Connect with us

Mysore

ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ.ಲಕ್ಷ್ಮೀಕಾಂತ್‌ ರೆಡ್ಡಿ

Published

on

ಮೈಸೂರು: ಜಿಲ್ಲೆಯ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆಗಳನ್ನು ನಿವಾರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಾರ್ಯ ವ್ಯಾಪ್ತಿಗೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಅವಲಂಬಿತರ ಕುಂದು ಕೊರತೆ ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಾಜಿ ಸೈನಿಕರು ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದರು. ಇನ್ನು ಮುಂದೆಯೂ ಮಾಜಿ ಸೈನಿಕರ ಸಮಸ್ಯೆಗಳನ್ನು ಪ್ರಥಮ ಆದ್ಯತೆಯಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.


ತಮ್ಮ ಹಂತದಲ್ಲಿ ಪ್ರತಿ ತಿಂಗಳು ಮಾಜಿ ಸೈನಿಕರ ಕುಂದು ಕೊರತೆಗಳ ಸಭೆ ನಡೆಸಿ ಪರಿಹರಿಸುವಂತೆ ಈ ಸಂಬಂಧ ವರದಿ ನೀಡುವಂತೆ ಉಪ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೆಶಕರಿಗೆ ಸೂಚನೆ ನೀಡಿದರು.

ಮಾಜಿ ಸೈನಿಕರಿಗೆ ನಿವೇಶನಗಳನ್ನು ನೀಡುವ ಕುರಿತು ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಗಳು ನಿಯಮಾನುಸಾರ ಕ್ರಮ ಕೂಗೊಳ್ಳುವಂತೆ ನಿರ್ದೇಶನ ನೀಡಿದರು.


ತಮ್ಮ ಅಹವಾಲುಗಳನ್ನು ಸಲ್ಲಿಸಿದ ನೂರಾರು ಮಾಜಿ ಸೈನಿಕರು ಸಭೆಯನ್ನು ಏರ್ಪಡಿಸಿದ್ದರಿಂದ ನಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಲು ಒಂದು ವೇದಿಕೆ ದೊರಕಿದಂತಾಗಿದೆ. ನಮ್ಮ ಹಲವಾರು ಸಮಸ್ಯೆಗಳು ಇಂದು ಪರಿಹಾರವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್, ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ಕುಸುಮಾ ಕುಮಾರಿ ಸೇರಿದಂತೆ ನೂರಾರು ಮಾಜಿ ಸೈನಿಕರು ಹಾಗೂ ಅವರ ಅವಲಂಬಿರ ಕುಟುಂಬದವರು ಉಪಸ್ಥಿತರಿದ್ದರು.

Continue Reading

Mysore

ಚೇನಂಡ ಹಾಕಿ ಉತ್ಸವಕ್ಕೆ ಆಗಮಿಸಲು ಮನ್ಸುಖ್‌ ಮಾಂಡವಿಯಾಗೆ ಯದುವೀರ್‌ ಆಹ್ವಾನ

Published

on

ಮೈಸೂರು: ಕರ್ನಾಟಕದಲ್ಲಿ ಹಾಕಿ ತವರೂರು ಆಗಿರುವ ಕೊಡಗಿನಲ್ಲಿ ಮತ್ತೊಮ್ಮೆ ಹಾಕಿ ಉತ್ಸವ ಆಯೋಜನೆಯಾಗುತ್ತಿದ್ದು, ಈ ಬಾರಿ ಅತ್ಯಂತ ಅದ್ದೂರಿಯಾಗಿ ನಡೆಸಲು ಎಲ್ಲ ತಯಾರಿ ನಡೆಸಲಾಗಿದೆ. ಈ ಬಾರಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಾಂಡವಿಯಾ ಅವರಿಗೂ ಆಹ್ವಾನ ನೀಡಲಾಗಿದ್ದು, ಅವರು ಆಗಮಿಸುವ ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.


ಕೊಡಗಿನಲ್ಲಿ ಈ ಬಾರಿ ಚೇನಂಡ ಹಾಕಿ ಉತ್ಸವ ನಡೆಯಲಿದೆ. ಪಂದ್ಯಾವಳಿಯ ಆಯೋಜಕ ಸಮಿತಿಯ ಪದಾಧಿಕಾರಿಗಳು ಸಂಸದ ಯದುವೀರ್‌ ಒಡೆಯರ್‌ ನೇತೃತ್ವದಲ್ಲಿ ಕ್ರೀಡಾ ಸಚಿವರನ್ನು ಭೇಟಿ ಮಾಡಿ ಹಾಕಿ ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲು ಆಹ್ವಾನ ನೀಡಿದರು.

ಈ ಬಾರಿ ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅದ್ದೂರಿಯಾಗಿ ಚೇನಂಡ ಹಾಕಿ ಉತ್ಸವ ಆಯೋಜಿಸಲು ತಯಾರಿ ನಡೆಸಲಾಗಿದೆ. ಇದಕ್ಕಾಗಿ ಎಲ್ಲ ಕ್ರಮಗಳು ನಿರಂತರವಾಗಿ ನಡೆಯುತ್ತಿದೆ ಎಂದರು.


ಆಹ್ವಾನ ಸ್ವೀಕರಿಸಿದ ಸಚಿವರು, ಕೊಡಗಿನ ಹಾಕಿ ಇತಿಹಾಸದ ಬಗ್ಗೆ ಹಾಗೂ ಇಲ್ಲಿ ನಡೆಯುವ ಐತಿಹಾಸಿಕ ಹಾಕಿ ಉತ್ಸವದ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಹಾಕಿ ಉತ್ಸವಕ್ಕೆ ಆಗಮಿಸಲು ಒಪ್ಪಿಗೆ ಸೂಚಿಸಿದರು.

ಚೇನಂಡ ಹಾಕಿ ಉತ್ಸವದ ಆಯೋಜನಾ ಸಮಿತಿಯ ಸದಸ್ಯರು ಸಾಂಪ್ರದಾಯಿಕ ಕೊಡಗು ಶೈಲಿಯ ಉಡುಪು ಧರಿಸಿಯೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು ವಿಶೇಷವಾಗಿತ್ತು.

Continue Reading

Mysore

ಹನುಮಾನ್ ಚಾಲೀಸ ಪಾರಾಯಣದಲ್ಲಿ ಪಾಲ್ಗೊಳ್ಳಿ: ನಟ ವಸಿಷ್ಠ ಸಿಂಹ

Published

on

ಮೈಸೂರು: ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಫೆ.14ರಂದು ನಡೆಯುತ್ತಿರುವ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞದಲ್ಲಿ ಮೈಸೂರಿನ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ನಟ ವಸಿಷ್ಠ ಸಿಂಹ ಸಲಹೆ ನೀಡಿದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ನಟ ವಸಿಷ್ಠ ಸಿಂಹ ಅವರನ್ನು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಭಕ್ತ ಸಮೂಹ ಹನುಮಾನ್ ಚಾಲೀಸ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.


ಇದೇ ಸಂದರ್ಭದಲ್ಲಿ ವಸಿಷ್ಠ ಸಿಂಹ ಮಾತನಾಡಿ, ಅವಧೂತ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಕ್ತಿ ಅಪಾರವಾದುದು. ಮೈಸೂರಿನ ಧಾರ್ಮಿಕ ಆಧ್ಯಾತ್ಮಿಕ ಶಕ್ತಿಯನ್ನ ವಿಶ್ವದೆಲ್ಲೆಡೆ ವ್ಯಾಪಕವಾಗಿ ಪಸರಿಸಿದ್ದಾರೆ‌. ನಾನು ಸಹ ಚಿಕ್ಕವಯಸ್ಸಿನಿಂದಲೂ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಭಕ್ತನಾಗಿ ಶೈಕ್ಷಣಿಕ ದಿನಗಳಿಂದಲೂ ಸಹ ಕಾರ್ಯಸಿದ್ಧಿ ಆಂಜನೇಯನ ಬಳಿ ಕಾಯಿಯನ್ನು ಕಟ್ಟಿ ಸಂಕಲ್ಪ ಮಾಡಿ ಏಕಾಗ್ರತೆ ಸಿದ್ಧಿಗಳ ಮೂಲಕ ಸಾಧನೆಯತ್ತ ಯಶಸ್ವಿಯಾಗಿದ್ದೇನೆ. ತಪಸ್ಸು ಧ್ಯಾನ ಪ್ರಾರ್ಥನೆಯಿಂದ ಮನುಷ್ಯನ ಆರೋಗ್ಯ ಆಯಸ್ಸು ವೃದ್ದಿಸುತ್ತದೆ. ಅಂದು ಲಕ್ಷಾಂತರ ಮಂದಿಯಿಂದ ನಡೆಯುವ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮೈಸೂರಿನಲ್ಲೆಡೆ ಆಧ್ಯಾತ್ಮಿಕ ಶಕ್ತಿ ಸಂಚರಿಸಲಿದೆ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದರು.


ಇದೇ ಸಂದರ್ಭದಲ್ಲಿ ನಟ ವಸಿಷ್ಠ ಸಿಂಹ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಆಧ್ಯಾತ್ಮಿಕ ವಿಶ್ಲೇಷಕ ವಿಕಾಸ್ ಶಾಸ್ತ್ರಿ, ನಿರೂಪಕ ಅಜಯ್ ಶಾಸ್ತ್ರಿ, ಭೈರತ್ತಿ ಲಿಂಗರಾಜು, ಅಮಿತ್, ಸಚ್ಚಿನ್, ಕುಮಾರ್, ಇನ್ನಿತರರು ಇದ್ದರು.

Continue Reading

Mysore

ಫೆ.12, 13ಕ್ಕೆ ಆರ್‌ಡಿಪಿಆರ್ ಕ್ರೀಡಾಕೂಟ, ಸಾಂಸ್ಕೃತಿಕ ಉತ್ಸವ

Published

on

ಮೈಸೂರು: ಮೈಸೂರು ಜಿಲ್ಲಾ ಆರ್.ಡಿ.ಪಿ.ಆರ್. ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಫೆ. 12 ಮತ್ತು 13 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್‌ಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯತ್‌ನಲ್ಲಿ ಸೋಮವಾರ ಜಿಲ್ಲಾ ಪಂಚಾಯತ್ ಮೈಸೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮೈಸೂರು ಜಿಲ್ಲಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಸಹಯೋಗದೊಂದಿಗೆ ಆಯೋಜಿಸಿರುವ ಕ್ರೀಡಾಕೂಟದ ಲೋಗೋ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು.


ಅಥ್ಲೆಟಿಕ್‌ನಲ್ಲಿ 100 ಮೀ ಮತ್ತು 400 ಮೀ ಓಟದ ಸ್ಪರ್ಧೆ, ವಾಲಿಬಾಲ್, ಥ್ರೋಬಾಲ್, ಹಗ್ಗಜಗ್ಗಾಟ, ಪೆನಾಲ್ಟಿ ಶೂಟೌಟ್ (ಹಾಕಿ), ಮ್ಯೂಸಿಕಲ್‌ಚೇರ್, ಬಾಲ್ ಇನ್‌ದಿ ಬಾಸ್ಕೆಟ್, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದಗೀತೆ, ಜನಪದ ನೃತ್ಯ, ವಾದ್ಯ ಸಂಗೀತ, ಭಾವಗೀತೆ ಕಾರ್ಯಕ್ರಮ ನಡೆಯಲಿದ್ದು ಪ್ರತಿಯೊಬ್ಬ ಕ್ರೀಡಾಸಕ್ತರು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ (ಆಡಳಿತ) ಸವಿತ ಬಿ.ಎಂ., ಉಪಕಾರ್ಯದರ್ಶಿ (ಅಭಿವೃದ್ಧಿ) ಭೀಮಪ್ಪ ಕೆ. ಲಾಳಿ, ಮುಖ್ಯಯೋಜನಾಧಿಕಾರಿ ಪ್ರಭುಸ್ವಾಮಿ ಕೆ., ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್‌ನಾಯಕ್, ಕಾರ್ಯಪಾಲಕ ಇಂಜಿನಿಯರ್ ವೀರೇಶ್, ಸಹಾಯಕ ನಿರ್ದೇಶಕ ವಿಶ್ವನಾಥ್, ಮೈಸೂರು ತಾ.ಪಂ. ಇಒ ಕೃಷ್ಣ ಸಿ., ಪಿಡಿಒ ಸಂಘದ ಜಿಲ್ಲಾ ಅಧ್ಯಕ್ಷ ಕಂಚಿನಕೆರೆ ರುಕ್ಮಾಂಗದ, ಪ್ರಕಾಶ್, ಪೂರ್ಣಿಮ, ಸೌಮ್ಯಲತಾ, ಮೊಹಮದ್ ಇಸಾಕ್ ಹಾಜರಿದ್ದರು.

Continue Reading

Trending

error: Content is protected !!