆ ವೇಳೆ ಜಪ್ತಿ ಮಾಡಲಾಗುವ ಹಣ, ನಗದು, ಮದ್ಯವನ್ನು ಏನು ಮಾಡಲಾಗುತ್ತೆ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಿದರೆ, ಅದಕ್ಕೆ ಉತ್ತರ ಇಲ್ಲಿದೆ.
ಇಡೀ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ 2024 ಕದನ ರಂಗೇರಿದೆ. ಇದೇ ಏಪ್ರಿಲ್ 26ರಿಂದ ಜೂನ್ 04ರ ವರೆಗೆ ದೇಶದಲ್ಲಿ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಹಾಗೂ ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆ ಘೋಷಣೆಯಾದ ದಿನವೇ ಅಂದರೆ ಮಾರ್ಚ್ 16ರ ಸಂಜೆಯಿಂದಲೇ ದೇಶದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು ಭದ್ರತಾ ಪಡೆಗಳು ನಿರಂತರ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ಹದ್ದಿನ ಕಣ್ಣಿಟ್ಟಿದ್ದಾರೆ. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ತಪಾಸಣೆ ನಡೆಯುತ್ತಿದೆ. ಹೈವೇಗಳಲ್ಲಿ ಸಾಗುವ ಪ್ರತಿಯೊಂದು ಬೈಕು, ಕಾರು, ಬಸ್, ಲಾರಿ ಸೇರಿದಂತೆ ವಾಹನಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಈ ರೀತಿ ತಪಾಸಣೆ ಮಾಡುವಾಗ ವಶಪಡಿಸಿಕೊಳ್ಳಲಾಗುವ ಹಣ, ಒಡವೆ ಮತ್ತು ಮದ್ಯವನ್ನು ಚುನಾವಣಾ ಆಯೋಗ ಮತ್ತು ಪೊಲೀಸರು ಏನು ಮಾಡುತ್ತಾರೆ ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡುವುದು ಸಹಜ. ಅದಕ್ಕೆ ಸಂಪೂರ್ಣ ಉತ್ತರ ಇಲ್ಲಿದೆ.
ಒಬ್ಬ ಅಭ್ಯರ್ಥಿಯ ಚುನಾವಣಾ ಖರ್ಚು ಎಷ್ಟು?
ಚುನಾವಣೆ ಬಂತೆಂದರೆ ಸಾಕು ಹಣದ ಹೊಳೆಯೇ ಹರಿಯುತ್ತೆ. ವಿಧಾನಸಭೆ ಚುನಾವಣೆಯೇ ಆಗಲಿ, ಲೋಕಸಭಾ ಚುನಾವಣೆಯೇ ಆಗಲಿ, ಯಾವುದಕ್ಕೂ ಭೇದ ಭಾವ ಇಲ್ಲದೆ ಚುನಾವಣಾ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಾರೆ. ಇದು ನಮಗೆಲ್ಲಾ ತಿಳಿದಿರುವ ವಿಷಯ. ಜೊತೆಗೆ ಮತದಾರರಿಗೆ ಈ ರೀತಿ ಹಣ, ಹೆಂಡ ಕೊಡುವ ವಿಷಯದಲ್ಲಿ ಇಡೀ ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಚುನಾವಣೆ ಆಯೋಗದ ನಿಯಮವನ್ನೂ ಗಾಳಿಗೆ ತೂರಿ, ಮತದಾರರನ್ನು ಸೆಳೆಯಲು ಕಳ್ಳ ಮಾರ್ಗದಲ್ಲಿ ಹೆಚ್ಚಿನ ಹಣ ವ್ಯಯಿಸುತ್ತಾರೆ. ಹೀಗಾಗಿ ಚುನಾವಣಾ ಆಯೋಗ ಅಭ್ಯರ್ಥಿ ಖರ್ಚು ಮಾಡುವ ಪ್ರತಿಯೊಂದು ರೂಪಾಯಿಯ ಮೇಲೂ ಕಣ್ಣಿಡುತ್ತೆ. ಚುನಾವಣಾ ಆಯೋಗವು ನಿಗದಿಪಡಿಸಿದ ನಿಯಮಗಳ ಪ್ರಕಾರ ಲೋಕಸಭಾ ಕ್ಷೇತ್ರ ದೊಡ್ಡದಾಗಿದ್ದರೆ ಅಭ್ಯರ್ಥಿಯು 95 ಲಕ್ಷದ ವರೆಗೆ ಹಣ ಖರ್ಚು ಮಾಡಬಹುದು. ಅದೇ ಚಿಕ್ಕ ಲೋಕಸಭಾ ಕ್ಷೇತ್ರವಾದ್ರೆ 75 ಲಕ್ಷ ರೂ. ವರೆಗೆ ಮಾತ್ರ ಖರ್ಚು ಮಾಡಬೇಕು. ಆಯೋಗ ನಿಗದಿ ಪಡಿಸಿರುವ ವೆಚ್ಚಕ್ಕಿಂತ ಹೆಚ್ಚು ಖರ್ಚು ಮಾಡಿದರೆ ಕಠಿಣ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತೆ. ಅಭ್ಯರ್ಥಿ ಪ್ರತ್ಯೇಕ ಖಾತೆ ತೆರೆದು ಚುನಾವಣೆ ಖರ್ಚಿನ ಲೆಕ್ಕವಿಡಬೇಕು. ಅಲ್ಲದೆ ಪ್ರಚಾರದ ವೇಳೆ ಕಾರ್ಯಕರ್ತರ ಟೀ-ಕಾಫಿ, ಊಟದ ವೆಚ್ಚುವನ್ನೂ ಕೂಡ ಚುನಾವಣೆ ಆಯೋಗಕ್ಕೆ ಸಲ್ಲಿಸಬೇಕು. ಹಾಗೂ ಚುನಾವಣಾ ಆಯೋಗ ಪ್ರತ್ಯೇಕ ಸದಸ್ಯರನ್ನು ನೇಮಿಸಿ ಪ್ರಚಾರದ ವೇಳೆ ಬಳಸಲಾಗುವ ವಸ್ತುಗಳು, ಸಭೆಗಳಲ್ಲಿ ನೀಡಲಾಗುವ ಹೂಗುಚ್ಛ ಸೇರಿದಂತೆ ಪ್ರತಿಯೊಂದು ವಸ್ತುವಿನ ಚಿತ್ರೀಕರಣ ಮಾಡಿಸುತ್ತೆ. ಈ ಮೂಲಕ ಅಭ್ಯರ್ಥಿ ಖರ್ಚಿನ ಮೇಲೆ ನಿಗಾ ಇಡುತ್ತೆ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಹೆಸರನ್ನು ಪಕ್ಷ ಘೋಷಣೆ ಮಾಡುತ್ತಿದ್ದಂತೆಯೇ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಾರೆ. ಒಂದು ವೋಟಿಗೆ ಇಷ್ಟು ಎಂದು ಹಣ ಎಂದು ಹಂಚುತ್ತಾರೆ, ಮದ್ಯ, ಒಡವೆ, ಪಾತ್ರೆ ಸಾಮಾನುಗಳು, ದಿನಸಿ, ದಿನ ನಿತ್ಯ ಬಳಕೆಯಾಗುವ ವಸ್ತುಗಳು, ಟಿವಿ, ಕುಕ್ಕರ್, ಮಿಕ್ಸರ್, ಸೀರೆ, ಚೂಡಿದಾರ್, ಪ್ಯಾಂಟ್-ಶರ್ಟ್, ಡಿಜಿಟಲ್ ವಾಚುಗಳು, ತಂಬಾಕು, ಗುಡ್ಕ ಸೇರಿದಂತೆ ಅನೇಕ ವಸ್ತುಗಳನ್ನು ನೀಡಿ ಆಮಿಷವೊಡ್ಡುತ್ತಾರೆ ಎಂದು ಕರ್ನಾಟಕದ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ವೆಂಕಟೇಶ್ ಕುಮಾರ್ ತಿಳಿಸಿದರು. ಈ ರೀತಿಯ ಆಫರ್ ನೀಡಲಾಗುತ್ತಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕಲಬುರಗಿ ಜಿಲ್ಲೆಗಳು ಇಡೀ ರಾಜ್ಯದಲ್ಲೇ ಅಗ್ರಸ್ಥಾನದಲ್ಲಿವೆ. ಇನ್ನು ಗಮನಿಸುವ ವಿಷಯವೆಂದರೆ ಈ ಬಾರಿ ದಿನಸಿ ವಸ್ತುಗಳು ಹೆಚ್ಚಾಗಿ ಜಪ್ತಿಯಾಗಿವೆ. ಫುಡ್ ಕಿಟ್ಗಳು, ತರಕಾರಿ, ಅಕ್ಕಿ, ಬೇಳೆ, ಟೊಮೆಟೋ ಸಾಸ್, ತಂಬಾಕು ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಬೀದರ್ ಜಿಲ್ಲೆಯಲ್ಲಿ 10 ಲಕ್ಷ ಮೌಲ್ಯದ 4,000 ಕೆಜಿ ತೂಕದ ಅಪಾರ ಪ್ರಮಾಣದ ಪಾನ್ ಮಸಾಲಾ ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. 24 ಲಕ್ಷ ಮೌಲ್ಯದ 96 ದುಬಾರಿ ವಾಚ್ಗಳನ್ನು ಚಿಕ್ಕಬಳ್ಳಾಪುರ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 22 ರಂದು ಬಳ್ಳಾರಿ ಕ್ಷೇತ್ರದಲ್ಲಿ 30 ಲಕ್ಷ ಮೌಲ್ಯದ 203 ಕೆಜಿ ಶ್ರೀಗಂಧವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಎಫ್ಐಆರ್ ದಾಖಲಾಗಿದ್ದು, 11 ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಲಾಗಿದೆ.
ಜೊತೆಗೆ ಬಹುತೇಕ ಬಾರಿ ಒಂದು ಪಕ್ಷ ಮತ್ತೊಂದು ಪಕ್ಷಕ್ಕೆ ಅಥವಾ ಅಭ್ಯರ್ಥಿಯಿಂದ ಕಾರ್ಯಕರ್ತರ ಕೈಗೆ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆಯಾಗುತ್ತೆ. ಈ ಅಕ್ರಮಗಳು ಜರುಗದಂತೆ ನೋಡಿಕೊಳ್ಳಲು, ವಾಹನಗಳಲ್ಲಿ ಸಾಗಿಸಲಾಗುವ ಹಣ, ಮದ್ಯ, ಒಡವೆಯನ್ನು ಅಧಿಕಾರಿಗಳು ಸೀಜ್ ಮಾಡುತ್ತಾರೆ. ಅಲ್ಲದೆ ಚುನಾವಣೆಯಲ್ಲಿ ಕಪ್ಪು ಹಣವನ್ನು ಬಳಸಲಾಗುತ್ತೆ. ಹೀಗಾಗಿ ಅಧಿಕಾರಿಗಳು ಹದ್ದಿನ ಕಣ್ಣಿಡುತ್ತಾರೆ.
ರಾಜ್ಯದಲ್ಲಿ ಈವರೆಗೆ 355 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ
ಸದ್ಯ ಲೋಕಸಭಾ ಚುನಾವಣೆ ಹಿನ್ನೆಲೆ ಅಕ್ರಮ ತಡೆಗಟ್ಟಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಕರ್ನಾಟಕದಲ್ಲಿ ಏಪ್ರಿಲ್ 14ರ ವರೆಗೆ 345 ಕೋಟಿ ರೂ. ಮೌಲ್ಯದ ಸ್ವತ್ತು ಜಪ್ತಿ ಮಾಡಲಾಗಿದೆ. ಪ್ರಸಕ್ತ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮಾ.16ರಿಂದ ಏಪ್ರಿಲ್ 14ರ ವರೆಗೆ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಆದಾಯ ತೆರಿಗೆ, ಅಬಕಾರಿ ಅಧಿಕಾರಿಗಳು ರಾಜ್ಯದಲ್ಲಿ ಒಟ್ಟು 355.78 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ ಶೇ.49ರಷ್ಟು ಸ್ವತ್ತುಗಳನ್ನು ಸೂಕ್ತ ದಾಖಲೆ ಪತ್ರ ಆಧರಿಸಿ ವಾರಸುದಾರರಿಗೆ ಹಿಂತಿರುಗಿಸಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು. ಈವರೆಗೂ ನಡೆದಿರುವ 17 ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದ ನಗದು, ಮದ್ಯ, ಡ್ರಗ್ಸ್ ಪತ್ತೆಯಾಗಿರಲಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ನಗದು, ಮದ್ಯ, ಡ್ರಗ್ಸ್, ಬೆಲೆ ಬಾಳುವ ಲೋಹ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿರುವ ಪ್ರಕರಣಗಳಿಗೆ ಸಂಬಂಸಿದಂತೆ 1707 ಎಫ್ಐಆರ್ಗಳು ದಾಖಲಾಗಿವೆ. ಅಬಕಾರಿ ಇಲಾಖೆ ಘೋರ ಅಪರಾಧ ಅಡಿಯಲ್ಲಿ 2,200 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 2,828 ಪುಕರಣ ದಾಖಲಿಸಿದೆ. NDPS ಅಡಿಯಲ್ಲಿ 125 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15(a) ಅಡಿಯಲ್ಲಿ 15,013 ಪ್ರಕರಣಗಳನ್ನು ದಾಖಲಿಸಿದೆ. ಮತ್ತು 1,349 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ಇಲಾಖೆಯವರು 23,46,000 ರೂ. ಮೌಲ್ಯದ 1,150 ಕೇಸ್ ಪೆಟ್ಟಿಗೆಗಳ ಮದ್ಯವನ್ನು (8,970 Itrs ಬಿಯರ್) KSBCL Depo, ಕೊತ್ತೂರು, ಕಮ್ಮಸಂದ್ರ ಗ್ರಾಮ, ವಿರ್ಗೊ ನಗರ ಅಂಚೆ, ಬೀದರಹಳ್ಳಿ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 49,88,275 ರೂ. ಮೌಲ್ಯದ 1,150 ಕೇಸ್ ಪೆಟ್ಟಿಗೆಗಳ ಮದ್ಯವನ್ನು (9,108 Itrs ಬಿಯರ್) KSBCL Depo-1, ಕೆ.ಜಿ ಹಳ್ಳಿ, ನಿವೇಶನ ಸಂಖ್ಯೆ.76,77 ಮತ್ತು 78, ಕಾಡುಗೊಂಡನಹಳ್ಳಿ, ಕಸಬಾ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು ರೂ.46,14,064/- ಮೌಲ್ಯದ 13,800 Itrs ಬಿಯರ್ನು, KSBCL Depo-2, ಕೆ.ಜಿ ಹಳ್ಳಿ, ನಿವೇಶನ ಸಂಖ್ಯೆ.76,77 ಮತ್ತು 78, ಕಾಡುಗೊಂಡನಹಳ್ಳಿ, ಕಸಬಾ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ,ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು ರೂ.89,25,507/- ಮೌಲ್ಯದ 1,186.200 Itrs(IML) ಮದ್ಯವನ್ನು, KSBCL Depo-2, ಕೆ.ಜಿ ಹಳ್ಳಿ, ನಿವೇಶನ ಸಂಖ್ಯೆ.76,77 ಮತ್ತು 78, ಕಾಡುಗೊಂಡನಹಳ್ಳಿ, ಕಸಬಾ ಹೋಬಳಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ,ಇಲ್ಲಿ ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು ರೂ.55,62,739/- ಮೌಲ್ಯದ 7386.120 Itrs((ML) ಮದ್ಯವನ್ನು, KSBCL Depo ದೊಡ್ಡಕಮ್ಮನಹಳ್ಳಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ, ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಇಲ್ಲಿ ವಶಪಡಿಸಿಕೊಂಡಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಜಪ್ತಿ ಮಾಡಲಾದ ಹಣ ಎಲ್ಲಿಗೆ ಹೋಗುತ್ತೆ?
ಈ ಹಿಂದೆ ಹೇಳಿದಂತೆ ಚುನಾವಣಾ ದಿನಾಂಕ ಮತ್ತು ಅಭ್ಯರ್ಥಿಯ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಚಾರ ಆರಂಭಿಸುತ್ತಾರೆ. ಹತ್ತಾರು ಬಾರಿ ಸಭೆ, ಸಮಾಲೋಚನೆಗಳನ್ನು ನಡೆಸುತ್ತಾರೆ. ರ್ಯಾಲಿಗಳು, ಮತದಾರರಿಗಾಗಿ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾರೆ. ಇಂತಹ ಸಮಯದಲ್ಲಿ ಅಕ್ರಮ ನಗದು, ಚಿನ್ನ, ಮದ್ಯ ಮತ್ತು ಕಪ್ಪು ಹಣ ಸಾಗಿಸಲಾಗುತ್ತೆ. ಹೀಗಾಗಿ ಪೊಲೀಸರು ಚುನಾವಣಾ ಸಮಯದಲ್ಲಿ ಹೈ ಅಲರ್ಟ್ ಆಗುತ್ತಾರೆ. ಅನುಮಾನ ಬರುವ ವಾಹನಗಳು ಹಾಗೂ ಜನರನ್ನು ನಿಲ್ಲಿಸಿ ತಪಾಸಣೆ ನಡೆಸಿ ವಿಚಾರಣೆ ನಡೆಸುತ್ತಾರೆ.
ಇನ್ನು ಮಾಹಿತಿಗಳ ಪ್ರಕಾರ ಚುನಾವಣೆ ಸಂದರ್ಭದಲ್ಲಿ ಜಪ್ತಿ ಮಾಡಲಾದ ಮದ್ಯವನ್ನು ಒಂದು ಕಡೆ ಶೇಖರಿಸಿ ಇಟ್ಟು ಕೊನೆಗೆ ಅಷ್ಟನ್ನೂ ನಾಶಮಾಡಲಾಗುತ್ತದೆ. ರೋಡ್ ರೋಲರ್ನಿಂದ ಪುಡಿಮಾಡಿ ನಾಶಪಡಿಸಲಾಗುತ್ತೆ. ಅಮೆಜಾನ್ ಪ್ರೈಮ್ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಪೋಚರ್ ಸರಣಿಯಲ್ಲೂ ಕೂಡ ಅರಣ್ಯ ಅಧಿಕಾರಿಗಳು ಕೇರಳದಲ್ಲಿ ಆದ ಆನೆಯ ದಂತ ಕಳ್ಳಸಾಗಣಿಕೆ ಪ್ರಕರಣವನ್ನು ಭೇದಿಸಿ ಕೊನೆಗೆ ವಶ ಪಡಿಸಿಕೊಂಡ ದಂತವನ್ನು ನಾಶಪಡಿಸುವುದಾಗಿ ಘೋಷಿಸುತ್ತಾರೆ. ಅದೇ ರೀತಿ ಚುನಾವಣೆ ವೇಳೆ ವಶಕ್ಕೆ ಪಡೆದ ಮದ್ಯವನ್ನು ನಾಶ ಮಾಡಲಾಗುತ್ತೆ. ಇನ್ನು ನಗದು, ಆಭರಣದ ವಿಷಯಕ್ಕೆ ಬಂದರೆ ಮೊದಲಿಗೆ ಪೊಲೀಸರೇ ತಮ್ಮ ವ್ಯಾಪ್ತಿಯಲ್ಲಿ ಜಪ್ತಿಯಾದ ಹಣದ ಬಗ್ಗೆ ವಿಚಾರಣೆ ನಡೆಸುತ್ತಾರೆ. ಹಣದ ಮೂಲ ಯಾವುದು, ಅದು ಕಪ್ಪು ಹಣವೇ ಎಂದು ತನಿಖೆಗೆ ಇಳಿಯುತ್ತಾರೆ. ಹಣದ ಮೊತ್ತ ಹೆಚ್ಚಿದ್ದರೆ ಅದು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗುತ್ತದೆ.
ಚುನಾವಣೆ ವೇಳೆ ವಶ ಪಡಿಸಿಕೊಂಡ ಹಣ ವಾಪಸ್ ಪಡೆಯಬಹುದಾ?
ಚುನಾವಣೆ ಸಂದರ್ಭದಲ್ಲಿ ಪೊಲೀಸರು, ಅಧಿಕಾರಿಗಳು ವಶಕ್ಕೆ ಪಡೆದ ನಗದು, ಆಭರಣಗಳನ್ನು ಕ್ಲೈಮ್ ಮಾಡಿಕೊಳ್ಳಬಹುದು. ಆದರೆ ಆ ಹಣ ತನ್ನದು ಎಂದು ಸಾಬೀತುಪಡಿಸಬೇಕಾಗುತ್ತೆ. ಮೊದಲಿಗೆ ಹಣ ಅಥವಾ ಒಡವೆ ಜಪ್ತಿ ಮಾಡಿ, ಅದನ್ನು ಆಧಾರವಿಲ್ಲದ ಹಣ ಎಂದು ಕೇಸ್ ಹಾಕಲಾಗುತ್ತೆ. ಎಫ್ಐಆರ್ ದಾಖಲಾಗುತ್ತೆ. ಹೀಗಾಗಿ ಈ ಪ್ರಕರಣ ಕೋಟಿಗೆ ಹೋಗುತ್ತೆ. ಬಳಿಕ ವ್ಯಕ್ತಿ ಆ ಹಣಕ್ಕೆ ಅಥವಾ ಆ ಒಡವೆಗೆ ಸರಿಯಾದ ಆಧಾರವನ್ನು ಸಲ್ಲಿಸಿ ಇದು ಅಕ್ರಮವಾಗಿ ಗಳಿಸಿದಲ್ಲ, ಅಥವಾ ಯಾವ ಪಕ್ಷದ ಹಣವೂ ಅಲ್ಲ ಎಂದು ಸಂಪೂರ್ಣ ಮಾಹಿತಿಯನ್ನು ಪುರಾವೆಯಾಗಿ ಸಲ್ಲಿಸಿದ ನಂತರ ಹಣ, ಒಡವೆಯನ್ನು ಇಲಾಖೆ ಹಿಂತಿರುಗಿಸುತ್ತದೆ. ಸುಮಾರು ಒಂದು ವಾರಗಳ ಕಾಲ ಕೋರ್ಟ್ನಲ್ಲಿ ಚರ್ಚೆ, ದಾಖಲೆಗಳ ಪರಿಶೀಲನೆ ಬಳಿಕ ನಿಮ್ಮ ವಸ್ತುಗಳು ನಿಮ್ಮ ಕೈ ಸೇರುತ್ತವೆ. ಆದರೆ ಮುಟ್ಟುಗೋಲು ಹಾಕಿಕೊಂಡ ಹಣವನ್ನು ಯಾರೂ ಕ್ಲೇಮ್ ಮಾಡದಿದ್ದಲ್ಲಿ ಅದು ಸರ್ಕಾರದ ಖಜಾನೆಗೆ ಜಮೆಯಾಗುತ್ತದೆ. ವ್ಯಕ್ತಿಯು ಸಂಪೂರ್ಣ ಮಾಹಿತಿಯನ್ನು ಪುರಾವೆಯಾಗಿ ಪ್ರಸ್ತುತಪಡಿಸಿದರೆ ಮಾತ್ರ ಹಣವನ್ನು ಹಿಂತಿರುಗಿಸಲಾಗುತ್ತದೆ. ಪುರಾವೆಗಾಗಿ, ಎಟಿಎಂ ವಹಿವಾಟು, ಬ್ಯಾಂಕ್ ರಸೀದಿ ಮತ್ತು ಪಾಸ್ಬುಕ್ನಲ್ಲಿ ನಿಖರ ಮಾಹಿತಿಯನ್ನು ಹೊಂದಿರಬೇಕು. ಲೋಕಸಭಾ, ವಿಧಾನಸಭಾ ಯಾವುದೇ ಚುನಾವಣೆಯಾದರೂ ಇದೇ ನಿಯಮ ಅನ್ವಯವಾಗುತ್ತದೆ.
-
State3 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health3 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Uncategorized5 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
Hassan1 day ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
State3 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.
-
Education3 months ago
ಎಸ್ಎಸ್ಎಲ್ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ
-
State3 months ago
KPSC: ಗೆಜೆಟೆಡ್ ಪ್ರೊಬೆಷನರಿ ಹುದ್ದೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ!!!
-
Agriculture3 months ago
ಅಡಿಕೆಯ ತಾಯಿ ಮರವನ್ನು ಆಯ್ಕೆ ಮಾಡುವುದು ತುಂಬ ಸುಲಭ!!