Connect with us

State

ಇಂತಹ ಗೃಹಲಕ್ಷ್ಮಿಯರಿಗೆ ಸಿಗಲಿದೆ 6,000 ರೂಪಾಯಿ, ಇನ್ನು 2 ಸಾವಿರ ಬಂದಿಲ್ಲ ಅನ್ನೋ ಚಿಂತೆ ಬೇಡ

Published

on

ರಾಜ್ಯ ಕಾಂಗ್ರೆಸ್ ಸರ್ಕಾರ (State Congress government) ಚುನಾವಣೆಗೂ ಮೊದಲು ತನ್ನ ಪ್ರಣಾಳಿಕೆಯಲ್ಲಿ ಹೊರಡಿಸಿರುವ ಪ್ರತಿಯೊಂದು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ

ಇದರಿಂದಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಭರವಸೆ ಮೂಡಿದೆ ಎನ್ನಬಹುದು, ಜನರ ಅತೀ ನಿರೀಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ (Gruha lakshmi scheme) ಅಡಿಯಲ್ಲಿ ಎರಡು ಕಂತಿನ ಹಣ ಫಲಾನುಭವಿಗಳ ಖಾತೆಗೆ (Bank Account) ಸಂದಾಯವಾಗಿದೆ.

30% ಮಹಿಳೆಯರಿಗೆ ಹಣ ಬಂದಿಲ್ಲ!
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಏನು ಕಡಿಮೆ ಇಲ್ಲ, ಅಗಸ್ಟ್ ತಿಂಗಳಿಗಿಂತಲೂ ಮೊದಲೇ ಒಂದು ಕೋಟಿಗೂ ಅಧಿಕ ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅದರಲ್ಲಿ ಮೊದಲ ಕಂತಿನ ಹಣ 96 ಲಕ್ಷ ಜನರ ಖಾತೆಗೂ ಹಾಗೂ ಎರಡನೇ ಕಂತಿನ ಹಣ 63 ಲಕ್ಷ ಮಹಿಳೆಯರ ಖಾತೆಗೂ ವರ್ಗಾವಣೆ (DBT) ಮಾಡಲಾಗಿದೆ

ಆದರೆ ಉಳಿದವರು ಖಾತೆಗೆ ಮಾತ್ರ ಇನ್ನೂ ಹಣ ಬಂದಿಲ್ಲ, ಹಾಗಾಗಿ ಸಾಕಷ್ಟು ಮಹಿಳೆಯರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗಾದ್ರೆ ಅರ್ಜಿ ಸಲ್ಲಿಸಿದರು ಕೂಡ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗದೆ ಇರಲು ಕಾರಣವೇನು ಎಂಬುದನ್ನು ನೋಡುವುದಾದರೆ ಮೊದಲನೇದಾಗಿ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿಯೇ (bank account problem) ಸಮಸ್ಯೆ ಇದೆ

ಕೆಲವರ ಬ್ಯಾಂಕ್ ಖಾತೆ ಆಕ್ಟಿವ್ ಆಗಿಲ್ಲದೆ ಇದ್ದರೆ ಇನ್ನು ಕೆಲವರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar seeding) ಆಗಿಲ್ಲ. ಈ ಎಲ್ಲಾ ಬದಲಾವಣೆಗಳನ್ನು ಮಾಡಿಕೊಳ್ಳದೆ ಇದ್ದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಳ್ಳಲು ಸಾಧ್ಯವಿಲ್ಲ.

ಸರ್ಕಾರದಿಂದಲೂ ಸಮಸ್ಯೆ!
ಇತ್ತೀಚಿಗೆ ಮಾಧ್ಯಮದೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar ) ತಿಳಿಸಿರುವಂತೆ, ಕೆಲವು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗದೆ ಇರುವುದಕ್ಕೆ ಸರ್ಕಾರದ ಕಡೆಯಿಂದ ಆಗಿರುವ ಲೋಪದೋಷಗಳು ಕೂಡ ಕಾರಣ.

ನಮ್ಮಲ್ಲಿ ಕೆಲವು ಈ ಗವರ್ನೆನ್ಸ್ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷಗಳಿಂದಾಗಿ (technical error) ಮಹಿಳೆಯರ ಖಾತೆಯನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ ಆದರೆ ಸದ್ಯದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೇವೆ ಎಂದು ಸಚಿವೆ ತಿಳಿಸಿದರು.

ಹಾಗಾಗಿ ಮೊದಲ ಕಂತಿನ ಹಣ ಯಾರ ಖಾತೆಗೆ ಬಂದಿಲ್ಲವೋ ಅವರಿಗೆ ನವೆಂಬರ್ 10ರ ಒಳಗೆ ಎರಡು ಖಾತೆಯ ಹಣವನ್ನು ಸೇರಿಸಿ ಜಮಾ (Money Transfer) ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು.

ಇಂತಹವರಿಗೆ ಸಿಗಲಿದೆ ಉಚಿತ ಮನೆ, ಸರ್ಕಾರದಿಂದ ಆರನೇ ಗ್ಯಾರಂಟಿ ಯೋಜನೆ ಘೋಷಣೆ

ಪೋಸ್ಟ್ ಆಫೀಸ್ ಖಾತೆ ತೆರೆಯಿರಿ! (Open account in post office)
ಬ್ಯಾಂಕುಗಳಲ್ಲಿ ಅದೆಷ್ಟೋ ಮಹಿಳೆಯರು ಈಕೆ ವೈ ಸಿ ಮಾಡಿಸಿಕೊಳ್ಳಲು ಪ್ರಯತ್ನಿಸಿದರು ಅದು ಸಾಧ್ಯವಾಗುತ್ತಿಲ್ಲ, ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಹಿಂತಿರುಗಿದರೆ ಬ್ಯಾಂಕ್ ಕೆ ವೈ ಸಿ (KYC) ಅಥವಾ ಆಧರಿಸಿ ಮಾಡುವಲ್ಲಿ ವಿಫಲವಾಗಿದೆ.

ಆದರೆ ಯಾರು ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರುತ್ತಾರೋ ಅಂತವರಿಗೆ ಯಾವುದೇ ತೊಂದರೆ ಆಗದೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣವು ಸಂದಾಯವಾಗಿದೆ.

ಮಹಿಳೆಯರು ಪೋಸ್ಟ್ ಆಫೀಸ್ನಲ್ಲಿ ಖಾತೆ ತೆರೆಯುವಂತೆ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದ್ದರೆ ಯಾರಿಗೆ ಈವರಿಗೆ ಹಣ ಸಂದಾಯ ಆಗಿಲ್ಲವೋ ಅವರಿಗೆ ಮೂರು ಕಂತಿನ ಹಣವನ್ನು ಸೇರಿಸಿ ಜಮಾ ಆಗುವ ಸಾಧ್ಯತೆ ಇದೆ. ನಿಜವಾಗಿ ವಿವಿಧ ಮಹಿಳೆಯರ ಖಾತೆಗೆ ನವೆಂಬರ್ ಹತ್ತರ ಒಳಗೆ ಹಣ ಸಂದಾಯ ಆಗುತ್ತದೆಯೋ ಅಥವಾ ಅರ್ಜಿ ಸಲ್ಲಿಸಿದ್ದು ವ್ಯರ್ಥವಾಗುತ್ತದೆಯೋ ಎಂಬುದು ಸದ್ಯದಲ್ಲಿಯೇ ಸ್ಪಷ್ಟವಾಗಲಿದೆ.

 

 

Continue Reading
Click to comment

Leave a Reply

Your email address will not be published. Required fields are marked *

State

ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವು: ಸಿಎಂ ಫಸ್ಟ್‌ ರಿಯಾಕ್ಷನ್‌

Published

on

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಅದರಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದು, ವಿದ್ಯಾರ್ಥಿ ನಿಧನಕ್ಕೆ ಸಂತಾಒಪ ಸೂಚಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು.

ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ಬಾಲಕನ‌ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಬರೆದುಕೊಂಡು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Continue Reading

State

ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ

Published

on

BMRCL Train Operator’s Recruitment 2025 : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೋಟಿಫಿಕೇಷನ್ ಬಿಡುಗಡೆ ಮಾಡಿದ್ದಾರೆ.

ನಮ್ಮ ಮೆಟ್ರೋ, BMRCL ನಲ್ಲಿ ಒಟ್ಟು 50 ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೆಟ್ರೋ ಇಲಾಖೆಯ ಏನೆಲ್ಲಾ ಅರ್ಹತೆಗಳನ್ನು ನಿಗದಿಪಡಿಸಿದೆ? ಯಾವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಮಾಹಿತಿ ಇಲ್ಲಿದೆ..

ಹುದ್ದೆಗಳ ವಿವರ :

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟ್ರೇನ್ ಆಪರೇಟರ್ ಹುದ್ದೆಗಳನ್ನು 5 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರದಲ್ಲಿ ಅಭ್ಯರ್ಥಿಯು ಮಾಡುವ ಕೆಲಸದ ಆಧಾರದ ಮೇಲೆ ಸೇವಾ ಅವಧಿಯನ್ನು ಹೆಚ್ಚಿಸಲಾಗುವುದು.

ಯಾವ ಯಾವ ಅರ್ಹತೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ?

ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ 38 ವರ್ಷದ ಒಳಗಿನ ಅಭ್ಯರ್ಥಿಗಳಾಗಿದ್ದು, ಈ ಕೆಳಗಿನ ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ ಕೋರ್ಸ್ ಮುಗಿಸಿರಬೇಕು.

Electrical Engineering / Electrical & Electronics
Engineering / Telecommunications/ Electronics & Communication Engineering/ Electrical
Power Systems /Industrial Electronics/ Mechanical Engineering

ಆಯ್ಕೆಯಾಗುವವರಿಗೆ ಸಿಗುವ ಸಂಬಳ : ನೇಮಕಾತಿಯಲ್ಲಿ ಅಂತಿಮವಾಗಿ ಕೆಲಸಕ್ಕೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ 35,000 ರೂಪಾಯಿಯಿಂದ 82,660 ರೂಪಾಯಿವರೆಗೆ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಯಾವಾಗ?

ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯೂ ಮಾರ್ಚ್ 12, 2025 ರಂದು ಬಿಡುಗಡೆಯಾಗಿದ್ದು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವು ಏಪ್ರಿಲ್ 09, 2025 ಆಗಿರುತ್ತದೆ.

ಅರ್ಜಿ ಸಲ್ಲಿಕೆಯ ಪ್ರಕ್ರಿಯೆ :

ಮೊದಲು ಕೆಳಗೆ ನೀಡಿರುವ ಲಿಂಕ್ ಮೇಲೆ ಒತ್ತಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆಸಿ ಅದಕ್ಕೆ ನಿಗದಿತ ಸ್ಥಳದಲ್ಲಿ ಪಾಸ್ ಪೋರ್ಟ್ ಅಳತೆಯ ಫೋಟೋ ಅಂಟಿಸಿ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ವಿಳಾಸ : The General Manager (HR), Bangalore Metro Rail Corporation Limited, III Floor, BMTC Complex, K.H.Road, Shanthinagar, Bangalore 560027

ಅಧಿಕೃತ ಜಾಲತಾಣ – https://projectrecruit.bmrc.co.in/

Continue Reading

State

ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ

Published

on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಅವಳ ಬರ್ಬರ ಕೊಲೆಯ ನೋವು ಮಾಸುವ ಮುನ್ನ ಈಗ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎನ್ನುವ ಯುವತಿಯ ಕೊಲೆಯಾಗಿದ್ದು, ಇದೂ ಕೂಡ ಲವ್ ಜಿಹಾದ್ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ರಾಜ್ಯದಲ್ಲಿ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕೃತ್ಯ ನಡೆಸುವವರಿಗೆ ಪೊಲೀಸರ ಭಯ ಇಲ್ಲದಿರುವುದು ಇಂತಹ ಪ್ರಕರಣ ಹೆಚ್ಚಾಗಲು ಕಾರಣ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೇ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದರಿಂದ ಮಾತ್ರ ಇಂತಹ ಪ್ರಕರಣಗಳಿಗೆ ತಡೆ ಒಡ್ಡಬಹುದಾಗಿದೆ.

ಹೆಣ್ಣು ಮಕ್ಕಳ ಕುಟುಂಬ, ಬಂಧುಗಳು ಮತ್ತು ಸಮಾಜ ಅತ್ಯಂತ ನೋವು ಪಡುವ ಈ ಘಟನೆಯಲ್ಲಿ ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಮತ್ತು ನ್ಯಾಯ ದೊರಕಿಸಿ ಕೊಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Continue Reading

Trending

error: Content is protected !!