Connect with us

Mandya

ಎಚ್‌.ಡಿ.ಕುಮಾರಸ್ವಾಮಿ ಅವರಿಂದ ನಾಮಪತ್ರ ಸಲ್ಲಿಕೆ

Published

on

ಹೈವೋಲ್ಟೇಜ್‌ಗೆ ಸಾಕ್ಷಿಯಾದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಸಭೆ

ಚುನಾವಣಾ ಕಣದಲ್ಲಿ ಎಚ್ಡಿ ಇನ್ಶಿಯಲ್‌ ಇರುವ ಹಾಸನದ ಅಭ್ಯರ್ಥಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮೂಲಕ ತಮ್ಮ ಅಪಾರ ಬೆಂಬಲಿಗರು ಮತ್ತು ಅಭಿಮಾನಿಗಳೊಂದಿಗೆ ಮೈತ್ರಿ ಸಭೆ ನಡೆಸಿ ಹೈವೋಲ್ಟೇಜ್‌ ರಣಾಂಗಣವಾಗಿ ಗುರುವಾರ ಅಲೆ ಎಬ್ಬಿಸಿದರು.

ಮಂಡ್ಯ ಹೇಳಿ ಕೇಳಿ ದೇಶದಲ್ಲಿಯೇ ಗಮನ ಸೆಳೆದ ಕ್ಷೇತ್ರವೆಂದರೆ ತಪ್ಪಲ್ಲ, ಅಂತಹ ಮಂಡ್ಯದಲ್ಲಿ ಯಾವುದೇ ರೀತಿಯ ಮೆರವಣಿಗೆ ನಡೆಸದೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಅವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ನೀಡಿದರು.

ಇದಕ್ಕೂ ಮುನ್ನ ನಗರದ ಗುತ್ತಲು ಶ್ರೀ ಅರ್ಕೇಶ್ವರಸ್ವಾಮಿ, ಹಳೇನಗರದಲ್ಲಿರುವ ಶ್ರೀ ಲಕ್ಷ್ಮೀಜನಾರ್ದನಸ್ವಾಮಿ ಹಾಗೂ ನಗರದ ಶಕ್ತಿದೇವತೆ ಶ್ರೀ ಕಾಳಿಕಾಂಬ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಜಿಲ್ಲಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಲು ತೆರಳಿದ್ದು ವಿಶೇಷ ಎನಿಸಿತ್ತು.

ಒಂದೇ ಇನ್ಶಿಯಲ್‌ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಕೋಡಿಹಳ್ಳಿ ಗ್ರಾಮದ ದೊಡ್ಡೇಗೌಡ ಅವರ ಮಗ ಎಚ್.ಡಿ.ರೇವಣ್ಣ ಎಂಬವರು ಪೂರ್ವಾಂಚಲ್‌ ಮಹಾ ಪಂಚಾಯತ್‌ ಪಾರ್ಟಿಯಿಂದ ಸ್ಪರ್ಧೆ ಬಯಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು. ಇದರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ಎಚ್‌.ಡಿ. ಎಂಬ ಇನ್ಶಿಯಲ್‌ ಇರುವುದನ್ನು ಕಾಣಬಹುದು.

Continue Reading
Click to comment

Leave a Reply

Your email address will not be published. Required fields are marked *

Mandya

ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

Published

on

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.

Continue Reading

Mandya

ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

Published

on

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.

ಎಸ್‌.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.

ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Continue Reading

Mandya

ಜೆ.ಡಿ.ಎಸ್ ತೆಕ್ಕೆಗೆ ಹುಲಿಕೆರೆ ಪಂಚಾಯಿತಿ

Published

on

ನಾಗಮಂಗಲ : ಹುಲಿಕೆರೆ ಗ್ರಾಮ ಪಂಚಾಯಿತಿಯ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವರಾಮು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡು ನಾಮಪತ್ರ ಸಲ್ಲಿಕೆಯಾಗಿದ್ದು ಕಾಂತರಾಜು ಗೆ ಮೂರು ಮತಗಳು ಹಾಗೂ ಸುಮಾ ಚೇತನ್ ಕುಮಾರ್ ರವರಿಗೆ 9 ಮತಗಳ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾದ ಸತೀಶ್ ರವರು ಘೋಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುಮ ಚೇತನಕುಮಾರ್ ರವರು ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ ಹುಲಿಕೆರೆ ಗ್ರಾಮ ಪಂಚಾಯಿತಿಯು ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಹೆಸರು ಪಡೆದಿರುವಂತಹ ಪಂಚಾಯಿತಿ. ಇಲ್ಲಿ ನಾನು ಅಧ್ಯಕ್ಷರಾಗಿರುವುದಕ್ಕೆ ಸಂತಸದ ವಿಚಾರ ನನ್ನ ಆಯ್ಕೆ ಮಾಡಿದ ಪಂಚಾಯತಿ ಆತ್ಮೀಯ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟು ಈ ಹುದ್ದೆಯನ್ನು ನೀಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಗ್ರಾಮೀಣ ಪ್ರದೇಶದ ಕುಡಿಯುವ ನೀರು ರಸ್ತೆ ಮತ್ತು ವಿದ್ಯುತ್ ದೀಪಕ್ಕೆ ಮೊದಲನೇ ಆದ್ಯತೆ ನೀಡಿ ಮಹಾತ್ಮ ಗಾಂಧಿಯ ನರೇಗಾ ಯೋಜನೆಗೆ ಉತ್ತಮ ರೀತಿ ನಿರ್ವಹಣೆ ಮಾಡಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು.

ಇದೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತೆ ಮುಖಂಡರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು

ಗ್ರಾಮ ಪಂಚಾಯತಿ ಸದಸ್ಯರಾದ ತಿಮ್ಮೇಗೌಡ. ಲಕ್ಷ್ಮೀದೇವಮ್ಮ. ಶಿವಲಿಂಗಯ್ಯ. ಮಂಜುಳ. ತಿಮ್ಮೇಗೌಡ. ದಿನೇಶ್ ಕಲ್ಲೇನಹಳ್ಳಿ. ನರಗನಹಳ್ಳಿ ದೇವೇಗೌಡ.ಪುರಸಭೆ ಸದಸ್ಯ ಶಂಕರ್ಲಿಂಗೇಗೌಡ. ಪಡುವಲ ಪಟ್ಟಣ ಪುಟ್ಟರಾಜು.ಎಂ ಎನ್ ಸುರೇಶ್ ಜವರೇಗೌಡ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.

Continue Reading

Trending

error: Content is protected !!