Connect with us

Chamarajanagar

ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಆಗ್ರಹ

Published

on

ಯಳಂದೂರು ಪಟ್ಟಣದ NPS ನೌಕರರ ಸಂಘ, ಮಾತೃ ಸಂಘ, ಪ್ರಾಥಮಿಕ ಶಾಲಾ ನೌಕರರ ಸಂಘ, ವೃಂದ ಸಂಘಗಳ ನೇತೃತ್ವದಲ್ಲಿ OPS ಜಾರಿಗಾಗಿ ಹಕ್ಕೋತ್ತಾಯ ಚಿಂತನಾ ಸಭೆಯನ್ನು ಡಾ. ಬಿ. ಆರ್. ಅಂಬೇಡ್ಕರ್ ರವರ ಭವ್ಯ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮುಖಾಂತರ ಸರ್ಕಾರಕ್ಕೆ ಹಕ್ಕೋತ್ತಾಯ ಮಾಡಲಾಯಿತು.

“ಎನ್ ಪಿ ಎಸ್ ತೊಲಗಲಿ ಓ ಪಿ ಎಸ್ ಜಾರಿಯಾಗಲಿ” ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ತಂದಿರುವ ಎನ್ ಪಿ ಎಸ್ ಯೋಜನೆಯನ್ನು ಕೈಬಿಟ್ಟು ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು.ಎನ್ ಪಿ ಎಸ್ ನಿಂದ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ಇಳಿವಯಸ್ಸಿನಲ್ಲಿ ವಿಶ್ರಮಿಸುವ ಸಂದ್ಯಾಕಾಲದಲ್ಲಿ ಯಾವುದೇ ಭದ್ರತೆ ಇಲ್ಲದ ಯೋಜನೆ ಎನ್ ಪಿ ಎಸ್ ಯೋಜನೆ. ರಾಜ್ಯ ಸರ್ಕಾರದ ತೀರ್ಮಾನ ಓ ಪಿ ಎಸ್ ಆಗಿರಲಿ ಎಂದು ಹಕ್ಕೊತ್ತಾಯಿಸಿ ಹಮ್ಮಿಕೊಂಡ ಈ  ಸಂದರ್ಭದಲ್ಲಿ ಎಲ್ಲಾ ನೌಕರರಿಗೆ ಶುಭ ಸಂದೇಶ ಸಿಗುವಂತಾಗಲಿ.ಎಂದು ತಿಳಿಸಿದರು.

ಶಿಕ್ಷಕರ ಸಂಘದ ಗೌರವಾಧ್ಯಕ್ಷರಾದ ನಂಜುಂಡಸ್ವಾಮಿ, ಕಾರ್ಯದರ್ಶಿ ನಾಗರಾಜು, ನೌಕರ ಸಂಘದ ಅಧ್ಯಕ್ಷರು ಮಂಜುನಾಥ್, ಕಾರ್ಯದರ್ಶಿ ಅಮ್ಮನಪುರ ಮಹೇಶ್, ತಾಲ್ಲೂಕು ಎನ್‌ಪಿಎಸ್ ನೌಕರ ಸಂಘದ ಅಧ್ಯಕ್ಷರಾದ ಬಸವಣ್ಣ, ಕಾರ್ಯದರ್ಶಿ ಗಿರೀಶ್, ಖಜಾಂಚಿ ಶಿವರಾಮು ಹಾಗೂ ನೌಕರರಾದ ಆಶಾರಾಣಿ, ತಾರಾ, ನೇತ್ರ, ಶ್ರೀಕಂಠ, ಶಾಂತರಾಜು, ಮಲ್ಲಿಗಯ್ಯ, ಶಿವಣ್ಣ, ಪ್ರಾಂಶುಪಾಲ ಮಹೇಶ್, ನಾಗರಾಜು, ಅಜಯ್, ಜ್ಞಾನೇಂದ್ರ, ಶಶಿಧರ್, ಮತ್ತು ವಿವಿಧ ಇಲಾಖೆಯ ನೌಕರರು ಹಾಜರಿದ್ದರು,

Continue Reading
Click to comment

Leave a Reply

Your email address will not be published. Required fields are marked *

Chamarajanagar

ಚಾಮರಾಜನಗರ: ಫೆ.13ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ

Published

on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತಾಲೂಕಿನ ಕಾಗಲವಾಡಿ ಶಾಖಾ ವ್ಯಾಪ್ತಿಯ ಚಂದಕವಾಡಿ ಉಪಕೇಂದ್ರದ ನವೋದಯ ಎನ್.ಜೆ.ವೈ ಹಾಗೂ ಹಿರಿಕೆರೆ ಎನ್.ಜೆ.ವೈ ಫೀಡರ್ ಗಳ ತುರ್ತು ಕಾಮಗಾರಿಯನ್ನು ಫೆಬ್ರವರಿ 13 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೆಬ್ಬಸೂರು, ಬಸಪ್ಪನಪಾಳ್ಯ, ಸರಗೂರು, ಹುರಳಿನಂಜನಪುರ, ಕಾಗಲವಾಡಿ, ಲಿಂಗರಾಜಪುರ, ಕರಿಯನಕಟ್ಟೆ, ಮಲ್ಲುಪುರ, ಹಂಚಿತಾಳಪುರ, ಕೊಕ್ಕನಹಳ್ಳಿ, ಅಯ್ಯನಪುರ, ಹಿತ್ತಲಗುಡ್ಡ, ಕೋಟಂಬಳ್ಳಿ, ಮಲ್ಲೇದೇವನಹಳ್ಳಿ ಹಾಗೂ ನಾಗವಳ್ಳಿ, ನಲ್ಲೂರು, ದೇವರಾಜಪುರ, ಕೋಟೆತಿಟ್ಟು, ಹೊಂಡರಬಾಳು, ಚಂದಕವಾಡಿ, ಅರಳೀಪುರ ಗ್ರಾಮಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸುವಂತೆ ನಿಗಮದ ಸಂತೇಮರಹಳ್ಳಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಚಿಣ್ಣರ ಕರ್ನಾಟಕ ದರ್ಶನ: ವಿದ್ಯಾರ್ಥಿಗಳಿಗೆ ವೈವಿಧ್ಯತೆ ತಿಳಿಯಲು ಸಹಕಾರಿ ಎಂದ ಮಾರಯ್ಯ

Published

on

ಯಳಂದೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಶೇಷ ಯೋಜನೆಯಡಿ ತಾಲ್ಲೂಕಿನ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 75 ಮಕ್ಕಳಿಗೆ ಐದು ದಿನಗಳ ಚಿಣ್ಣರ ಕರ್ನಾಟಕ ದರ್ಶನಕ್ಕೆ ಮಂಗಳವಾರ (ಫೆ.11) ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ಚಾಲನೆ ನೀಡಿದರು.

ದೇಶ ಸುತ್ತು ಕೋಶ ಓದು ಎಂಬಂತೆ ಪ್ರವಾಸದ ಸದುಪಯೋಗ ಪಡೆದು ವಿವಿಧ ರೀತಿಯ ಪ್ರದೇಶಗಳ ವೈವಿಧ್ಯತೆ ತಿಳಿಯಲು ಮಾಹಿತಿ ನೀಡಿದರು.

ಈ ವೇಳೆ ನೌಕರರ ಸಂಘದ ನಿರ್ದೇಶಕ ಎಂ. ರಾಜು ಮಕ್ಕಳಿಗೆ ಸಿಹಿ ನೀಡಿ ಶುಭ ಹಾರೈಸಿದರು. ಶಿಕ್ಷಕರ ಸಂಘದ ಚಂದ್ರಮ್ಮ, ಸಲೀನಾ, ಶಿಕ್ಷಣ ಸಂಯೋಜಕರಾದ ಕುಮಾರ್, ಸಿ ಆರ್ ಪಿ ಎಸ್ ರೇಚಣ್ಣ, ತೇಜಸ್ವಿನಿ, ಶಿಕ್ಷಕರಾದ ಮಹದೇವ್, ಗಿರಿನಾಯಕ್ ಶಶಿಧರ್, ನಾಗರಾಜ್, ಸುನೀಲ್ ಇತರರು ಹಾಜರಿದ್ದರು.

Continue Reading

Chamarajanagar

ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Published

on

ಚಾಮರಾಜನಗರ: ಮಹಿಳೆಯೊಬ್ಬರು ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣದ ಬ್ಯಾಗ್ ಅನ್ನು ವಾಪಸ್ ನೀಡಿ ನಗರದ ಆಟೋ ಚಾಲಕ ಸಿದ್ದರಾಜು ಪ್ರಾಮಾಣಿಕತೆ ಮೆರೆದಿದ್ದಾರೆ.

ನಗರದ ಶ್ರೀ ಭುವನೇಶ್ವರಿ ವೃತ್ತದ ಬಳಿ ಹನುಮನಪುರ ನಿವಾಸಿಯಾದ ರಶ್ಮಿ ಅವರು ಬಸ್ ಹತ್ತುವ ಅವಸರದಲ್ಲಿ ಚಿನ್ನಾಭರಣವಿದ್ದ ಬ್ಯಾಗನ್ನು ಆಟೋದಲ್ಲೇ ಮರೆತು ಹೋಗಿದ್ದು, ಬಳಿಕ ಬ್ಯಾಗ್ ಅನ್ನು ಕಳೆದುಕೊಂಡ ವಿಷಯವನ್ನು ಪಟ್ಟಣ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.

ಅಷ್ಟರಲ್ಲೇ ನಗರದ ಆಟೋ ಚಾಲಕ ಸಿದ್ದರಾಜು ಎಂಬುವವರು ಆಟೋದಲ್ಲಿದ್ದ ಚಿನ್ನಾಭರಣದ ಬ್ಯಾಗ್ ಅನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ತದನಂತರ ಪೊಲೀಸರು ಬ್ಯಾಗ್ ಅನ್ನು ರಶ್ಮಿಗೆ ಒಪ್ಪಿಸಿದರು.

Continue Reading

Trending

error: Content is protected !!