Connect with us

Mandya

ಮಳವಳ್ಳಿ ಸಮಾವೇಶದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ

Published

on

ಮಂಡ್ಯ: ಮಳವಳ್ಳಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಎನ್ ಡಿಎ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಕಬ್ಬು, ಭತ್ತ ನಾಟಿ ಮಾಡಬೇಡಿ‌ ಅಂತಾ ಕಾಂಗ್ರೆಸ್ ಸರ್ಕಾರ ಹೇಳಿದೆ. ಕನ್ನಂಬಾಡಿ ಅಣೆಕಟ್ಟೆಯಲ್ಲಿ 98 ಅಡಿ ನೀರು ಇದ್ದಾಗ ನಾಟಿ ಮಾಡಬೇಡಿ ಎಂದವರು, ನೀನು ಕೊಟ್ಟ ಕೊಡುಗೆ ಏನು‌ ಅಂತಾರೆ. ನನ್ನ ಅಲ್ಪಾವಧಿಯಲ್ಲಿ ಮಂಡ್ಯ ಜನರಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ.
ಮಂಡ್ಯ ಜನರ ಋಣ ತೀರಿಸಲು ಕೆಲಸ ಮಾಡಿದ್ದೇನೆ. ಮಂಡ್ಯದಲ್ಲಿ ಬೆಳೆಗಳು ಒಣಗುತ್ತಿವೆ.*ಈ‌ ಸರ್ಕಾರಕ್ಕೆ ರೈತರ ಮೇಲೆ‌ ಕಿಂಚಿತ್ತು ಅನುಕಂಪ ಇಲ್ಲ.
ನಮ್ಮ ನೀರು ನಮ್ಮ ಹಕ್ಕು ಎಂದು ಬೆಂಗಳೂರಿನವರೆಗೆ ಹೋರಾಟ ಮಾಡಿದ್ರಿ. ನಮ್ಮ‌ ನೀರು ನಮ್ಮ ಹಕ್ಕು ಎಂದು ಹೋರಾಟ ಮಾಡಿದವರು ಎಲ್ಲಿ. ಈಗ ನಮ್ಮ ನೀರು ತಮಿಳುನಾಡು ಹಕ್ಕು ಎನ್ನುತ್ತಿದ್ದಾರೆ.

ದೇವೇಗೌಡರು ಈ ವಯಸ್ಸಿನಲ್ಲೂ ಸಂಸತ್‌ನಲ್ಲಿ‌ ಧ್ವನಿ ಎತ್ತಿದ್ದಾರೆ.
ಈಗ ಕಾಂಗ್ರೆಸ್ ಅವರು ಬಿಜೆಪಿ ಅವರು ಮೋದಿ ಭೇಟಿ ಮಾಡಿಸಿ ಅಂತಾರೆ. ಆಗಿದ್ರೆ ನೀವು ಯಾಕೆ ಅಧಿಕಾರಕ್ಕೆ ಬರಬೇಕಿತ್ತು, ನಮ್ಮ ನೀರು ನಮ್ಮ ಹಕ್ಕು ಎಂದು ಹೋರಾಟ ಯಾಕೆ ಮಾಡಬೇಕಿತ್ತು.

ಇಡೀ ದೇಶದಾದ್ಯಂತ ಮೋದಿ ಅವರು ಮತ್ತೆ ಪಿಎಂ ಆಗಬೇಕು ಅಂತಿದ್ದಾರೆ. ಅದೇ ಕಾರಣಕ್ಕೆ ದೇವೇಗೌಡರು ಮೋದಿ ಅವರ ಜೊತೆ ಕೈ ಜೊಡಿಸಲು ತೀರ್ಮಾನ ಮಾಡಿದ್ರು. ಕಾವೇರಿಗಾಗಿ ಹೋರಾಟ ಮಾಡಲು ನಾವು ಮೈತ್ರಿಯಾಗಿದ್ದೇವೆ. ನಾನು ಚುನಾವಣೆಗೆ ನಿಲ್ಲ ಬಾರದು ಅಂದುಕೊಂಡಿದ್ದೆ. ನನ್ನ ಆರೋಗ್ಯದ ದೃಷ್ಟಿಯಿಂದ ಸ್ಪರ್ಧೆ ಬೇಡಾ ಎಂದಿದ್ದೆ. ಮಂಡ್ಯ ಜನರ ಒತ್ತಾಯದಿಂದ ನಾನು ಸ್ಪರ್ಧೆ ಮಾಡಿದ್ದೇನೆ.

ಈ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸ್ಪರ್ಧೆ ಮಾಡಿದ್ದೇವೆ.
ದೇವೇಗೌಡರು ಆಗಿನಿಂದಲೂ ಕಾವೇರಿಗಾಗಿ ಹೋರಾಟ ಮಾಡಿದ್ದಾರೆ. ಮುಂದಿನ ಐದು ವರ್ಷದಲ್ಲಿ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ ಮಾಡುತ್ತೇವೆ. ಒಂದು ವೇಳೆ ಮೇಕೆದಾಟಿಗೆ ಶಂಕುಸ್ಥಾಪನೆ ಮಾಡಲಿಲ್ಲ ಅಂದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ.

ಈಗ ನನ್ನ ಮೇಲೆ‌ ಗೂಬೆ ಕೂರಿಸುತ್ತಿದ್ದಾರೆ. ನಾನು ಮಹಿಳೆ‌ ಎನ್ನುವ ಪದಗಳನ್ನು ಬಳಸಿಲ್ಲ.
ನಾನು ನನ್ನ ಹಳ್ಳಿಯ ತಾಯಂದಿರು ಎಂದು ಬಳಸಿದ್ದೇನೆ. ತಾಯಂದಿರಿಗೆ ನಾನು‌ ಗೌರವ ಕೊಡಲ್ವಾ. ನನ್ನ ತಾಯಂದಿರು ಸಾರಾಯಿ ನಿಷೇಧ ಮಾಡಿ ಎಂದ್ರು. ಆಗ ಹಣದ ಆಮಿಷ ಹೊಡ್ಡಿದ್ರು.
ನಾನು ತಾಯಂದಿರ ಬದುಕು ಚನ್ನಾಗಿ ಇರಬೇಕು ಎಂದು ಸಾರಾಯಿ‌ ನಿಷೇಧ ಮಾಡಿದೆ.
ಲಾಟರಿ‌ ಬ್ಯಾನ್ ಮಾಡಿದ್ದು ನಾನು.

ಕೆಲ ಕಾಂಗ್ರೆಸ್ ಮಹಿಳೆಯರು ಅದೇನೋ ಗೋ ಬ್ಯಾಕ್ ಅಂತಾ ಹಿಡಿದುಕೊಂಡಿದ್ದಾರೆ.
ಮಂಡ್ಯದ ಜನರು ನನ್ನನ್ನು ಕಂ ಬ್ಯಾಕ್, ಕಂ ಬ್ಯಾಕ್ ಅಂತಾ ಇದ್ದಾರೆ.
ಕಾಂಗ್ರೆಸ್ ಅವರು ಅಧಿಕಾರಕ್ಕೆ ಬರಲ್ಲ. ಅವರು ಗ್ಯಾರಂಟಿ ಕೊಡಲು ಅಪಾರ ದುಡ್ಡು ಬೇಕು. ಅದು ಸಾಧ್ಯವೇ ಇಲ್ಲ. ಕಾಂಗ್ರೆಸ್ ಅವರು ಟೋಪಿ‌ ಹಾಕುತ್ತಿದ್ದಾರೆ.

ನನ್ನ ತಾಯಂದಿರು‌ ಮೋಸ ಹೋಗಬೇಡಿ.
ಇದನ್ನೇ ತುಮಕೂರಿನಲ್ಲಿ‌ ನಾನು ಹೇಳಲು ಹೊರಟಿದ್ದು.
ಕಾಂಗ್ರೆಸ್ ಅವರು ಮಹಿಳೆಯರಿಗೆ 2 ಸಾವಿರಾ ಕೊಡ್ತಾರೆ. ಪುರುಷರ‌ ಬಳಿ 4 ರಿಂದ 6 ಸಾವಿರವನ್ನು ಪಿಕ್‌ಪ್ಯಾಕೆಟ್ ಮಾಡ್ತಾ ಇದ್ದಾರೆ.

ರಿಜಿಸ್ಟರ್ ಆಫೀಸ್‌ನಲ್ಲಿ ಅಪಾರ ದುಡ್ಡು ವಸೂಲಿ ಮಾಡ್ತಾ ಇದ್ದಾರೆ.
ಇದರ ಬಗ್ಗೆ ಎಚ್ಚೆತ್ತುಕೊಳ್ಳಿ ಎಂದು‌ ಹೇಳಿದೆ ಎಂದು ನುಡಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ, ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ಎಂ.ಉದಯ್‌

Published

on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೊಂಬಾಳೆಗೌಡನದೊಡ್ಡಿ ಗ್ರಾಮದ ನಾಲೆ ಹಾಗೂ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಕಾರ್ಯಕ್ರಮದ ನಂತರ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮ ನಿಯಮಿತದ ಕೆರಗೋಡು ಶಾಖಾ ನಾಲೆಯಡಿಯಲ್ಲಿ ಬರುವ ಬೆಸಗರಹಳ್ಳಿ ಕೆರೆಯ ಹೆಚ್‌ಎಲ್‌ಸಿ ಕಾಲುವೆ ಅಭಿವೃದ್ಧಿ ಮತ್ತು 21ನೇ ನಾಲೆಗೆ ಹೋಗುವ ಅಚ್ಚುಕಟ್ಟು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 499.50 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಾಗಿ  ತಿಳಿಸಿದರು.

ಸದರಿ ನಾಳೆ ಮತ್ತು ರಸ್ತೆ ಅಭಿವೃದ್ಧಿಯಿಂದ ಈ ಭಾಗದ ರೈತರಿಗೆ ನೀರಿನ ಸುಗಮ ಲಭ್ಯತೆ, ಜಲಾನಯನ ವ್ಯವಸ್ಥೆಯ ಸುಧಾರಣೆ, ರೈತೋದ್ಯಮಕ್ಕೆ ನೆರವು, ಸ್ಥಳೀಯರ ಸಂಚಾರಕ್ಕೆ ಉತ್ತಮ ರಸ್ತೆ ವ್ಯವಸ್ಥೆ ದೊರಕುವುದಾಗಿ  ಎಂದರು.

ನಮ್ಮ ಗ್ರಾಮ ನಮ್ಮ ಅಭಿವೃದ್ಧಿ ಎಂಬ ಧ್ಯೇಯದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು ಗ್ರಾಮದ ಎಲ್ಲಾ ಮುಖ್ಯಸ್ಥರು ಹಾಗೂ ರೈತರುಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಕಿವಿಮಾತು ಹೇಳಿದರು.

ಈ ವೇಳೆ ಮನಮುಲ್ ನಿರ್ದೇಶಕ ಹರೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ. ಗ್ರಾ.ಪಂ.ಸದಸ್ಯ ಬಾಬು ಸೇರಿದಂತೆ ಮುಖಂಡರುಗಳು ಹಾಜರಿದ್ದರು.

Continue Reading

Mandya

ಅಕ್ರಮವಾಗಿ ಮಧ್ಯ ಮಾರಾಟ, ಗ್ರಾಮಸ್ಥರಿಂದ ಪ್ರತಿಭಟನೆ.

Published

on

ಕೆ.ಆರ್.ಪೇಟೆ : ತಾಲ್ಲೂಕಿನ ಚೌಡಸಮುದ್ರ ಗ್ರಾಮದಲ್ಲಿ ಎಗ್ಗಿಲ್ಲದೆ, ಅಕ್ರಮವಾಗಿ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ನಡೆಯುತ್ತಿದ್ದು ತಡೆಯುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟಿಸಿದರು.

ಗ್ರಾಮದಲ್ಲಿ ಅಕ್ತಮವಾಗಿ ಮದ್ಯ ಮಾರಾಟವಾಗುತ್ತಿರುವುದರಿಂದ ಕುಡಿತದ ಚಟಕ್ಕೆ ಬಿದ್ದು ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ. ಗ್ರಾಮದಲ್ಲಿ ಜನರ ಅಶಾಂತಿಗೆ ಕಾರಣವಾಗಿರುವ ಅಕ್ರಮ ಮದ್ಯದಂಗಡಿಯನ್ನು ಮುಚ್ಚಿಸಿ, ಗ್ರಾಮಸ್ಥರ ವಿರೋಧದ ನಡುವೆಯೂ ರಾಜಾ ರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ಕಿಡಿಗೇಡಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲೂಕು ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಪ್ರಭಾವಿ ವ್ಯಕ್ತಿಯೊಬ್ಬರು ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿದ್ದು, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮದಲ್ಲಿ ಹಲವು ಬಾರಿ ನ್ಯಾಯ ಮಾಡಿ, ಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರೂ ಅಕ್ರಮ ಮಧ್ಯ ಮಾರಾಟ ನಿಂತಿಲ್ಲ. ಅಬಕಾರಿ ಅಧಿಕಾರಿಗಳು ಹಾಗೂ ಪೋಲೀಸರ ಕುಮ್ಮಕ್ಕಿನಿಂದಲೇ ಅಕ್ರಮವಾಗಿ ಮಧ್ಯ ಮಾರಾಟ ನಡೆಯುತ್ತಿದೆ ಎಂದು ಗ್ರಾಮಸ್ಥರು ಕಿಡಿ ಕಾರಿದರು.

ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟದಿಂದ ಕುಡಿತದ ಚಟಕ್ಕೆ ಗ್ರಾಮದ ಕೆಲ ಜನರು ಹಾಗೂ ಯುವಕರು ದಾಸರಾಗಿ, ಪ್ರತಿನಿತ್ಯವೂ ಗ್ರಾಮದಲ್ಲಿ ಗಲಾಟೆ ಗದ್ದಲಗಳು ನಡೆಯುತ್ತಿವೆ. ಗ್ರಾಮದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರು ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಅಕ್ರಮ ಮದ್ಯ ಮಾರಾಟದ ಅಡ್ಡೆಯ ಮೇಲೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಮಧ್ಯದ ಮಾರಾಟವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಕಂಡಕ್ಟರ್ ಶಿವಮೂರ್ತಿ, ರೇವಣ್ಣ, ಚಂದ್ರು, ಗೀತಾ, ಶಿವಪ್ಪ, ಗ್ರಾ.ಪಂ ಸದಸ್ಯ ಶಿವಕುಮಾರ್, ಬಿ.ಎಸ್. ಕುಮಾರಿ, BSNL ಶಿವಣ್ಣ, ಟೈಲರ್ ಲೋಕೇಶ್, ರಾಜಣ್ಣ, ಪುಟ್ಟರಾಜು, ರವಿ, ಅಣ್ಣಯ್ಯಣ್ಣ, ಮಹೇಶ್, ಮಂಜುನಾಥ್,ರತ್ನಮ್ಮ, ಅಕ್ಕಯಮ್ಮ, ಮಧು, ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Mandya

ಬಾಲಕಿ ಮೇಲೆ ̇ಲೈಂ*ಗಿಕ ದೌರ್ಜನ್ಯ : ಅಪರಾಧಿಗೆ ಜೀವಾವಧಿ ಶಿಕ್ಷೆ

Published

on

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಗ್ರಾಮವೊಂದರಲ್ಲಿ ಮೂರುವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಮಂಡ್ಯ 2ನೇ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಣ್ಣ ಬಿನ್ ಲೇಟ್ ಚಿಕ್ಕಣ್ಣ (59 ವರ್ಷ) ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದು, ಆತ ಡಿ.11, 2023 ರಂದು ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಅಮ್ಮನಿಗೆ ಹೇಳಬಾರದು ಎಂದು ಬೆದರಿಕೆ ಹಾಕಿದ್ದ ಎನ್ನುವುದು ಸಾಬೀತಾಗಿದೆ.

ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೆ.ಆ‌ರ್.ಎಸ್ ಪೊಲೀಸ್‌ ಠಾಣೆಯಲ್ಲಿ ಪೋಕ್ಸ್‌ ಕಾಯಿದೆ ಅಡಿ ಅಂದಿನ ಪಿ.ಎಸ್.ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಕೈಗೊಂಡಿದ್ದರು.

ಈ ಹಿಂದೆ ಕೆ.ಆರ್.ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೆ.ಆ‌ರ್.ಸಾಗರ ಠಾಣೆಯ ಪಿ.ಎಸ್.ಐ ರಮೇಶ್ ಕರಕೀಕಟ್ಟಿ ಹಾಗೂ ಸಿಬ್ಬಂದಿಯವರಾದ ಎ.ಎಸ್.ಐ ಸತೀಶ್, ಹೆಚ್.ಸಿ. ಯವರಾದ ಯಧುರಾಜ್‌, ಸಿ.ಪಿ.ಸಿಯವರಾದ ರೇಣುಕುಮಾ‌ರ್, ಅಶ್ವಿನಿ, ಪುಟ್ಟಲಕ್ಷ್ಮಿ ಅವರು ಈ ತನಿಖಾ ತಂಡದಲ್ಲಿದ್ದರು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಿಲೀಪ್ ಕುಮಾರ್ ಅವರು ಇಂದು (ಜೂ11) ಆರೋಪಿಗೆ ಜೀವಿತಾವಧಿ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಅವರು ಸಂತ್ರಸ್ಥರ ಪರ ವಾದ ಮಂಡಿಸಿದ್ದು, ಕೆ.ಆ‌ರ್.ಸಾಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಮಂಡ್ಯ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

Trending

error: Content is protected !!