Connect with us

Health

ಆಧುನಿಕ ಜೀವನ ಶೈಲಿಯಿಂದಾಗಿ ಕಾಯಿಲೆ ಹೆಚ್ಚಳ : ಸಂಸದ ಡಾ.ಸಿ.ಎನ್ ಮಂಜುನಾಥ್

Published

on

ಮಂಡ್ಯ : ಇಂದಿನ ದಿನಗಳಲ್ಲಿ ಹೃದಯ ಮತ್ತು ಮಧುಮೇಹದಂತಹ ಕಾಯಿಲೆಗಳು ಹೆಚ್ಚಾಗಲು ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿಯೇ ಕಾರಣವಾಗಿದೆ. ಭಾರತ ದೇಶವು ಹೃದಯ ಮತ್ತು ಮಧುಮೇಹ ರೋಗದ ರಾಜಧಾನಿಯಾಗಿ ಮಾರ್ಪಟ್ಟಿದೆ ಎಂದು ಖ್ಯಾತ ಹೃದಯ ತಜ್ಞರೂ ಆದ ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.ಮಂಡ್ಯ ನಗರದ ಸ್ಪಂದನ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕ್ಯಾತ್‌ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆಲ್ಲ ಶ್ರಮದಾನದ ಮೂಲಕ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದರು. ಅದೇ ರೀತಿ ಒಳ್ಳೆಯ ಆಹಾರವನ್ನು ತೆಗೆದುಕೊಳ್ಳುತ್ತಿದ್ದರು. ಅಂದು ಪಟೇಲರು, ಶ್ಯಾನುಬೋಗರು ಸೇರಿದಂತೆ ಸಿರಿವಂತರ ಕಾಯಿಲೆ ಎನ್ನುತ್ತಿದ್ದರು. ಆದರೆ ಇಂದು ಬಡವರು, ಕೂಲಿ ಕಾರ್ಮಿಕರಿಗೂ ಈ ರೋಗ ಬರುತ್ತಿದ್ದು, ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಪ್ರತಿಯೊಬ್ಬರೂ ಕೆಲಸ ಮಾಡುವ ಮೂಲಕ ಇಂತಹ ರೋಗಗಳಿಂದ ದೂರ ಇರಬೇಕು. ನಡಿಗೆಯನ್ನು ರೂಢಿಸಿಕೊಳ್ಳಬೇಕು. ಸಂಗಾತಿ ಎಂದರೆ ಜೀವನ ಸಂಗಾತಿಯಲ್ಲ. ಸಂಗಾತಿ ಎಂದರೆ ನಮ್ಮ ದೇಹ. ಅದು ನಮ್ಮ ಉಸಿರು ಇರುವವರೆಗೂ ನಮ್ಮ ಜೊತೆಯೇ ಇರುತ್ತದೆ. ಇಂತಹ ಸಂಗಾತಿಯನ್ನು ಅಚ್ಚುಕಟ್ಟಾಗಿ ಯಾವುದೇ ರೋಗಗಳಿಲ್ಲದಂತೆ ಕಾಪಾಡಿಕೊಳ್ಳುವುದು ಅತ್ಯಗತ್ಯ. ಪ್ರತಿದಿನ ಒಂದು ಗಂಟೆಯಾದರೂ ನಡಿಗೆಯನ್ನು ಮಾಡವುದು ಒಳಿತು. ನಾನು ನಿನಗಾಗಿ ಜೀವನ ಪರ್‍ಯಂತ ಇರುತ್ತೇನೆ ಎನ್ನುವ ರೀತಿ ಹೃದಯ ಕೆಲಸ ಮಾಡುತ್ತದೆ. ಅದನ್ನು ಮನವರಿಕೆ ಮಾಡಿಕೊಂಡು ಪ್ರತಿನಿತ್ಯ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಹೃದಯ ಸಮಸ್ಯೆಯಿಂದ ಸ್ವಲ್ಪವಾದರೂ ದೂರ ಇರಬಹುದು ಎಂದರು.ಹೃದಯಾಘಾತವಾದಲ್ಲಿ ತಕ್ಷಣ ಅವರಿಗೆ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಕನಿಷ್ಟ 3 ರಿಂದ 6 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ಸಿಕ್ಕಲ್ಲಿ ಅವರು ಬದುಕುವ ಸಾಧ್ಯತೆಗಳಿವೆ. 12 ಗಂಟೆಯಾದಲ್ಲಿ ಶೇ. 7ರಷ್ಟು ಮಾತ್ರ ಬದುಕುವ ಸಾಧ್ಯತೆಗಳಿರುತ್ತವೆ. ಚಿಕಿತ್ಸೆ ದೊರೆಯುವುದು ವಿಳಂಬವಾದಲ್ಲಿ ಸಾವಿನ ಸಾಧ್ಯತೆಯೂ ಹೆಚ್ಚಾಗುತ್ತದೆ. ಇದನ್ನು ಮನಗಂಡು ನಾನು ಇತ್ತೀಚೆಗೆ ಸಂಸತ್ತಿನಲ್ಲಿ ಪ್ರತೀ 50 ಕಿ.ಮೀ.ಗೊಂದರಂತೆ ಹೃದಯ ಚಿಕಿತ್ಸೆ ನೀಡುವಂತಹ ಆಸ್ಪತ್ರೆಗಳನ್ನು ತೆರೆಯುವುದು ಅಗತ್ಯ ಎಂದು ಪ್ರತಿಪಾದಿಸಿದ್ದೇನೆ ಎಂದು ತಿಳಿಸಿದರು.

ಮಂಡ್ಯದಂತಹ ನಗರಕ್ಕೆ ಹೃದಯ ಚಿಕಿತ್ಸೆ ನೀಡುವಂತಹ ಆಸ್ಪತ್ರೆಯ ಆಗತ್ಯತೆ ಇದೆ. ಕಾರ್ಡಿಯಾಕ್ ಕ್ಯಾತ್‌ಲಾಗ್ ಬೇಕಾಗಿದೆ. ನಮ್ಮ ದೇಶದಲ್ಲಿ ಮೂರೂವರೆ ಸಾವಿರ ಇಂತಹ ಘಟಕಗಳಿವೆ. ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಟ ಆರೂವರೆ ಸಾವಿರ ಕಾರ್ಡಿಯಾಕ್ ಕ್ಯಾತ್‌ಲಾಗ್ ಆಸ್ಪತ್ರೆಗಳ ಅಗತ್ಯತೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನ ಸಳೆಯುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.ನಾವು ಮೈಸೂರಿನಲ್ಲಿ ಜಯದೇವ ಕೇಂದ್ರವನ್ನು ತೆರೆದಿದ್ದೆವು. ಇದರೊಂದಿಗೆ 45 ಕಡೆಗಳಲ್ಲಿ ಇಂತಹ ವ್ಯವಸ್ಥೆ ರೂಪಿಸಿದ್ದು, ಮೈಸೂರು ವಿಭಾಗದಲ್ಲಿ 15, ಬೆಂಗಳೂರು ವಿಭಾಗದಲ್ಲಿ 15 ಹಾಗೂ ಗುಲ್ಬರ್ಗಾ ವಿಭಾಗದಲ್ಲಿ 15 ಆಸ್ಪತ್ರೆಗಳಲ್ಲಿ ಹೃದಯ ತಪಾಸಣಾ ಘಟಕಗಳನ್ನು ಸ್ಥಾಪಿಸಿದ್ದೇವೆ ಎಂದರು.ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆದಿತ್ಯ, ಹೃದ್ರೋಗ ತಜ್ಞೆ ಡಾ.ದೀಪ್ತಿ ಮಂಗೇಶ್, ಸ್ತ್ರೀ ರೋಗತಜ್ಞೆ ಡಾ. ಶ್ರೀಕಲಾ, ಡಾ.ರವೀಂದ್ರನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Health

ಜಂಕ್ ಫುಡ್ ತ್ಯೆಜಿಸಿ, ಪೌಷ್ಟಿಕ ಆಹಾರ ಸೇವಿಸಿ : ಎಸ್.ಡಿ.ಬೆನ್ನೂರ್

Published

on

ಶ್ರೀರಂಗಪಟ್ಟಣ : ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರ ಅಗತ್ಯವಾಗಿದ್ದು ಹಾಗಾಗಿ ಜಂಕ್ ಫುಡ್ ತ್ಯಜಿಸಿ ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಸೇವಿಸಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ”ದಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳಿಗೆ “ಪೌಷ್ಠಿಕ ಆಹಾರದ ಮಹತ್ವ ಹಾಗೂ ವೈಯಕ್ತಿಕ ಅರೋಗ್ಯದ ಬಗ್ಗೆ” ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ದೇಹದ ಬೆಳವಣಿಗೆಗೆ,ಮಾಸ ಖಂಡಗಳ ನಿರ್ಮಾಣಕ್ಕೆ,ರಕ್ತ ಉತ್ಪಾದನೆಗೆ, ಮೂಳೆಗಳ ತಯಾರಿಗೆ ಹಾಗೂ ಉತ್ತಮ ಅರೋಗ್ಯಕ್ಕೆ ಪೌಷ್ಠಿಕ ಆಹಾರ ಅಗತ್ಯವಾಗಿ ಬೇಕು. ರಕ್ತ ಹೀನತೆಯಿಂದ ನಾನಾ ಖಾಯಿಲೆಗಳು ಬರುತ್ತವೆ ಮತ್ತು ಕಲಿಕೆಯಲ್ಲಿ ಗ್ರಹಿಕಾ ಶಕ್ತಿ ಕಡಿಮೆಯಾಗಿ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ ಹಾಗಾಗಿ ರಕ್ತ ಹೀನತೆ ಅಲಕ್ಷ ಬೇಡ ಕಬ್ಬಿಣಾಂಶ ಕೊರತೆಯಿಂದ ಹಿಮೊಗ್ಲೋಬಿನ್ ಕಡಿಮೆಯಾಗುತ್ತದೆ ಇದರಿಂದ ಸುಸ್ತು,ಆಯಾಸ ಆಗುತ್ತದೆ ಆದ್ದರಿಂದ ಸಕ್ಕರೆ,ಜ್ಯೂಸ್,ತಂಪು ಪಾನೀಯಗಳು, ಸಿಹಿ ತಿಂಡಿ, ಖರಿದ ಮತ್ತು ಎಣ್ಣೆ ಪದಾರ್ಥಗಳು ತಿನ್ನದಿರುವುದು ಒಳ್ಳೆಯದು. ಹಾಲು ಮತ್ತು ಹಾಲಿನ ಉತ್ಪನ್ನಗಳು,ಮಾಂಸ, ಮೀನು ಮತ್ತು ಮೊಟ್ಟೆ ಮಿತವಾಗಿ ಬಳಸಬೇಕು. ತರಕಾರಿ ಮತ್ತು ಹಣ್ಣುಗಳು ನಿಯಮಿತವಾಗಿ ಸೇವಿಸಿ ಚಪಾತಿ, ಅನ್ನ, ರಾಗಿ ಮುದ್ದೆ ದವಸ ಮತ್ತು ಧಾನ್ಯಗಳನ್ನು ಹೆಚ್ಛಾಗಿ ತೆಗೆದು ಕೊಳ್ಳಬಹುದಾದ ಆಹಾರಗಳಾಗಿವೆ. ಆದ್ದರಿಂದ ದಿನನಿತ್ಯ ಪೌಷ್ಟಿಕ ಆಹಾರ ತಪ್ಪದೇ ಸೇವನೆ ಮಾಡಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.

ನಂತರ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ ಟಿ ಜ್ಯೋತಿ ಮಕ್ಕಳಿಗೆ ವೈಯಕ್ತಿಕ ಶುಚಿತ್ವದ ಕುರಿತು ಹಾಗೂ ಕೈ ತೊಳೆಯುವ ವೈಜ್ಞಾನಿಕ ವಿಧಾನಗಳ ಕುರಿತು ಆರೋಗ್ಯ ಶಿಕ್ಷಣ ನೀಡಿದರು. ಈ ವೇಳೆ ಗ್ರಂಥಾಲಯ ಮೇಲ್ವಿಚಾರಕಿ ಪುಷ್ಪಲತಾ,
ಸಮುದಾಯ ಆರೋಗ್ಯ ಅಧಿಕಾರಿ ಉಷಾ, ಆಶಾ ಕಾರ್ಯಕರ್ತೆ ಜ್ಯೋತಿ ಉಪಸ್ಥಿತರಿದ್ದರು.

Continue Reading

Health

ತೋಟಗಾರಿಕೆ ಇಲಾಖೆಯಲ್ಲಿ ಯುವಕರಿಗೆ ಶಿಷ್ಯವೇತನದ ಜೊತೆಗೆ ಉಚಿತ 10 ತಿಂಗಳ ತರಬೇತಿ : ಅರ್ಜಿ ಅಹ್ವಾನ

Published

on

Free Training by Horticulture Department : ರಾಜ್ಯ ತೋಟಗಾರಿಕೆ ಇಲಾಖೆಯು 2025 – 26 ನೇ ಸಾಲಿಗೆ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ವೈಜ್ಞಾನಿಕವಾಗಿ ಉತ್ತಮ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಹಾಗೂ ಆರ್ಥಿಕವಾಗಿ ಸಬಲರಾಗಲು ಅವಶ್ಯವಿರುವ ತರಬೇತಿಯನ್ನು ಯುವಕರಿಗೆ ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಿದೆ.

ಉಚಿತ ತರಬೇತಿ ಯೋಜನೆಯ ವಿವರ :

ಈ ಉಚಿತ ತರಬೇತಿಯನ್ನು ಒಟ್ಟು 10 ತಿಂಗಳ ಅವಧಿಯವರೆಗೆ ನೀಡಲಾಗುವುದು. ತರಬೇತಿಯು ಮೇ 02, 2025 ರಿಂದ ಆರಂಭವಾಗಲಿದೆ. ವಿಶೇಷವೇನೆಂದರೆ ಈ ಉಚಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ 1,750ರೂ. ಶಿಷ್ಯವೇತನವನ್ನು ನೀಡಲಾಗುತ್ತದೆ.

ಯಾರು ಅರ್ಜಿ ಸಲ್ಲಿಸಬಹುದು?

ತೋಟಗಾರಿಕೆ ಇಲಾಖೆಯ ಈ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಕೇವಲ ರೈತರ ಮಕ್ಕಳಿಗೆ ಮಾತ್ರ ಅವಕಾಶವಿದೆ. ಅದೇ ರೀತಿ ಕನಿಷ್ಠ 10ನೇ ತರಗತಿ ಪಾಸಾಗಿರಬೇಕು ಹಾಗೂ 18 ರಿಂದ 30 ವರ್ಷದ ವಯೋಮಿತಿಯಲ್ಲಿರಬೇಕು. ಮೀಸಲಾತಿ ಕೋರುವ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

 

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವಾಗ?

ಅರ್ಜಿ ಸಲ್ಲಿಸಲು ನೀವು ಅರ್ಹತೆ ಹೊಂದಿದ್ದಲ್ಲಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಅಥವಾ ಆನ್ಲೈನ್ ಮೂಲಕ ಅರ್ಜಿ ಫಾರಂ ಪಡೆದು ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ, ” ತೋಟಗಾರಿಕೆ ಉಪ ನಿರ್ದೇಶಕರು ಜಿಲ್ಲಾ ಪಂಚಾಯತ್ ಧಾರವಾಡ ಕಚೇರಿಗೆ” ಸಲ್ಲಿಸಬೇಕು.

ತೋಟಗಾರಿಕೆ ಇಲಾಖೆಯ ಅಧಿಕೃತ ಜಾಲತಾಣ : https://horticulturedir.karnataka.gov.in/

Continue Reading

Health

ಕಡಿಮೆ ದರಕ್ಕೆ ಸಿಗುತ್ತದೆ ಎಂದು ಈ ಎಣ್ಣೆಯನ್ನು ಅಡುಗೆ ಮಾಡಲು ಬಳಸಿದರೆ ಕ್ಯಾನ್ಸರ್, ಶುಗರ್ ಬರುವುದು ಖಂಡಿತ

Published

on

Effects of Refined Oil in food : ಅನೇಕ ಜನರು ಅಡುಗೆ ಮಾಡಲು ಕಡಿಮೆ ದರಕ್ಕೆ ಸಿಗುತ್ತದೆ ಅಥವಾ ಅದರ ಬಗ್ಗೆ ಅರಿವಿಲ್ಲದ ಕಾರಣದಿಂದಾಗಿ ಸಂಸ್ಕರಿಸಿದ ಎಣ್ಣೆಯನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.

ಈ ಲೇಖನದಲ್ಲಿ ಸಂಸ್ಕರಿಸಿದ ಎಣ್ಣೆ ಎಂದರೇನು? ಯಾವೆಲ್ಲಾ ಸಂಸ್ಕರಿಸಿದ ಎಣ್ಣೆಯ ಅಡಿಯಲ್ಲಿ ಬರುತ್ತವೆ? ಹಾಗಿದ್ದರೆ ಅಡುಗೆ ಮಾಡಲು ಯಾವ ಎಣ್ಣೆ ಬಳಸಿದರೆ ಉತ್ತಮ ಎಂದು ಈ ಲೇಖನದಲ್ಲಿ ತಿಳಿಸಳಿದ್ದೇವೆ.

ಸಂಸ್ಕರಿಸಿದ ಎಣ್ಣೆ ಎಂದರೇನು?

ನೈಸರ್ಗಿಕ ತೈಲದ ಸಂಸ್ಕರಿತ ರೂಪವೆ ಸಂಸ್ಕರಿಸಿದ ತೈಲ ಅಥವಾ ಇಂಗ್ಲಿಷ್ ನಲ್ಲಿ ಇದನ್ನು Refined Oil ಎಂದು ಕರೆಯಲಾಗುತ್ತದೆ. ಗ್ರಾಹಕರ ನಿರೀಕ್ಷೆಗಳನ್ನು ಪೂರೈಸುವ ಉದ್ದೇಶದಿಂದ ನೈಸರ್ಗಿಕ ತೈಲವನ್ನು ಹಲವಾರು ರಾಸಾಯನಿಕಗಳೊಂದಿಗೆ ಸಂಸ್ಕರಿಸಿ, ದೀರ್ಘಾವಧಿಯ ಜೀವಿತಾವಧಿಯೊಂದಿಗೆ ವಾಸನೆ-ಮುಕ್ತ & ಸುವಾಸನೆ-ಮುಕ್ತ ತೈಲವಾಗಿ ಇದನ್ನು ತಯಾರಿಸಲಾಗುತ್ತದೆ.

ಸಂಸ್ಕರಣೆಯ ಮಾಡುವ ಪ್ರಕ್ರಿಯೆಯಲ್ಲಿ ಇದಕ್ಕೆ ಅಧಿಕ ತಾಪಮಾನ ಕೊಡುವುದರಿಂದ ಅದರಲ್ಲಿರುವ ಎಲ್ಲಾ ಮೌಲ್ಯವಾದ ಅಂಶಗಳು ಕಳೆದು ಹೋಗುತ್ತವೆ. ಜೊತೆಗೆ ಇದರಲ್ಲಿ ಕೆಟ್ಟ LDL ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್‌ಗಳು ಹಾಗೂ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸಬಹುದಾದ ಟ್ರಾನ್ಸ್ ಕೊಬ್ಬಿನ ಪ್ರಮಾಣಗಳನ್ನು ಹೆಚ್ಚಿಸುತ್ತದೆ.

ಸಂಸ್ಕರಿಸಿದ ಎಣ್ಣೆಗೆ ಉದಾಹರಣೆಗಳು :

• ಸೂರ್ಯಕಾಂತಿ ಎಣ್ಣೆ
• ಅಕ್ಕಿ ಹೊಟ್ಟು ಎಣ್ಣೆ
• ಸೋಯಾ ಬೀನ್ ಎಣ್ಣೆ
• ಕಡಲೆಕಾಯಿ ಎಣ್ಣೆ ಹಾಗೂ ಮುಂತಾದವು

ಇದರಿಂದ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬಿರಲಿದೆ?

ಸಂಸ್ಕರಿಸಿದ ಎಣ್ಣೆಯನ್ನು ದಿನನಿತ್ಯ ಸೇವಿಸಿದಂತೆ ನಿಯಮಿತ ಕ್ಯಾನ್ಸರ್, ಶುಗರ್ ಸೇರಿದಂತೆ ಹಲವಾರು ಅರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ.

ಆದ್ದರಿಂದ ನೀವು ಅಡುಗೆ ಮಾಡಲು ಈ ಕೆಳಗಿನ ಎಣ್ಣೆಗಳನ್ನು ಬಳಸಬಹುದು :

• ಕೋಲ್ಡ್ ಪ್ರೆಸ್ ಎಣ್ಣೆಗಳು –
ಎಳ್ಳೆಣ್ಣೆ, ಕಡಲೆಕಾಯಿ ಎಣ್ಣೆ, ಸಾಸಿವೆ ಎಣ್ಣೆ ಮುಂತಾದವು..

ವಿ. ಸೂ : ಈ ಮೇಲಿನ ಲೇಖನವು ಕೇವಲ ಮಾಹಿತಿ ನೀಡುವ ಉದ್ದೇಶವಾಗಿದ್ದು, ನಿಮ್ಮ ಆರೋಗ್ಯಕ್ಕೆ ಸಂಬಂದಿಸಿದ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳುವ ಮೊದಲು ಇದಕ್ಕೆ ಸಂಬಂದಿಸಿದ ಪರಿಣಿತರ ಸಹಾಯ ಪಡೆದು ನಿರ್ಧಾರ ತೆಗೆದುಕೊಳ್ಳಿ.

Continue Reading

Trending

error: Content is protected !!