Mysore
ಚುನಾವಣೆ ನಂತರ ಪಂಚ ಗ್ಯಾರಂಟಿಗಳು ರದ್ದಾದಾಗಲಿದ್ದು, ಇವರ ವಂಚನೆ ಗೊತ್ತಾಗಲಿದೆ : ಎಚ್. ಡಿ. ಕುಮಾರಸ್ವಾಮಿ
ಸಾಲಿಗ್ರಾಮ – ದಿನಗಳು ಕಳೆದಂತೆ ಗ್ಯಾರಂಟಿಗಳು ಈ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಬರಿದು ಮಾಡುವತ್ತ ಸಾಗುತ್ತಿದ್ದು ಲೋಕಸಭೆ ಚುನಾವಣೆ ಕಳೆದ ನಂತರ ಪಂಚ ಗ್ಯಾರಂಟಿ ಯೋಜನೆಗಳು ರದ್ದಾಗಲಿದ್ದು ಆನಂತರ ಜನರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ವಂಚಿಸುತ್ತಿರುವ ಪರಿ ಗೊತ್ತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ನೆಪದಲ್ಲಿ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ್ದೆ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು. ಸರ್ಕಾರ ಶಾಶ್ವತ ಯೋಜನೆಗಳು ಮತ್ತು ಜನರಿಗೆ ಅನುಕೂಲವಾಗುವ ಕಾರ್ಯಕ್ರಮವನ್ನು ಜಾರಿಗೆ ತರುವ ಬದಲು ಸಾಲ ಮಾಡಿ ಪುಕ್ಕಟೆ ಯೋಜನೆಗಳನ್ನು ನೀಡುವ ಮೂಲಕ ಜನರ ಮೇಲೆ ಸಾಲದ ಹೊರೆ ಹೇರುತ್ತಿದ್ದು ಭವಿಷ್ಯದಲ್ಲಿ ಇದು ದೊಡ್ಡ ಗಂಡಾಂತರ ತಂದೊಡ್ಡಲಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಸುಳ್ಳುಗಳ ಸರಮಾಲೆಯನ್ನೇ ಹೇಳಿಕೊಂಡು ಬರುತ್ತಿದ್ದು ಇದನ್ನು ಯಾರು ನಂಬಬಾರದು ಎಂದ ಮಾಜಿ ಮುಖ್ಯಮಂತ್ರಿಗಳು ನಾನು ಆಯ್ಕೆಯಾದರೆ ಕೇಂದ್ರ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ದೊರಕುವ ವಿಶ್ವಾಸವಿದ್ದು ಆ ನಂತರ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನನ್ನನ್ನು ಚುನಾವಣೆಗೆ ನಿಲ್ಲುವಂತೆ ಹೇಳಿದ್ದರಿಂದ ಸ್ಪರ್ಧೆ ಮಾಡಿದ್ದು ಇದು ಭವಿಷ್ಯದಲ್ಲಿ ರಾಜ್ಯದ ರೈತರ ಸಹಕಾರಕ್ಕೆ ನಾನು ಬಂದು ಅವರ ಪರವಾಗಿ ಕೆಲಸ ಮಾಡಲಿ ಎಂಬ ಉದ್ದೇಶವಿರಬಹುದೆಂದು ನುಡಿದರು.
ವಿದಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಸಚಿವರಾದ ಎಂ.ಪಿ. ನಾಡಗೌಡ, ಸಾರಾ ಮಹೇಶ್ ಮಾತನಾಡಿದರು. ಪ್ರಚಾರ ಸಭೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಹಣ್ಣಿನ ಹಾರಗಳನ್ನು ಹಾಕುವ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು.
ರಾಜ್ಯ ಬಿಜೆಪಿ ಕಾರ್ಯದರ್ಶಿ ದಿವ್ಯ, ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿ ಎಚ್. ಡಿ. ಪ್ರಭಾಕರ್ ಜೈನ್, ಜಿ.ಪಂ.ಮಾಜಿ ಮಾಜಿ ಸದಸ್ಯರಾದ ಅಮಿತ್ ವಿ.ದೇವರಹಟ್ಟಿ, ಎಂ.ಟಿ.ಕುಮಾರ್. ಸಿ.ಜೆ.ದ್ವಾರಕೀಶ್, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಸಾಲಿಗ್ರಾಮ ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಕರ್ತಾಳು ಮದು, ಹುಣಸೂರು ತಾಲೂಕು ಜೆಡಿಎಸ್ ಅಧ್ಯಕ್ಷ ದೇವರಾಜ ಒಡೆಯರ್, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಜಿಲ್ಲಾ ಗ್ರಾಮಾಂತರ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್, ಜಿಲ್ಲಾ ಜೆಡಿಎಸ್ ಮುಖಂಡ ಹಳಿಯೂರು ಎಚ್. ಕೆ. ಮಧುಚಂದ್ರ, ಎಸ್. ಟಿ. ಕೀರ್ತಿ,. ಜೆಡಿಎಸ್ ಮುಖಂಡರಾದ , ಬಿ.ರಮೇಶ್, ಎಸ್.ಟಿ.ಕೀರ್ತಿ, ಹೆಚ್.ಆರ್.ಮದುಚಂದ್ರ, , ಗುತ್ತಿಗೆದಾರ ಹೆಚ್.ಕೆ.ಕೀರ್ತಿವಕೀಲ ರಮೇಶ್ , ಇನ್ನಿತರ,ಇದರು.

ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಗಂಬೀರ ಆರೋಪ ಮಾಡಿದರು.
ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ಅವರ ಪರವಾಗಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದ್ದು ಇದರಿಂದ ರೈತರಿಗೆ ತೊಂದರೆಯಾಗಿದೆ ಆದರೆ ಇದನ್ನು ಹೇಳುವವರು ಕೇಳುವವರು ಇಲ್ಲವಾಗಿದೆ ಎಂದರು.
15 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಪುನರಾರಂಭ ಮಾಡಲಾಗಿತ್ತು ಆನಂತರ ಕೆಲವು ತಾಂತ್ರಿಕ ಕಾರಣಗಳಿಂದ ಅದು ಮತ್ತೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದಾಗ ಎರಡು ವರ್ಷಗಳ ಹಿಂದೆ ನಾನು ಮತ್ತೆ ಆರಂಭ ಮಾಡಿಸಿದ್ದೆ, ಆದರೆ ಈಗ ಮತ್ತೆ ಕಾರ್ಖಾನೆ ನಿಂತು ಹೋಗಿದ್ದು ಈಗಿನವರು ಏನು ಮಾಡುತ್ತಿದ್ದಾರೆಂದು ಪ್ರಶ್ನಿಸಿದರು.
ಕೆ. ಆರ್. ನಗರ ಪಟ್ಟಣದ ಪುರಸಭೆಯ 72 ವಾಣಿಜ್ಯ ಮಳಿಗೆಗಳ ಬಾಡಿಗೆ ಮಾಲೀಕರಿಂದ 2.5 ಕೋಟಿ ಹಣವನ್ನು ಅಕ್ರಮವಾಗಿ ವಸೂಲಿ ಮಾಡಿದ್ದು ಆ ಬಗ್ಗೆ ತನಿಖೆ ನಡೆಸಿ ತಪ್ಪು ಮಾಡಿರುವವರನ್ನು ಜೈಲಿಗೆ ಕಳಿಸಬೇಕೆಂದು ಪರೋಕ್ಷವಾಗಿ ಶಾಸಕ ಡಿ. ರವಿಶಂಕರ್ ಅವರನ್ನು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ದರಿದ್ರ ಅವರಿಸಲಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆ ಬೆಳೆಯಾಗಿ ಮತ್ತೆ ಸುವರ್ಣ ಯುಗ ಆರಂಭವಾಗಬೇಕಾದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ಲಂಚ ಪಡೆಯುವ ಬದಲು ದೇವಾಲಯದ ಮುಂದೆ ಕುಳಿತು ಬಿಕ್ಷೆ ಬೇಡುವುದೇ ವಾಸಿ ಎಂದು ನಾನು ಹೇಳಿಕೆ ನೀಡಿದ ನಂತರ. ಪ್ರತಿಕ್ರಿಯೆ ನೀಡುವ ನೀವು ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರೆಂದು ಪರೋಕ್ಷವಾಗಿ ಶಾಸಕ ಡಿ.ರವಿಶಂಕರ್ ಅವರನ್ನು ಟೀಕಿಸಿದರು.
Mysore
ಮಡಿವಾಳ ಮಾಚಿದೇವರಂತಹ ತತ್ವ , ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು: ಟಿ.ಜಿ. ಸುರೇಶ್ ಆಚಾರ್
ತಿ.ನರಸೀಪುರ: ಸಂತ, ಸಮಾಜ ಸುಧಾರಕ ಶ್ರೀ ವೀರ ಮಡಿವಾಳ ಮಾಚಿದೇವರ ಜಯಂತಿಯನ್ನು ತಾಲೂಕು ಆಡಳಿತ ಮತ್ತು ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರದಲ್ಲಿ ಶ್ರೀ ಮಾಚಿ ದೇವರ ಭಾವಚಿತ್ರಕ್ಕೆ ತಹಸೀಲ್ದಾರ್ ಟಿ.ಜಿ. ಸುರೇಶ್ ಆಚಾರ್ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ಶರಣ ಜಯಂತಿ ಆಚರಣೆ ಕೇವಲ ನಾಮಕಾವಸ್ಥೆ ಆಗಬಾರದು. ಮಹನೀಯ ತತ್ವ ಮತ್ತು ಆದರ್ಶಗಳನ್ನು ನಾವು ಅಳವಡಿಸಿಕೊಳ್ಳುವ ಮುಖೇನ ಅವರ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವಂತಾಗಬೇಕು ಎಂದರು.
ತಳ ಸಮುದಾಯಗಳ ಹಿಂದುಳಿಯುವಿಕೆ ಶಿಕ್ಷಣದ ಕೊರತೆ ಒಂದು ಪ್ರಮುಖ ಅಂಶವಾಗಿದೆ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯದ ಜನರು ತಮ್ಮ ಮಕ್ಕಳಿಗೆ ಕೇವಲ ಕುಲಕಸುಬನ್ನು ಮಾತ್ರ ಕಲಿಸದೆ ಮೌಲ್ಯಯುತ ಶಿಕ್ಷಣ ಕೊಡಿಸುವ ಕಡೆ ಹೆಚ್ಚು ಗಮನ ಕೇಂದ್ರೀಕರಿಸಬೇಕು. ಆಗಮಾತ್ರ ಸಮುದಾಯದ ಏಳಿಗೆ ಸಾಧ್ಯವಾಗುತ್ತದೆ ಎಂದರು.

ತಾಲೂಕು ಶ್ರೀ ವೀರ ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಬಿ.ಎಸ್.ರವಿ ಮಾತನಾಡಿ, ನಮ್ಮ ಸಮುದಾಯ ರಾಜಕೀಯ ಸ್ಥಾನಮಾನ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಲು ಎಲ್ಲರು ಸಂಘಟನೆಗೊಳ್ಳಬೇಕು. ಫೆ.20ರಂದು ಬನ್ನೂರು ಹೋಬಳಿ ಘಟಕದ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿ ಆಚರಣೆಯನ್ನು ಬನ್ನೂರಿನ ಫುಟ್ ಬಾಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು, ವಿವಿಧ ಮಠಗಳ ಶ್ರೀಗಳು ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರೇಡ್ -2 ತಹಸೀಲ್ದಾರ್ ರಾಜಾಕಾಂತ್, ಸವಿತಾ ಸಮಾಜದ ಮುಖಂಡ ಸಿದ್ದೇಶ್, ತಾಲೂಕು ವೀರ ಮಡಿವಾಳ ಮಾಚಿದೇವರ ಸಂಘದ ಗೌರವಾಧ್ಯಕ್ಷ ನಿಂಗರಾಜ್,ಉಪಾಧ್ಯಕ್ಷ ಪ್ರಭುಲಿಂಗಶೆಟ್ಟಿ,ಪ್ರಧಾನ ಕಾರ್ಯದರ್ಶಿ ಕೆ.ಮಹದೇವಶೆಟ್ಟಿ, ಸಹಕಾರ್ಯದರ್ಶಿ ಚಿದರವಳ್ಳಿ ರಂಗಸ್ವಾಮಿ, ಖಜಾಂಚಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಮ್ಮ,ಮಹಿಳಾ ಪ್ರಧಾನ ಕಾರ್ಯದರ್ಶಿ ಮಹದೇವಮ್ಮ,ಸಂಚಾಲಕರಾದ ಮಾಯಿಗಯ್ಯ,ನಿಂಗಶೆಟ್ಟಿ, ನಿಂಗರಾಜು,ಮೋಹನ್ ಕುಮಾರ್,
ಸಂಚಾಲಕಿ ಶಿಲ್ಪಾ, ಬನ್ನೂರು ಹೋಬಳಿ ಅಧ್ಯಕ್ಷೆ ಗೀತಾ, ಪ್ರಧಾನ ಕಾರ್ಯದರ್ಶಿ ಮಂಗಳಾ, ಮುಖಂಡರಾದ ಮಹದೇವ್, ಮೋಹನ್,ಮಹೇಶ್, ಸಿದ್ದರಾಜು, ಕುಮಾರ್, ಕಾಂತರಾಜ್,ಮಹೇಶ್ ಕುಮಾರ್, ಬಸವರಾಜು,ಕುಮಾರ್, ಹನುಮಂತ್,ಚೆಲುವಯ್ಯ ಇತರರು ಹಾಜರಿದ್ದರು.
Mysore
ರಾಜ್ಯ ಸರ್ಕಾರ ಮನರೇಗಾ ಬಗ್ಗೆ ಅಪಪ್ರಚಾರ ಮಾಡುತ್ತಿದೆ: ಸದಾನಂದ
ತಿ.ನರಸೀಪುರ: ಅಭಿವೃದ್ಧಿ ಭಾರತ ಕನಸು ಹೊತ್ತು ಪುನರ್ ನಾಮಕರಣಗೊಂಡಿರುವ ಜಿ ರಾಮ್ ಜಿ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ಹೊಂದಿಸಲಾಗದೆ ಯೋಜನೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಜಿ.ಪಂ. ಸದಸ್ಯ ಮತ್ತು ಎಂಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸದಾನಂದ ಆರೋಪಿಸಿದರು.
ಪಟ್ಟಣದ ಕಬಿನಿ ಅತಿಥಿಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ಸದುದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಿ ರಾಮ್ ಜಿ (ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್) ಎಂದು ಮರುನಾಮಕರಣ ಮಾಡಿದೆ.

ಯೋಜನೆಯ ಒಟ್ಟು ಅನುದಾನದ ಪೈಕಿ ಕೇಂದ್ರ ಸರ್ಕಾರ ಶೇ.60 ಮತ್ತು ರಾಜ್ಯ ಸರ್ಕಾರ ಶೇ.40 ಅನುದಾನವನ್ನು ನೀಡುವಂತೆ ಹಂಚಿಕೆ ಮಾಡಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಜನರ ಕೂಲಿಗಾಗಿ ವ್ಯಯಿಸಲಾಗದೆ ಯೋಜನೆಯ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡಿ ಅಪ್ರಚಾರ ನಡೆಸುತ್ತಿದೆ ಎಂದು ಕಿಡಿಕಾರಿದರು.
ಈ ಹಿಂದೆ ಇದೇ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ವರ್ಷಕ್ಕೆ 100 ದಿನಗಳು ಕೂಲಿ ನೀಡಲಾಗುತ್ತಿತ್ತು. ಆದರೆ, ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಜನರಿಗೆ ಪ್ರತಿ ವರ್ಷಕ್ಕೆ 125 ದಿನಗಳ ಕೂಲಿ ನೀಡುವುದರ ಜತೆಗೆ ಕೂಲಿ ಮೊತ್ತವನ್ನು ಕೂಡ ಹೆಚ್ಚಳ ಮಾಡಿದೆ. ಇದನ್ನು ಸಹಿಸಲಾಗದ ರಾಜ್ಯ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ ಎಂದರು.
ರಾಜ್ಯ ಕಾಂಗ್ರೇಸ್ ಸರ್ಕಾರ ತನ್ನ ರಾಜಕೀಯ ಗುಲಾಮಗಿರಿತನವನ್ನು ಮುಂದುವರೆಸುತ್ತಿದ್ದು, ಕಾಂಗ್ರೇಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಜಾರಿಗೆ ಬಂದ ಎಲ್ಲ ಯೋಜನೆಗಳಿಗೆ ನೆಹರು ಮನೆತನದ ಹೆಸರುಗಳನ್ನು ಬಿಟ್ಟರೆ ಬೇರಾವ ಹೆಸರುಗಳನ್ನು ನಾಮಕರಣ ಮಾಡಿಲ್ಲ, ರಾಜೀವ್ ಗಾಂಧಿ ವಿಶ್ವ ವಿದ್ಯಾಲಯ, ಇಂದಿರಾ ಗಾಂಧಿ ವಿಶ್ವವಿದ್ಯಾಲಯ, ರಾಜೀವ್ ಗಾಂಧಿ ವಸತಿ ಯೋಜನೆ, ಇಂದಿರಾ ಕ್ಯಾಂಟೀನ್ ಯೋಜನೆಗಳು ಇದಕ್ಕೆ ತಾಜಾ ಉದಾಹರಣೆ. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಜಾರಿಗೆ ಬಂದ ಯೋಜನೆಗೆ ಇಂದಿರಾ ಕ್ಯಾಂಟೀನ್ ಹೆಸರಿಡುವ ಬದಲು ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದ ಪಿ.ವಿ.ನರಸಿಂಹ ರಾವ್, ಲಾಲ್ ಬಹದ್ದೂರ್ ಶಾಸ್ತ್ರಿ, ಡಿ.ದೇವರಾಜ ಅರಸು ಇಲ್ಲವೇ ಅಂಬೇಡ್ಕರ್ ಅವರ ಹೆಸರನ್ನು ಇಡಬಹುದಿತ್ತು. ಆದರೆ, ಈ ಯೋಜನೆಗೆ ಇಂದಿರಾ ಕ್ಯಾಂಟೀನ್ ಎಂದು ನಾಮಕರಣ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಗುಲಾಮಗಿರಿ ಮನಸ್ಥಿತಿಯನ್ನು ಜಗತ್ತಿಗೆ ತೋರ್ಪಡಿಸಿದ್ದಾರೆ ಎಂದು ಕಿಡಿಕಾರಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಮಾಜಿ ಸದಸ್ಯವೆಂಕಟರಮಣಸ್ವಾಮಿ, ಮಂಡಲ ಅಧ್ಯಕ್ಷ ಶಿವಕುಮಾರ್ (ಸತ್ಯಪ್ಪ ) ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಯಾನಂದ ಪಟೇಲ್, ಪುರಸಭೆ ಮಾಜಿ ಸದಸ್ಯ ಎಸ್.ಕೆ.ಕಿರಣ್, ಟೌನ್ ಅಧ್ಯಕ್ಷ ನಂಜುಂಡಸ್ವಾಮಿ, ಡಾ.ಮಲ್ಲಿಕಾರ್ಜುನ ಸ್ವಾಮಿ, ಕಿರಗಸೂರು ಮಹದೇವಸ್ವಾಮಿ, ರಾಜಶೇಖರ್, ಪುಟ್ಟಸ್ವಾಮಿ ಇತರರು ಹಾಜರಿದ್ದರು.
Mysore
ಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್
ಮೈಸೂರು: ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆ.11 ರಂದು ಕಾರ್ಯಾಗಾರ:
2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಫೆಬ್ರವರಿ 11 ರಂದು ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.
ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್. ಮಂಜು ಮಾತನಾಡಿ, 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.

ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ಟಿ.ಯೋಗೇಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.
-
Manglore6 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan7 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan6 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Hassan7 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National9 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State9 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya11 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Mysore7 hours agoಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
