Hassan
ರಾಜ್ಯದಲ್ಲಿ ಕ್ಷುಲ್ಲಕ ರಾಜಕಾರಣಕ್ಕೆ ಪ್ರಾಶಸ್ತ್ಯ ಕೊಡುತ್ತಿದ್ದಾರೆ: ಎಚ್ಡಿಕೆ
ಹಾಸನ : ಮೈಸೂರು ಗಲಭೆ ಪ್ರಕರಣ

ಹಾಸನ ಜಿಲ್ಲೆ, ಸಕಲೇಶಪುರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ
ಮೈಸೂರು ಗಲಭೆ ಬಗ್ಗೆ ದೊಡ್ಡಮಟ್ಟದಲ್ಲಿ ಪ್ರಚಾರ ಕೊಡುವುದು ಬೇಡ
ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ
ಒಂದು ಸಮಾಜದವರು ಸೋಶಿಯಲ್ ಮಿಡೀಯಾದಲ್ಲಿ ಪೋಸ್ಟ್ ಮಾಡಿದ್ದರಿಂದ ಇನ್ನೊಂದು ಸಮಾಜದವರು ಸರ್ಕಾರಿ ವಾಹನಗಳ ಕಲ್ಲು ತೂರಾಟ ಮಾಡಲು ಹೊರಟಿದ್ದರು
ಅಶಾಂತಿ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದ್ದರು
ಅದರ ಹಿನ್ನೆಲೆಯಲ್ಲಿ ಈಗ ರಾಜಕೀಯ ಪ್ರಾರಂಭವಾಗಿದೆ
ರಾಜ್ಯದಲ್ಲಿ ಯಾವ ಪರಿಸ್ಥಿತಿಯಲ್ಲಿ ಹೋಗುತ್ತಿದ್ದೇವೆ ಅದರ ಬಗ್ಗೆ ಗಮನ ಕೊಡುವುದು ಸೂಕ್ತ
ರಾಜ್ಯ ಸರ್ಕಾರದ ತೆರಿಗೆ ಸಂಗ್ರಹ 1 ಲಕ್ಷದ 89 ಸಾವಿರ ಕೋಟಿ ನಿರೀಕ್ಷೆ ಇಟ್ಟಿದ್ದರು
ಇನ್ನೂ ಹದಿನೈದು ಸಾವಿರ ಕೊರತೆ ಆಗಬಹುದು
ಆ ಹಣ ತುಂಬಿಸಲು ಸಿಎಲ್-2, ಸಿಎಲ್-7, ಸಿಲ್-9 ಐನೂರು ಮದ್ಯದಂಗಡಿಗಳಿಗೆ ಅನುಮತಿ ಕೊಡಲು ಮುಂದಾಗಿದ್ದಾರೆ
1992 ರಿಂದ ಇಲ್ಲಿಯವರೆಗೆ ಕೊಟ್ಟಿಲ್ಲ
ಈ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದಾರೆ
ಎಲ್ಲಾ ರೀತಿಯ ದರಗಳನ್ನು ಏರಿಕೆ ಮಾಡಿದ್ದಾರೆ
ಯಾವುದೇ ರೀತಿಯ ಸಂಗ್ರಹದಲ್ಲಿ ಯಶಸ್ಸು ಕಂಡಿಲ್ಲ
ರಾಜ್ಯದ ನಾನಾ ಭಾಗಗಳಲ್ಲಿ ಇರುವ ಸಮಸ್ಯೆಗಳಿಗಿಂತ ಹೆಚ್ಚಾಗಿ ಕ್ಷುಲ್ಲಕವಾದಂತಹ ರಾಜಕೀಯ ಬೆಳವಣಿಗೆಗೆ ಪ್ರಾಶಸ್ತ್ಯ ಕೊಡುತ್ತಿದ್ದಾರೆ
ಯಾವ ಪಕ್ಷದಲ್ಲಿ ಯಾರನ್ನು ನಾಯಕ ಮಾಡಿಕೊಂಡರೇನು, ಯಾರನ್ನು ತೆಗೆದೆರೇನು
ಅದು ಈ ರಾಜ್ಯಕ್ಕೆ ಬೇಕಾಗಿಲ್ಲ
ಹಾಸನ ಜಿಲ್ಲೆಯಲ್ಲಿ ಎಷ್ಟು ಜನ ಕಾಡಾನೆ ತುಳಿತದಿಂದ ಸತ್ತಿದ್ದಾರೆ
ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರಾ
ಅರಣ್ಯ ಇಲಾಖೆ ಮಂತ್ರಿಗಳು 65% ರೈಲ್ವೆ ಬ್ಯಾರಿಕೇಡ್ ಹಾಕಿದ್ದೇವೆ ಅಂತಾರೆ
ಅದು ನಾನು 2018 ರಲ್ಲಿ ಕೊಟ್ಟು ದುಡ್ಡು
ಅದಾದ ಮೇಲೆ ಎಲ್ಲಿ ದುಡ್ಡು ಕೊಟ್ಟರು, ಯಾವುದೇ ಕೆಲಸ ಆಗಿಲ್ಲ
ಬೆಂಗಳೂರು ಮೆಟ್ರೋ ದರ ಏರಿಕೆ ಜನಸಾಮಾನ್ಯರ ಮೇಲೆ ಹೊರೆ
ಪ್ರತಿದಿನ ಐದು ಗ್ಯಾರೆಂಟಿಗಳಿಗೆ ಹಣ ತುಂಬಿಸಲು ಪ್ರಯತ್ನ ಪಡುತ್ತಿದ್ದಾರೆ ಅಭಿವೃದ್ಧಿ ಇಲ್ಲವೇ ಇಲ್ಲ ಸತ್ತು ಹೋಗಿದೆ
ರಾಜ್ಯದಲ್ಲಿ ಸರ್ಕಾರ ಇದೆ ಎಂಬುದನ್ನು ಜನ ಮರೆಯುತ್ತಿದ್ದಾರೆ, ಆ ಪರಿಸ್ಥಿತಿಯಲ್ಲಿ ಇದ್ದೇವೆ
ಇದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ
2014 ಕೆಪಿಎಸ್ಸಿ ನೇಮಕಾತಿ ವಿಷಯದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆ ಆಯ್ತು
ಮೈತ್ರಿ ಎಂಬ ಒಬ್ಬ ಹೆಣ್ಣುಮಗಳಿಗಾಗಿ 370 ಜನರ ಜೊತೆ ಚೆಲ್ಲಾಟ ಆಡಿದರು
ಇವತ್ತು 2025 ಕ್ಕೆ ಬಂದಿದ್ದೇವೆ ಕೆಪಿಎಸ್ಸಿ ಪರಿಸ್ಥಿತಿ ಏನಾಗಿದೆ
ಒಂದೇ ಒಂದು ಉದ್ಯೋಗ ಕೆಪಿಎಸ್ಸಿಲಿ ಸೃಷ್ಟಿ ಆಗಿಲ್ಲ
ಹದಿನೈದು ಜನ ಮೆಂಬರ್ಗಳನ್ನು ಮಾಡಿಕೊಂಡು ಏನು ಸುಧಾರಣೆ ತಂದ್ರಿ
ಕೆಪಿಎಸ್ಸಿ ಪರೀಕ್ಷೆ ಮಾಡಲು ಆಗುತ್ತಿಲ್ಲ
ಯುವಕರ ಜೊತೆ ಚೆಲ್ಲಾಟ ಆಡುತ್ತಿದ್ದೀರಿ
ಮೊದಲು ಇದರ ಬಗ್ಗೆ ಗಮನ ಕೊಡಿ
Hassan
ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವ ನೀರಿಗೆ ಸಮಸ್ಯೆ: ತಾ.ಪಂ.ಕಚೇರಿ ಮುಂದೆ ಪ್ರತಿಭಟನೆ
ವರದಿ: ರಾಜೇಂದ್ರ ಸುಹಾಸ್
ಅರಕಲಗೂಡು: ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ತೆ ಕಲ್ಪಿಸುವಂತೆ ಆಗ್ರಹಿಸಿ ಮಲ್ಲಿಪಟ್ಟಣ ಹೋಬಳಿ ಜೋಗಿ ಹೊಸಹಳ್ಳಿ ಗ್ರಾಮಸ್ಥರು ತಾ.ಪಂ.ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಮ್ಮ ಗ್ರಾಮ ಹೆಗ್ಗಡಿಹಳ್ಳಿ ಗ್ರಾಪಂ ವ್ಯಾಪ್ತಿಗೆ ಸೇರಿದ್ದು ಗ್ರಾಮದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ನೀರು ಸರಬರಾಜು ಮಾಡುತ್ತಿದ್ದ ಕೊಳವೆ ಬಾವಿಯ ಮೋಟಾರ್ ಪಂಪ್ ಕುಸಿದು ಬಿದ್ದಿತ್ತು. ಇದನ್ನು ಎತ್ತಿ ಸರಿಪಡಿಸಿದರೂ ನೀರು ಬರುತ್ತಿಲ್ಲ ಹೀಗಾಗಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ.
ಈ ಬಗ್ಗೆ ಗ್ರಾ.ಪಂ. ಪಿಡಿಒ ನವೀನ್ ಕುಮಾರ್ ಅವರ ಗಮನಕ್ಕೆ ತಂದರೂ ಈ ವರೆವಿಗೂ ಕ್ರಮ ಕೈಗೊಳ್ಳದೆ ನಿರ್ಲಕ್ಷ ತೋರುತ್ತಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು ಈ ಕುರಿತು ಸಹ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಮನವಿ ಸ್ವೀಕರಿಸಿದ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕ ಡಿ. ಡಿ. ಪ್ರಕಾಶ್ ಈ ಕುರಿತು ಗಮನ ಹರಿಸಿ ಒಂದರೆಡು ದಿನದಲ್ಲೆ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದರು. ಚಂದ್ರೇಗೌಡ, ಮಂಗಳ, ರೇಣುಕ,ಪುಟ್ಟಲಕ್ಷ್ಮೀ,ಶೋಭ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Hassan
ಪರೀಕ್ಷೆ ಎಂಬ ಭಯವನ್ನು ಮನಸ್ಸಿನಿಂದ ಹೋಗಲಾಡಿಸಬೇಕು: ಕೆ. ಟಿ. ಮೇಘನಾ
ವರದಿ: ರಾಜೇಂದ್ರ ಸುಹಾಸ್
ಅರಕಲಗೂಡು: ಆಗಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳದೆ ಶ್ರಮಪಟ್ಟು ವ್ಯಾಸಂಗ ಮಾಡಬೇಕು. ಆಗ ಮಾತ್ರ ಯಶಸ್ಸು ಸಾಧ್ಯ
ಎಂದು ಬೆಂಗಳೂರು ಡಿಡಿ ಚಂದನ ಸಹಾಯಕ ನಿರ್ದೇಶಕಿ ಕೆ. ಟಿ. ಮೇಘನಾ ತಿಳಿಸಿದರು.
ಪಟ್ಟಣದ ಕಲ್ಯಾಣಮಂಟಪದಲ್ಲಿ ಬಿಜಿಎಸ್ ಪದವಿ ಪೂರ್ವ ಕಾಲೇಜು ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬರಿಗಾಲಿನಲ್ಲಿ ಬೆಟ್ಟವನ್ನು ಹತ್ತುವಾಗ ಕಲ್ಲು ಮುಳ್ಳು ಚುಚ್ಚುತ್ತವೆ. ಆದರೂ ಬೆಟ್ಟಹತ್ತಿ ಸೂರ್ಯೋದಯವನ್ನು ನೋಡಿದಾಗ ತುಂಬಾ ಖುಷಿಯಾಗುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಶ್ರಮಪಟ್ಟು ವ್ಯಾಸಂಗಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕಪಡೆದು ಅನ್ಕೊಂಡ ಕೋರ್ಸ್ ನಲ್ಲಿ ಸೀಟು ಸಿಕ್ಕರೆ ತುಂಬಾ ಖುಷಿಯಾಗುತ್ತದೆ. ಪರೀಕ್ಷೆ ಎಂಬ ಭಯವನ್ನು ಮನಸ್ಸಿನಿಂದ ಹೋಗಲಾಡಿಸಬೇಕು. ಒಂದು ಸಣ್ಣ ಯಶಸ್ಸು ಕೂಡ ತುಂಬಾ ಶ್ರಮ ವಹಿಸುತ್ತದೆ. ನನಗೆ ಆಗಲ್ಲ ಎಂದು ಕೈಕಟ್ಟಿ ಕುಳಿತುಕೊಳ್ಳದೆ ಶ್ರಮಪಟ್ಟು ವ್ಯಾಸಂಗ ಮಾಡಬೇಕು. ಆಗ ಮಾತ್ರ ಯಶಸ್ಸು ಸಾಧ್ಯ ಎಂದರು.

ಅಬ್ದುಲ್ ಕಲಾಂ ಅವರು ಪೈಲೆಟ್ ಆಗಬೇಕೆಂದು ಕನಸ್ಸು ಕಂಡಿದ್ದರು. ಅದಕ್ಕಾಗಿ ಡೆಹರಡೂನ್ ನಲ್ಲಿ ಐರಫೋರ್ಸ್ ಪರೀಕ್ಷೆಗೆ ಹೋಗುತ್ತಾರೆ. ೮ ಹುದ್ದೆಗೆ 25 ಜನ ಬಂದಿರುತ್ತಾರೆ. ಕಲಾಂ ಅವರು 9 ನೇ ಸ್ಥಾನದಲ್ಲಿರುತ್ತಾರೆ. ಇದರಿಂದ ತುಂಬಾ ಬೇಸರ ಮಾಡಿಕೊಳ್ಳುತ್ತಾರೆ. ಅವರು ಪೈಲೆಟ್ ಆಗದಿರಬಹುದು ಆದ್ರೆ ಹಲವು ಸ್ಥಾನಗಳನ್ನು ಅಲಂಕರಿಸಿದ್ದಾರೆ. ಹಾಗಾಗಿ ಒಂದು ಬಾಗಿಲು ಮುಚ್ಚಿದರೆ, ಹಲವು ಬಾಗಿಲು ತೆರೆದುಕೊಳ್ಳುತ್ತವೆ. ಹಾಗಾಗಿ ಪ್ರಸ್ತುತ ಪರೀಕ್ಷೆ ಕಡೆಗೆ ಹೆಚ್ಚಿನ ಗಮನಹರಿಸಬೇಕು.ವಿದ್ಯಾರ್ಥಿಗಳು ಓದಿದ್ದನ್ನು ಹವ್ಯಾಸ ಮಾಡಿಕೊಳ್ಳಬೇಕು ಎಂದರು.
ಪರೀಕ್ಷೆ ಸಮೀಪಸುತ್ತಿದ್ದಂತೆ ಹೆದರದೆ ದೈರ್ಯವಾಗಿ ಬರೆಯಬೇಕು. ಪರೀಕ್ಷೆ ಬರೆದು ಬಂದ ಮೇಲೆ ಆ ವಿಷಯದ ಬಗ್ಗೆ ಚರ್ಚಿಸದೆ ಮುಂದಿನ ಪರೀಕ್ಷೆಕಡೆ ಗಮನಹರಿಸಬೇಕು. ಅವರು, ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆ ತಯಾರಿ ಬಗ್ಗೆ ತಿಳಿಸಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಸನ – ಕೊಡಗು ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ಕಠಿಣ ಪರಿಶ್ರಮ ದಿಂದ ಮಾತ್ರ ಸಾಧನೆ ಮೆಟ್ಟಿಲೆರಲು ಸಾಧ್ಯ. ಹಾಗಾಗಿ ಮೇಘನಾ ಅವರು ಯಾರೋ ಕಟ್ಟಿದ ಗೋಪುರಕ್ಕೆ ಕಳಸವಾಗಿಲ್ಲ.ಅವರೇ ಕಟ್ಟಿದ ಗೋಪುರಕ್ಕೆ ಕಳಸವಾಗಿದ್ದಾರೆ. ಹಾಗಾಗಿ ಪರೀಕ್ಷೆಗೆ ಭಯ, ಆತಂಕ ಬೇಡ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.ನಮ್ಮ ಮುಂದೆ ಸಾಕಷ್ಟು ಸವಾಲುಗಳು ಬಂದರೂ ದೈರ್ಯವಾಗಿ ಎದುರಿಸಬೇಕು ಎಂದರು.
ಕಸಪಾ ಜಿಲ್ಲಾಧ್ಯಕ್ಷರು ಮಲ್ಲೇಶ್ ಗೌಡ, ಪ್ರಾಂಶುಪಾಲರಾದ ಮಹೇಶ್ ಹೊಡೆನೂರು ಇದ್ದರು. ವೇದಿಕೆ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
Hassan
ಬಿ. ಶಿವರಾಂ ಆರೋಪಗಳಿಗೆ ಪ್ರತಿಕ್ರಿಯೆ ಇಲ್ಲ, ಅಭಿವೃದ್ಧಿಯೇ ನನ್ನ ಉತ್ತರ: ಹೆಚ್.ಕೆ. ಸುರೇಶ್
ಬೇಲೂರು: ಬಿ. ಶಿವರಾಂ ಆರೋಪಗಳಿಗೆ ಪ್ರತಿಕ್ರಿಯೆ ಇಲ್ಲ, ಅಭಿವೃದ್ಧಿಯೇ ನನ್ನ ಉತ್ತರ. ಈಗಾಗಲೇ ಮಾಜಿ ಸಚಿವರಿಗೆ ಅರಳು ಮರಳು ಎಂಬುದು ಇಡೀ ಜಿಲ್ಲೆಗೆ ತಿಳಿದಿದೆ ಎಂದು ಶಾಸಕ ಹೆಚ್.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.
ತಾಲೂಕಿನ ತೊಳಲು ಗ್ರಾಮದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದ ಅವರು, ಬಿ. ಶಿವರಾಂ ಅವರು ನನ್ನ ವಿರುದ್ಧ ನೀಡುತ್ತಿರುವ ಹೇಳಿಕೆಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಶಾಸಕ ಹೆಚ್.ಕೆ. ಸುರೇಶ್ ಸ್ಪಷ್ಟಪಡಿಸಿದರು.
ಬಸವಣ್ಣನವರು ಹೇಳಿದಂತೆ “ಕಾಯಕವೇ ಕೈಲಾಸ” ಎಂಬ ತತ್ವಕ್ಕೆ ನಾನು ಇಂದಿಗೂ ಬದ್ಧನಾಗಿದ್ದು, ಕೆಲವರ ಅಸಂಬದ್ಧ ಹಾಗೂ ಹತಾಶ ಮನೋಭಾವದ ಮಾತುಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಬಿ. ಶಿವರಾಂ ಅವರು ಹತಾಶ ಮನಸ್ಥಿತಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಶಾಸಕರು, ಇಂದು ತಾಲೂಕಿನ ಪ್ರತಿ ಹಳ್ಳಿ-ಹಳ್ಳಿಗಳಲ್ಲೂ ಹಾಗೂ ಪಟ್ಟಣದಲ್ಲೂ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆಗಳು ನಡೆಯುತ್ತಿವೆ. ಸರ್ಕಾರದಲ್ಲಿ ಹಣ ಇಲ್ಲ, ಯಾರಿಗೂ ಅನುದಾನ ಸಿಗುತ್ತಿಲ್ಲ ಎಂದು ಹೇಳುತ್ತಿದ್ದವರ ನಡುವೆಯೇ ನಾನು ಅನುದಾನ ತಂದು ಕಾಮಗಾರಿಗಳನ್ನು ಮಾಡಿಸುತ್ತಿರುವುದು ಅವರಿಗೆ ಸಹಿಸಲಾಗುತ್ತಿಲ್ಲ. ಅದೇ ಕಾರಣಕ್ಕೆ ಈ ರೀತಿಯ ಆರೋಪಗಳು ಬರುತ್ತಿವೆ ಎಂದು ಹೇಳಿದರು.
ಬೇಲೂರು ಪಟ್ಟಣದಲ್ಲಿ ಈಗಾಗಲೇ ಸುಮಾರು 10 ಕೋಟಿ ರೂ.ಗಳ ಅನುದಾನವನ್ನು ತರಲಾಗಿದ್ದು, ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದನ್ನು ಸಹಿಸದೆ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸುರೇಶ್ ಅಸಮಾಧಾನ ವ್ಯಕ್ತಪಡಿಸಿದರು. ಅವರು ಎಷ್ಟು ಹೇಳಿಕೆಗಳನ್ನು ಕೊಡುತ್ತಾ ಇರಲಿ, ನಾನು ನನ್ನ ಕೆಲಸವನ್ನು ಮುಂದುವರೆಸಿಕೊಂಡು ಅಭಿವೃದ್ಧಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುತ್ತೇನೆ ಎಂದು ಹೇಳಿದರು.

ಬಿ. ಶಿವರಾಂ ಅವರು ನಾಲ್ಕು ಬಾರಿ ಶಾಸಕರಾಗಿದ್ದಾಗ ಆನೆ ಸಮಸ್ಯೆಯ ಬಗ್ಗೆ ಎಷ್ಟು ಬಾರಿ ಮಾತನಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಪ್ರಶ್ನಿಸಿದ ಶಾಸಕರು, ನಾನು ಮೊದಲ ಬಾರಿಗೆ ಶಾಸಕರಾಗಿಯೇ ಆನೆಗಳ ದಾಳಿಯ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದ್ದೇನೆ. ಜೊತೆಗೆ ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾವನೆಗಳನ್ನು ಸಲ್ಲಿಸಿ, ಕೆ. ಜಾರ್ಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಇಂಜಿನಿಯರ್ಗಳು, ಗುತ್ತಿಗೆದಾರರು ಹಾಗೂ ಅಧಿಕಾರಿಗಳು ನನ್ನ ಆತ್ಮೀಯರೇ. ಆದರೆ ಯಾರಿಗೆ ಟೆಂಡರ್ ಕೊಡಬೇಕು ಎಂಬುದು ನನ್ನ ಕೈಯಲ್ಲಿಲ್ಲ. ಯಾರು ನಿಯಮಾನುಸಾರ ಟೆಂಡರ್ ಹಾಕಿಕೊಂಡು ಬಂದರೂ ಅವರಿಗೆ ಕೆಲಸ ಸಿಗುತ್ತದೆ. ನಾನು ಗುಣಮಟ್ಟದ ಕೆಲಸ ಮಾಡುವಂತೆ ಮಾತ್ರ ಸೂಚನೆ ನೀಡುತ್ತೇನೆ ಹೊರತು, ನನ್ನ ಹಿಂಬಾಲಕರು ಎಂಬ ಕಾರಣಕ್ಕೆ ಯಾರಿಗೂ ಕೆಲಸ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿ. ಶಿವರಾಂ ಅವರು ನೀಡಿರುವ ಹೇಳಿಕೆಗಳು ಸಂಬಂಧರಹಿತವಾಗಿದ್ದು, ವಯಸ್ಸಿನ ಗಡಿಯಲ್ಲಿರುವ ಅವರ ಮಾತುಗಳು ಅರಳು–ಮರಳಿನ ಮಾತುಗಳಂತೆ ಇವೆ. ಅಂತಹ ಹೇಳಿಕೆಗಳಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಸುರೇಶ್ ಹೇಳಿದರು.
ಕಳೆದ ಚುನಾವಣೆಯಲ್ಲಿ ನಾನು ಸೋತಾಗ ಲಿಂಗೇಶ್ ಶಾಸಕರಾಗಿದ್ದರು. ಆಗ ನಾನು ಅವರ ವಿರುದ್ಧ ಯಾವುದೇ ಹೇಳಿಕೆ ನೀಡಿರಲಿಲ್ಲ. ಜನಸಾಮಾನ್ಯರ ಜೊತೆ ನಿಂತು ಕೆಲಸ ಮಾಡುವುದೇ ನನ್ನ ರಾಜಕಾರಣ. ಇಂದು ಮತದಾರರು ನನ್ನ ಕೈ ಹಿಡಿದಿದ್ದು, ಅವರ ಸೇವೆ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದರು.

ನಾನು ಮೂಲತಃ ಸಿವಿಲ್ ಇಂಜಿನಿಯರ್ ಹಾಗೂ ಗುತ್ತಿಗೆದಾರನಾಗಿರುವುದರಿಂದಲೇ ಈ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸುತ್ತಿದ್ದೇನೆ. ನಾನು ಗುತ್ತಿಗೆದಾರನಾಗಿರುವುದರಿಂದ ನನಗೆ ಸಹಕಾರ ಸಿಗುತ್ತಿದೆ ಎಂದು ಬಿ. ಶಿವರಾಂ ಹೇಳಿರುವುದಕ್ಕೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ವ್ಯಂಗ್ಯವಾಡಿದರು.
-
Mandya24 hours agoSSLC ಪೂರ್ವಸಿದ್ದತಾ ಪರೀಕ್ಷೆ ಪರಿಶೀಲಿಸಿದ ಜಿ.ಪಂ. ಸಿಇಓ ಕೆ.ಆರ್.ನಂದಿನಿ
-
National5 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Special22 hours agoರಾಜ್ಯದಲ್ಲಿ ಈ ವರ್ಷದ ರಸಗೊಬ್ಬರ ಪೂರೈಕೆ ಹೇಗಿದೆ?ಅಂಕಿ ಅಂಶಗಳು ಹೇಳುವುದೇನು? ತಿಳಿಯಿರಿ
-
Politics23 hours agoರಾಜ್ಯಪಾಲರು v/s ಸರ್ಕಾರ ಮತ್ತೆ ಸಂಘರ್ಷ: ಸಹಿ ಹಾಕದೇ ರಾಷ್ಟ್ರಪತಿ ಅಂಗಳಕ್ಕೆ ದ್ವೇಷ ಭಾಷಣ ಬಿಲ್
-
Kodagu10 hours agoಹೂಡಿಕೆ ಹೆಸರಲ್ಲಿ ಸೈಬರ್ ವಂಚನೆ : 1.14 ಕೋಟಿ ರೂ. ಕಳೆದುಕೊಂಡ ಸಿದ್ದಾಪುರದ ವ್ಯಕ್ತಿ
-
Special8 hours agoಪೋಸ್ಟ್ ಆಫೀಸ್ ಉದ್ಯೋಗ ಅವಕಾಶ: ನೇರ ನೇಮಕಾತಿ
-
Mysore24 hours agoಮೈಸೂರು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ. ಶಿವರಾಜ್
-
Mandya4 hours agoಜಿಲ್ಲೆಯಲ್ಲಿ ಉದ್ಯೋಗ ಆಕಾಂಕ್ಷಿಗಳು ಉದ್ಯೋಗ ಮೇಳವನ್ನು ಸದುಪಯೋಗ ಪಡಿಸಿಕೊಳ್ಳಿ : ಕೆ.ಆರ್. ನಂದಿನಿ
