Connect with us

Chamarajanagar

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ಭಾಗ್ಯರಾಜ್

Published

on

ಚಾಮರಾಜನಗರ: ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ. ರೈತರ ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್ ಇದಾಗಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಬೇಸರ ವ್ಯಕ್ತಪಡಿಸಿದ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತ ಬೆಳೆದ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಕಾಯ್ದೆ, ಎಮ್ ಎಸ್ ಸ್ವಾಮಿನಾಥನ್ ವರದಿ ಜಾರಿಯ ಬಗ್ಗೆ ಕ್ರಮ ಕೈಗೊಂಡಿಲ್ಲ.
ರೈತರ ಸಾಲ ಮನ್ನದ ಪ್ರಸ್ತಾಪವಿಲ್ಲ. ಕೃಷಿ ಸಾಲದ ನೀತಿ ರೈತನ ಹೊಲದಲ್ಲಿನ ಕಬ್ಬಿನ ದರದ ಬಗೆ ಪ್ರಸ್ತಾಪವಿಲ್ಲ ಎಂದು ಹೇಳಿದರು.

ರೈತರ ಬೆಳೆ ವಿಮೆ ನೀತಿಯು ವೈಯಕ್ತಿಕ ವಿಮೆ ರೀತಿ ಜಾರಿಗೆ ತರಬೇಕಾಗಿತ್ತು. ರೈತರ ಕೃಷಿ ಉತ್ಪನ್ನಗಳನ್ನು ವರ್ಷಪೂರ್ತಿ ಖರೀದಿ ಕೇಂದ್ರಗಳ ಆರಂಭಕ್ಕೆ ಕ್ರಮ ಕೈಗೊಂಡಿಲ್ಲ. ಎಲ್ಲಾ ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಬೆಲೆಕುಸಿತವಾದಾಗ ಖರೀದಿ ಮಾಡುವ ಯೋಜನೆಯನ್ನು ಪ್ರಕಟಣೆ ಮಾಡಿಲ್ಲ. ಕೇವಲ ತೆಂಗು, ಗೋಡಂಬಿ, ಶ್ರೀಗಂಧ ಬೆಳೆಗೆ ಮಾತ್ರ ವಿಶೇಷ ಗಮನಹರಿಸಿ ರೈತರ ಮೂಗಿಗೆ ತುಪ್ಪ ಸವರೋ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಕೇಂದ್ರ ಸರ್ಕಾರ ಬಜೆಟ್ ವಿರುದ್ಧ ನಿರಾಸೆ ವ್ಯಕ್ತಪಡಿಸಿದರು.

Continue Reading

Chamarajanagar

ವಿಕಸಿತ ಭಾರತದ ಕನಸಿಗೆ ಪೂರಕವಾದ ಕೇಂದ್ರ ಬಜೆಟ್ : ಮೂಡ್ನಾಕೂಡು ಪ್ರಕಾಶ್

Published

on

ಚಾಮರಾಜನಗರ: ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ಪ್ರಗತಿಗೆ ವೇಗ ನೀಡುವ ಜೊತೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ದೃಢ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಹೇಳಿದರು.

ಈ ಬಗ್ಗೆ  ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ, ಕೈಗಾರಿಕೆ, ಆರೋಗ್ಯ ಹಾಗೂ ವಿವಿಧ ಕ್ಷೇತ್ರಗಳಿಗೆ ಸಮರ್ಪಕ ಒತ್ತು ನೀಡಲಾಗಿದ್ದು, ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ. ವಿಶೇಷವಾಗಿ ಏಳು ಅಪರೂಪದ ರೋಗಗಳ ಔಷಧಿಗಳ ದರ ಕಡಿತಗೊಳಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ವರದಾನವಾಗಿದೆ ಎಂದು ಹೇಳಿದರು.

ರೈತರ ಆದಾಯ ವೃದ್ಧಿ, ಉದ್ಯೋಗ ಸೃಷ್ಟಿ, ಯುವಜನತೆ ಮತ್ತು ಮಹಿಳಾ ಸಬಲೀಕರಣ, ಮೂಲಸೌಕರ್ಯ ಅಭಿವೃದ್ಧಿಗೆ ನೀಡಿರುವ ಆದ್ಯತೆಗಳು ‘ವಿಕಸಿತ ಭಾರತ’ ಎಂಬ ಗುರಿ ಸಾಧನೆಗೆ ನೆರವಾಗಲಿವೆ. ಎಲ್ಲ ವರ್ಗದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಈ ಬಜೆಟ್ ದೇಶದ ಭವಿಷ್ಯಕ್ಕೆ ದಿಕ್ಕು ತೋರಿಸುವ ಅತ್ಯುತ್ತಮ ಬಜೆಟ್ ಆಗಿದೆ ಎಂದು ಅಭಿಪ್ರಾಯಪಟ್ಟರು.

Continue Reading

Chamarajanagar

ಮದುವೆಗೆ ಆಗಮಿಸುತ್ತಿದ್ದ ವರನ ಮೇಲೆ ಚಾಕು ದಾಳಿ: ಮೂವರು ಆರೋಪಿಗಳ ಬಂಧನ

Published

on

ಕೊಳ್ಳೇಗಾಲ: ಪಟ್ಟಣದಲ್ಲಿ ಮದುವೆಗೆ ಆಗಮಿಸುತ್ತಿದ್ದ ವರನ ಮೇಲೆ ಚಾಕು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜ.29 ರಂದು ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವೇಳೆ, ವರ ರವೀಶ್ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಚಾಕುವಿನಿಂದ ದಾಳಿ ನಡೆಸಿ ಎಡ ತೋಳಿಗೆ ಗಾಯಗೊಳಿಸಿದ್ದರು.

ಈ ಕುರಿತು ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಾಯಿತು. ತನಿಖೆಯ ವೇಳೆ ವರನನ್ನು ಕೊಲೆ ಮಾಡಲು ಯತ್ನಿಸಿದ ಪ್ರಮುಖ ಆರೋಪಿಗಳಾದ ದರ್ಶನ್ ಮತ್ತು ಮಿಥುನ್ ಅವರನ್ನು ಇಂದು ಬಂಧಿಸಲಾಗಿದೆ. ಜೊತೆಗೆ, ಕೃತ್ಯದಲ್ಲಿ ವರನೊಂದಿಗೆ ಮದುವೆ ನಿಶ್ಚಯವಾಗಿದ್ದ ವಧುವೂ ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಆಕೆಯನ್ನೂ ದಸ್ತಗಿರಿ ಮಾಡಲಾಗಿದೆ.

ಆರೋಪಿಗಳು ಬಳಸಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ್ ಶ್ಲಾಘಿಸಿದ್ದಾರೆ.

Continue Reading

Chamarajanagar

ಕೇಂದ್ರ ಬಜೆಟ್ ನಲ್ಲಿ ಜಿಲ್ಲೆಯ ರೈತರು, ಜನಸಾಮನ್ಯರಿಗೆ ದೊಡ್ಡ ವಂಚನೆ: ಸಂಸದ ಸುನೀಲ್ ಬೋಸ್ ಟೀಕೆ

Published

on

ಚಾಮರಾಜನಗರ: ಕೇಂದ್ರ ಸರ್ಕಾರದ ಪ್ರಸಕ್ತ ಬಜೆಟ್ ಜಿಲ್ಲೆಯ ರೈತರಿಗೆ ಹಾಗೂ ಜನಸಾಮಾನ್ಯರಿಗೆ ದೊಡ್ಡ ವಂಚನೆ ಎಸಗಿದೆ ಎಂದು ಸಂಸದ ಸುನೀಲ್ ಬೋಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಜೆಟ್‌ನ ವೈಫಲ್ಯಗಳನ್ನು ಹೀಗೆ ಪಟ್ಟಿ ಮಾಡಿದ್ದಾರೆ.

ಕೃಷಿ ನಿರ್ಲಕ್ಷ್ಯ: ಜಿಲ್ಲೆಯ ಅರಿಶಿಣ ಬೆಳೆಗೆ ಸಂಸ್ಕರಣಾ ಘಟಕ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಲ್ಲಿ ಕೇಂದ್ರ ವಿಫಲವಾಗಿದೆ. ಅರಿಶಿನ ಮಂಡಳಿ ವ್ಯಾಪ್ತಿಗೆ ಜಿಲ್ಲೆಯನ್ನು ಸೇರಿಸಬೇಕೆಂಬ ಬೇಡಿಕೆಯನ್ನು ಕಡೆಗಣಿಸಲಾಗಿದೆ.

ರೈಲ್ವೆ ಹಾಗೂ ಹೆದ್ದಾರಿ: ಚಾಮರಾಜನಗರ-ಹೆಜ್ಜಾಲ ರೈಲ್ವೆ ಯೋಜನೆಗೆ ಶೇ.100% ಅನುದಾನ ಮಂಜೂರು ಮಾಡದಿರುವುದು ಹಾಗೂ ಚಾಮರಾಜನಗರ-ಗುಂಡ್ಲುಪೇಟೆ, ಮೈಸೂರು-ಹೆಚ್.ಡಿ. ಕೋಟೆ ಹೆದ್ದಾರಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ತಿರಸ್ಕರಿಸಿರುವುದು ಖಂಡನೀಯ.

ಸಾಮಾಜಿಕ ಅನ್ಯಾಯ: ಬಜೆಟ್‌ನಲ್ಲಿ ಸಾಮಾಜಿಕ ನ್ಯಾಯ ಕ್ಷೇತ್ರಕ್ಕೆ ಶೇ 1% ಕ್ಕಿಂತಲೂ ಕಡಿಮೆ ಅನುದಾನ ನೀಡಿರುವುದು ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿದೆ. ಇದು ಶೋಷಿತರ ಬಗ್ಗೆ ಕೇಂದ್ರಕ್ಕಿರುವ ತಾತ್ಸಾರಕ್ಕೆ ಸಾಕ್ಷಿ.

ಜನವಿರೋಧಿ ಧೋರಣೆ: ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಅನುದಾನ ನೀಡದೆ ಈ ಬಜೆಟ್ ‘ಉಳ್ಳವರ ಪರ’ವಾಗಿ ನಿಂತಿದೆ. ರಾಜ್ಯದ ಕೇಂದ್ರ ಸಚಿವರು ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.
ಒಟ್ಟಾರೆಯಾಗಿ ಈ ಬಜೆಟ್ ಬಡವರ ವಿರೋಧಿಯಾಗಿದ್ದು, ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ಸಂಸದ ಸುನೀಲ್ ಬೋಸ್ ಟೀಕಿಸಿದ್ದಾರೆ.

Continue Reading

Trending

error: Content is protected !!