Chamarajanagar
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುವ ನರೇಗಾ ಕಾಮಗಾರಿಗಳನ್ನು ಸದುಪಯೋಗಪಡಿಸಿಕೊಳ್ಳಿ – ನೋಡಲ್ ಅಧಿಕಾರಿ ಮಲ್ಲಿಕಾರ್ಜುನ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುವ ನರೇಗಾ ಕಾಮಗಾರಿಗಳ ಸದುಪಯೋಗಪಡಿಸಿಕೊಂಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಸ್ತಿಯನ್ನು ನಿರ್ಮಾಣ ಮಾಡಬೇಕು ಎಂದು ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ತಿಳಿಸಿದರು.
ಅವರು ಹೊನ್ನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಮತ್ತು 15ನೇ ಹಣಕಾಸು ಮತ್ತು 2024- 25 ನೇ ಸಾಲಿನ ಕ್ರಿಯಾಯೋಜನೆ ತಯಾರಿಸುವ ಗ್ರಾಮ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜೊತೆಗೆ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ ಮಾಹಿತಿಗಳನ್ನು ಪಡೆದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ತಾಲೂಕು ನರೇಗಾ ಸಂಯೋಜಕ ನಾರಾಯಣ ಮಾತನಾಡಿ ಗ್ರಾಮ ಪಂಚಾಯತಿ ವತಿಯಿಂದ ಒಟ್ಟು 233 ಕಾಮಗಾರಿಗಳನ್ನು ಮಾಡಲಾಗಿದೆ. ಇದರಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ 216 ತೋಟಗಾರಿಕೆ ಇಲಾಖೆ ವತಿಯಿಂದ ಆರು ರೇಷ್ಮೆ ಇಲಾಖೆ ವತಿಯಿಂದ ಒಂದು ಪಿ ಆರ್ ಐ ಡಿ ಇಲಾಖೆ ವತಿಯಿಂದ ಆರು ಕೃಷಿ ಇಲಾಖೆಯಿಂದ 2 ಅರಣ್ಯ ಇಲಾಖೆಯಿಂದ 2 ಕಾಮಗಾರಿಗಳನ್ನು ಮಾಡಲಾಗಿದೆ. ಇದಕ್ಕಾಗಿ ಒಟ್ಟು ಕೂಲಿ ಮೊತ್ತ
78,94,854 ರೂಪಾಯಿಗಳು , ಸಾಮಗ್ರಿ ಮೊತ್ತ 27, 29,412 ರೂಪಾಯಿಗಳು ಸೇರಿದಂತೆ ಒಟ್ಟು 1,06,24,266 ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು. ಇದಕ್ಕಾಗಿ 25549 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಹೇಳಿದರು.
ಕಡತ ನೀಡದೆ ಇರುವುದು, ಅಧಿಕೃತ ವೋಚರ್ಸ್ ಒದಗಿಸದೆ ಇರುವುದು ,ಮಾಸ್ಟರ್ ರೋಲ್ ಇಲ್ಲದಿರುವುದು ,ರಾಜಧನ ಜಮೆ ಮಾಡದೆ ಇರುವುದು ಮತ್ತು ನಾಮಫಲಕ ಇಲ್ಲದಿರುವುದು ಸೇರಿದಂತೆ ಒಟ್ಟು 38 ಪ್ರಕರಣಗಳಿಗೆ ವಸುಲಾತಿ ಮತ್ತು 127 ಪ್ರಕರಣಗಳಿಗೆ ಆಕ್ಷೇಪಣೆ ಸೇರಿದಂತೆ ಒಟ್ಟು 37,43,825 ರೂಪಾಯಿಗಳನ್ನು ಆಕ್ಷೇಪಣ ಮೊತ್ತದಲ್ಲಿ ಇರಿಸಲಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ ರೂಪೇಶ್, ಉಪಾಧ್ಯಕ್ಷ ಎಚ್ ಬಿ ನಾಗರಾಜು, ಸದಸ್ಯರಾದ ರಾಧಾ, ಇಂದಿರಾ, ಆರ್ ಪುಟ್ಟ ಬಸವಯ್ಯ, ನೇತ್ರ, ಭಾಗ್ಯಮ್ಮ, ಕುಮಾರಸ್ವಾಮಿ, ಪಿಡಿಒ ನಿರಂಜನ್, ಸಾಮಾಜಿಕ ಅರಣ್ಯ ಇಲಾಖೆಯ ಸಂಪತ್, ರೇಷ್ಮೆ ಇಲಾಖೆಯ ಸತ್ಯಪಾಲ್, ತೋಟಗಾರಿಕೆ ಇಲಾಖೆಯ ಶಿವರಂಜಿನಿ, ಗ್ರಾಪಂ ಸಿಬ್ಬಂದಿ ಮಹಾದೇವಸ್ವಾಮಿ ,ಮಹದೇವಮ್ಮ ಸೇರಿದಂತೆ ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು
ವರದಿ : ಸೈಯದ್ ಮುಷರಫ್
Chamarajanagar
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ

ಚಾಮರಾಜನಗರ: ತಲೆಯಲ್ಲಿ ಕೂದಲು ಇಲ್ಲದ ಕಾರಣಕ್ಕೆ ಪತ್ನಿ ಕಿರುಕುಳ ನೀಡಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಉಡಿಗಾಲ ಗ್ರಾಮದ ನಿವಾಸಿ ಪರಶಿವಮೂರ್ತಿ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಪರಶಿವಮೂರ್ತಿಗೆ ತಲೆಯಲ್ಲಿ ಕೂದಲು ಕಡಿಮೆ ಇದ್ದು, ಕೂದಲು ನಾಟಿ ಮಾಡಿಸಿಕೊಳ್ಳುವಂತೆ ಪತ್ನಿ ಒತ್ತಾಯಿಸುತ್ತಿದ್ದಳು ಬೋಳು ತಲೆ ಎಂದು ಪದೇಪದೇ ನಿಂದಿಸುತ್ತಿದ್ದಳು. ಇದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
-
Chamarajanagar21 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar22 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International13 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Chamarajanagar15 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Kodagu15 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ