Connect with us

Mysore

ಸೋಲಿಗೆ ಅಂಜದಿರಿ, ಯಶಸ್ಸಿನತ್ತ ಮುನ್ನಡೆಯಿರಿ: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌

Published

on

ಮೈಸೂರು: “ಹೋರಾಟಗಳು ಮತ್ತು ವೈಫಲ್ಯಗಳಿಂದ ನಾವು ಕಲಿಯಬೇಕು. ವಿದ್ಯಾರ್ಥಿಗಳೇ, ನಿಮ್ಮ ಕನಸುಗಳನ್ನು ಎಂದಿಗೂ ಬಿಟ್ಟುಕೊಡಬೇಡಿ, ತೊಂದರೆಗಳಿಗೆ ಹೆದರಬೇಡಿ ಮತ್ತು ಯಾವಾಗಲೂ ಹೊಸ ಸಾಧ್ಯತೆಗಳ ಹುಡುಕಾಟದಲ್ಲಿ ಮುಂದುವರಿಯಿರಿ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 20ನೇ ಘ ಟಿಕೋತ್ಸವದ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು.
“ಮಹಾನ್ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೈನ್ ಹೇಳಿದಂತೆ “ಸೋಲು ಯಶಸ್ಸಿನ ಮೆಟ್ಟಿಲು”. ನಮ್ಮ ಜೀವನದಲ್ಲಿ ಸೋಲು-ಗೆಲವು ನಿಶ್ಚಿತ. ಸೋತರೆ ಕುಗ್ಗಬಾರದು. ಅದನ್ನೇ, ಗೆಲುವಿನ ಮೆಟ್ಟಿಲು ಎಂದುಕೊಂಡು ಮುನ್ನಡೆಯಿರಿ” ಎಂದರು.

“ವಿದ್ಯಾವಂತ ಯುವಕರು ಸಮಾಜದಲ್ಲಿ ಧನಾತ್ಮಕ ಬದಲಾವಣೆ ತರಬಲ್ಲರು. ಯುವಜನತೆ ಯಾವುದೇ ಕ್ಷೇತ್ರವನ್ನು ಅನುಸರಿಸುತ್ತಿರಲಿ – ಅದು ವಿಜ್ಞಾನ, ತಂತ್ರಜ್ಞಾನ, ವ್ಯಾಪಾರ, ಕಲೆ ಅಥವಾ ಸಮಾಜ ಸೇವೆಯಾಗಿರಲಿ, ಅವರ ಪ್ರಯತ್ನಗಳಿಂದ ದೇಶವು ಪ್ರಗತಿ ಸಾಧಿಸುತ್ತದೆ. ಇಂದಿನ ಯುಗವು ನಾವೀನ್ಯತೆ ಮತ್ತು ಸ್ಪರ್ಧೆಯ ಯುಗವಾಗಿದೆ. ಪ್ರಸ್ತುತ ಡಿಜಿಟಲ್ ಯುಗವಾಗಿದ್ದು, ಕೃತಕ ಬುದ್ಧಿಮತ್ತೆ , ಡೇಟಾ ವಿಜ್ಞಾನ ಮತ್ತು ಸುಧಾರಿತ ತಂತ್ರಜ್ಞಾನಗಳು ಜಗತ್ತಿಗೆ ಹೊಸ ಆಯಾಮಗಳನ್ನು ನೀಡುತ್ತಿವೆ. ಕಲಿಕೆಯ ಜೊತೆಗೆ ನಾವೀನ್ಯತೆ ಮತ್ತು ಸೃಜನಶೀಲತೆಯೊಂದಿಗೆ ನಾವು ಮುಂದುವರಿಯಬೇಕು. ಒಬ್ಬ ಯಶಸ್ವಿ ವ್ಯಕ್ತಿ ಎಂದರೆ ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳುವ, ಹೊಸ ವಿಷಯಗಳನ್ನು ಕಲಿಯುವ ಮತ್ತು ನಾಯಕತ್ವದ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬೇಕು” ಎಂದು ಹೇಳಿದರು.

“ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಲಕ್ಷಾಂತರ ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ವ್ಯವಸ್ಥೆಯ ಮೂಲಕ ಕಲಿಕೆಯ ಅವಕಾಶಗಳನ್ನು ಒದಗಿಸಿದೆ, ಅವರ ವೈಯಕ್ತಿಕ ಮತ್ತು ವೃತ್ತಿಪರ ಆಕಾಂಕ್ಷೆಗಳನ್ನು ಪೂರೈಸಲು ಅನುವು ಮಾಡಿಕೊಡುತ್ತಿದೆ.” ಎಂದು ಶ್ಲಾಘಿಸಿದರು.

“ವಿದ್ಯಾರ್ಥಿಗಳೇ, ನಿಮ್ಮ ಶಿಕ್ಷಕರು ಮತ್ತು ಪೋಷಕರನ್ನು ಗೌರವಿಸಬೇಕು. ಇಂದು ನಿಮ್ಮ ಯಶಸ್ಸಿನಲ್ಲಿ ನಿಮ್ಮ ಶಿಕ್ಷಕರು ಮತ್ತು ಪೋಷಕರು ಪ್ರಮುಖ ಕೊಡುಗೆಯನ್ನು ಹೊಂದಿದ್ದಾರೆ. ಶಿಕ್ಷಕರು ನಿಮಗೆ ಜ್ಞಾನವನ್ನು ನೀಡಿ, ಸರಿಯಾದ ದಿಕ್ಕನ್ನು ತೋರಿಸಿ, ಸ್ಫೂರ್ತಿ ನೀಡಿದರು. ಪಾಲಕರು ಮತ್ತು ಕುಟುಂಬವು ನಿಮ್ಮನ್ನು ಬೆಂಬಲಿಸಿ, ಹೋರಾಟದಲ್ಲಿ ನಿಮ್ಮ ಬೆಂಬಲಕ್ಕೆ ನಿಂತಿದ್ದಾರೆ.” ಎಂದು ತಿಳಿಸಿದರು.

ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಪ್ರಬಲವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇಂದು ಜಗತ್ತಿನಲ್ಲಿ ಪರಿಸರ ಅಸಮತೋಲನವು ಗಂಭೀರ ಸಮಸ್ಯೆಯಾಗಿದೆ. ಪರಿಸರದ ರಕ್ಷಣೆ ಮತ್ತು ಪ್ರಚಾರ ನಮಗೆಲ್ಲರಿಗೂ ಮುಖ್ಯವಾಗಿದೆ. ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಗೆ ಹೆಚ್ಚಿನ ಕೆಲಸ ಮಾಡುವ ಅಗತ್ಯವಿದೆ.” ಎಂದು ಅವರು ಹೇಳಿದರು.

“ಈ ವಿಶ್ವವಿದ್ಯಾಲಯದಿಂದ ಪಡೆದ ಜ್ಞಾನದಿಂದ ಮುಂಬರುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿರಿ ಮತ್ತು “ಏಕ್ ಭಾರತ್ – ಶ್ರೇಷ್ಠ ಭಾರತ” ಮತ್ತು “ಸ್ವಾವಲಂಬಿ ಭಾರತ” ನಿರ್ಮಾಣದಲ್ಲಿ ಭಾಗವಹಿಸಿ. ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರವನ್ನು ವಹಿಸುವ ಮೂಲಕ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿ” ಎಂದರು.

“ಸ್ವಾಮಿ ವಿವೇಕಾನಂದ ಹೇಳುತ್ತಿದ್ದರು – “ಎದ್ದೇಳಿ, ಎಚ್ಚರಗೊಳ್ಳಿರಿ ಮತ್ತು ಗುರಿಯನ್ನು ಸಾಧಿಸುವವರೆಗೆ ನಿಲ್ಲಬೇಡಿ” “ಒಂದು ಸಮಯದಲ್ಲಿ ಒಂದು ಕೆಲಸವನ್ನು ಮಾಡಿ ಮತ್ತು ಅದನ್ನು ಪೂರ್ಣ ಭಕ್ತಿಯಿಂದ ಮಾಡಿ.” ಸ್ವಾಮಿ ವಿವೇಕಾನಂದರು ” ರಾಷ್ಟ್ರದ ಅಭಿವೃದ್ಧಿಗೆ ಯುವ ಶಕ್ತಿಯೇ ಆಧಾರ ಎಂದು ನಂಬಿದ್ದರು. ಅವರು ಯುವಕರನ್ನು ಸ್ವಾವಲಂಬಿ, ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪ್ರೇರೇಪಿಸಿದರು. ಅವರ ತೋರಿದ ಮಾರ್ಗದಲ್ಲಿ ನಡೆಯಬೇಕು. “ಶಿಕ್ಷಣವು ಜೀವನದ ಬಹುದೊಡ್ಡ ಕೊಡುಗೆಯಾಗಿದೆ, ಶಿಕ್ಷಣವು ಉದ್ಯೋಗದ ಜೊತೆಗೆ ನಮಗೆ ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆಯನ್ನು ಸಹ ನೀಡುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ” ಎಂದು ಹೇಳಿದರು.

ಘಟಿಕೋತ್ಸವ ಸಮಾರಂಭದಲ್ಲಿ ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಿದ ಸಿ.ಎಂ.ಇರ್ಫಾನುಲ್ಲಾ ಷರೀಫ್, ಮತ್ತು ಡಾ.ದಾಕ್ಷಾಯಿಣಿ ಎಸ್.ಅಪ್ಪಾ ಅವರಿಗೆ ಗೌರವ ಪದವಿ ನೀಡಿ ಗೌರವಿಸಲಾಗಿದೆ. ಅವರ ಅತ್ಯುತ್ತಮ ಸಾಧನೆಗಳಿಗಾಗಿ ಅಭಿನಂದಿಸುತ್ತೇನೆ ಮತ್ತು ಸಮಾಜ ಮತ್ತು ದೇಶದ ಪ್ರಗತಿಯಲ್ಲಿ ಅವರ ಪ್ರಮುಖ ಕೊಡುಗೆ ನಿರಂತರವಾಗಿರಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಸಮಾರಂಭದಲ್ಲಿ ಎನ್. ಸಿ.ವಿ.ಈ.ಟಿ ಮತ್ತು ಎಂ.ಎಸ್.ಡಿ.ಇ. ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ, ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮತ್ತು ಗಣ್ಯರು ಹಾಜರಿದ್ದರು.

Continue Reading

Mysore

ಆಧುನಿಕ ಔಷದಿ ಚಿಕಿತ್ಸೆಗಿಂತ, ಆಯುರ್ವೇದ ಚಿಕಿತ್ಸೆಗಾಗಿ ಸಲಹೆ ನೀಡುತ್ತಾರೆ: ಕಮಲಾ ಬಾಯಿ

Published

on

ಮೈಸೂರು: ಇಂದಿಗೂ ಹಲವಾರು ಆರೋಗ್ಯ ತಜ್ಞರು, ವಿವಿಧ ಖಾಯಿಲೆಗಳಿಗೆ ಆಧುನಿಕ ಔಷದಿ ಚಿಕಿತ್ಸೆಗಿಂತ, ಆಯುರ್ವೇದ ಚಿಕಿತ್ಸೆಗಾಗಿ ಸಲಹೆ ನೀಡುತ್ತಾರೆ. ಕಾರಣ ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ, ಅಡ್ಡಪರಿಣಾಮಗಳಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಆಯುಷ್ ನಿಯೋಜನೆ ಮುಖ್ಯ ಆಡಳಿತಧಿಕಾರಿ ಕಮಲಾ ಬಾಯಿ(ಕೆಎಎಸ್) ತಿಳಿಸಿದರು.

ನಗರದ ಜೆ.ಕೆ ಮೈದಾನದ ಎಂಎಂಸಿ ಪ್ಲಾಟಿನಮ್ ಜುಬಿಲೀ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗ 50ರ ಸಂಭ್ರಮ ಅಂಗವಾಗಿ ಹಳೆಯ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಆಯೋಜಿಸಿದ್ದ, ಸುವರ್ಣ ಕಾಯ ರಾಷ್ಟ್ರೀಯ ಮಟ್ಟದ ವೈಜ್ಞಾನಿಕ ವಿಚಾರ ಸಂಕಿರಣ ಮತ್ತು ಸ್ನೇಹ ಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಒಂದು ಶಿಕ್ಷಣ ಸಂಸ್ಥೆಯ 50 ರ ಸಂಭ್ರಮ ಕೇವಲ ಆಚರಣೆಯಲ್ಲ, ಅದೊಂದು ಆ ಸಂಸ್ಥೆಯ ಅತ್ಯುತ್ತಮ ಹಾದಿಯ ಶಿಕ್ಷಣ. ನೈತಿಕ ಮೌಲ್ಯಗಳು, ಅಧ್ಯಾತ್ಮಿಕ ಮೌಲ್ಯಗಳು ಸೇರಿದಂತೆ ಒಳ್ಳೆಯ ಸಂದರ್ಭಗಳನ್ನ ಹಾಗೂ ಒಳ್ಳೆಯ ವಿಷಯಗಳನ್ನ ಪುನರ್ಮನನ ಮಾಡಿಕೊಳ್ಳುವ ಸುಸಂರ್ಭ ಸಮಯ. ಇದಲ್ಲದೇ ಒಂದು ಸಂಸ್ಥೆಯ ಸಾಧನೆ ಹಾಗೂ ಉತ್ತಮ ಭವಿಷ್ಯಕ್ಕಾಗಿ ಪೂರ್ವ ಸಿದ್ಧತೆ, ಯೋಜನೆಗಳನ್ನು ರೂಪಿಸಲು ಇಂದಿನ ದಿನ ಪ್ರೇಪಿಸುತ್ತದೆ, ಎಂದು ಹರುಷಪಟ್ಟರು.

Continue Reading

Mysore

ಈ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಉಗ್ರಪ್ಪ

Published

on

ಮೈಸೂರು: ಈ ದೇಶಕಂಡ ಅತ್ಯಂತ ದುರ್ಬಲ ಪ್ರಧಾನಿ ಅಂದರೆ ಅದು ನರೇಂದ್ರ ಮೋದಿ ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಎಸ್.‌ ಉಗ್ರಪ್ಪ ಆರೋಪಿಸಿದರು.

ಇಲ್ಲಿನ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜನವಿರೋಧಿ, ಸಮಾಜವನ್ನು ಒಡೆದು ಆಳುವುದನ್ನು ಮೈಗೂಡಿಸಿಕೊಂಡಿರೋ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಕಳೆದ 11 ವರ್ಷಗಳಿಂದ ದೇಶದಲ್ಲಿ 185 ಲಕ್ಷ ಕೋಟಿ ರೂ ಅಷ್ಟು ಸಾಲ ಮಾಡಿರುವ ಹೆಗ್ಗಳಿಕೆ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಸಲ್ಲುತ್ತದೆ ಎಂದರು.

ನಮ್ಮ ರಾಜ್ಯದಲ್ಲಿ ಕೆ. ಆರ್‌ ಎಸ್, ತುಂಗಭದ್ರಾ ಅಣೆಕಟ್ಟೆಯನಾದರೂ ಕಟ್ಟಿದ್ದೀರ. ಯಾವುದಾದರು ಜನರಿಗೆ ಉದ್ಯೋಗ ದೊರಕುವಂತ ಕಂಪನಿ ಮಾಡಿದ್ದೀರ? ಇಷ್ಟೊಂದು ಸಾಲವನ್ನು ಯಾವುದಕ್ಕಾಗಿ ಮಾಡಿದ್ದೀರ. ಯಾವ ಅಭಿವೃದ್ದಿ ಕೆಲಸವಾಗಿದೆ ತೋರಿಸಿ ಎಂದು ಕೇಂದ್ರದ ಎನ್.ಡಿ.ಎ ಸರಕಾರವನ್ನು ಪ್ರಶ್ನಿಸಿದರು.

ಸಮಾಜದ ನಡುವೇ ಧರ್ಮ. ಜಾತಿ, ಭಾಷೆ ಎಂಬ ಕಂದಕ ಸೃಷ್ಟಿ ಮಾಡಿದ್ದೀರ. ಜನರ ನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಅವರ ಬದುಕಿನ ಮೇಲೆ ಚಪ್ಪಡಿಕಲ್ಲು ಎಳೆಯುವ ಕೆಲಸ ಮಾಡುತ್ತಿದ್ದಾರೆ.

ಕೇಂದ್ರ ಸರಕಾರದ ಬೆಲೆ ಏರಿಕೆಯನ್ನು ಮುಚ್ಚಿಕೊಳ್ಳುವುದಕ್ಕಾಗಿ ರಾಜ್ಯದಲ್ಲಿ ಬಿಜೆಪಿ ಅವರು ಜನಕ್ರೋಶ ಯಾತ್ರೆ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರ ಆಕ್ರೋಶ ಸಿಎಂ. ಸಿದ್ದರಾಮಯ್ಯ, ಡಿಸಿಎಂ. ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್‌ ಸರಕಾರದ ಮೇಲೆ ಇಲ್ಲ. ಮೋದಿ ನೇತೃತ್ವದ ಕೇಂದ್ರ ಎನ್‌.ಡಿ.ಎ ಸರಕಾರದ ಮೇಲೆ ಇರೋದು ಎಂದು ಹರಿಹಾಯ್ದರು.

ರಾಜ್ಯದ ಬಿಜಿಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಪತ್ರಿಪಕ್ಷನಾಯಕ ಆರ್‌, ಅಶೋಕ ಅವರೆ ಈ ರಾಜ್ಯದಲ್ಲಿ ಬೆಲೆ ಏರಿಕೆಗೆ ಕೇಂದ್ರ ಸರಕಾರ ಕಾರಣವೋ. ರಾಜ್ಯ ಕಾಂಗ್ರೆಸ್‌ ಸರಕಾರ ಕಾರಣವೋ ಸಾರ್ವಜನಿಕ ಚರ್ಚೆ ಮಾಡೋಣ. ಈ ಚರ್ಚೆಗೆ ಬರುವ ನೈತಿಕತೆ ನಿಮಗೆ ಇದೇಯ. ಕಾಂಗ್ರೆಸ್‌ ಸರಕಾರ ಸಿದ್ದವಿದೇ. ಸಾರ್ವಜನಿಕರಿಗೆ ಬೆಲೆ ಏರಿಕೆ ಬಗ್ಗೆ ಉತ್ತರಿಸುವ ಧೈರ್ಯ ಇದೆಯ. ನಿಮ್ಮಲ್ಲಿ ಆತ್ಮವಿಶ್ವಸ ಬದುಕಿದೇಯ ಎಂದು ಉಗ್ರಪ್ಪ ಕಿಡಿಕಾರಿದರು.

ಈ ದೇಶದಲ್ಲಿ 2013 ರ ಅಂತರಾಷ್ಟ್ರೀಯ ಮಾರಿಕಟ್ಟೆಯಲ್ಲಿ ಕ್ರೂಡ್‌ ಆಯಿಲ್‌ ಬೆಲೆ ಒಂದು ಬ್ಯಾರೆಲ್ ಗೆ120 ರಿಂದ 130 ಡಾಲರ್‌ ಇತ್ತು. ಆಗ ಒಂದು ಲೀಟರ್‌ ಡೇಸಲ್‌ 56.83 ರೂ ಪೈಸೆ, ಪೆಟ್ರೋಲ್‌ ಲೀಟರ್‌ 63.62 ರೂ ಪೈಸೆಗೆ ಮಾರಾಟಮಾಗುತ್ತಿತ್ತು. ಅಡುಗೆ ಅನಿಲ ದರ 400 ರೂ ಗಳಂತೆ ನೀಡಿ ಸಾರ್ವಜನಿಕರಿಕೆ ಪ್ರತಿ ತಿಂಗಳು ಅದರ ಸಬ್ಸಿಡಿ ನೀಡುತ್ತಿದ್ದೋ. ಆದರೆ ನೀವು ಹೀಗ ಬೆಲೆ ಏರಿಕೆ ಮಾಡಿ ಏನು ಕೊಡುತ್ತಿದ್ದೀರ ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದರು. ರಾಜ್ಯ ದಲ್ಲಿ ಅಡುಗೆ ಅನಿಲದ ದರ 50 ರೂ ಏರಿಕೆಯನ್ನು ಈಕೂಡಲೇ ವಾಪಾಸು ಪಡೆಯಬೇಕು ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

ರಾಜ್ಯ ಬಿಜೆಪಿ ಶಾಸಕರು, ಸಂಸದರು ಕೇಂದ್ರ ಸರಕಾರ ಬೆಲೆ ಏರಿಕೆಯನ್ನು ಪಾರ್ಲಿಮೆಂಟ್ ನಲ್ಲಿ ಏಕೆ ಪ್ರಶ್ನೆ ಮಾಡದೇ ಬಾಯಿಗೆ ಬೀಗ ಜಡಿದು ಕುಳಿತ್ತಿದ್ದೀರೆ. ರಾಜ್ಯದಲ್ಲಿ ಜನಕ್ರೋಶ ಯಾತ್ರೆ ಮಾಡುತ್ತ ಜನರಿಗೆ ಮಂಕು ಬೂದಿ ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಅಂಬಾನಿ. ಅದಾನಿ ಅವರ 16 ಸಾವಿ ಕೋಟಿ ರೂ ಸಾಲ ಮನ್ನ ಮಾಡುತ್ತಾರೆ ಆದರೆ ರೈತರ ಸಾಲ ಏಕೆ ಮನ್ನ ಮಾಡೋದಿಲ್ಲ. ನಮ್ಮ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಜನರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಹಾಲಿನ ದರ ಏರಿಕೆ ಮಾಡಿ ಆ ಹಣವನ್ನು ನೇರವಾಗಿ ರೈತರಿಗೆ ನೀಡುವ ಮೂಲಕ ರೈತರ ಪರವಾಗಿ ನಿಂತಿದ್ದೇವೆ ಎಂದರು.

ಮಾಜಿ ಶಾಸಕ ಜಿ.ಎನ್‌ ನಂಜುಂಡಾಸ್ವಾಮಿ, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.‌ ಮೂರ್ತಿ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಡಾ, ಬಿ.ಜೆ ವಿಜಯ್‌ ಕುಮಾರ್ ಮಾಧ್ಯಮ ಸಂಚಾಲಕ ಕೆ ಮಹೇಶ ಉಪಸ್ಥಿತರಿದ್ದರು.

Continue Reading

Mysore

ದಲಿತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Published

on

ಮೈಸೂರು: ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ಕರ್ನಾಟಕ ವೀರಕೇಸರಿ ಪಡೆ ಪ್ರತಿಭಟಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದ ಪಡೆಯ ಕಾರ್ಯಕರ್ತರು ದಲಿತರ ಮೇಲಿನ ಹಲ್ಲೇ ಘಟನೆಯನ್ನು ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ವೀರಕೇಸರಿ ಪಡೆಯ ಅಧ್ಯಕ್ಷ ಮಧುವನ ಚಂದ್ರು ಮಾತನಾಡಿ, ಎಚ್‌.ಡಿ.ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದ ಕವಿತಾಬಾಯಿ ಮತ್ತು ಅವರ ವಿಕಲಚೇತನ ಪತಿ ರಾಯಪ್ಪರ ಮೇಲೆ ಸವರ್ಣೀಯರಾದ ವಿಜಯಕುಮಾರ್‌ ಮತ್ತು ಪತ್ನಿ ಕವಿತಾ ಮೇರಿ, ಮಗಳಾದ ಶಾಲಿನಿ, ಅಳಿಯ ಯೋಗೇಶ್‌ ನಿರಂತರವಾಗಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಾಗಿಯೂ ಹಲ್ಲೆಗೊಳಗಾದವರಿಂದ ಅಟ್ರಾಸಿಟಿ ದೂರು ದಾಖಲಿಸಿಲ್ಲ. ಬದಲಿಗೆ ಹಲ್ಲೆಗೆ ಒಳಗಾದವರ ಮೇಲೆ ದೂರು ದಾಖಲಿಸಿದ್ದಾರೆಂದು ದೂರಿದರು.

ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ರೀತಿ ದೂರು ದಾಖಲಿಸಿ ಮುಂದಿನ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಬಸವರಾಜು, ಸಿದ್ದರಾಜು, ರಾಮನಾಯಕ, ರಾಜೇಶ್ವರಿ ಇನ್ನಿತರರು ಉಪಸ್ಥಿತರಿದ್ದರು.

Continue Reading

Trending

error: Content is protected !!