Connect with us

Hassan

ಕೂಡಲೇ ಗಣಿಗಾರಿಕೆ ನಿಲ್ಲಿಸದಿದ್ರೆ ಬೃಹತ್ ಪ್ರತಿಭಟನೆ ಕೆ.ಎ. ರವಿಚಂಗಪ್ಪ ಎಚ್ಚರಿಕೆ

Published

on

ಹಾಸನ : ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಸಕೋಟೆ ಗ್ರಾಮದ ಆರಾಧನ ಎಸ್ಟೇಟ್‌ನಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಕೂಡಲೇ ನಿಷೇಧಿಸಬೇಕು ಇಲ್ಲವಾದರೇ ಬೃಹತ್ ಪ್ರತಿಭಟನೆ ಮಾಡುವುದಾಗಿ ಕಾವೇರಿ ಸೇನೆ ಕೊಡಗಿನ ಅಧ್ಯಕ್ಷ ಕೆ.ಎ. ರವಿಚಂಗಪ್ಪ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಈ ಹಿಂದೆ ಈ ಸ್ಥಳದಲ್ಲಿ ಅನಧಿಕೃತವಾಗಿ ಗಣಿಗಾರಿಕೆ ನಡೆಯುತ್ತಿತ್ತು ಪಶ್ಚಿಮ ಘಟ್ಟಗಳಲ್ಲಿ ಗಣಿಗಾರಿಕೆ ನಿಷೇಧಿಸಲಾಗಿದೆ. ಇದರಿಂದಾಗಿ ಪರಿಸರದ ಮೇಲೆ ಹಾನಿ ಉಂಟಾಗುತ್ತದೆ. ಸ್ಫೋಟಕಗಳನ್ನು ಬಳಸುವುದರಿಂದ ನೀರಿನ ಅಂತರ್‌ಜಲ ಮಟ್ಟ ಕುಸಿಯುತ್ತದೆ. ಬೆಟ್ಟಗುಡ್ಡಗಳು ಮರಗಿಡಗಳು, ಮಳೆ ಮಾರುತಗಳನ್ನು ತಡೆದು ಆಕರ್ಷಿಸಿ ಯಥೇಚ್ಛವಾಗಿ ಮಳೆ ಸುರಿಸುತ್ತವೆ. ಈ ನೀರು ಹರಿದು ಹೇಮಾವತಿ, ಕಾವೇರಿನದಿಗೆ ಸೇರುತ್ತದೆ ಲಕ್ಷಾಂತರ ರೈತರ ಜೀವನಾಡಿ ಆಗಿದೆ, ಕುಡಿಯುವ ನೀರು ಒದಗಿಸುತ್ತಿದೆ ಎಂದರು. ಈ ಪ್ರದೇಶದಲ್ಲಿ ಅಮೂಲ್ಯ ಗಿಡ ಮೂಲಿಕೆಗಳು, ಪ್ರಾಣಿ ಪಕ್ಷಿಗಳು, ಸಸ್ತನಿಗಳು, ಕೀಟಗಳು, ಕಂಡುಬರುತ್ತಿವೆ. ಈಗಾಗಲೇ ಕಾಡಾನೆ, ಕಾಡುಕೋಣ, ಚಿರತೆ, ನವಿಲು, ಕಾಡುಹಂದಿಗಳು, ಆಹಾರವಿಲ್ಲದೆ ರೈತರು ಬೆಳೆದ ಗೆಡ್ಡೆಗೆಣಸು, ಭತ್ತ ತರಕಾರಿ ನಾಶಮಾಡುತ್ತದೆ. ಇದರಿಂದಾಗಿ ರೈತರ ತೋಟಗದ್ದೆಗಳಿಗೆ ತೆರಲಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ. ಕಾಡುಪ್ರಾಣಿಗಳು ಜನನಿಬಿಡ ಪ್ರದೇಶಗಳಿಗೆ ಬರುತ್ತಿರುವುದು ಮರಗಿಡಗಳು, ಕಾಡುನಾಶವಾಗಿ ಆಹಾರದ ಕೊರತೆ ಮುಖ್ಯಕಾರಣವಾಗಿದೆ. ಈ ಹಿಂದೆ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನೆಡೆಸಿ ಮನವಿ ಪತ್ರ ಸಲ್ಲಿಸಲಾಗಿತ್ತು. ರಾಜ್ಯಪಾಲರ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಭೇಟಿ ಮಾಡಿ ಮನವಿಸಲ್ಲಿಸಿ ಗಣಿಗಾರಿಕೆ ನಿಲ್ಲಿಸಲಾಗಿತ್ತು. ಈಗ ಪುನಃ ಅನುಮತಿ ಪಡೆದಿದ್ದೇವೆ ಎಂದು ಜೆಸಿಬಿ ಮೂಲಕ ಮರಗಿಡಗಳನ್ನು ನಾಶಮಾಡಿ ಸಮತಟ್ಟುಮಡುತ್ತಿದ್ದಾರೆ ಈಗಾಗಲೇ ಬರಪರಿಸ್ಥಿತಿ ಉಂಟಾಗಿದೆ ಬೆಳೆ ನಾಶವಾಗಿವೆ. ಆದ್ದರಿಂದ ಗಣಿಗಾರಿಕೆ ನಡೆಯದಂತೆ, ಬೆಟ್ಟಗುಡ್ಡಗಳು ಮರಗಿಡಗಳು ನಾಶವಾಗದಂತೆ ಕೂಡಲೇ ಕ್ರಮತೆದುಕೊಳ್ಳಬೇಕು. ನದಿ ಮೂಲಗಳ ಉಗಮಸ್ಥಾನ, ಪ್ರಾಣಿಪಕ್ಷಿಗಳು, ಕೀಟಗಳು, ಸಸ್ತಾನಿಗಳು, ರೈತರು ಇನ್ನಿತರ ಜೀವನಾಡಿಗಳನ್ನು ರಕ್ಷಿಸಬೇಕು ಎಂದು ಮನವಿ ಮಾಡಿದರು. ಇದರಿಂದ ಹಾಸನ ಹಾಗೂ ಕೊಡಗು ಜಿಲ್ಲೆಗೆ ಆಗುವ ತೊಂದರೆ ತಪ್ಪಿಸಬೇಕೆಂದು ಜನಸಾಮಾನ್ಯರ ಪರವಾಗಿ ಕಳಕಳಿಯಿಂದ ವಿನಂತಿಸುತೇವೆ. ಇಲ್ಲದಿದಲ್ಲಿ ಸಾವಿರಾರು ಜನ ಸೇರಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರಾದ ಹೆಚ್.ಕೆ. ರಮೇಶ್, ಕಾವೇರಿ ಸೇನೆಯ ಕೊಡಗು ಉಪಾಧ್ಯಕ್ಷ ಶಶಿಧರ್, ಪುಟ್ಟಸ್ವಾಮಿಗೌಡ, ಹೆಚ್.ಟಿ. ಗಣೇಶ್, ಟಿ.ಎನ್. ಹರೀಶ್ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಆಟೋ ಹತ್ತಿಸುವ ನೆಪದಲ್ಲಿ ಮಾಂಗಲ್ಯ ಸರ ಕಿತ್ತು ಪರಾರಿ

Published

on

ಹಾಸನ: ಆಟೋ ಹತ್ತಿಸುವ ನೆಪದಲ್ಲಿ ವೃದ್ಧೆಯ ಗಮನ ಬೇರೆಡೆ ಸೆಳೆದು ಚಿನ್ನದ ಮಾಂಗಲ್ಯ ಸರ ಸುಲಿಗೆ ಮಾಡಿಕೊಂಡು ಅಪರಿಚಿತ ಪರಾರಿಯಾಗಿರುವ ಘಟನೆ
ಸಾಲಗಾಮೆ ಹೋಬಳಿ ಸುಂಕದಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಎಂಬುವರು ಸಾಲಗಾಮೆ ಗೇಟ್‌ನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದು, ಏ.೧೮ ರಂದು ಊರಿನಿಂದ ಬಸ್ಸಿನಲ್ಲಿ ಹಾಸನಕ್ಕೆ ಹೋಗಿದ್ದರು.

ಅಲ್ಲಿಂದ ಹೂವಿನಹಳ್ಳಿ ಕಾವಲು ಹೊಸೂರಿಗೆ ಬಸ್ಸಿನಲ್ಲಿ ಬಂದು ಇಳಿದು ಸರ್ಕಾರಿ ಆಸ್ಪತ್ರೆಗೆ ಹೋದರು. ಆದರೆ ಗುಡ್‌ಫ್ರೈಡೆ ನಿಮಿತ್ತ ರಜೆ ಇದ್ದುದರಿಂದ ವಾಪಸ್ ಊರಿಗೆ ಹೋಗಲೆಂದು ಮಧ್ಯಾಹ್ನ ೧ ಗಂಟೆ ಸಮಯದಲ್ಲಿ ಆಸ್ಪತ್ರೆ ಮುಂದೆ ರಸ್ತೆಯ ಬದಿಯಲ್ಲಿ ನಿಂತಿದ್ದರು.

 

ಅಲ್ಲಿಗೆ ಬಂದ ಸುಮಾರು ೩೦-೩೫ ವರ್ಷ ವಯಸ್ಸಿನ ವ್ಯಕ್ತಿ, ಅಜ್ಜಿ ನಿಂತಿದ್ದಲ್ಲಿಗೆ ಬಂದು ಯಾವೂರವ್ವ ಎಂದು ಕೇಳಿ, ನನ್ನ ಬೈಕಿಗೆ ಬನ್ನಿ ಕರೆದುಕೊಂಡು ಹೋಗುತ್ತೇನೆಂದು ಹೇಳಿದ್ದಾನೆ.

ಮಗಳ ಊರಾದ ಅರೇಕಲ್ ಹೊಸಳ್ಳಿ ಗ್ರಾಮದ ಮನೆಗೆ ಹೋಗುತ್ತೇನೆಂದು ಹೇಳಿದಾಗ ಆಟೋದಲ್ಲಿ ಹೋಗಿ ಎಂದು ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದ ಆಸಾಮಿ, ರಸ್ತೆಯಲ್ಲಿ ಹೋಗುತ್ತಿದ್ದ ಆಟೋವನ್ನು ಅಡ್ಡಹಾಕಿ ನಿಲ್ಲಿಸಿ, ಅಜ್ಜಿ ಆಟೋದ ಒಳಕ್ಕೆ ಕಾಲಿಟ್ಟು ಹತ್ತುವಾಗ ಅವರ ಕೊರಳಿನಲ್ಲಿದ್ದ ಸುಮಾರು ೪೦ ಗ್ರಾಂ. ತೂಕದ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಮಾಂಗಲ್ಯ ಸರದ ಅಂದಾಜು ಬೆಲೆ ೩ ಲಕ್ಷ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Hassan

ಎಸ್‌ಡಿಎಂ ಜನಮಂಗಳ ಯೋಜನೆಯಡಿ ಉಚಿತ ಕಮೋಡಾ ವೀಲ್ ಚೇರ್ ವಿತರಣೆ

Published

on

ವರದಿ: ಸತೀಶ್ ಚಿಕ್ಕಕಣಗಾಲು

ಆಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಫಲಾನುಭವಿಗೆ ಉಚಿತವಾಗಿ ಕಮೋಡಾ ವೀಲ್ ಚೇರ್ ವಿತರಣೆ ಮಾಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕಿನ ಯೋಜನಾಧಿಕಾರಿ ರತ್ನಾಕರ್ ಕೊಠಾರಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೂ ಜನಮಂಗಲ ಕಾರ್ಯಕ್ರಮದ ಅಡಿಯಲ್ಲಿ ಅಂಗವಿಕಲರಿಗೆ ಅವಶ್ಯಕತೆ ಸಲಕರಣೆಗಳಾದ ವೀಲ್ ಚೇರ್, ಸೇಫ್ ವಾಕ‌ರ್, ವಾಟರ್ ಬೆಡ್, ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು ಉಪಕರಣಗಳನ್ನು ನೀಡಲಾಗಿದೆ. ಅಲ್ಲದೆ 105 ಮಂದಿ ಸದಸ್ಯರಿಗೆ ಪ್ರತಿ ತಿಂಗಳು ತಲಾ ಒಂದೊಂದು ಸಾವಿರ ಮಾಸಾಸನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪಾಳ್ಯ ಹೋಬಳಿಯ ಮೇಲ್ವಿಚಾರಕಿ ಯಶೋಧ ಮಾತನಾಡಿ, ತಾಲೂಕಿನ ಪಾಳ್ಯ ಹೋಬಳಿ ನಲ್ಲೂರು ಗ್ರಾಮದ ನಿವಾಸಿಯಾದ ಬೈರಯ್ಯರ ಎಂಬುವವರು ಅನಾರೋಗ್ಯಕ್ಕೆ ತುತ್ತಾಗಿ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ಉಚಿತವಾಗಿ ನೀಡಲಾಯಿತು‌ ಎಂದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಸದಸ್ಯ ಮಲ್ಲಿಕಾರ್ಜುನ್, ಕಾರ್ಯಕ್ಷೇತ್ರ ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಫಲಾನುಭವಿಯ ಮನೆಯ ಸದಸ್ಯರು ಉಪಸ್ಥಿತರಿದ್ದರು.

Continue Reading

Hassan

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು

Published

on

ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾವು

ಶಿವಪ್ರಸಾದ್ (32) ಸಾವನ್ನಪ್ಪಿದ ವ್ಯಕ್ತಿ

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ರಾಮೇಶ್ವರ ಬಡಾವಣೆ‌ ಬಳಿ ಘಟನೆ

ದಿಡಗ ಗ್ರಾಮ ಪಂಚಾಯ್ತಿಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಶಿವಪ್ರಸಾದ್

ಅತಿಯಾಗಿ ಮದ್ಯ ಸೇವಿಸುತ್ತಿದ್ದ ಶಿವಪ್ರಸಾದ್

ನಿನ್ನೆ ತಡರಾತ್ರಿ ಮದ್ಯಸೇವಿಸಿ ತಮ್ಮ KA-13-M-7321 ರೆನಾಲ್ಟೊ ಕಾರಿನೊಳಗೆ ಮಲಗಿದ್ದ ಶಿವಪ್ರಸಾದ್

ಕಾರಿನಲ್ಲೇ ಸಾವನ್ನಪ್ಪಿರುವ ಶಿವಪ್ರಸಾದ್

ಕಾರಿನೊಳಗೆ ಇದ್ದ ಕಾರಿನ ಕೀ

ಕಾರು ನಿಂತಿರುವುದನ್ನು ನಿಂತಲ್ಲೆ ನಿಂತಿರುವುದನ್ನು ನೋಡಿದ ಸ್ಥಳೀಯರು

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು

ಮ್ಯಾಕಾನಿಕ್ ಕರೆಸಿ ಕಾರಿನ ಡೋರ್‌ಲಾಕ್ ತೆಗೆದು ಪರಿಶೀಲಿಸಿದ ಪೊಲೀಸರು

 

ಕಾರಿನೊಳಗೆ ಸಾವನ್ನಪ್ಪಿದ್ದ ಶಿವಪ್ರಸಾದ್

ಶಿವಪ್ರಸಾದ್ ಆಲೂರು ತಾಲ್ಲೂಕಿನ, ಸಿದ್ದಾಪುರ ಗ್ರಾಮದವನು

ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Continue Reading

Trending

error: Content is protected !!