Hassan
ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧದ ಆರೋಪ; ವರದಿ ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚನೆ

ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ಅಕ್ರಮವಾಗಿ ಮಾರ್ಪಡಿಸಿದ ಕುರಿತು ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಕರ್ನಾಟಕ ಅರಣ್ಯ ಇಲಾಖೆಗೆ ಸೂಚಿಸಿದೆ.
ಈ ಸಂಬಂಧ ನವೆಂಬರ್ 6ರಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ (ಪಿಸಿಸಿಎಫ್) ಅವರಿಗೆ ಪತ್ರ ಬರೆದಿರುವ ಸಚಿವಾಲಯದ ಉಪ ಮಹಾನಿರೀಕ್ಷಕ ಎಂ ಕೆ ಶಂಭು, “ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಹಾಗೂ ಭೂ ಅಕ್ರಮದ ಬಗ್ಗೆ ಹಾಸನದ ಡಿಸಿಎಫ್ ವರದಿ ನೀಡಿದ್ದಾರೆ. ಈ ಸಂಬಂಧ ಒಂದು ತಿಂಗಳ ಒಳಗೆ ವಾಸ್ತವಾಂಶದ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
“ಈ ಅಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆಗೆ 2022ರ ಮಾರ್ಚ್ 4ರಂದು ಸಚಿವಾಲಯ ಸೂಚಿಸಿತ್ತು. ಆದರೆ, ಅರಣ್ಯ ಇಲಾಖೆ ಯಾವುದೇ ವರದಿ ಸಲ್ಲಿಸಿರಲಿಲ್ಲ. ಮತ್ತೊಮ್ಮೆ ಜ್ಞಾಪನಾ ಪತ್ರವನ್ನೂ ಕಳುಹಿಸಲಾಗಿತ್ತು” ಎಂದು ಹೇಳಿದ್ದಾರೆ.
ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಕಂದಾಯ ಭೂಮಿಯನ್ನಾಗಿ ಪರಿವರ್ತಿಸಿದ ಈ ಪ್ರಕರಣವನ್ನು ಹಾಸನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಅರಣ್ಯ ಸಂಚಾರಿ ದಳ) ಕಾರ್ಯನಿರ್ವಹಿಸುತ್ತಿದ್ದ ಎನ್ ರವೀಂದ್ರ ಕುಮಾರ್ ಅವರು 2022ರ ಫೆಬ್ರುವರಿಯಲ್ಲಿ ಪತ್ತೆ ಹಚ್ಚಿದ್ದರು. ಹಾಸನದ ತ್ಯಾವಿಹಳ್ಳಿಯ ಸರ್ವೇ ನಂಬರ್ 22ರಲ್ಲಿ ಹರಡಿರುವ 61.32 ಎಕರೆ ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.
Crime
ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ – ಕಿಡ್ನಾಪರ್ಸ್ನ್ನು ಪತ್ತೆ ಹಚ್ಚಿದ ಪೊಲೀಸರು

ಹಾಸನ : ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲಾ ಶಿಕ್ಷಕಿ ಅಪಹರಣ ಪ್ರಕರಣ
ಕಿಡ್ನಾಪರ್ಸ್ನ್ನು ಪತ್ತೆ ಹಚ್ಚಿದ ಪೊಲೀಸರು
ನೆಲ್ಯಾಡಿ ಬಳಿ ತೆರಳುತ್ತಿದ್ದ ವೇಳೆ ಎಲ್ಲರೂ ಪೊಲೀಸರ ವಶಕ್ಕೆ
ಅರ್ಪಿತಳನ್ನು ರಕ್ಷಿಸಿ ಕಿಡ್ನಾಪ್ ಮಾಡಿದವರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನ ನಗರ ಪೊಲೀಸ್ ಠಾಣೆಗೆ ಕರೆತರುತ್ತಿರುವ ಪೊಲೀಸರು
ಯುವತಿ ಅಪಹರಿಸಿ ಸೋಮವಾರಪೇಟೆ ಕಡೆ ಕರೆದೊಯ್ದಿದ್ದ ಖತರ್ನಾಕ್ ಕಿಡ್ನಾಪರ್ಸ್
ಪೊಲೀಸರಿಗೆ ಸಿಗದ ರೀತಿ ಪ್ಲಾನ್ ಮಾಡಿ ಅರ್ಪಿತಾಳನ್ನು ಕರೆದೊಯ್ಯಲು ಯತ್ನಿಸುತ್ತಿದ್ದ ರಾಮು ಮತ್ತು ತಂಡ
ಅಪರಹರಣಕ್ಕೊಳಗಾಗಿದ್ದ ಅರ್ಪಿತಾಳನ್ನು ರಕ್ಷಿಸಿ ರಾಮು ಮತ್ತು ತಂಡವನ್ನು ವಶಕ್ಕೆ ಪಡೆದು ಹಾಸನಕ್ಕೆ ಕರೆತರುತ್ತಿರುವ ಪೊಲೀಸರು
Hassan
ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆ – ತವರು ಜಿಲ್ಲೆಯಿಂದಲೇ ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡರು

ಹಾಸನ: ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆ
ತವರು ಜಿಲ್ಲೆಯಿಂದಲೇ ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡರು
ಡಿ.1 ರಂದು ಹೊಳೆನರಸೀಪುರ ತಾಲೂಕು ಶ್ರೀರಾಮದೇವರ ಕಟ್ಟೆಯಲ್ಲಿ ಮಹತ್ವದ ಸಭೆ
ಸಂಸದರು, ಶಾಸಕರು, ಜಿಪ-ತಾಪಂ ಮಾಜಿ ಸದಸ್ಯರು, ಮುಖಂಡರ ಸಭೆ ಕರೆದ ದೊಡ್ಡಗೌಡರು
ನಗರಸಭೆ,ಪುರಸಭೆ,ಪಟ್ಟಣ ಪಂಚಾಯ್ತಿ, ಗ್ರಾಪಂ ಚುನಾಯಿತ ಪ್ರತಿನಿಧಿಗಳಿಗೂ ಆಹ್ವಾನ
ತಮ್ಮ ಅಧ್ಯಕ್ಷತೆಯಲ್ಲೇ ನಡೆಯುವ ಸಭೆಗೆ ಪ್ರಮುಖರ ಆಹ್ವಾನ
ತಪ್ಪದೇ ಸಭೆಗೆ ಹಾಜರಾಗಿ ಪೂರಕ ಸಲಹೆ ಸೂಚನೆ ನೀಡುವಂತೆ ಸೂಚನೆ
ತವರು ಜಿಲ್ಲೆಯಿಂದಲೇ ಚುನಾವಣಾ ಪ್ರಕ್ರಿಯೆ ಆರಂಭಿಸುತ್ತಿರುವ ಹೆಚ್ಡಿಡಿ
Hassan
ಜ್ಞಾನ ಮನುಷ್ಯನನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆ – ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನರಾಯಪಟ್ಟಣ: ಜ್ಞಾನ ಮನುಷ್ಯನನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಪುರಾಣ ಪ್ರಸಿದ್ದ ಕ್ಷೇತ್ರ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿಯ 92 ನೇ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ದೇಹ ಮಣ್ಣು ಸೇರಿದರು ಕೂಡ ಮನಸ್ಸು ಮನುಷ್ಯನನ್ನು ಹಿಂಬಾಲಿಸುತ್ತದೆ.
ಮನಸ್ಸಿಗೆ ಸರಿಯಾದ ಸಂಸ್ಕಾರವನ್ನು ನೀಡಬೇಕು ಭಕ್ತಿ ಮತ್ತು ಶ್ರದ್ದೆಯನ್ನು ಇಟ್ಟುಕೊಂಡು ಬದುಕಬೇಕು.
ಅಶಿಸ್ತಿನ ಬದುಕನ್ನು ತೊರೆದು ನಿಸ್ವಾರ್ಥದೊಂದಿಗೆ ಸನ್ಮಾರ್ಗದಲ್ಲಿ ನಡೆದರೆ ಭಗವಂತನ ಕೃಪೆಗೆ ಪಾತ್ರರಾಗುತ್ತೇವೆ. ಒಬ್ಬರಿಗೊಬ್ಬರು ಸಹಾಯ ಮಾಡುವುದೇ ಮಾನವೀಯ ಧರ್ಮ. ಆದರೆ ನಾವು ಮಾಡುವ ದಾನ ಪಡೆದವರಿಗೆ ಸಾರ್ಥಕವಾಗಬೇಕೆ ಹೊರತು ಹೊರೆಯಾಗಬಾರದು. ಬದುಕು ಕಟ್ಟಿಕೊಳ್ಳಲು ದಾರಿಯಾಗಿರಬೇಕು ಎಂದರು.
ನಮ್ಮ ಬದುಕಿನ ಶೈಲಿ, ಆಚರಣೆ ಹಾಗೂ ಅಳವಡಿಸಿಕೊಳ್ಳುವ ಮೌಲ್ಯಯುತ ಜೀವನ ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಇರಬೇಕು ಎಂದು ತಿಳಿಸಿದರು.
ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ನಾವು ಎಷ್ಟೆಲ್ಲ ದುಡಿದಿದ್ದೇವೆ, ಏನೆಲ್ಲ ಸಂಪಾದಿಸಿದ್ದೇವೆ ಎಂದು ಎಣಿಸುವ ಬದಲು ದುಡಿದ ಹಣವನ್ನು ಯಾವ ಧರ್ಮ ಕಾರ್ಯಕ್ಕೆ ಎಷ್ಟು ವಿನಿಯೋಗಿಸಿದ್ದೇವೆ ಎಂಬುದನ್ನು ಅರಿಯಬೇಕು. ಕುಡಿಕೆ ತುಂಬುವಷ್ಟು ಕೂಡಿಟ್ಟು ಸ್ವಾರ್ಥ ಬದುಕು ನಡೆಸುವುದಕ್ಕಿಂತ ಧರ್ಮ ಕಾರ್ಯಗಳಿಗೆ ನಿಸ್ವಾರ್ಥದಿಂದ ಬಳಸುವುದು ಒಳಿತು ಎಂದರು.
ಮಾಜಿ ಎಂಎಲ್ಸಿ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ಬಸವೇಶ್ವರಸ್ವಾಮಿಯ ದೇಗುಲ ನಿರ್ಮಾಣಕ್ಕೆ ನೀಲಿನಕ್ಷೆ ತಯಾರಾಗಿದ್ದು ಈಗಾಗಲೇ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಗರ್ಭಗುಡಿ ನಿರ್ಮಾಣಕ್ಕೆ 10 ಲಕ್ಷ ರೂ. ಸಮರ್ಪಿಸುತ್ತೇನೆ ಎಂದು ತಿಳಿಸಿದರು.
ಬಸವೇಶ್ವರಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 2023 ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ 4 ಸರ್ಕಾರಿ ಫ್ರೌಢಶಾಲೆಯ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಇದೇ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಪುಷ್ವವೃಷ್ಟಿ ನೆರವೇರಿಸಿ ಗುರುವಂದನೆ ಸಲ್ಲಿಸಲಾಯಿತು. ಆದಿಚುಂಚನಗಿರಿ ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ, ಕಬ್ಬಳಿ ಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಚೈತನ್ಯನಾಥಸ್ವಾಮೀಜಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವನಂಜೇಗೌಡ, ಸದಸ್ಯೆ ಸುಮಾ, ದಿಡಗ ಗ್ರಾಪಂ ಅಧ್ಯಕ್ಷ ಎನ್.ಆರ್.ರತ್ನರಾಜ್, ಪರಿಸರ ಪ್ರೇಮಿ ಸಿ.ಎನ್.ಅಶೋಕ್, ಗುಡಿಗೌಡ ಪ್ರಕಾಶ್, ಗಣೇಶ್ಗೌಡ ಇತರರು ಇದ್ದರು.
ದಯಾನಂದ್ ಶೆಟ್ಟಿಹಳ್ಳಿ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ