Mysore
ಒಂದು ಲಕ್ಷ ರೈತ ಕುಟುಂಬಗಳಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ 970 ಕೋಟಿ ಸಾಲ ನೀಡಲಾಗಿದೆ – ಹುಣಸೂರು ಶಾಸಕ ಜಿ. ಡಿ. ಹರೀಶ್ ಗೌಡ

ಸಾಲಿಗ್ರಾಮ : ಲಕ್ಷ ರೈತ ಕುಟುಂಬಗಳಿಗೆ 970 ಕೋಟಿ ಸಾಲ ಕಳೆದ 5 ವರ್ಷಗಳ ಅವಧಿಯಲ್ಲಿ ಮೈಸೂರು – ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಯ ಒಂದು ಲಕ್ಷ ರೈತ ಕುಟುಂಬಗಳಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ 970 ಕೋಟಿ ಸಾಲ ನೀಡಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಹುಣಸೂರು ಶಾಸಕ ಜಿ. ಡಿ. ಹರೀಶ್ ಗೌಡ ಹೇಳಿದರು.
ತಾಲೂಕಿನ ಹೆಬ್ಬಾಳು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಿಂದ ನಿರ್ಮಾಣ ಮಾಡಿರುವ ಆಡಳಿತ ಕಚೇರಿ ಮತ್ತು ವಾಣಿಜ್ಯ ಮಳಿಗೆಗಳ ಉದ್ಘಾಟನಾ ಸಮಾರಂಭ ದಲ್ಲಿ ಅವರು ಮಾತನಾಡಿದರು. ನಮ್ಮ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ನಂತರ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಕೆಲಸ ಮಾಡಿ ರೈತರಿಗೆ ಕೃಷಿ ಸಾಲ ನೀಡಿದ್ದೇನೆ ಎಂದರು.
ಈ ಬ್ಯಾಂಕ್ನಲ್ಲಿ ಸುಮಾರು ೨೭ ಕೋಟಿ ರೂ ಭ್ರಷ್ಟಾಚಾರ ನಡೆದು ಬ್ಯಾಂಕ್ ಮುಚ್ಚುವ ಸ್ಥಿತಿಗೆ ಬರುವ ಸಂದರ್ಭದಲ್ಲಿ ಅಧ್ಯಕ್ಷರಾಗಿದ್ದಂತವ ರ ಶಿಫಾರಸ್ಸಿನ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದ್ಯತೆ ಕೊಟ್ಟು ಬ್ಯಾಂಕ್ನ ವ್ಯವಹಾರಗಳ ಬಗ್ಗೆ ತನಿಖೆ ಮಾಡಲು ಆದೇಶ ಮಾಡಿದ್ದಾರೆ ಎಂದು ಆರೋಪಿಸಿದರು.
ಬ್ಯಾಂಕ್ನ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಮಾಡಿದರೂ ಸಹ ಸರ್ಕಾರಕ್ಕೆ ಮತ್ತು ದೂರು ಕೊಟ್ಟವರಿಗೆ ಲಾಭವಾಗುವುದಿಲ್ಲ, ನಷ್ಟದಲ್ಲಿದ್ದ ಬ್ಯಾಂಕ್ ಅನ್ನು ಐದು ವರ್ಷದ ಅವಧಿಯಲ್ಲಿ ಲಾಭದತ್ತ ಕೊಂಡ್ಯೂಯಲ್ಲು ಶ್ರಮಿಸಿದ್ದೇನೆ, ಸುಮಾರು ೯೭೭ ಕೋಟಿಯಷ್ಟು ಹಣ ಠೇವಣಿ ಹಿಡಲು ನಮ್ಮ ಆಡಳಿತ ಮಂಡಳಿಯ ಶ್ರಮಯಿದೆ ಎಂದು ಹೇಳಿದರು.
ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳಲ್ಲಿರುವ ೨೩ ಸಂಘಗಳಿಗೆ ಡಿಸಿಸಿ ಬ್ಯಾಂಕ್ನಿoದ ೯೩ ಕೋಟಿ ಸಾಲವನ್ನು ೨೦೯ ಕೋಟಿ ರೂಗೆ ಏರಿಸಲಾಗಿದೆ. ಇದರಿಂದ ರೈತ ಬಾಂಧವರಿಗೆ ಅನುಕೂಲವಾಗಿದ್ದು ಮುಚ್ಚುವ ಹಂತದಲ್ಲಿದ್ದ ಹೆಬ್ಬಾಳು ಸಂಘವನ್ನು ಪ್ರಗತಿಯತ್ತ ಕೊಂಡ್ಯೂಯಲು ಕಾರಣರಾದ ಇಲ್ಲಿನ ಸಿಇಒ ಡಿ.ಎಸ್.ಚಂದ್ರಶೇಖರ್ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಇದೇ ಸಂರ್ಧಭದಲ್ಲಿ ಸಂಘದ ವ್ಯಾಪ್ತಿಯ ಮಹಿಳಾ ಸ್ವ-ಸಹಾಯ ಸಂಘಗಳಿಗೆ ನೀಡಲಾದ ಸಾಲ ಸೌಲಭ್ಯದ ಚೆಕ್ಗಳನ್ನು ವಿತರಿಸಲಾಯಿತು.
ಶಾಸಕ ಡಿ. ರವಿಶಂಕರ್ ಮಾತನಾಡಿ ಕ್ಷೇತ್ರದ ಜನತೆಯ ಆಶೀರ್ವಾದದಿಂದ ಶಾಸಕನಾಗಿರುವ ನಾನು ನನ್ನ ಅಧಿಕಾರವಧಿಯಲ್ಲಿ ಜಾತಿ ಮತ್ತು ಪಕ್ಷ ರಾಜಕಾರಣ ಮಾಡದೆ ಉತ್ತಮ ಆಡಳಿತ ನೀಡುವ ಮೂಲಕ ಕ್ಷೇತ್ರದಲ್ಲಿ ಸರ್ವ ಜನಾಂಗದ ತೋಟ ನಿರ್ಮಾಣ ಮಾಡಲಿದ್ದೇನೆ.
ರೈತರಿಗೆ ಅನುಕೂಲ ಕಲ್ಪಿಸುತ್ತಿರುವ ಸಹಕಾರ ಸಂಘಗಳ ಏಳಿಗೆಗೆ ಮತ್ತು ಅವುಗಳ ಆರ್ಥಿಕ ಅಭಿವೃದ್ದಿಗೆ ಶ್ರಮಿಸಲು ಸದಾ ಬದ್ದನಾಗಿದ್ದು ಸರ್ಕಾರದಿಂದ ಬರುವ ಸವಲತ್ತು ಕೊಡಿಸಲಾಗುತ್ತದೆ ಎಂದರು.
ಶೇಕಡ ೭೦ ರಷ್ಟು ರೈತರಿರುವ ದೇಶ ಭಾರತ, ದೇಶದ ಬೆನ್ನೆಲು ರೈತರಾಗಿದ್ದು ಅವರುಗಳ ಆರ್ಥಿಕ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಆದ್ಯ ಕರ್ತವ್ಯ ಇದನ್ನು ಅರಿತಿರುವ ನಾನು ರೈತರ ಉದ್ದಾರಕ್ಕಾಗಿ ಇರುವ ಸಹಕಾರ ಸಂಘಗಳ ಅಭಿವೃದ್ದಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದ ಶಾಸಕರು ಸಂಘಗಳು ವಾಣಿಜ್ಯ ಮಳಿಗೆಗಳು ಸೇರಿದಂತೆ ಆಡಳಿತ ಕಛೇರಿ ನಿರ್ಮಾಣ ಮಾಡಲು ಅವಶ್ಯಕವಿರುವ ಅನುದಾನ ನೀಡುತ್ತೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ಜನತೆಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅದಕ್ಕಾಗಿ ೬೦ ಸಾವಿರ ಕೋಟಿ ರೂಗಳನ್ನು ಮೀಸಲಿರಿಸಿದೆ. ಆದ್ದರಿಂದ ಇತರ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ನೀಡಲು ವಿಳಂಭವಾಗುತ್ತಿದ್ದು ಮುಂದಿನ ವರ್ಷದಿಂದ ಅನುದಾನಕ್ಕೆ ಕೊರತೆ ಇಲ್ಲ ಆನಂತರ ಅಭಿವೃದ್ದಿಗೆ ಕಾರ್ಯಗಳ ಪರ್ವ ಆರಂಭವಾಗಲಿದೆ ಎಂದು ತಿಳಿಸಿದರು.
ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು ರೈತರು ಬೆಳೆ ನಷ್ಟ ಸೇರಿದಂತೆ ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಬರ ಎದುರಾದರೂ ರೈತ ಬಾಂಧವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯ ಮತ್ತು ಸವಲತ್ತುಗಳು ದೊರೆಯಲಿದೆ ಎಂದು ಮಾಹಿತಿ ನೀಡಿದರು.
ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮಿತ್.ವಿ.ದೇವರಹಟ್ಟಿ, ಹೆಚ್.ಸುಬ್ಬಯ್ಯ, ಸಂಘದ ಅಧ್ಯಕ್ಷ .ಬಾಲಕೃಷ್ಣ, ಉಪಾಧ್ಯಕ್ಷ ಸಿ.ಎಂ.ರಾಜೇಶ್, ನಿರ್ದೇಶಕರಾದ ಸಿ.ಆರ್.ಶಿವಪ್ರಕಾಶ್, ರಾಮಚಂದ್ರನಾಯಕ, ಎನ್.ಪಿ.ಪ್ರಸನ್ನ ಹೆಚ್.ಹೆಚ್.ನಾಗೇಂದ್ರ ಹೆಚ್.ಕೆ.ಧನಂಜಯ, ಮಂಜುನಾಥ್, ಕೇಬಲ್ರವಿ, ಶಶಿಕಲಾ, ರೂಪ, ರವಿಕುಮಾರ್, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಲಿಂಗರಾಜು, ಸಂಘದ ಸಿಇಒ ಡಿ.ಎಸ್.ಚಂದ್ರಶೇಖರ್, ಮುಂತಾದವರು ಹಾಜರಿದ್ದರು.
ವರದಿ :ಎಸ್ ಬಿ ಹರೀಶ್
Mysore
ಆಧುನಿಕ ಔಷದಿ ಚಿಕಿತ್ಸೆಗಿಂತ, ಆಯುರ್ವೇದ ಚಿಕಿತ್ಸೆಗಾಗಿ ಸಲಹೆ ನೀಡುತ್ತಾರೆ: ಕಮಲಾ ಬಾಯಿ

ಮೈಸೂರು: ಇಂದಿಗೂ ಹಲವಾರು ಆರೋಗ್ಯ ತಜ್ಞರು, ವಿವಿಧ ಖಾಯಿಲೆಗಳಿಗೆ ಆಧುನಿಕ ಔಷದಿ ಚಿಕಿತ್ಸೆಗಿಂತ, ಆಯುರ್ವೇದ ಚಿಕಿತ್ಸೆಗಾಗಿ ಸಲಹೆ ನೀಡುತ್ತಾರೆ. ಕಾರಣ ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ, ಅಡ್ಡಪರಿಣಾಮಗಳಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಆಯುಷ್ ನಿಯೋಜನೆ ಮುಖ್ಯ ಆಡಳಿತಧಿಕಾರಿ ಕಮಲಾ ಬಾಯಿ(ಕೆಎಎಸ್) ತಿಳಿಸಿದರು.
ನಗರದ ಜೆ.ಕೆ ಮೈದಾನದ ಎಂಎಂಸಿ ಪ್ಲಾಟಿನಮ್ ಜುಬಿಲೀ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗ 50ರ ಸಂಭ್ರಮ ಅಂಗವಾಗಿ ಹಳೆಯ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಆಯೋಜಿಸಿದ್ದ, ಸುವರ್ಣ ಕಾಯ ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ವಿಚಾರ ಸಂಕಿರಣ ಮತ್ತು ಸ್ನೇಹ ಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಒಂದು ಶಿಕ್ಷಣ ಸಂಸ್ಥೆಯ 50 ರ ಸಂಭ್ರಮ ಕೇವಲ ಆಚರಣೆಯಲ್ಲ, ಅದೊಂದು ಆ ಸಂಸ್ಥೆಯ ಅತ್ಯುತ್ತಮ ಹಾದಿಯ ಶಿಕ್ಷಣ. ನೈತಿಕ ಮೌಲ್ಯಗಳು, ಅಧ್ಯಾತ್ಮಿಕ ಮೌಲ್ಯಗಳು ಸೇರಿದಂತೆ ಒಳ್ಳೆಯ ಸಂದರ್ಭಗಳನ್ನ ಹಾಗೂ ಒಳ್ಳೆಯ ವಿಷಯಗಳನ್ನ ಪುನರ್ಮನನ ಮಾಡಿಕೊಳ್ಳುವ ಸುಸಂರ್ಭ ಸಮಯ. ಇದಲ್ಲದೇ ಒಂದು ಸಂಸ್ಥೆಯ ಸಾಧನೆ ಹಾಗೂ ಉತ್ತಮ ಭವಿಷ್ಯಕ್ಕಾಗಿ ಪೂರ್ವ ಸಿದ್ಧತೆ, ಯೋಜನೆಗಳನ್ನು ರೂಪಿಸಲು ಇಂದಿನ ದಿನ ಪ್ರೇಪಿಸುತ್ತದೆ, ಎಂದು ಹರುಷಪಟ್ಟರು.
Mysore
ಈ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಉಗ್ರಪ್ಪ

ಮೈಸೂರು: ಈ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜನವಿರೋಧಿ, ಸಮಾಜವನ್ನು ಒಡೆದು ಆಳುವುದನ್ನು ಮೈಗೂಡಿಸಿಕೊಂಡಿರೋ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಕಳೆದ 11 ವರ್ಷಗಳಿಂದ ದೇಶದಲ್ಲಿ 185 ಲಕ್ಷ ಕೋಟಿ ರೂ ಅಷ್ಟು ಸಾಲ ಮಾಡಿರುವ ಹೆಗ್ಗಳಿಕೆ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಸಲ್ಲುತ್ತದೆ ಎಂದರು.
ನಮ್ಮ ರಾಜ್ಯದಲ್ಲಿ ಕೆ. ಆರ್ ಎಸ್, ತುಂಗಭದ್ರಾ ಅಣೆಕಟ್ಟೆಯನಾದರೂ ಕಟ್ಟಿದ್ದೀರ. ಯಾವುದಾದರು ಜನರಿಗೆ ಉದ್ಯೋಗ ದೊರಕುವಂತ ಕಂಪನಿ ಮಾಡಿದ್ದೀರ? ಇಷ್ಟೊಂದು ಸಾಲವನ್ನು ಯಾವುದಕ್ಕಾಗಿ ಮಾಡಿದ್ದೀರ. ಯಾವ ಅಭಿವೃದ್ದಿ ಕೆಲಸವಾಗಿದೆ ತೋರಿಸಿ ಎಂದು ಕೇಂದ್ರದ ಎನ್.ಡಿ.ಎ ಸರಕಾರವನ್ನು ಪ್ರಶ್ನಿಸಿದರು.
ಸಮಾಜದ ನಡುವೇ ಧರ್ಮ. ಜಾತಿ, ಭಾಷೆ ಎಂಬ ಕಂದಕ ಸೃಷ್ಟಿ ಮಾಡಿದ್ದೀರ. ಜನರ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಅವರ ಬದುಕಿನ ಮೇಲೆ ಚಪ್ಪಡಿಕಲ್ಲು ಎಳೆಯುವ ಕೆಲಸ ಮಾಡುತ್ತಿದ್ದಾರೆ.
ಕೇಂದ್ರ ಸರಕಾರದ ಬೆಲೆ ಏರಿಕೆಯನ್ನು ಮುಚ್ಚಿಕೊಳ್ಳುವುದಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಅವರು ಜನಕ್ರೋಶ ಯಾತ್ರೆ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರ ಆಕ್ರೋಶ ಸಿಎಂ. ಸಿದ್ದರಾಮಯ್ಯ, ಡಿಸಿಎಂ. ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರದ ಮೇಲೆ ಇಲ್ಲ. ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರಕಾರದ ಮೇಲೆ ಇರೋದು ಎಂದು ಹರಿಹಾಯ್ದರು.
ರಾಜ್ಯದ ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಪತ್ರಿಪಕ್ಷನಾಯಕ ಆರ್, ಅಶೋಕ ಅವರೆ ಈ ರಾಜ್ಯದಲ್ಲಿ ಬೆಲೆ ಏರಿಕೆಗೆ ಕೇಂದ್ರ ಸರಕಾರ ಕಾರಣವೋ. ರಾಜ್ಯ ಕಾಂಗ್ರೆಸ್ ಸರಕಾರ ಕಾರಣವೋ ಸಾರ್ವಜನಿಕ ಚರ್ಚೆ ಮಾಡೋಣ. ಈ ಚರ್ಚೆಗೆ ಬರುವ ನೈತಿಕತೆ ನಿಮಗೆ ಇದೇಯ. ಕಾಂಗ್ರೆಸ್ ಸರಕಾರ ಸಿದ್ದವಿದೇ. ಸಾರ್ವಜನಿಕರಿಗೆ ಬೆಲೆ ಏರಿಕೆ ಬಗ್ಗೆ ಉತ್ತರಿಸುವ ಧೈರ್ಯ ಇದೆಯ. ನಿಮ್ಮಲ್ಲಿ ಆತ್ಮವಿಶ್ವಸ ಬದುಕಿದೇಯ ಎಂದು ಉಗ್ರಪ್ಪ ಕಿಡಿಕಾರಿದರು.
ಈ ದೇಶದಲ್ಲಿ 2013 ರ ಅಂತರಾಷ್ಟ್ರೀಯ ಮಾರಿಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಒಂದು ಬ್ಯಾರೆಲ್ ಗೆ120 ರಿಂದ 130 ಡಾಲರ್ ಇತ್ತು. ಆಗ ಒಂದು ಲೀಟರ್ ಡೇಸಲ್ 56.83 ರೂ ಪೈಸೆ, ಪೆಟ್ರೋಲ್ ಲೀಟರ್ 63.62 ರೂ ಪೈಸೆಗೆ ಮಾರಾಟಮಾಗುತ್ತಿತ್ತು. ಅಡುಗೆ ಅನಿಲ ದರ 400 ರೂ ಗಳಂತೆ ನೀಡಿ ಸಾರ್ವಜನಿಕರಿಕೆ ಪ್ರತಿ ತಿಂಗಳು ಅದರ ಸಬ್ಸಿಡಿ ನೀಡುತ್ತಿದ್ದೋ. ಆದರೆ ನೀವು ಹೀಗ ಬೆಲೆ ಏರಿಕೆ ಮಾಡಿ ಏನು ಕೊಡುತ್ತಿದ್ದೀರ ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದರು. ರಾಜ್ಯ ದಲ್ಲಿ ಅಡುಗೆ ಅನಿಲದ ದರ 50 ರೂ ಏರಿಕೆಯನ್ನು ಈಕೂಡಲೇ ವಾಪಾಸು ಪಡೆಯಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.
ರಾಜ್ಯ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರಕಾರ ಬೆಲೆ ಏರಿಕೆಯನ್ನು ಪಾರ್ಲಿಮೆಂಟ್ ನಲ್ಲಿ ಏಕೆ ಪ್ರಶ್ನೆ ಮಾಡದೇ ಬಾಯಿಗೆ ಬೀಗ ಜಡಿದು ಕುಳಿತ್ತಿದ್ದೀರೆ. ರಾಜ್ಯದಲ್ಲಿ ಜನಕ್ರೋಶ ಯಾತ್ರೆ ಮಾಡುತ್ತ ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರಕಾರ ಅಂಬಾನಿ. ಅದಾನಿ ಅವರ 16 ಸಾವಿ ಕೋಟಿ ರೂ ಸಾಲ ಮನ್ನ ಮಾಡುತ್ತಾರೆ ಆದರೆ ರೈತರ ಸಾಲ ಏಕೆ ಮನ್ನ ಮಾಡೋದಿಲ್ಲ. ನಮ್ಮ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಜನರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಹಾಲಿನ ದರ ಏರಿಕೆ ಮಾಡಿ ಆ ಹಣವನ್ನು ನೇರವಾಗಿ ರೈತರಿಗೆ ನೀಡುವ ಮೂಲಕ ರೈತರ ಪರವಾಗಿ ನಿಂತಿದ್ದೇವೆ ಎಂದರು.
ಮಾಜಿ ಶಾಸಕ ಜಿ.ಎನ್ ನಂಜುಂಡಾಸ್ವಾಮಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಡಾ, ಬಿ.ಜೆ ವಿಜಯ್ ಕುಮಾರ್ ಮಾಧ್ಯಮ ಸಂಚಾಲಕ ಕೆ ಮಹೇಶ ಉಪಸ್ಥಿತರಿದ್ದರು.
Mysore
ದಲಿತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ಕರ್ನಾಟಕ ವೀರಕೇಸರಿ ಪಡೆ ಪ್ರತಿಭಟಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದ ಪಡೆಯ ಕಾರ್ಯಕರ್ತರು ದಲಿತರ ಮೇಲಿನ ಹಲ್ಲೇ ಘಟನೆಯನ್ನು ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ವೀರಕೇಸರಿ ಪಡೆಯ ಅಧ್ಯಕ್ಷ ಮಧುವನ ಚಂದ್ರು ಮಾತನಾಡಿ, ಎಚ್.ಡಿ.ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದ ಕವಿತಾಬಾಯಿ ಮತ್ತು ಅವರ ವಿಕಲಚೇತನ ಪತಿ ರಾಯಪ್ಪರ ಮೇಲೆ ಸವರ್ಣೀಯರಾದ ವಿಜಯಕುಮಾರ್ ಮತ್ತು ಪತ್ನಿ ಕವಿತಾ ಮೇರಿ, ಮಗಳಾದ ಶಾಲಿನಿ, ಅಳಿಯ ಯೋಗೇಶ್ ನಿರಂತರವಾಗಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಾಗಿಯೂ ಹಲ್ಲೆಗೊಳಗಾದವರಿಂದ ಅಟ್ರಾಸಿಟಿ ದೂರು ದಾಖಲಿಸಿಲ್ಲ. ಬದಲಿಗೆ ಹಲ್ಲೆಗೆ ಒಳಗಾದವರ ಮೇಲೆ ದೂರು ದಾಖಲಿಸಿದ್ದಾರೆಂದು ದೂರಿದರು.
ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ರೀತಿ ದೂರು ದಾಖಲಿಸಿ ಮುಂದಿನ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಬಸವರಾಜು, ಸಿದ್ದರಾಜು, ರಾಮನಾಯಕ, ರಾಜೇಶ್ವರಿ ಇನ್ನಿತರರು ಉಪಸ್ಥಿತರಿದ್ದರು.
-
Chamarajanagar23 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Hassan24 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu23 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ
-
Hassan6 hours ago
ಹಾಸನ : ಕಾರಿನೊಳಗೆ ಅಸಿಸ್ಟೆಂಟ್ ಅಕೌಂಟೆಂಟ್ ಅನುಮಾನಾಸ್ಪದ ಸಾ*ವು
-
Kodagu6 hours ago
ಎ.ಎಸ್ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿ – ಬೆಂಗಳೂರು ಕೊಡವ ಸಮಾಜ ಸಿಎಂಗೆ ಮನವಿ