Mysore
ಸಾಮಾಜಿಕ ಅಸಮಾನತೆಗಳ ಸಂದರ್ಭದಲ್ಲಿ ಸಮಾನ ಅವಕಾಶಗಳ ಸೃಷ್ಟಿ ಮಾಡುವುದು ಸಂವಿಧಾನದ ಆಶಯವಾಗಿದೆ – ಸಚಿವ ಡಾ.ಎಚ್.ಸಿ.ಮಹದೇವಪ್ಪ

ಮೈಸೂರು: ಜಾತಿ ಗಣತಿಗೆ ಸಂಬಂಧಿಸಿದಂತೆ ಇದೀಗ ದೇಶದಲ್ಲಿ ಚರ್ಚೆಗಳು ಮೊದಲಾಗಿದ್ದು, ಜಾತಿ ಗಣತಿಯಿಂದಾಗಿ ಜಾತಿ ಜಾತಿಗಳ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಅತ್ಯಂತ ತಪ್ಪಾದ ಮತ್ತು ವಾಸ್ತವಕ್ಕೆ ದೂರವಾದ ಸಂಗತಿಯನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಭಾರತವು ಸಂವಿಧಾನಾತ್ಮಕ ದೇಶವಾಗಿದ್ದರೂ ಸಹ ಇಲ್ಲಿ ಜಾತಿಯ ಮೇಲರಿಮೆ ಪ್ರಜ್ಞೆಯೇ ಮೇಲುಗೈ ಸಾಧಿಸಿರುವುದು ಅತಿದೊಡ್ಡ ವಾಸ್ತವವಾಗಿದ್ದು, ತುಳಿತಕ್ಕೆ ಒಳಪಟ್ಟ ವರ್ಗಗಳು ಅದೇ ರೀತಿ ಇರಬೇಕು ಎಂಬ ಮನಸ್ಥಿತಿಯು ಇವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ ಎಂದು ಟೀಕಿಸಿದ್ದಾರೆ.
ಸಾಮಾಜಿಕ ಅಸಮಾನತೆಗಳ ಸಂದರ್ಭದಲ್ಲಿ ಸಮಾನ ಅವಕಾಶಗಳ ಸೃಷ್ಟಿ ಮಾಡುವುದು ಸಂವಿಧಾನದ ಆಶಯವಾಗಿದೆ.
ಅದರಲ್ಲೂ ಸಾಮಾಜಿಕವಾಗಿ ಹಲವಾರು ಜಾತಿಯ ಅಸಮಾನತೆಗಳನ್ನು ಈಗಲೂ ಎದುರಿಸುತ್ತಿರುವ ಭಾರತದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಯಾವ ಜಾತಿಯ ಜನರ ಪರಿಸ್ಥಿತಿ ಏನಾಗಿದೆ, ಅವರ ಬದುಕಿನ ಸ್ಥಿತಿ ಗತಿ ಏನು? ಸಮಾನ ಮತ್ತು ಘನತೆಯ ಬದುಕಿಗಾಗಿ ಸರ್ಕಾರ ಅವರಿಗೆ ಯಾವ ರೀತಿಯಲ್ಲಿ ನೆರವಾಗಬಹುದು? ಜನರ ಹಕ್ಕುಗಳು ಮತ್ತು ಅವಕಾಶಗಳು ಅವರಿಗೆ ಸರಿಯಾದ ರೀತಿಯಲ್ಲಿ ಹಂಚಿಕೆ ಆಗಿದೆಯಾ ಎಂಬುದನ್ನು ತಿಳಿದುಕೊಳ್ಳುವ ಸಲುವಾಗಿ ಮಾಡುತ್ತಿರುವುದೇ ಈ ಜಾತಿ ಗಣತಿ.
ಈ ಜಾತಿ ಗಣತಿಯಿಂದಾಗಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕವಾಗಿ ಮತ್ತು ಔದ್ಯೋಗಿಕವಾಗಿ ತುಳಿತಕ್ಕೆ ಒಳಪಟ್ಟ ಸಮುದಾಯಗಳ ಸ್ಥೂಲವಾದ ಚಿತ್ರಣವು ಸಿಗಲಿದೆ.
ಆದರೆ ಜಾತಿಯೇ ರಾಜಕೀಯಕ್ಕೆ ಪ್ರಬಲ ಅಸ್ತ್ರ ಆಗಿರುವ ಈ ವೇಳೆ, ತಳ ವರ್ಗಗಳ ಏಳಿಗೆಯ ಕುರಿತು ಆರೋಗ್ಯಕರವಾಗಿ ಚಿಂತಿಸದ ಕೆಲವು ಕುತ್ಸಿತ ಮನಸುಗಳು ಜಾತಿ ಗಣತಿಯ ಕುರಿತು ತಪ್ಪಾಗಿ ಬಿಂಬಿಸಲು ಹೊರಟಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
ಉತ್ತಮ ಉದ್ದೇಶ ಹೊಂದಿರುವ ಜಾತಿ ಗಣತಿಯನ್ನು ಮಾಡುವುದರಿಂದ ಜಾತಿಗಳ ನಡುವೆ ಕಂದರ ಹೆಚ್ಚಾಗುತ್ತದೆ ಎಂದು ಹೇಳುತ್ತಿರುವ ಜನರು ದಲಿತರ ಮೇಲೆ ದೌರ್ಜನ್ಯಗಳು ಆಗುವಾಗ, ಸಾಮಾಜಿಕ ಶೋಷಣೆಯ ಕಾರಣಕ್ಕೆ ಅವರ ಘನತೆಯ ಬದುಕುವ ವಾತಾವರಣ ಹಾಳಾದಾಗ ಎಲ್ಲಿರುತ್ತಾರೆ?
ಹೀಗಾಗಿ ರಾಜಕೀಯದ ಕಾರಣಕ್ಕಾಗಿ ಯಾರು ಏನೇ ಹೇಳಿದರೂ ಕೂಡಾ ಜಾತಿ ಗಣತಿ ಎಂಬುದು ನಮ್ಮ ಸಮುದಾಯಗಳ ಸಾಮಾಜಿಕ ಆರ್ಥಿಕ, ರಾಜಕೀಯ ಹಾಗೂ ಔದ್ಯೋಗಿಕ ಸ್ಥಿತಿಗತಿಯನ್ನು ತಿಳಿದು ಅವರಿಗೆ ನೆರವಾಗಲು ಇರುವ ಸಮಾನ ಅವಕಾಶಗಳ ಕೀಲಿಕೈಯೇ ಹೊರತು, ಸಾಮಾಜಿಕ ವಿಭಜನೆಯ ಸಂಗತಿ ಅಲ್ಲ.
ಇದನ್ನು ನಮ್ಮ ಜನ ಸಮುದಾಯಗಳು ಅರ್ಥ ಮಾಡಿಕೊಂಡು ಹೆಚ್ಚು ಗಟ್ಟಿಯಾದ ದನಿಯಲ್ಲಿ ಇದರ ಬಗ್ಗೆ ಮಾತನಾಡಬೇಕು ಎಂದು ಡಾ.ಎಚ್ ಸಿಎಂ ಪ್ರಕಟಣೆ ಮೂಲಕ ಕರೆ ನೀಡಿದ್ದಾರೆ.
Mysore
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವಲಯ ಮಟ್ಟದ ಸಾಧನ ಸಮಾವೇಶ

ಸಾಲಿಗ್ರಾಮ ತಾಲೂಕಿನ ಕರ್ಪೂರವಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಸಾಲಿಗ್ರಾಮ ವಲಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಸಾಲಿಗ್ರಾಮ ವಲಯ ಮಟ್ಟದ ಸಾಧನ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕರ್ಪೂರವಳ್ಳಿಯ ಜಂಗಮ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿರವರು ವಹಿಸಿ ಸಮಾವೇಶಕ್ಕೆ ಚಾಲನೆ ನೀಡಿದರು.
ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಮದುಚಂದ್ರ ಯೋಜನೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಕರ್ತಾಳು ಗ್ರಾಮದ ಹಾಲಿನ ಡೇರಿ ಕಟ್ಟಡ ನಿರ್ಮಾಣಕ್ಕೆ ಒಂದುವರೆ ಲಕ್ಷ ರೂ ಮಂಜೂರಾತಿ ಆದೇಶ ಪತ್ರ, ಕರ್ಪೂರವಳ್ಳಿ ಜಂಗಮ ಮಠದ ಶಾಲೆಗೆ 10 ಬೆಂಚು ಡೆಸ್ಕ್ ಗಳ ಮಂಜೂರಾತಿ ಪತ್ರ, ಕರ್ಪೂರವಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರಿಗೆ ಮಾಶಾಸನ ಮಂಜುರಾತಿ ಪತ್ರ, ಜನ ಮಂಗಳ ಕಾರ್ಯಕ್ರಮದಲ್ಲಿ ಸಣ್ಣಮ್ಮ ಎಂಬುವರಿಗೆ ವಾಟರ್ ಬೆಡ್ ಮಂಜುರಾತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಸ್ವಾಮಿ, ಪಿಡಿಓ ಕುಳ್ಳೇಗೌಡ, ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ಬಿ.ಶೇಖರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ವಲಯ ಮೇಲ್ವಿಚಾರಕ ಧರಣಪ್ಪಗೌಡ, ಕರ್ಪೂರವಳ್ಳಿ ಸೇವಾ ಪ್ರತಿನಿಧಿ ಉಮೇಶ್, ಸೇವಾ ಪ್ರತಿನಿಧಿಗಳು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸೇರಿದಂತೆ ಹಲವರು ಸಾಧನ ಸಮಾವೇಶದಲ್ಲಿ ಪಾಲ್ಗೊಂಡಿದ್ದರು
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Crime
ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆ; ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಪತಿ

ನಂಜನಗೂಡು: ಪತ್ನಿ ಜೊತೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯತಮನನ್ನು ಮಚ್ಚಿನಿಂದ ಕೊಚ್ಚಿ ಪತಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 39 ವರ್ಷದ ಮಹದೇವಸ್ವಾಮಿ ಮೃತ ದುರ್ಧೈವಿಯಾಗಿದ್ದಾನೆ. 40 ವರ್ಷದ ಸೋಮಯ್ಯ ಎಂಬುವವರ ಪತ್ನಿ ಜೊತೆ ಮಹದೇವಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ಎಂದು ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಸೋಮಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಸೋಮಯ್ಯ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಡಿವೈಎಸ್ ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore
ರೈತರು ಹೈನುಗಾರಿಕೆಗೆ ಒತ್ತು ನೀಡಿ ಶಾಸಕ ಡಿ. ರವಿಶಂಕರ್





-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime3 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan3 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan1 week ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Mysore6 days ago
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ