Mandya
ಮುಖ್ಯಮಂತ್ರಿ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ದ ಎಚ್ಡಿಕೆ

ಸಚಿವ ಸ್ಥಾನಕ್ಕೆ ದುಂಬಾಲು ಎಂಬ ಎಚ್ಡಿಕೆ ಹೇಳಿಕೆಗೆ ಸಿಆರ್ಎಸ್ ತಿರುಗೇಟು
ಜಿಲ್ಲೆ ಅಭಿವೃದ್ಧಿಯಾದರೆ ಜೆಡಿಎಸ್ ಹಿಡಿತ ತಪ್ಪುವ ಭೀತಿ: ಆರೋಪ
ಜೆಡಿಎಸ್ಗೆ ತನ್ನ ಚಿಹ್ನೆಯ ಮೇಲೆ ವಿಶ್ವಾಸವೇ ಇಲ್ಲ
ಮಂಡ್ಯ: ಮುಖ್ಯಮಂತ್ರಿ ಆಗಬೇಕೆಂದು ಎಚ್.ಡಿ.ಕುಮಾರಸ್ವಾಮಿ ಅವರೇ ನನ್ನ ಬಳಿ ಕೈಕಟ್ಟಿಕೊಂಡು ನಿಂತಿದ್ದರು, ಅಂದು ಜನ ಗೆಲ್ಲಿಸಿದ್ದಕ್ಕೆ ನಾನು ಸಚಿವನಾಗಿ ಕೆಲಸ ಮಾಡಿದ್ದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಸಚಿವಸ್ಥಾನಕ್ಕೆ ದುಂಬಾಲು ಬಿದ್ದದ್ದರು ಎಂಬ ಎಚ್ಡಿಕೆ ಹೇಳಿಕೆಗೆ ತಿರುಗೇಟು ನೀಡಿದರು.
ನಗರದಲ್ಲಿ ₹43 ಕೋಟಿ ವೆಚ್ಚದಲ್ಲಿ ಇಲ್ಲಿನ ಫ್ಯಾಕ್ಟರಿ ಸರ್ಕಲ್ ಹಾಗೂ ಜೆ.ಸಿ.ವೃತ್ತದಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಾವಿರ ಕೋಟಿ ಅನುದಾನ ತಂದಿದ್ದೀನಿ ಎಂದು ಬರಿ ಬಾಯಲ್ಲಿ ಹೇಳುವುದಿಲ್ಲ ನಿಮಗೆ ಗೊತ್ತಿದೆ ಅಭಿವೃದ್ಧಿ ಬಗ್ಗೆಯಷ್ಟೇ ನಾವು ಮಾತನಾಡಿ ಅನುದಾನ ತಂದು ಕೆಲಸ ಮಾಡುತ್ತಿದ್ದೇವೆ, ಸಚಿವ ಸ್ಥಾನಕ್ಕಾಗಿ ಚಲುವರಾಯಸ್ವಾಮಿ ದುಂಬಾಲು ಬಿದ್ದಿದ್ದರು ಎಂದು ಹೇಳಿಕೆ ನೀಡುವ ಇವರು, ಸಿಎಂ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ದರು, ಅವರಪ್ಪ, ಅವರ ಭಾವ ಬೇಡ ಎಂದಾಗ. 39 ಜನ ಶಾಸರ ಬಳಿ ಅವರು ಹೇಗೆ ನಿಂತಿದ್ದರು, ಕೇಳಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನನ್ನನ್ನು ಜನ ಗೆಲ್ಲಿಸಿದ್ದಕ್ಕೆ ಮಂತ್ರಿ ಮಾಡಿದ್ದರು, ಈಗಲೂ ಜನ ಗೆಲ್ಲಿಸಿರುವುದಕ್ಕೆ ಮಂತ್ರಿ ಮಾಡಿದ್ದಾರೆ ಇದರಲ್ಲಿ ದುಂಬಾಲು ಬೀಳುವುದೇನಿದೆ? ಜೆಡಿಎಸ್ನವರು ಹಳೇ ಭಾಷಣ ಹೊಡೆಯುತ್ತಿದ್ದಾರೆ. ಭಾಷಣದಲ್ಲಿ ಅವರು ಮುಂದೆ ಇದ್ದಾರೆ, ನಾವು ಅಭಿವೃದ್ಧಿಯಲ್ಲಿ ಮುಂದಿದ್ದೇವೆ. ನಾವು ಬರೀ ಬಾಯಲ್ಲಿ ಹೇಳಲ್ಲ, ಕೆಲಸ ಮಾಡಿ ತೋರಿಸುತ್ತೇವೆ. ಕೆಲವರಿಗೆ ಮಂಡ್ಯ ಅಭಿವೃದ್ಧಿ ಬೇಕಿಲ್ಲ. ಹೊಸ ಫ್ಯಾಕ್ಟರಿ ಬೇಡ, ಕೃಷಿ ವಿವಿಯೂ ಬೇಡ ಅವರಿಗೆ, ಇವರು ಮೆಡಿಕಲ್ ಕಾಲೇಜನ್ನು ಶಿಫ್ಟ್ ಮಾಡಲು ಹೇಳುತ್ತಾರೆ, ಅಭಿವೃದ್ಧಿ ಆದರೆ ಜಿಲ್ಲೆ ಇವರ ಹಿಡಿತಕ್ಕೆ ಸಿಗಲ್ಲವಲ್ಲ ಎಂದು ಡಿ.ಸಿ.ತಮ್ಮಣ್ಣ ಅವರ ವಿರೋಧಕ್ಕೆ ಟಾಂಗ್ ನೀಡಿದರು.
ಯಾರನ್ನೂ ಕೇಳಿ ನಾನು ತೀರ್ಮಾನ ಮಾಡಬೇಕಾಗಿಲ್ಲ, ಜನರ ಅಗತ್ಯಗಳಿಗೆ ಅಭಿವೃದ್ಧಿ ಮಾಡುತ್ತಿದ್ದೇವೆ, ಕಾಂಗ್ರೆಸ್ ಒಕ್ಕಲಿಗರ ನಾಯಕತ್ವ ತುಳಿಯುತ್ತಿದೆ ಎಂಬ ಮಾತನ್ನು ಎಚ್ಡಿಕೆ ಅವರು ಹೇಳುತ್ತಾರೆ ಆಗಾದರೆ ಕಾಂಗ್ರೆಸ್ನಲ್ಲಿ ಒಕ್ಕಲಿಗರಿಲ್ಲವೇ ನಾವು ಒಕ್ಕಲಿಗರಲ್ಲವಾ, ಜಾತಿ ರಾಜಕಾರಣವನ್ನ ಜನ ಈಗ ಒಪ್ಪಲ್ಲ ಎಂಬುದನ್ನು ತಿಳಿದುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊಟ್ಟೆಪಾಡಿಗಾಗಿ ಜೆಡಿಎಸ್ನವರು ಬಿಜೆಪಿ ಜೊತೆ ಹೋಗಿದ್ದಾರೆ ಎಂಬುದನ್ನು ಎಲ್ಲಿಯೂ ಹೇಳಿಲ್ಲ, ಆ ಮಾತನ್ನು ನಾನು ಹೇಳಿದ್ದರೆ ಬೇರೆ ರೀತಿ ಹೇಳಿರುತ್ತೇನೆ ಅಷ್ಟೇ, ಬೆಂಗಳೂರು ಗ್ರಾಮಾಂತರ ಇವರ ಹಿಡಿತದಲ್ಲಿದ್ದ ಕ್ಷೇತ್ರದಲ್ಲಿ ಜೆಡಿಎಸ್ ಚಿಹ್ನೆ ಬಳಸದೇ ಬಿಜೆಪಿ ಚಿಹ್ನೆ ಬಳಸಿ ಡಾ.ಮಂಜುನಾಥ್ ಅವರನ್ನು ನಿಲ್ಲಿಸಿರುವುದು ಏಕೆ? ಮಂಜುನಾಥ್ ಅವರ ಬಗ್ಗೆ ಅಪಾರ ಗೌರವವಿದೆ, ಇವರ ಪಕ್ಷದ ಚಿಹ್ನೆ ಮೇಲೆ ವಿಶ್ವಾಸವಿಲ್ಲವೇ ಎಂದು ಪ್ರಶ್ನಿಸಿದರು.
ಯಾರು ಯಾರ ಮನೆಯನ್ನೂ ಹೊಡೆದಿಲ್ಲ, ಯಾವಾಗ ಮನೆ ಒಡೆದಿದ್ದಾರೆ ಎಂಬುದನ್ನು ಜನರಿಗೆ ತಿಳಿದಿದೆ, ಅವರ ತರಹ ಅಭ್ಯರ್ಥಿಯನ್ನು ಒಂದು ತಿಂಗಳ ನಂತರ ಕಾಂಗ್ರೆಸ್ ಹಾಕಿಲ್ಲ, ನಾವು ಮೊದಲೇ ಘೋಷಣೆ ಮಾಡಿದ್ದೇವೆ ಅವರು ಇನ್ನೂ ಘೋಷಣೆ ಮಾಡಿಲ್ಲ, ಏಕೆಂದರೆ ಜನರ ನಂಬಿಕೆ ಕಳೆದುಕೊಂಡಿದ್ದಾರೆ, ಅದಕ್ಕೆ ಡಾ.ಮಂಜುನಾಥ್ ಅವರನ್ನ ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ರಾಜಕೀಯವಾಗಿ ಯಾರು ಯಾರನ್ನ ತುಳಿದರು ಎಂಬ ಇತಿಹಾಸ ಇದೆ. ಈಗ ನಾನು ಯಾಕೆ ಮಾತನಾಡುವುದು. ಜನಕ್ಕೆ ಅದೆಲ್ಲಾ ತಿಳಿದೆ ನಮ್ಮ ಪರ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೊಟ್ಟೆ ನೋವು ತಡೆಯಲಾರದೆ ಏನೇನೋ ಮಾತನಾಡುತ್ತಾರೆ. ಅದಕ್ಕೆ ವೈದ್ಯರೆ ಮೆಡಿಷನ್ ಕೊಡಬೇಕು. ಚುನಾವಣೆಯೆ ಷಡ್ಯಂತ್ರ, ಸ್ಟಾಟರ್ಜಿ, ಜನರು ನಮ್ಮನ್ನ ನಂಬಬೇಕು. ಜನ ಅವರನ್ನ ನಂಬಲಿಲ್ಲ, ನಮ್ಮ ಗ್ಯಾರಂಟಿ ನಂಬಿದರು.
ಅವರ ಆಡಳಿತವನ್ನ ಜನ ಒಪ್ಪಲಿಲ್ಲ. ಮಲಗಿದ್ದರು, ಎದ್ದರೂ ಚಲುವರಾಯಸ್ವಾಮಿ ಜಪ ಮಾಡುತ್ತಿದ್ದಾರೆ, ನನ್ನ ಬಗ್ಗೆ ಟೀಕೆ ಮಾಡಿದರೆ ಅದನ್ನು ಸಂತೋಷವಾಗಿ ಸ್ವೀಕರಿಸುತ್ತೇನೆ, ಸುರೇಶ್ಗೌಡನ ಬಗ್ಗೆ ಮಾತನಾಡಲ್ಲ, ಎಲ್ಲರಿಗೂ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ತಟಸ್ಥ ಆಗಿದ್ದೆ. ನಾನು ಯಾರಿಗೂ ಚುನಾವಣೆ ಮಾಡಲಿಲ್ಲ.
ಆಗ ಮೈತ್ರಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಒಪ್ಪಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಈಗಲೂ ಜೆಡಿಎಸ್ ಬಿಜೆಪಿ ಮೈತ್ರಿ ಈ ಭಾಗದಲ್ಲಿ ಜನ ಒಪ್ಪಲ್ಲ. ಎದುರಾಳಿ ನೋಡಿ ನಾವು ಚುನಾವಣೆ ಮಾಡಲ್ಲ. ಯಾರೆ ಅಭ್ಯರ್ಥಿ ಆದರೂ ನಾವು ತಲೆ ಕೆಡಿಸಿಕೊಳ್ಳಲ್ಲ. ನಮ್ಮ ಜನರ ಮೇಲೆ ನಂಬಿಕೆ ಇದೆ. ಬಿಜೆಪಿ-ಜೆಡಿಎಸ್ ಹೊಡೆದ ಮಡಿಕೆಯಾಗಿದೆ. ಮೈತ್ರಿ ಧಿಕ್ಕರಿಸಿ ಜನ ನಮ್ಮನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಪಿ.ರವಿಕುಮಾರ್ಗೌಡ ಗಣಿಗ, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು), ನಗರಸಭೆ ಸದಸ್ಯರಾದ ನಹೀಂ, ರಾಮಲಿಂಗಯ್ಯ, ಶ್ರೀಧರ್ ಮುಖಂಡರಾದ ಚಿದಂಬರ್, ರವಿಬೋಜೇಗೌಡ, ಗೀತಾ, ಪೂರ್ಣಿಮಾ ಭಾಗವಹಿಸಿದ್ದರು.
Mandya
ಜಿಲ್ಲೆಯಲ್ಲಿ ರೈತ ಉತ್ಪಾದಕಾ ಸಂಘಗಳು ಹೆಚ್ಚಾಗಬೇಕು: ಡಾ.ಕುಮಾರ

ಮಂಡ್ಯ : ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ವ್ಯಾಪಾರ ಮತ್ತು ವ್ಯಾವಹಾರಿ ಅಭಿವೃದ್ಧಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ, ಕೃಷಿಯಲ್ಲಿ ತನ್ನದೇ ಆದ ವಿಶೇಷ ಮಹತ್ವವವನ್ನು ಹೊಂದಿದೆ. ರೈತರು ಆರ್ಥಿಕವಾಗಿ ಸದೃಢರಾಗಲು ರೈತರು ಬೆಳೆದ ಬೆಳೆಗಳ ಮೌಲ್ಯವರ್ಧನೆಯಾಗಬೇಕು ರೈತ ಉತ್ಪದಕಾ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದರು.
ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಬೇಕೆಂದರೆ, ದಲ್ಲಾಳಿ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು., ರೈತರು ನಿಜವಾಗಿಯೂ ಸ್ವಾವಲಂಬಿಗಳಾಗಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಗಳ ಅವಶ್ಯಕತೆ ಇದೆ, ಇದರಿಂದ ರೈತರು ಸಹ ಕಂಪನಿಗಳು ಮಾಲೀಕರಾಗಬಹುದು.
ಸರ್ಕಾರದ ಪಿ.ಎಂ.ಎಫ್. ಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ ಎಂದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಮಾತನಾಡಿ , ಇದು ಜಿಲ್ಲೆಯಲ್ಲಿ ಕೃಷಿಯ ಕುರಿತು ನಡೆಸುತ್ತಿರುವ ನನ್ನ ಮೊದಲ ಕಾರ್ಯಕ್ರಮ, ದೇಶದ ಜಿ.ಡಿ.ಪಿ.ಗೆ ಸೇವಾ ವಲಯದ ಕೊಡುಗೆ ಅತಿ ಹೆಚ್ಚು, ಅದರಲ್ಲಿ ಅತಿ ಹೆಚ್ಚು ಜನ ಕೃಷಿಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ, ಶ್ರಮ ಪಟ್ಟು ದುಡಿಯುತ್ತಿರುವ ರೈತರಿಗಿಂತ ಹೆಚ್ಚು ಕೃಷಿಗೆ ಸಂಬಂಧಿಸಿದ ಕಂಪನಿಗಳು ಆದಾಯವನ್ನು ಗಳಿಸುತ್ತಿವೆ, ರೈತರ ಆದಾಯ ಹೆಚ್ಚಬೇಕು ಎಂದರೆ ಇಂತಹಾ ಕಾರ್ಯಾಗಾರಗಳು ಮುಖ್ಯ ಮುಕ್ತ ಮನಸ್ಸಿನಿಂದ ವಿಚಾರಗಳು ವಿನಿಮಯ ಮಾಡಿಕೊಂಡು ಅದನ್ನು ಕಾರ್ಯ ಪ್ರವೃತ್ತಿಯಲ್ಲಿ ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ರೈತ ಉತ್ಪಾದಕ ಸಂಸ್ಥೆಗಳು ಮುಖ್ಯಸ್ಥರುಗಳಾದ ಕರಸವಾಡಿ ಮಹದೇವ್, ಹರೀಶ್, ಹನುಮಂತೇಗೌಡ, ಸುಬ್ರಹ್ಮಣ್ಯ, ಮಾಯಣ್ಣ, ಚಿಕ್ಕೇಗೌಡ, ಜಗದೀಶ್ ಬಾಬು ಮತ್ತು ಇನ್ನಿತರ ಉಪಸ್ಥಿತರಿದ್ದರು.
Mandya
ತಮ್ಮನ ಹ*ತ್ಯೆಗೆ ಅಣ್ಣನಿಂದಲೇ ಸುಫಾರಿ : ಪ್ರಕರಣ ಭೇದಿಸಿದ ಪೋಲೀಸರ

ಮಂಡ್ಯ :- ಲಕ್ಷ್ಮಿ ಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದ್ದ ಕೃಷ್ಣೇಗೌಡ ಎಂಬುವವರ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದು, ತಮ್ಮನ ಕೊಲೆಗೆ ಅಣ್ಣನೇ ಸುಫಾರಿ ನೀಡಿರುವುದು ಬೆಳಕಿಗೆ ಬಂದಿದೆ.
ಕೆ ಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ತಮ್ಮ ಕೃಷ್ಣೇಗೌಡನ ಕೊಲೆಗೆ ಅಣ್ಣ ಗುಡ್ಡಪ್ಪ ಶಿವನಂಜೇಗೌಡ 5 ಲಕ್ಷ ಸುಪಾರಿ ನೀಡಿದ್ದು, ಎಲ್ಲಾ ಸುಪಾರಿ ಹಂತಕರನ್ನು ಬಂದಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಳವಳ್ಳಿ ತಾಲೂಕು ನಿಟ್ಟೂರು ಗ್ರಾಮದ ಲೇಟ್ ಸ್ವಾಮಿರ ಪುತ್ರ ಚಂದ್ರಶೇಖರ್ ಎನ್ ಎಸ್, ಮದ್ದೂರು ತಾಲೂಕು ಕೊಪ್ಪದ ಬೋರೇಗೌಡರ ಪುತ್ರ ಆಟೋ ಚಾಲಕ ಸುನಿಲ್ ಬಿ, ಹಾಗೂ ಪ್ರಕಾಶ್ ರವರ ಪುತ್ರ ಮರದ ವ್ಯಾಪಾರಿ ಕೆ ಪಿ ಉಲ್ಲಾಸ್ ಗೌಡ, ಆಬಲವಾಡಿ ಗ್ರಾಮದ ಲೇಟ್ ಮರಿಯಯ್ಯರ ಪುತ್ರ ಪ್ರತಾಪ ಎ ಎಂ,ಹಾಗೂ ಲೇಟ್ ಮರಿಯಪ್ಪರ ಪುತ್ರ ಆಟೋ ಚಾಲಕ ಕೆ ಎಂ ಅಭಿಷೇಕ್ ಮತ್ತು ಲೇಟ್ ಕೃಷ್ಣಪ್ಪ ರ ಪುತ್ರ ಕಾರು ಚಾಲಕ ಕೆ ಶ್ರೀನಿವಾಸ್, ರಾಮನಗರ ಜಿಲ್ಲೆಯ ಜಕ್ಕೇಗೌಡನ ದೊಡ್ಡಿ ಗ್ರಾಮದ ಹನುಮೇಗೌಡರ ಪುತ್ರ ಹರ್ಷ ಹಾಗೂ ಕೊಲೆಯಾದ ಕೃಷ್ಣೆಗೌಡನ ಅಣ್ಣ ಶಿವನಂಜೇಗೌಡನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಕೆ ಎಂ ದೊಡ್ಡಿ ಪೋಲಿಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಗೌಡನದೊಡ್ಡಿ ಗ್ರಾಮದಮಾದನಹಟ್ಟಿ ಅಮ್ಮನ ದೇವಸ್ಥಾನದ ಪಕ್ಕದಲ್ಲಿರುವ ಜಮೀನಿನಲ್ಲಿ ಅಪರಿಚಿತ ಮೂರು ಜನರು ಮಾರಕಾಸ್ತ್ರಗಳಿಂದ ಕೃಷ್ಣಗೌಡನನ್ನು ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು ಈ ಬಗ್ಗೆ ಶಂಕರೇಗೌಡ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ನಿಟ್ಟೂರು ಗ್ರಾಮದ ಚಂದ್ರಶೇಖರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯಾದ ಕೃಷ್ಣೆಗೌಡ ಸಾಲ ಮಾಡಿಕೊಂಡಿದ್ದು ಸಾಲವನ್ನು ಅಣ್ಣನಾದ ಗುಡ್ಡಪ್ಪ ಶಿವನಂಜೇಗೌಡ ತೀರಿಸಿದ್ದನು, ಇದಕ್ಕೆ ಪ್ರತಿಯಾಗಿ ತನ್ನ ಜಮೀನನ್ನು ಅತ್ತಿಗೆ ಹೆಸರಿಗೆ ಮಾಡಿಕೊಡಲಾಗಿತ್ತು, ಆದರೆ ಜಮೀನನ್ನು ಬಿಟ್ಟುಕೊಡದ ಕೃಷ್ಣೇಗೌಡ ಅಕ್ಕತಂಗಿಯರನ್ನು ಪುಸಲಾಯಿಸಿ ಜಮೀನು ವಿಚಾರದಲ್ಲಿ ಶಿವ ನಂಜೇಗೌಡನ ವಿರುದ್ಧ ಕೇಸು ದಾಖಲಿಸಿದ್ದನು, ಅಷ್ಟೇ ಅಲ್ಲದೆ ಶಿವ ನಂಜೇಗೌಡನ ವಿರುದ್ಧ ಮಾತನಾಡುತ್ತಾ ಅವಮಾನ ಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದನು ಇದರಿಂದ ರೊಚ್ಚಿಗೆದ್ದ ಅಣ್ಣ ತಮ್ಮನನ್ನೆ ಕೊಲೆ ಮಾಡಲು 5 ಲಕ್ಷ ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಕೊಲೆ ಪ್ರಕರಣದ ಆರೋಪಿಗಳ ಪತ್ತಗೆ ಜಿಲ್ಲಾ ಅಪರ ಪೋಲೀಸ್ ಅಧೀಕ್ಷಕರುಗಳಾದ .ಸಿ.ಇ ತಿಮ್ಮಯ್ಯ,ಎಸ್.ಇ. ಗಂಗಾಧರಸ್ವಾಮಿ. ಮಾರ್ಗದರ್ಶನದಲ್ಲಿ ಮಳವಳ್ಳಿ ಉಪ-ವಿಭಾಗದ ಡಿವೈಎಸ್.ಪಿ. .ವಿ ಕೃಷ್ಣಪ್ಪ ನೇತೃತ್ವದಲ್ಲಿ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೊಲೀಸ ಇನ್ ಸ್ಪೆಕ್ಟರ್ ಎಸ್.ಆನಂದ್, ಹೆಡ್ ಕಾನ್ಸ್ ಟೇಬಲ್ ಗಳಾದ ನಟರಾಜು, ಮಹೇಶ್, ರಾಜಶೇಖರ್, ರಾಜೇಂದ್ರ, ಶ್ರೀಕಾಂತ್, ಪೊಲೀಸ್ ಕಾನ್ಸ್ಟೇಬಲ್ಗಳಾದ ವಿಶ್ವಲ್ ಜೆ. ಕರಿಗಾರ, ಅರುಣ್, ಶ್ರೀಕಾಂತ್.ಅನಿಲ್ ಕುಮಾರ್, ಕೌಶಿಕ್, ಚಿರಂಜೀವಿ, ವಿಷ್ಣುವರ್ಧನ, ಕಿರಣ್ ಕುಮಾರ್, ರವಿಕಿರಣ್, ಲೊಕೇಶ್ ಮತ್ತು ವಾಸುದೇವ ರನ್ನು ಒಳಗೊಂಡ ತಂಡ ರಚನೆ ಮಾಡಲಾಗಿತ್ತು. ಸದರಿ ತಂಡದ ಅಧಿಕಾರಿಗಳು ಮತ್ತು ಸಿಬ್ಬಂಧಿಯವರ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
Mandya
ಮಂಡ್ಯ ತಾಲ್ಲೂಕು ಕಚೇರಿಗೆ ಡಿಸಿ ಅನಿರೀಕ್ಷಿತ ಭೇಟಿ: ಪರಿಶೀಲನೆ

ಮಂಡ್ಯ : ತಾಲ್ಲೂಕು ಕಚೇರಿಗೆ ಡಿಸಿ ಅನಿರೀಕ್ಷಿತ ಭೇಟಿ ನೀಡು ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ವೀಕರಿಸಿ ಕಾನೂನು ರೀತ್ಯ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ತಾಲ್ಲೂಕು ಕಚೇರಿಗೆ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಡತ ವಿಲೇವಾರಿ ಕುರಿತು ಮಾಹಿತಿ ಪಡೆದುಕೊಂಡು, ನಿಗದಿತ ಅವಧಿಯಲ್ಲಿ ಕಡತ ವಿಲೇವಾರಿಯಾಗಬೇಕು ಎಂದರು. ವಿನಾಕರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು ಎಂದು ಸೂಚನೆ ನೀಡಿದರು.
ಸಹಾಯವಾಣಿ: ಗ್ರಾಮ ಆಡಳಿತಾಧಿಕಾರಿಗಳ ಕೆಲಸ ಪ್ರಮುಖವಾಗಿದ್ದು, ಅವರು ಅನಿರ್ಧಿಷ್ಟ ಅವಧಿ ಮುಷ್ಕರ ಕೈಗೊಂಡಿರುವ ಹಿನ್ನಲೆ ವಿದ್ಯಾರ್ಥಿಗಳಿಗೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ತೊಂದರೆಯಾಗುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆನ್ ಲೈನ್ ಮೂಲಕ ಗ್ರಾಮ ಆಡಳಿತಾಧಿಕಾರಿಗಳಿಗೆ ಸಲ್ಲಿಸಿರುವ ಅರ್ಜಿಯನ್ನು ಕಂದಾಯ ನಿರೀಕ್ಷಕರ ಲಾಗ್ ಇನ್ ಗೆ ವರ್ಗಾಯಿಸಲಾಗಿದೆ.
ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುರ್ತಾಗಿ ಆದಾಯ ಅಥವಾ ಜಾತಿ ಪ್ರಮಾಣ ಪತ್ರ ಬೇಕಿದ್ದಲ್ಲಿ ನೀಡಲು ಸಹಾಯವಾಣಿ ಸಹ ತೆರೆಯಲಾಗಿದೆ ಎಂದರು.
ಜಿಲ್ಲಾಧಿಕಾರಿಗಳು ಕಡತಗಳ ಗಣಕೀಕರಣ ಕೆಲಸಗಳನ್ನು ಸಹ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮುಷ್ಕರ ನಿರತ ಗ್ರಾಮ ಆಡಳಿತಾಧಿಕಾರಿಗಳಿಂದ ಮನವಿ ಸ್ವೀಕರಿಸಿದರು.
-
Kodagu12 hours ago
ಯುವ ಕಾಂಗ್ರೆಸ್ಗೆ ನೀಡಿದ್ದ ರಾಜೀನಾಮೆ ಹಿಂಪಡೆದ ಅನೂಪ್ ಕುಮಾರ್
-
Mysore9 hours ago
ಲೋಕಾಯುಕ್ತ ಬಲೆಗೆ ಬಿದ್ದ ಬೆಟ್ಟದಪುರ ಸಬ್ ಇನ್ಸ್ಪೆಕ್ಟರ್ ಶಿವಶಂಕರ್
-
Kodagu9 hours ago
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ
-
Mandya9 hours ago
ಮತ್ತತ್ತಿ: ಕಾವೇರಿ ನದಿಯಲ್ಲಿ ಮುಳುಗಿ ಯುವತಿಯರು ಸಾ**ವು
-
Mandya11 hours ago
ಸಕ್ಕರೆ ಕಾರ್ಖಾನೆಗಳು ರೈತರಿಗೆ 14 ದಿನದೊಳಗಾಗಿ ಹಣ ಪಾವತಿ ಮಾಡಿ: ಡಾ.ಕುಮಾರ
-
Kodagu10 hours ago
ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದ ಡಾ ಮಂತರ್ ಗೌಡ
-
Mysore9 hours ago
ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಕೆ ಮಾಡಬೇಕು: ಪುರುಷೋತ್ತಮ ಬಿಳಿಮಲೆ
-
Hassan12 hours ago
ರಾಜ್ಯದಲ್ಲಿ ಕ್ಷುಲ್ಲಕ ರಾಜಕಾರಣಕ್ಕೆ ಪ್ರಾಶಸ್ತ್ಯ ಕೊಡುತ್ತಿದ್ದಾರೆ: ಎಚ್ಡಿಕೆ