Connect with us

State

Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!

Published

on

Free sewing machine fill this application :
ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತಾವಲಿಗೆ ಯಂತ್ರ ನೀಡಲಾಗುತ್ತದೆ ಹಾಗೂ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಯಾರು ಬರ್ತಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ

ವಾಣಿಜ್ಯ ಇಲಾಖೆ ಕಡೆಯಿಂದ ಅರ್ಹ ಮಹಿಳೆಯರಿಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ಹೊಲಿಗೆ ಯಂತ್ರ ನೀಡಲಾಗುವುದು

ಹೊಲಿಗೆ ಯಂತ್ರ application-2024

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ 20204 ವರ್ಷದಲ್ಲಿ ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತ ವಲಗೆ ಯಂತ್ರ ನೀಡಲಾಗುತ್ತದೆ ಹಾಗೂ ಈ ಯೋಜನೆ ಸ್ವ-ಉದ್ಯೋಗವನ್ನು ಮಹಿಳೆಯರು ಕೈಗೊಳ್ಳಲಿ ಎಂದು ಈ ಯೋಜನೆ ಆರಂಭಿಸಲಾಗಿದೆ.

ಅರ್ಜಿ ಸಲ್ಲಿಸಲು
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಭೇಟಿ ನೀಡಿ

ಉಚಿತ ಹೊಲಿಗೆಯಂತ್ರ ಕರ್ನಾಟಕದಲ್ಲಿ ಮೊದಲು ಎಲ್ಲೆಲ್ಲಿ ನೀಡಲಾಗುತ್ತದೆ.

  1. ಚಿಕ್ಕಬಳ್ಳಾಪುರ
  2. ಗದಗ
  3. ಯಾದಗಿರಿ
  4. ಮಂಡ್ಯ
  5. ರಾಯಚೂರು
  6. ಹಾಸನ
  7. ಚಿಕ್ಕಮಗಳೂರು
  8. ತುಮಕೂರು
  9. ಮೈಸೂರು
  10. ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಕೋಲಾರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Free sewing machine fill this application : ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು.

ಈ ಯೋಜನೆ ಅಡಿಯಲ್ಲಿ ಬಡ ಜನರು ಪರಿಚಯ ಸಲ್ಲಿಸಬಹುದು ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ಅರ್ಜಿಯನ್ನು ಸಲ್ಲಿಸಲು ಅನಾರಗಿರುತ್ತಾರೆ. ಹೊಲಿಗೆ ವೃತ್ತಿಯನ್ನು ಮಾಡುತ್ತಿರುವವರು ಮೊದಲು ಆದ್ಯತೆ ನೀಡಲಾಗುತ್ತದೆ ಆನ್ಲೈನ್ ಮೂಲಕ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಥವಾ ಕಟ್ಟಡ ಕಾರ್ಮಿಕ ಇಲಾಖೆ ಅಥವಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಭೇಟಿ ನೀಡುವ ಮೂಲಕ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು

Free sewing machine application documents- ಬೇಕಾದ ಅಗತ್ಯ ದಾಖಲಾತಿಗಳು:

  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
  • ಜನ್ಮ ದಿನಾಂಕ ಹೊಂದಿರುವ ದಾಖಲೆ ( ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ವರ್ಗಾವಣೆ ಪ್ರಮಾಣ ಪತ್ರ ಇತ್ಯಾದಿ)
  • ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕ ರೇಷನ್ ಕಾರ್ಡ್ಹೊ
  • ಲಿಗೆ ವೃತ್ತಿ ಮಾಡುತ್ತಿದ್ದರೆ ಅಂಗಡಿಯ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಜೆರಾಕ್ಸ್ಕಾ
  • ರ್ಮಿಕ ಇಲಾಖೆ ಲೇಬರ್ ಕಾರ್ಡ್

ಕಟ್ಟಡ ಕಾರ್ಮಿಕ ಇಲಾಖೆಯಿಂದ ನೀಡಲಾದ ಲೇಬರ ಕಾರ್ಡ್ ಇಲ್ಲದಿದ್ದರೆ ಈಗಲೇ ಅದನ್ನು ಮಾಡಿಸಿ ಕಡ್ಡಾಯವಾಗಿ ಅದು ಬೇಕಾಗುತ್ತದೆ.

ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರತಿ ಮನೆಯ ಒಬ್ಬರಿಗೆ ನೀಡಲಾಗುತ್ತದೆ ಹಾಗೂ ಹೆಣ್ಣು ಮಕ್ಕಳಿಗೆ ಮಾತ್ರ ನೀಡಲಾಗುತ್ತದೆ.

Continue Reading
Click to comment

Leave a Reply

Your email address will not be published. Required fields are marked *

Special

ಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.

Published

on

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD Karnataka) ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಿಗೆ ಒಟ್ಟು 571 ಹುದ್ದೆಗಳ ನೇಮಕಾತಿ ಪ್ರಕಟಿಸಿದೆ. ಮಹಿಳೆಯರಿಗೆ ಸರ್ಕಾರದಡಿ ದೊರೆಯುವ ಸುರಕ್ಷಿತ ಮತ್ತು ಮಾನ್ಯ ಉದ್ಯೋಗಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಪ್ರಮುಖವಾಗಿದ್ದು, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅವಕಾಶ ಲಭ್ಯವಾಗಿದೆ.

ಲಭ್ಯವಿರುವ ಹುದ್ದೆಗಳು:
•ಅಂಗನವಾಡಿ ಕಾರ್ಯಕರ್ತೆ
•ಅಂಗನವಾಡಿ ಸಹಾಯಕಿ

ಅರ್ಹತೆ :
1. ಅಂಗನವಾಡಿ ಕಾರ್ಯಕರ್ತೆ
•SSLC ಪಾಸಾಗಿರಬೇಕು
•ಸ್ಥಳೀಯ ಗ್ರಾಮ/ವಾರ್ಡ್ ನಿವಾಸಿಯಾಗಿರಬೇಕು
2. ಅಂಗನವಾಡಿ ಸಹಾಯಕಿ
•4ನೇ ತರಗತಿಯಿಂದ 9ನೇ ತರಗತಿ ವರೆಗೆ ವಿದ್ಯಾರ್ಹತೆ ಹೊಂದಿರಬಹುದು
•ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ

ವಯೋಮಿತಿ: 19-35 ವರ್ಷ

ಅರ್ಜಿ ಸಲ್ಲಿಸುವ ವಿಧಾನ :
•ನಿಮ್ಮ ತಾಲೂಕು/ಜಿಲ್ಲೆಯ ಅಧಿಕೃತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
•ಆನ್‌ಲೈನ್ ಅರ್ಜಿಯನ್ನು ಸರಿಯಾದ ಮಾಹಿತಿ ಹಾಗೂ ಅಗತ್ಯ ದಾಖಲೆಗಳಿಂದ ಭರ್ತಿ ಮಾಡಿ.
•ಅರ್ಜಿ ಸಲ್ಲಿಸಿದ ನಂತರ ದೃಢೀಕರಣ ಪ್ರತಿಯನ್ನು ಸೇವ್ ಮಾಡಿ.

ಆಯ್ಕೆ ಪ್ರಕ್ರಿಯೆ ಹೇಗೆ?:
ಅಂಗನವಾಡಿ ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲ.ಆಯ್ಕೆ ಸಂಪೂರ್ಣವಾಗಿ ವಿದ್ಯಾರ್ಹತೆ, ದಾಖಲೆಗಳ ಪರಿಶೀಲನೆ, ಸ್ಥಳೀಯತೆ, ಮೀಸಲಾತಿ ನಿಯಮಗಳು ಇವುಗಳನ್ನು ಆಧರಿಸಿ ಮಾಡಲಾಗುತ್ತದೆ.

ಉದ್ದೇಶ:
•ಸ್ಥಳೀಯ ಮಹಿಳೆಯರಿಗೆ ಸುರಕ್ಷಿತ ಸರ್ಕಾರಿ ಉದ್ಯೋಗ
•ತಿಂಗಳ ವೇತನ, ಮಾನ್ಯತೆ, ಮತ್ತು ಭದ್ರ ಉದ್ಯೋಗ
•ಸಮಾಜ ಸೇವೆ ಜೊತೆಗೆ ಕುಟುಂಬಕ್ಕೆ ಆರ್ಥಿಕ ಸಹಾಯ

ಕರ್ನಾಟಕದಲ್ಲಿ ಪ್ರಕಟವಾದ 571 ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗಳು, ಸರ್ಕಾರಿ ಸೇವೆಗೆ ಬಯಸುವ ಮಹಿಳೆಯರಿಗೆ ದೊಡ್ಡ ಅವಕಾಶ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ ಅರ್ಹರು ಈಗಲೇ ಅರ್ಜಿ ಹಾಕಿ ಸದುಪಯೋಗ ಪಡಿಸಿಕೊಳ್ಳಿರಿ

Continue Reading

State

ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್

Published

on

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನಂತರ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್  ಭೇಟಿ ನೀಡಿದ್ದು, ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.

ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಒಂದು ಗಂಟೆ ಮುಂಚೆಯೇ ಪವನ್ ಕಲ್ಯಾಣ್ ಆಗಮಿಸಿದರು. ಈ ವೇಳೆ ಉಡುಪಿಯ ಊಟ ಸವಿದು ಬಳಿಕ ಕೃಷ್ಣ ಮಠದಲ್ಲಿ ಭಾಗವಹಿಸಿದ್ದಾರೆ.

ಪರ್ಯಾಯ ಪುತ್ತಿಗೆ ಮಠದಿಂದ ಪವನ್ ಕಲ್ಯಾಣ್‌ಗೆ ಭವ್ಯ ಸ್ವಾಗತ ಕೋರಲಾಯಿತು. ಕನಕನ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೃಷ್ಣ ಮಠದ ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಬಳಿಕ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಸುವರ್ಣ ತೀರ್ಥಮಂಟಪದಲ್ಲಿ ಕೂತು ಪ್ರಸಾದ ಸ್ವೀಕರಿಸಿದ್ದಾರೆ.

ನಂತರ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಪರ್ಯಾಯ ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಶ್ರೀಗಳು, ಇಸ್ಕಾನ್ ಮಾಯಾಪುರಿ ಶ್ರೀ ಭಾಗವಹಿಸಿದರು.

Continue Reading

Mysore

ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ

Published

on

ಉಡುಪಿ: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿಯಾ್ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್‌ಡಿಪಿಐ ಅಂಬುಲೆನ್ಸ್‌ನಲ್ಲಿ ಜಲಾಲುದ್ದೀನ್ ಉಚ್ಚಿಲ ಹಾಗೂ ಹಮೀದ್ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

Trending

error: Content is protected !!