Hassan
ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮರು ಅರ್ಜಿ ಸಲ್ಲಿಕೆ ಬೇಡ
Hassan
ಜನಸ್ನೇಹಿ ಪೊಲೀಸ್ ಸಿದ್ದೇಶ್ಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ: ಕರ್ತವ್ಯನಿಷ್ಠೆ, ಜನಸೇವೆ–ಕಾನೂನು ಸುವ್ಯವಸ್ಥೆಯಲ್ಲಿ ಗಮನಾರ್ಹ ಸೇವೆ
ಅರಸೀಕೆರೆ: ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜನಸ್ನೇಹಿ ಪೊಲೀಸ್ ಸಿಬ್ಬಂದಿ ಶ್ರೀ ಸಿದ್ದೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕರು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಸ್ನೇಹಿತರು ಹಾಗೂ ಅಭಿಮಾನಿಗಳು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕತೆ, ಶಿಸ್ತು ಮತ್ತು ನಿಷ್ಠೆಯಿಂದ ನಿರ್ವಹಿಸುತ್ತಿರುವ ಸಿದ್ದೇಶ್ ಅವರು ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಅವರ ಸರಳ ವ್ಯಕ್ತಿತ್ವ ಹಾಗೂ ಸೇವಾ ಮನೋಭಾವದಿಂದ ಅವರು ನಗರದ ಜನರ ವಿಶ್ವಾಸ ಗಳಿಸಿದ್ದು, ಜನಸ್ನೇಹಿ ಪೊಲೀಸ್ ಸಿಬ್ಬಂದಿಯಾಗಿ ಗುರುತಿಸಿಕೊಂಡಿದ್ದಾರೆ.

ನಗರದಲ್ಲಿ ನಡೆಯುವ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಗತ್ಯ ಮಾಹಿತಿಯನ್ನು ಮುಂಚಿತವಾಗಿಯೇ ಸಂಗ್ರಹಿಸಿ ಪೊಲೀಸ್ ಇಲಾಖೆಗೆ ರವಾನಿಸುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅವರು ವಿಶೇಷ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು, ಸಾರ್ವಜನಿಕರಲ್ಲಿ ಶಾಂತಿ ಮತ್ತು ಸೌಹಾರ್ದದ ವಾತಾವರಣ ನಿರ್ಮಿಸುವುದು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ಗಮನಾರ್ಹವಾಗಿದೆ.

ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸುವ ಗುಣ, ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಪರಿಹಾರಕ್ಕೆ ಪ್ರಯತ್ನಿಸುವ ಮನೋಭಾವ ಮತ್ತು ಕರ್ತವ್ಯದ ಮೇಲಿನ ಬದ್ಧತೆಯಿಂದ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಇಲಾಖೆಯ ಘನತೆ ಹೆಚ್ಚಿಸುವ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿದ್ದೇಶ್ ಅವರು ಯುವ ಪೊಲೀಸ್ ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ನಗರದ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವ ಅವರ ಸೇವೆಯನ್ನು ವಿವಿಧ ಸಂಘ–ಸಂಸ್ಥೆಗಳು ಹಾಗೂ ನಾಗರಿಕರು ಪ್ರಶಂಸಿಸಿದ್ದು, ಮುಂದಿನ ದಿನಗಳಲ್ಲಿಯೂ ಇದೇ ಸೇವಾ ಮನೋಭಾವದೊಂದಿಗೆ ಇನ್ನಷ್ಟು ಉನ್ನತ ಸ್ಥಾನಗಳನ್ನು ಅಲಂಕರಿಸಲಿ ಎಂದು ಹಾರೈಸಿದ್ದಾರೆ
Hassan
ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ; ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ
ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಲೀನರಾದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಾವಿರಾರು ಜನರ ಕಂಬನಿಯ ನಡುವೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು.

ರಾಜಕೀಯದಿಂದ ಸದಾ ದೂರವಿದ್ದರೂ ದೇವೇಗೌಡ ಕುಟುಂಬದ ಬೆನ್ನೆಲುಬಾಗಿ ಗುರುತಿಸಿಕೊಂಡಿದ್ದ ಚೆನ್ನಮ್ಮ ಅವರ ಅಗಲಿಕೆ ರಾಜ್ಯದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕದ ಛಾಯೆ ಮೂಡಿಸಿತು. ಅಂತಿಮ ದರ್ಶನಕ್ಕಾಗಿ ವಿವಿಧ ಪಕ್ಷಗಳ ನಾಯಕರು, ಸ್ವಾಮೀಜಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಆಗಮಿಸಿ ಗೌರವ ನಮನ ಸಲ್ಲಿಸಿದರು.
ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ:
ಗಣ್ಯರು ಪುಷ್ಪನಮನ ಸಲ್ಲಿಸಿದ ಬಳಿಕ ಪೊಲೀಸ್ ಪಡೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಸರ್ಕಾರಿ ಗೌರವ ವಂದನೆ ಸಲ್ಲಿಸಿತು. ರಾಷ್ಟ್ರಗೀತೆ ಮೊಳಗಿದ ಬಳಿಕ ಎರಡು ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಧ್ವಜವನ್ನು ದೇವೇಗೌಡರ ಕುಟುಂಬಕ್ಕೆ ಹಸ್ತಾಂತರಿಸಿದರು.
ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕಾಲಿಗೆ ನಮಸ್ಕರಿಸಿ ಗೌರವ ಸಲ್ಲಿಸಿದ ದೃಶ್ಯ ಗಮನ ಸೆಳೆಯಿತು.

ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ:
ಸರ್ಕಾರಿ ಗೌರವಗಳ ಬಳಿಕ ಕುಟುಂಬ ಸದಸ್ಯರು ಹಾಗೂ ಅರ್ಚಕರ ಸಮ್ಮುಖದಲ್ಲಿ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಿದವು. ವೇದಘೋಷ, ಸ್ತೋತ್ರ ಪಠಣಗಳ ನಡುವೆ ಪಾರ್ಥಿವ ಶರೀರವನ್ನು ಪಲ್ಲಕ್ಕಿಯಲ್ಲಿ ಮೂರು ಸುತ್ತು ಮೆರವಣಿಗೆ ನಡೆಸಲಾಯಿತು.
ಬಳಿಕ ಹಿರಿಯ ಪುತ್ರ ಎಚ್.ಡಿ. ರಮೇಶ್ ಅವರು ಸಂಪ್ರದಾಯದಂತೆ ಅಂತ್ಯಕ್ರಿಯೆಯ ವಿಧಿವಿಧಾನ ನೆರವೇರಿಸಿದರು. ಗಂಗಾಜಲ ಸಿಂಪಡಿಸಿ ಸ್ಥಳವನ್ನು ಶುದ್ಧೀಕರಿಸಿದ ನಂತರ ಪಾರ್ಥಿವ ಶರೀರವನ್ನು ಸಮಾಧಿಗೆ ಇಳಿಸಿ ಅಂತಿಮ ಸಂಸ್ಕಾರ ನಡೆಸಲಾಯಿತು.
ರಾಜಕೀಯ, ಧಾರ್ಮಿಕ ಗಣ್ಯರ ಉಪಸ್ಥಿತಿ:
ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಶಿ , ವಿ. ಸೋಮಣ್ಣ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಶ್ರೇಯಸ್ ಎಂ. ಪಟೇಲ್, ಡಾ.ಕೆ.ಸುಧಾಕರ್, ಬಿ.ವೈ.ರಾಘವೇಂದ್ರ , ಡಾ.ಸಿ.ಎನ್.ಮಂಜುನಾಥ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಹಾಸನ ಜಿಲ್ಲಾಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಎನ್.ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್, ಸುರೇಶ್ ಬಾಬು, , ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಐಜಿಪಿ ಡಾ. ಸಲೀಂ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸಾ.ರಾ.ಮಹೇಶ್, ಎಚ್.ಆಂಜನೇಯ, ಮಾಜಿ ಸಚಿವರಾದ, ಗೋಪಾಲಯ್ಯ, ರಾಮಣ್ಣ, ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಮಂಜು, ಟಿ.ಡಿ.ರಾಜೇಗೌಡ, ಎಚ್.ಕೆ.ಸುರೇಶ್, ಸಿಮೆಂಟ್ ಮಂಜು, ಡಾ.ರಂಗನಾಥ್, ಸುರೇಶ್ ಗೌಡ, ಭೋಜೇಗೌಡ, ಜಿ.ಡಿ.ಹರೀಶ್ ಗೌಡ, ಸಿ.ಎನ್.ಕೃಷ್ಣೇಗೌಡ, ಕೆ.ಹರೀಶ್ ಗೌಡ, ಮುನಿರತ್ನ, ಗಣಿಗ ರವಿ, ಸ್ವರೂಪ್ ಪ್ರಕಾಶ್, ಶರವಣ, ಮಾಜಿ ಸಂಸದ ಪ್ರತಾಪ್ ಸಿಂಹ ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಸ್ವಾಮೀಜಿಗಳು ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಅದೇ ರೀತಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಶ್ರೀ, ರಂಭಾಪುರಿ ಶ್ರೀ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
Hassan
ಬೂತ್ ಮಟ್ಟದಲ್ಲಿ ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಬಿ.ವೈ. ವಿಜಯೇಂದ್ರ ಕರೆ
-
State22 hours agoಚೆನ್ನಮ್ಮ ಅಂತ್ಯಕ್ರಿಯೆ: ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪ್ರಜ್ವಲ್ ರೇವಣ್ಣಗೆ ಅನುಮತಿ
-
Kodagu17 hours agoಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ
-
Hassan16 hours agoಪಂಚಭೂತಗಳಲ್ಲಿ ಲೀನರಾದ ಚೆನ್ನಮ್ಮ ದೇವೇಗೌಡ
-
Politics14 hours agoಬಿಡದಿ ಟೌನ್ಶಿಪ್ ಭೂಸ್ವಾಧೀನಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್; PIL ವಜಾ
-
Politics11 hours agoಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ: 3.68 ಲಕ್ಷಕ್ಕೂ ಅಧಿಕ ಅರ್ಜಿಗಳು – ಜಿಲ್ಲಾವಾರು ಅಂಕಿಅಂಶ ಪ್ರಕಟ!!
-
National21 hours agoಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
-
Kodagu17 hours agoಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು
-
Hassan19 hours agoನೀಟ್–ಜೆಇಇ ಫಲಿತಾಂಶದಲ್ಲಿ ಹೊಸ ಇತಿಹಾಸ ಬರೆದ ಪಾಠಶಾಲಾ ನೀಟ್ ಅಕಾಡೆಮಿ


