Connect with us

Kodagu

ಜುಲೈ 16 ರಂದು ಹಳ್ಳಿಗಟ್ಟು ಮಾರಿಗುಡಿ ನಮ್ಮೆ

Published

on

ಪೊನ್ನಂಪೇಟೆ : ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವ ಜುಲೈ -16ರಂದು ಮಂಗಳವಾರ ನಡೆಯಲಿದೆ ಎಂದು ಶ್ರೀ ಗುಂಡಿಯತ್ ಅಯ್ಯಪ್ಪ, ಭದ್ರಕಾಳಿ ಹಾಗೂ ಮಾರಮ್ಮ ದೇವರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿವರ್ಷದಂತೆ ಈ ಬಾರಿಯೂ ಕಕ್ಕಡ ಮಾಸಕ್ಕೆ ಒಂದು ದಿನ ಮುಂಚೆ ನಡೆಯುವ ಮಾರಮ್ಮ ದೇವರ ವಾರ್ಷಿಕ ಹಬ್ಬ “ಮಾರಿಗುಡಿ” ಜುಲೈ -16ರಂದು ಮಂಗಳವಾರ ಬೆಳಿಗ್ಗೆ 9ಗಂಟೆಯಿಂದ ಸಂಜೆ 3-00 ಗಂಟೆಯವರೆಗೆ ನಡೆಯಲಿದ್ದು ಒಂದು ವಾರಗಳ ನಂತರ ಕೊಕ್ಕಡ ಮಾಸದಲ್ಲಿ ನಡೆಯುವ ಮತ್ತೊಂದು ಮಾರಿಗುಡಿ ಹಬ್ಬ ಜುಲೈ-22ನೇ ಸೋಮವಾರ ನಡೆಯಲಿದೆ. ಹರಕೆ ಕಾಣಿಕೆ ಸಲ್ಲಿಸುವವರು ಈ ಎರಡು ದಿನಗಳಲ್ಲಿ ಯಾವ ದಿವಸ ಬೇಕಾದರೂ ಸಲ್ಲಿಸಬಹುದಾಗಿದೆ. ಊರಿನವರು ಮಾತ್ರವಲ್ಲದೆ ಯಾರು ಬೇಕಾದರೂ ಹಬ್ಬದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಜೋಡುಬೀಟಿಯಿಂದ ಮೂಕಳೇರ ಹಾಗೂ ಮಚ್ಚಿಯಂಡ ಬಲ್ಯಮನೆಗೆ ಹೋಗುವ ರಸ್ತೆಯಲ್ಲಿರುವ ಈ ದೇವಸ್ಥಾನಕ್ಕೆ ಪುರಾತನ ಕಾಲದ ಇತಿಹಾಸವಿದ್ದು ವರ್ಷಕ್ಕೆ ಎರಡು ಬಾರಿ ಮಾತ್ರ ಇಲ್ಲಿ ಪೂಜೆ ಪುನಸ್ಕಾರ ಹಾಗೂ ಹಬ್ಬ ನಡೆಯುತ್ತದೆ.


ಮಚ್ಚಿಯಂಡ ಕುಟುಂಬದ ಮುಂದಾಳತ್ವದಲ್ಲಿ ಇಲ್ಲಿ ಹಬ್ಬ ನಡೆಯಲಿದ್ದು, ಈ ಕುಟುಂಬದವರೇ ಇಲ್ಲಿ ಪೂಜಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಇಲ್ಲಿಗೆ ಬ್ರಾಹ್ಮಣರ ಪೂಜೆ ನಿಷೇಧವಾಗಿದ್ದು ಕೊಡವ ಜನಾಂಗದವರೇ ಇಲ್ಲಿ ಪೂಜಾರಿಗಳಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಚಮ್ಮಟೀರ ಪ್ರವೀಣ್ ಉತ್ತಪ್ಪ, ಅಧ್ಯಕ್ಷರು-9880967573 ಅಥವಾ ಮೂಕಳೇರ ರಮೇಶ್, ಗೌರವ ಕಾರ್ಯದರ್ಶಿ-94838 15430 ಸಂಪರ್ಕಿಸಬಹುದಾಗಿದೆ.

Continue Reading

Kodagu

ಹುದಿಕೇರಿಯಲ್ಲಿ 66/11 ಕೆವಿ ವಿದ್ಯುತ್ ಉಪ ಕೇಂದ್ರದ ಭೂಮಿ ಪೂಜೆ

Published

on

ಗೋಣಿಕೊಪ್ಪಲು : ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ-ಕೇಂದ್ರ ಸ್ಥಾಪಿಸುವ ನಿಟ್ಟಿನಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

ಈ ಉಪ ಕೇಂದ್ರದಿಂದ 11 ಕೆವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗ ಹೊರಹೋಗಲಿದೆ. ಸುಮಾರು 19.34 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಒಂದು ವರ್ಷದ ಕಾಲಾವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಚೀಫ್ ಎಲೆಕ್ಟ್ರಿಕ್ ಆಫೀಸರ್ ರೋಷನ್ ಅಪ್ಪಚ್ಚು ತಿಳಿಸಿದರು. ಶಾಸಕರ ಪ್ರಯತ್ನದಿಂದಾಗಿ ಕ್ಷೇತ್ರಾದ್ಯಂತ ಹಲವು ವಿದ್ಯುತ್ ಉಪ-ಕೇಂದ್ರಗಳು ಸ್ಥಾಪನೆಗೊಳ್ಳುತ್ತಿದ್ದು, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಚೆಸ್ಕಾಂ ಅಧಿಕಾರಿಗಳು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸೂರಜ್, ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಅಣಲಮಾಡ ಲಾಲಾ ಅಪ್ಪಣ್ಣ, ಹುದಿಕೇರಿ ಪಂಚಾಯಿತಿ ಅಧ್ಯಕ್ಷ ಕುಪ್ಪಣಮಾಡ ನವ್ಯ ಕಾವೇರಮ್ಮ, ಹಿರಿಯ ಕಾಂಗ್ರೆಸ್ ಮುಖಂಡರಾದ ಚೇಕ್ಕೇರ ವಾಸು ಕುಟ್ಟಪ್ಪ, ಚೆಕ್ಕೇರ ಸುಧೀರ್, ಮೋಟಯ್ಯ, ಡಿಸಿಸಿ ಸದಸ್ಯರಾದ ಮುಕಟ್ಟೀರ ಸಂದೀಪ್, ಅಜ್ಜಿಕುಟ್ಟಿರ ಗಿರೀಶ್, ನೂರೇರ ಮನೋಹರ್, ಅಣಲಮಾಡ ಹರೀಶ್, ಅಲಿರಾ ರಶೀದ್, ಕುಪ್ಪಣ ಮಾಡ ಕಾವೇರಮ್ಮ,ಕೊಡoಗಡ ವಾಸು, ಕೊಡಂಗಡ ದಮಯಂತಿ ಹಾಗೂ ಪ್ರಮುಖರು ಉಪಸಿತರಿದ್ದರು.

Continue Reading

Kodagu

ಬೆಂಗಳೂರು ಕೊಡವ ಸಮಾಜಕ್ಕೆ ಏಳು ಏಕರೆ ಜಾಗ: ಎಪ್ಪತ್ತು ವರ್ಷಗಳ ಬಳಿಕ ಮರುಕಳಿಸಿದ ಇತಿಹಾಸ

Published

on

ಬರಹ : ತೆನ್ನೀರ ಮೈನಾ, ಕಾಂಗ್ರೆಸ್ ಮುಖಂಡರು

ಬೆಂಗಳೂರು: ಕೊಡವ ಸಮಾಜ, ಕರ್ನಾಟಕದ ರಾಜ್ಯಧಾನಿ ಬೆಂಗಳೂರಿನಲ್ಲಿ ಸ್ಥಾಪಿತವಾಗಿರುವ ಸಂಸ್ಥೆ. ವಿಶ್ವದಲ್ಲಿಯೇ ಅಪರೂಪದ ಸಂಸ್ಕೃತಿ, ಪರಂಪರೆಯನ್ನು ಹೊಂದಿರುವ ಕೊಡವ ಜನಾಂಗದ ಆಚರಣೆಗಳನ್ನು ನಗರೀಕರಣದ ನಡುವೆಯೂ ನಾಶವಾಗದ ಹಾಗೆ ಕಾಪಾಡಿಕೊಂಡು ಬರುತ್ತಿರುವ ಸಂಸ್ಥೆಯಾಗಿದೆ.

1911 ರಲ್ಲಿ ಕೂರ್ಗ್ ಅಸೋಸಿಯೇಷನ್ ಎಂಬ ಹೆಸರಿನಲ್ಲಿ ಕೇವಲ 30 ಸದಸ್ಯರಿಂದ ಸ್ಥಾಪಿತವಾಗಿ ನಂತರ ಬೆಂಗಳೂರು ಕೊಡವ ಸಮಾಜ ಎಂದು ನಾಮಕರಣಗೊಂಡು ಕೊಡವ ಸಾಹಿತ್ಯ, ಸಂಸ್ಕೃತಿ,ಭಾಷೆ,ಉಡುಗೆ ತೊಡುಗೆ ,ಪದ್ದತಿ ಪರಂಪರೆಯ ಬೆಳವಣಿಗೆಗೆ ತನ್ನದೇ ಆದ ಅಪರಿಮಿತ ಕೊಡುಗೆ ನೀಡುವ ಮೂಲಕ ಬೃಹತ್ತಾಗಿ ಬೆಳೆದಿದೆ. ಸ್ಥಾಪಕ ಅಧ್ಯಕ್ಷ ಕುಪ್ಪಂಡ ಮುದ್ದಪ್ಪರವರಿಂದ ಪ್ರಸ್ತುತ ಅಧ್ಯಕ್ಷ ಕರೋಟಿರ ಪೆಮ್ಮಯ್ಯನವರ ವರೆಗೆ ಸೇವೆ ಸಲ್ಲಿಸಿದ ಎಲ್ಲಾ ಅಧ್ಯಕ್ಷರು ಮತ್ತು ಅವರ ಪಧಾಧಿಕಾರಿಗಳ ಪರಿಶ್ರಮದಿಂದ ಉಚ್ಛ್ರಾಯ ಸ್ಥಿತಿಯಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.20 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು ಬೆಂಗಳೂರಿನಲ್ಲಿರುವ ಸುಮಾರು 40 ಸಾವಿರದಷ್ಟಿರುವ ಕೊಡವರಿಗೆ ಬೆಂಗಳೂರು ಕೊಡವ ಸಮಾಜ ಗುರುಮನೆಯಂತಿದೆ.

ಆರಂಭದಲ್ಲಿ ಬೆಂಗಳೂರು ಕೊಡವ ಸಮಾಜಕ್ಕೆ ಸ್ವಂತ ಕಟ್ಟಡವಾಗಲಿ ನಿವೇಶನವಾಗಲಿ ಇರಲಿಲ್ಲ. ಬಸವನಗುಡಿ ಬಳಿಯ ಖಾಸಗಿ ಜಾಗದಲ್ಲಿ ತಮ್ಮ ಕಾರ್ಯಕ್ರಮಗಳನ್ನು( ಪುತ್ತರಿ ನಮ್ಮೆ,ಕೈಲ್ ಪೊಳ್ದ್ ನಮ್ಮೆ,ಊರೊರ್ಮೆ ಮುಂತಾದವು) ನಡೆಸುತ್ತಿದ್ದರು. ಭಾರತದ ಮಹಾನ್ ಸೇನಾ ದಂಡನಾಯಕರಾಗಿ ಸೇವೆ ಸಲ್ಲಿಸಿದ್ದ,ಶಿಸ್ತು ಮತ್ತು ಪ್ರಾಮಾಣಿಕತೆಯನ್ನೇ ಉಸಿರಾಗಿಸಿಕೊಂಡಿದ್ದ ಜನರಲ್ ಕೊಡಂದೇರ.ಎಂ.ಕಾರ್ಯಪ್ಪ ( ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ) ನವರು ಭಾರತೀಯ ಸೈನ್ಯಕ್ಕೆ ಹಾಗೂ ದೇಶಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸ್ವತಂತ್ರ ಭಾರತದ ಅಂದಿನ ವಿಶಾಲ ಮೈಸೂರು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ರವರು ಬೆಂಗಳೂರಿನ ಹೃದಯ ಭಾಗದಲ್ಲಿರುವ ವಸಂತ ನಗರದಲ್ಲಿ ಒಂದು ಏಕರೆ ಜಾಗವನ್ನು ಉಡುಗೊರೆಯಾಗಿ ನೀಡಿದ್ದರು.ಆ ಜಾಗವನ್ನು 1956 ರಲ್ಲಿ ಬೆಂಗಳೂರು ಕೊಡವ ಸಮಾಜಕ್ಕೆ ದಾನವಾಗಿ ನೀಡಿದರು.ನಂತರದಲ್ಲಿ ಬೆಂಗಳೂರು ಕೊಡವ ಸಮಾಜ ಆ ಜಾಗದಲ್ಲಿ ಬೃಹತ್ ಬಹುಮಹಡಿ ಕಟ್ಟಡಗಳನ್ನು ಹಂತ ಹಂತವಾಗಿ ಕಟ್ಟಿ ದೊಡ್ಡ ಸಂಸ್ಥೆಯಾಗಿ ಬೆಳೆಸಿತು.ಸಂಸ್ಕೃತಿಯ ಬೆಳವಣಿಗೆಗಳ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮತ್ತಷ್ಟು ಮೇಲ್ಪಂಕ್ತಿಯನ್ನು ಸಂಸ್ಥೆ ತಲುಪಿತು.

ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರು ಮಾಡಿದ ಕಾರ್ಯ ಇತಿಹಾಸ ನಿರ್ಮಿಸಿದರೆ ಆ ರೀತಿಯ ಇತಿಹಾಸ ಮತ್ತೊಮ್ಮೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ.ಎಸ್.ಪೊನ್ನಣ್ಣ ನವರಿಂದ ಮತ್ತೊಮ್ಮೆ ಮರುಕಳಿಸಿದೆ.ಅದಕ್ಕೆ ಕಾರಣ ಬೆಂಗಳೂರು ಕೊಡವ ಸಮಾಜದ ಹೆಸರಿಗೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಹೊಸಹಳ್ಳಿ ಯ ಸರ್ವೆ ನಂ 21 ರಲ್ಲಿ ವರ್ಗಾವಣೆಗೊಂಡ ಏಳು ಏಕರೆ ಅತ್ಯಮೂಲ್ಯ ಜಾಗ.

2011 ರಲ್ಲಿ ಬೆಂಗಳೂರು ಕೊಡವ ಸಮಾಜದ ಶತಮಾನೋತ್ಸವ ಕಾರ್ಯಕ್ರಮದ ಸಂಧರ್ಭದಲ್ಲಿ ಅಂದಿನ ಕರ್ನಾಟಕದ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು ಅಂದಿನ ಕರ್ನಾಟಕ ರಾಜ್ಯ ವಿಧಾನ ಸಭಾ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕರಾದ ಅಪ್ಪಚ್ಚು ರಂಜನ್ ರವರಿಗೆ ಸಮಾಜದ ಪ್ರಮುಖರು ಏಳು ಏಕರೆ ಜಾಗದ ಪ್ರಸ್ತಾವನೆಯನ್ನು ಸಲ್ಲಿಸುತ್ತಾರೆ. ಸದಾನಂದ ಗೌಡರು ಒಪ್ಪಿಗೆ ಸೂಚಿಸುತ್ತಾರೆ. ನಂತರ ಆಡಳಿತಾತ್ಮಕ ಪ್ರಕ್ರಿಯೆ ಗಳು ನಡೆದು ದಿನಾಂಕ 8-3-2023 ರಂದು ಸರ್ಕಾರ ಸದರಿ ಜಾಗವನ್ನು ಕೃಷಿಯೇತರ ಜಮೀನಿನ ಪ್ರಸ್ತುತ ಮಾರುಕಟ್ಟೆ ದರ ಪಾವತಿಸಲು ಒಪ್ಪಿಗೆ ನೀಡುತ್ತದೆ. ಕೊಡವ ಸಮಾಜದ ಪಾಲಿಗೆ ಇದೊಂದು ನಿಲುಕದ ದ್ರಾಕ್ಷಿ. ಮಾರುಕಟ್ಟೆ ದರ ವೆಂದರೆ 40 ಕೋಟಿಯಿಂದ 50 ಕೋಟಿ ವೆಚ್ಚವಾಗುತ್ತದೆ.ಇದು ಆ ಸಂಸ್ಥೆಗೆ ಅಸಾಧ್ಯವಾದ ಕಾರ್ಯ. ಆದರೂ ಬೆಂಗಳೂರು ಕೊಡವ ಸಮಾಜ ಸುಮ್ಮನಾಗುವುದಿಲ್ಲ. ಭಗೀರಥ ಪ್ರಯತ್ನ ಮುಂದುವರಿಸುತ್ತದೆ.

ಬೆಂಗಳೂರು ಕೊಡವ ಸಮಾಜದ ಪ್ರಸ್ತುತ ಅಧ್ಯಕ್ಷರಾದ ಕರೋಟಿರ ಪೆಮ್ಮಯ್ಯ ನವರ ನೇತೃತ್ವದಲ್ಲಿ ಮತ್ತೊಂದು ಸಾಹಸಕ್ಕೆ ಮುನ್ನುಡಿ ಹಾಕುತ್ತಾರೆ.ಸರ್ಕಾರ ಬದಲಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದಲ್ಲಿ ಅಪಾರ ಅನುಭವ ಹೊಂದಿರುವ ಎ.ಎಸ್.ಪೊನ್ನಣ್ಣ ನವರು ಆಯ್ಕೆಯಾಗುತ್ತಾರೆ.

ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರಾಗಿ ಸಂಪುಟ ದರ್ಜೆ ಸ್ಥಾನದೊಂದಿಗೆ ನೇಮಕಗೊಳ್ಳುತ್ತಾರೆ
ಸ್ವತಃ ವಕೀಲರಾದ ಕರೋಟಿರ ಪೆಮ್ಮಯ್ಯ ಮತ್ತು ಅವರ ತಂಡ ಪೊನ್ನಣ್ಣ ನವರಿಗೆ ಮನವಿ ಸಲ್ಲಿಸುತ್ತಾರೆ. ಹಲವು ಸುತ್ತಿನ ಮಾತುಕತೆಗಳು ಅಧಿಕಾರಿಗಳ ಮಟ್ಟದಲ್ಲಿ ನಡೆಯುತ್ತದೆ.ದಿನಾಂಕ 4-3-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಎ.ಎಸ್.ಪೊನ್ನಣ್ಣ ನವರಿಂದ ನಡಾವಳಿ ಪತ್ರ ಸಲ್ಲಿಕೆಯಾಗುತ್ತದೆ. ಮಾನ್ಯ ಮುಖ್ಯಮಂತ್ರಿ ಗಳು ಸಂಪುಟ ಸಭೆಯಲ್ಲಿ ಪ್ರಸ್ತಾವನೆಯನ್ನು ಚರ್ಚೆಗೆ ತರುತ್ತಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಪೊನ್ನಣ್ಣ ನವರ ಕೋರಿಕೆಯನ್ನು ಒಪ್ಪುತ್ತಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರ ಸಹಮತದೊಂದಿಗೆ ಸಚಿವ ಸಂಪುಟವೇ ಪೊನ್ನಣ್ಣನವರ ನಡಾವಳಿಗೆ ಮನ್ನಣೆ ನೀಡುತ್ತದೆ.ವಿಶೇಷ ವಿನಾಯತಿಯಡಿ ಜಮೀನು ನೀಡಲು ( ಮಾರುಕಟ್ಟೆ ದರಕ್ಕಿಂತ ಶೇ 90 ರಷ್ಟು ರಿಯಾಯಿತಿ) ಒಪ್ಪಿಗೆ ನೀಡುತ್ತದೆ.ಭೂ ಮಂಜೂರಾತಿ ನಿಯಮಗಳು 1969 ರ ನಿಯಮ 22-ಎ(1)(i)(2) ರನ್ವಯ ಆದೇಶ ಸಂಖ್ಯೆ ನಂ.ಎಲ್.ಎನ್.ಡಿ (ಎನ್.ಎ)/203/2009-10 ದಿನಾಂಕ 2-6-2025 ರಂದು ಆದೇಶ ಹೊರಡಿಸುತ್ತದೆ. ಕೇವಲ ಒಂದು ಕೋಟಿ 7 ಲಕ್ಷ ರೂ.ಗಳನ್ನು ಪಾವತಿಸಿ ಕೊಡವ ಸಮಾಜ ಜಾಗವನ್ನು ಪಡೆಯುತ್ತದೆ.ದಶಕಗಳ ಕೊಡವ ಸಮಾಜದ ಕನಸು ನನಸಾಗುತ್ತದೆ.

ಈ ಭಾನುವಾರ ಅಂದರೆ ದಿನಾಂಕ 15-6-2025 ರಂದು ಬೆಂಗಳೂರು ಕೊಡವ ಸಮಾಜದವತಿಯಿಂದ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾನಯ್ಯನವರು, ಸನ್ಮಾನ್ಯ ಡಿ.ಸಿ.ಎಂ.ಡಿ.ಕೆ ಶಿವಕುಮಾರ್, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಮುಖ ರುವಾರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಸೇರಿದಂತೆ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆಗಳು ಮತ್ತು ಕೃತಜ್ಞತೆ ಸಮಾರಂಭ ಏರ್ಪಡಿಸಿದ್ದು ಬೆಂಗಳೂರು ಕೊಡವ ಸಮಾಜದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಿದೆ.

Continue Reading

Kodagu

ಹುದಿಕೇರಿಯಲ್ಲಿ ಸುಸಜ್ಜಿತವಾದ ಹಾಕಿ ಮೈದಾನ ನಿರ್ಮಾಣ ಸಾಧ್ಯತೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್ ಪೊನ್ನಣ್ಣ

Published

on

ಗೋಣಿಕೊಪ್ಪಲು : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿಯ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ಮೈದಾನದ ವೀಕ್ಷಣೆ ಹಾಗೂ ಪರಿಶೀಲನೆ ಕೈಗೊಂಡರು.
ಸದರಿ ಮೈದಾನದ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಭೇಟಿ ನೀಡಿ ಪರಿಶೀಲಿಸಿದ ಶಾಸಕರು ಶಾಲೆಯ ಅಧ್ಯಾಪಕರು, ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆದರು. ಬಳಿಕ ತಮ್ಮ ಸಲಹೆ ಸೂಚನೆಗಳನ್ನು ನೀಡಿ, ಮಕ್ಕಳ ಕ್ರೀಡಾ ಭವಿಷ್ಯದ

ದೃಷ್ಟಿಯಿಂದ ಮೈದಾನದ ಉನ್ನತೀಕರಣ ಹಾಗೂ ಸೌವಲತ್ತುಗಳ ಒದಗಿಸುವುದು ತನ್ನ ಪ್ರಥಮ ಆದ್ಯತೆಯಾಗಿದ್ದು, ಮಕ್ಕಳಿಗೆ ಅನುಕೂಲ ಆಗುವಂತೆ ಎಲ್ಲಾ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಸದ್ರಿ ಶಾಲಾ ಮೈದಾನವನ್ನು ಉನ್ನತೀಕರಣಗೊಳಿಸಿ, ಹಾಕಿ ಆಟಕ್ಕೆ ಮೈದಾನ ನಿರ್ಮಿಸುವ ಬಗ್ಗೆ ಚರ್ಚಿಸಿದರು. 2027 ರಲ್ಲಿ ಅಜ್ಜಿಕುಟ್ಟಿರ ಕುಟುಂಬದವರು ಹಮ್ಮಿಕೊಂಡಿರುವ ಹಾಕಿ ಉತ್ಸವವನ್ನು ಇದೇ ಮೈದಾನದಲ್ಲಿ ನಡೆಸಲು ಚಿಂತಿಸುತ್ತಿರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು. ವೈಜ್ಞಾನಿಕವಾಗಿ ಎಲ್ಲವನ್ನು ಪರಿಶೀಲಿಸಿ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಮಾಧ್ಯಮದವರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಚೀಫ್ ಎಲೆಟ್ರಿಕಲ್ ಆಫೀಸರ್ ತಿತೀರ ರೋಷನ್ ಅಪ್ಪಚ್ಚು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸೂರಜ್,ಅಜ್ಜಿಕುಟ್ಟಿರ ಗಿರೀಶ್, ಹಿರಿಯ ಮುಖಂಡರಾದ ಚೇಕ್ಕೇರ ವಾಸು ಕುಟ್ಟಪ್ಪ, ಚೆಕ್ಕೇರ ಸುಧೀರ್, ಪಕ್ಷದ ಪ್ರಮುಖರು, ಸ್ಥಳೀಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading

Trending

error: Content is protected !!