State
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
ವರ್ತಕರು ಯಾವುದೇ ರೂಪದಲ್ಲಾಗಲೀ ವಹಿವಾಟು ನಡೆಸಿದ್ದಲ್ಲಿ ಅಂತಹ ವರ್ತಕರಿಂದ ಜಿ.ಎಸ್.ಟಿ ಕಾಯ್ದೆಯಡಿ ಅನ್ವಯಿಸುವ ತೆರಿಗೆಯನ್ನು ತೆಗೆದುಕೊಳ್ಳುತ್ತದೆ.
ಬೆಂಗಳೂರು: ಜಿಎಸ್ಟಿ ನೋಟಿಸ್ ಬಂದಿದೆ ಎಂಬ ಕಾರಣಕ್ಕೆ ವರ್ತಕರು ಡಿಜಿಟಲ್ ಪಾವತಿ ಗೇಟ್ ವೇಗಳ ಬಳಕೆ ನಿಲ್ಲಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು ಗೊಂದಲಗಳಿಗೆ ಸ್ಪಷ್ಟನೆ ನೀಡಿ, ಕೆಲ ಸೂಚನೆಗಳನ್ನೂ ನೀಡಿದೆ.
ಈ ಸಂಬಂಧ ಪ್ರಕಟಣೆ ನೀಡಿರುವ ಇಲಾಖೆ, ಜಿಎಸ್’ಟಿ ಸಂಬಂಧಿಸಿದ ನಿಯಮಗಳು ಮತ್ತು ಪರಿಹಾರಗಳನ್ನು ವ್ಯಾಪಾರಿಗಳಿಗೆ ಅಧಿಜಾರಿಗಳು ತಿಳಿಸಿ, ತೆರಿಗೆ ವಿನಾಯಿತಿ ಇರುವ ಸರಕು ಮತ್ತು ಸೇವೆಗಳನ್ನು ಹೊರತುಪಡಿಸಿ ತೆರಿಗೆದಾಯಕ ವಹಿವಾಟಿಗೆ ಮಾತ್ರ ಅನ್ವಯಿಸುವ ದರಗಳ ಅನ್ವಯ ತೆರಿಗೆ ವಿಧಿಸುತ್ತಾರೆಂದು ವಾಣಿಜ್ಯ ತೆರಿಗೆ ಇಲಾಖೆ ತಿಳಿಸಿದೆ.

ಸಮಗ್ರ ವಹಿವಾಟಿನಲ್ಲಿ ತೆರಿಗೆ ವಿಧಿಸಬಹುದಾದ ಮತ್ತು ತೆರಿಗೆ ವಿನಾಯಿತಿ ಪಡೆದ ಸರಕು ಮತ್ತು ಸೇವೆಗಳು ಸೇರಿರುತ್ತವೆ. ವರ್ತಕರು ಜಿ.ಎಸ್.ಟಿ. ಅಡಿಯಲ್ಲಿ ಸಾಮಾನ್ಯ ನೋಂದಣಿ ಪಡೆದಿದ್ದೇ ಆದರೆ ತೆರಿಗೆ ಬಾಧ್ಯತೆಯು ತೆರಿಗೆ ವಿಧಿಸಬಹುದಾದ ಸರಕು ಮತ್ತು ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ನೋಂದಾಯಿತ ವರ್ತಕರು ತಾವು ಖರೀದಿಸಿದ ವಸ್ತುಗಳ ಮೇಲೆ ಹೂಡುವಳಿ ತೆರಿಗೆಯನ್ನು ಮಾರಾಟದ ಮೇಲೆ ಪಾವತಿಸಬೇಕಾದ ತೆರಿಗೆಗೆ ಹೊಂದಾಣಿಕೆ ಮಾಡಿಕೊಂಡು ನಿವ್ವಳ ತೆರಿಗೆಯನ್ನು ಪಾವತಿಸಬೇಕು. ಆದುದರಿಂದ ಮೌಲ್ಯವರ್ಧನೆಯ ಮೇಲೆ ಪಾವತಿಸಬೇಕಾದ ತೆರಿಗೆ ಮೊತ್ತವು ಅಲ್ಪ ಪ್ರಮಾಣದಲ್ಲಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಯಾವುದೇ ವ್ಯಾಪಾರಿಗಳು ತಮ್ಮ ವಾರ್ಷಿಕ ವಹಿವಾಟು 1.50 ಕೋಟಿ ರೂ.ಗಿಂತ ಕಡಿಮೆ ಇದ್ದಲ್ಲಿ ಜಿ.ಎಸ್.ಟಿ ಅಡಿ ನೋಂದಣಿಯನ್ನು ಪಡೆದು ರಾಜಿ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡು ವಹಿವಾಟಿನ ಮೇಲೆ ಶೇ 0.5 ಎಸ್.ಜಿ.ಎಸ್.ಟಿ ತೆರಿಗೆಯನ್ನು ಪಾವತಿಸಬಹುದು. ಆದರೆ, ನೋಂದಣಿ ಪಡೆಯದೇ ನೆಡೆಸಿರುವ ವಹಿವಾಟಿಗೆ ರಾಜಿ ತೆರಿಗೆ ಪದ್ಧತಿಯು ಅನ್ವಯಿಸುವುದಿಲ್ಲ ಎಂದು ಹೇಳಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಈ ನಿಟ್ಟಿನಲ್ಲಿ ವರ್ತಕರಲ್ಲಿ ಸೂಕ್ತ ಮಾರ್ಗದರ್ಶನ, ಸಹಕಾರ ಹಾಗೂ ಅರಿವು ಮೂಡಿಸಲು ಸೂಚಿಸಲಾಗಿದೆ. ಹಾಗೂ ಹೊಸದಾಗಿ ನೀಡಲಾಗುವ ನೋಂದಣಿಯನ್ನು ತೆರಿಗೆದಾರರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಸುಸೂತ್ರವಾಗಿ ನೀಡಲು ಸಹ ಸೂಚಿಸಲಾಗಿದೆ ಎಂದು ತಿಳಿಸಿದೆ.
ಈಗಾಗಲೇ ರಾಜ್ಯದಲ್ಲಿ 98,915 ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ನೋಂದಣಿ ಪಡೆದು ವ್ಯಾಪಾರ ನಡೆಸುತ್ತಿರುತ್ತಾರೆ. ಈಗಾಗಲೇ ವಾರ್ಷಿಕ ವಹಿವಾಟು 40 ರೂ. ಲಕ್ಷಗಳು (ಸರಕುಗಳ ಪೂರೈಕೆದಾರರು), 20 ಲಕ್ಷಗಳು ರೂ. (ಸೇವೆಗಳ ಪೂರೈಕೆದಾರರು) ಮೀರಿರುವ ನೋಂದಣಿ ಪಡೆಯದೇ ಇರುವ ವರ್ತಕರಿಗೆ ನೋಟೀಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ನೋಂದಾಯಿತ ವರ್ತಕರು ಇನ್ನು ಮುಂದೆ ರಾಜಿ ತೆರಿಗೆ ಪದ್ಧತಿಯಡಿ ಶೇ.1 ರಂತೆ ತೆರಿಗೆ ಪಾವತಿಸುವುದು ಕಷ್ಟಕರವಾಗಲಾರದು. ಈಗಾಗಲೇ ಶೇ. 90 ರಷ್ಟು ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ತೆರಿಗೆ ಪಾವತಿಸುತ್ತಿರುವುದರಿಂದ ಉಳಿಕೆ ಶೇ. 10 ರಷ್ಟು ವರ್ತಕರು ತೆರಿಗೆ ಪಾವತಿಸದಿರುವುದು ತರವಲ್ಲ. ಜಿಎಸ್ಟಿ ಕಾಯ್ದೆಯು ಇಂತಹ ತಾರತಮ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.
ನೋಟೀಸ್ ನೀಡಿದ ಬೆನ್ನಲ್ಲೇ ಕೆಲವು ವರ್ತಕರು ಯು.ಪಿ.ಐ ಮೂಲಕ ಹಣಪಡೆಯುವುದನ್ನು ನಿಲ್ಲಿಸಿ, ಗ್ರಾಹಕರಿಂದ ನಗದು ರೂಪದಲ್ಲಿ ಹಣ ಸ್ವೀಕರಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ವರ್ತಕರು ತಾವು ಮಾಡಿದ ವಹಿವಾಟಿನ ಪ್ರತಿಫಲವನ್ನು ಯಾವುದೇ ರೂಪದಲ್ಲಿ ಪಡೆದಿದ್ದರೂ ಜಿ.ಎಸ್.ಟಿ. ತೆರಿಗೆ ಅನ್ವಯವಾಗುತ್ತದೆ.
ಯುಪಿಐ ಈ ರೀತಿ ಪ್ರತಿಫಲ ಪಡೆಯುವ ಒಂದು ಮಾರ್ಗ ಮಾತ್ರ. ವರ್ತಕರು ಯಾವುದೇ ರೂಪದಲ್ಲಾಗಲೀ ವಹಿವಾಟು ನಡೆಸಿದ್ದಲ್ಲಿ ಅಂತಹ ವರ್ತಕರಿಂದ ಜಿ.ಎಸ್.ಟಿ ಕಾಯ್ದೆಯಡಿ ಅನ್ವಯಿಸುವ ತೆರಿಗೆಯನ್ನು ತೆಗೆದುಕೊಳ್ಳುತ್ತದೆ. ಸಂಗ್ರಹಿಸಲು ಇಲಾಖೆಯು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.
State
ಸಚಿವ ಸಂಪುಟ ಪುನಾರಚನೆ: ಹೆಚ್ಚುವರಿ ಜವಾಬ್ದಾರಿ ನೀಡುವಂತೆ ಈಶ್ವರ್ ಖಂಡ್ರೆ ಮನವಿ
State
ಸಿಎಂ ಬದಲಾವಣೆ ಚರ್ಚೆ ನಡುವೆ ಆರ್. ಅಶೋಕ್ ತೀವ್ರ ಟೀಕೆ
State
ಡಿ.ಕೆ. ಶಿವಕುಮಾರ್ ಸಿಎಂ ಚರ್ಚೆ: ದೇವೇಗೌಡರ ಮನೆಗೆ ಸೂತಕದ ಛಾಯೆ ಎಂದು ಚಲುವರಾಯಸ್ವಾಮಿ ವ್ಯಂಗ್ಯ
ಬೆಂಗಳೂರು: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಚರ್ಚೆ ಕೇಳಿಬಂದ ನಂತರ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಎನ್.ಚಲುವರಾಯಸ್ವಾಮಿ ವ್ಯಂಗ್ಯ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಒಕ್ಕಲಿಗ ಸಮುದಾಯದಲ್ಲಿನ ನಾಯಕತ್ವದ ವಿಚಾರವನ್ನು ಉಲ್ಲೇಖಿಸಿದ ಅವರು, ಡಿಕೆ ಶಿವಕುಮಾರ್ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದು ಹೇಳಿದ್ದಾರೆ.

ಅವರು ಮತ್ತೊಂದು ಹೇಳಿಕೆಯಲ್ಲಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತಾರೆ, ರಾಜ್ಯಸಭೆಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ.
-
Special21 hours agoಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ: ಅರ್ಜಿ ಆಹ್ವಾನ!
-
Hassan24 hours agoಹಾಸನ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆ–ಕಟ್ಟೆಗಳು ತುಂಬಿ ರೈತರಲ್ಲಿ ಸಂತಸ
-
Special10 hours agoLPG ಸಿಲಿಂಡರ್ ಹೊಸ ನಿಯಮಗಳು: ಈ ತಪ್ಪು ಮಾಡಿದ್ರೆ ಗ್ಯಾಸ್ ಕನೆಕ್ಷನ್ ಬ್ಲಾಕ್ ಆಗಬಹುದು!
-
State23 hours agoಕರ್ನಾಟಕದಲ್ಲಿ ಗುಡುಗು–ಸಿಡಿಲು ಮಳೆ ಎಚ್ಚರಿಕೆ: ಆರೆಂಜ್, ಯೆಲ್ಲೋ ಅಲರ್ಟ್ IMDಯಿಂದ ಘೋಷಣೆ
-
Mandya56 minutes agoಸಿದ್ದರಾಮಯ್ಯನವರ ರಾಜೀನಾಮೆ ನಿರೀಕ್ಷಿತ: ಸುಮಲತಾ ಅಂಬರೀಷ್
-
National23 hours agoಈ ಬಾರಿ ಕೋಲ್ಕತ್ತಾದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
-
Politics22 hours agoಜೈಪುರದಲ್ಲಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
-
Hassan2 hours agoಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ರಾಹುಲ್ ಗಾಂಧಿಗೆ ಮನವಿ ಮಾಡಿದ ಶ್ರೇಯಸ್ ಪಟೇಲ್
